ಯುವವಾಹಿನಿ ಪುತ್ತೂರು ಘಟಕದಿಂದ‌ ವಿದ್ಯಾಸ್ಪೂರ್ತಿ : 2024

ಆತ್ಮವಿಶ್ವಾಸವೇ ಗೆಲುವಿನ ಮೆಟ್ಟಿಲು : ಲೋಕೇಶ್ ಎಸ್ ಆರ್ ಕ್ಷೇತ್ರ ಶಿಕ್ಷಣಧಿಕಾರಿ

ಪುತ್ತೂರು: ನಮ್ಮಲ್ಲಿರುವ ಆತ್ಮ ವಿಶ್ವಾಸ, ಬದ್ದತೆ, ಪ್ರಾಮಾಣಿಕತೆ ನಮ್ಮ ಜೀವನದ ಗೆಲುವಿನ ಪ್ರಮುಖ ಮೆಟ್ಟಿಲುಗಳು ವಿದ್ಯಾಸ್ಫೂರ್ತಿ ಯೋಜನೆಯಡಿ ಯುವವಾಹಿನಿ ಸಂಘಟನೆಯು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ವಿದ್ಯಾರ್ಥಿಗಳು ಸ್ಫೂರ್ತಿಯಿಂದ, ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಪರೀಕ್ಷೆಯನ್ನು ಧೈರ್ಯದಿಂದ ಎದುರಿಸುವವರಾಗಬೇಕು ಎಂದು ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಧಿಕಾರಿ ಲೋಕೇಶ್ ಎಸ್ ಆರ್ ತಿಳಿಸಿದರು.

ಯುವವಾಹಿನಿ ವಿದ್ಯಾಸ್ಪೂರ್ತಿ ಉದ್ಘಾಟನೆ

ಅವರು ದಿನಾಂಕ 12 ಜನವರಿ 2024ರ ಶುಕ್ರವಾರದಂದು ಪುತ್ತೂರು-ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಜರಗಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ದ.ಕ. ಜಿ.ಪಂ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ಇವರ ಸಹಕಾರದೊಂದಿಗೆ ತಾಲೂಕಿನ ಎಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತಯಾರಿ ಮತ್ತು ಪರೀಕ್ಷೆಯನ್ನು ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ ವಿದ್ಯಾ ಸ್ಫೂರ್ತಿ-2024 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸ್ಪೂರ್ತಿ ತುಂಬಿದ ಜೇಸೀ ರಾಜೇಂದ್ರ ಭಟ್

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ.ಪೂಜಾರಿ ವಿದ್ಯಾ ಸ್ಪೂರ್ತಿ- 2024 ತರಭೇತಿ ಕಾರ್ಯಗಾರ ಉದ್ಘಾಟಿಸಿ 2024ನೇ ವರ್ಷ ಎಲ್ಲರ ಬಾಳಲ್ಲಿ ಸಂತಸ ಹಾಗೂ ನೆನಪಿನಲ್ಲಿ ಉಳಿಯುವ ಸಾಧನೆಯ ವರುಷವಾಗಲಿ ಎಂದು ಶುಭ ಹಾರೈಸಿದರು.

ಮುಖ್ಯ ಆತಿಥಿಗಳಾಗಿ ಭಾಗವಹಿಸಿದ ಪುತ್ತೂರು ನಗರಸಭಾ ಆಯುಕ್ತ ಮಧು ಎಸ್. ಮನೋಹರ್ ಮಾತನಾಡಿ, ಇಂದಿನ ಮಕ್ಕಳು ಮುಂದಿನ ಪ್ರಜೆಗಳು, ವಿದ್ಯಾರ್ಥಿಗಳು ಪರೀಕ್ಷೆಗೆ ಪೂರ್ವ ತಯಾರಿಯೊಂದಿಗೆ ಮಾನಸಿಕವಾಗಿ ಸಿದ್ಧರಾಗಬೇಕು. ವಿದ್ಯಾರ್ಥಿಗಳು ತಮ್ಮ ಮುಂದಿನ ಭವಿಷ್ಯದಲ್ಲಿ ಏನಾಗಬೇಕು ಎನ್ನುವ ಧೈಯವನ್ನು ಈಗಲೇ ಮೈಗೂಡಿಸಿಕೊಂಡು ಹೆಜ್ಜೆ ಇಡುವವರಾಗಬೇಕು ಎಂದರು.

ಪುತ್ತೂರಿನಲ್ಲಿ ವಿದ್ಯಾಸ್ಪೂರ್ತಿಗೆ ಬೃಹತ್ ವಿದ್ಯಾರ್ಥಿ ಸಮೂಹ

ಅಧ್ಯಕ್ಷತೆ ವಹಿಸಿದ ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಜಯರಾಮ ಬಿ.ಎಸ್ ಮಾತನಾಡಿ, ಯುವವಾಹಿನಿ ಪುತ್ತೂರು ಘಟಕವು ವರ್ಷಂಪ್ರತಿ ವಿದ್ಯಾ ಸ್ಫೂರ್ತಿ ಕಾರ್ಯಕ್ರಮದಡಿಯಲ್ಲಿ ಪರೀಕ್ಷೆಯನ್ನು ಎದುರಿಸುವ ಬಗ್ಗೆ ಒಳ್ಳೆಯ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡು ಬರುತ್ತಿದೆ. ಮಾತ್ರವಲ್ಲ ತಾಲೂಕಿನ ಹಲವು ಪ್ರೌಢಶಾಲೆಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉತ್ಸುಕರಾಗಿ ಭಾಗವಹಿಸಿರುವುದು ನಮಗೆ ಖುಶಿ ತಂದಿದ್ದು ಉಜ್ವಲ ಭವಿಷ್ಯ ನಿಮ್ಮದಾಗಲಿ ಎಂದರು.

ಏಕಾಗ್ರತೆ ಮೂಡಿಸಿದ ವಿದ್ಯಾಸ್ಪೂರ್ತಿ

ತರಭೇತಿ ಕಾರ್ಯಾಗಾರವನ್ನು ನಡೆಸಿಕೊಟ್ಟ  ಜೇಸಿಐ ಸಂಸ್ಥೆಯ  ಅಂತರಾಷ್ಟ್ರೀಯ ತರಬೇತುದಾರರಾದ ರಾಜೇಂದ್ರ ಭಟ್ ಮಾತನಾಡಿ ಪ್ರತಿ  ವರ್ಷ ಜ.12 ರಂದು ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಿಕೊಳ್ಳಲಾಗುತ್ತಿದೆ. ಯುವಸಮೂಹಕ್ಕೆ ಸ್ಪೂರ್ತಿ ಕೊಟ್ಟಂತಹ, ಜಗತ್ತಿಗೆ ಅಧ್ಯಾತ್ಮಿಕತೆಯನ್ನು ಪರಿಚಯಿಸಿದವರು ಸ್ವಾಮಿ ವಿವೇಕಾನಂದರು. ಅವರ ಜನ್ಮದಿನಾಚರಣೆಯನ್ನು ಇಂದು ನಾವು ಸಂತೋಷದಿಂದ ಆಚರಿಸುತ್ತಿದ್ದೇವೆ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಕಷ್ಟದಿಂದ ಎದುರಿಸುವವರಾಗದೆ ಬಹಳ ಇಷ್ಟಪಟ್ಟು ಎದುರಿಸುವವರಾಗಬೇಕು. ತಾನು ಸಾಧಿಸಬಲ್ಲೆ ಎಂಬ ಅಚಲ ನಿರ್ಧಾರ, ಆತ್ಮವಿಶ್ವಾಸ, ಗುರಿಯನ್ನು ಹೊಂದಿದ್ದಲ್ಲಿ ಉಜ್ವಲ ಭವಿಷ್ಯ ನಿಮ್ಮದಾಗುವುದು. ಪುತ್ತೂರಿನ ವಿದ್ಯಾರ್ಥಿಗಳು ಬಹಳ ಪ್ರತಿಭಾವಂತರು ಹಾಗೂ ಬುದ್ದಿವಂತರು. ಆದ್ದರಿಂದ ವಿದ್ಯಾರ್ಥಿಗಳು ಉತ್ತಮವಾಗಿ ಪರೀಕ್ಷೆಯನ್ನು ಎದುರಿಸಿ ಉತ್ತಮ ಅಂಕ ಗಳಿಸುವವರಾಗುಂತೆ ತಿಳಿಸಿದರು.

ಯುವವಾಹಿನಿ ಪುತ್ತೂರು ಘಟಕದ ಕಾರ್ಯದರ್ಶಿ ಸಮಿತ್ ಪಿ. ಸ್ವಾಗತಿಸಿ, ವಿದ್ಯಾನಿಧಿ ನಿರ್ದೇಶಕ ರವಿಕುಮಾರ್ ಕೆ. ವಂದಿಸಿದರು. ಅವಿನಾಶ್ ಹಾರಾಡಿ ಹಾಗೂ ಪ್ರಿಯಾಶ್ರೀ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!