ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ "ಕೆಸರ್ ಡೊಂಜಿ ದಿನ"ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ

ಕೃಷಿಯೇ ಬದುಕಿನ ಜೀವನಾಡಿ, ಕೃಷಿಯನ್ನು ಬೆಳೆಸಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ :- ಉಮನಾಥ್ ಕೋಟ್ಯಾನ್

ವೇಣೂರು :- ಹಿರಿಯರ ಕಾಲದಿಂದಲೂ ಕೃಷಿಯೇ ನಮ್ಮ ಜೀವನಾಡಿ, ಕೃಷಿಯನ್ನು ಬೆಳೆಸಿ ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸು ಜವಾಬ್ದಾರಿ ನಮ್ಮ ಮೇಲಿದೆ. ಕೃಷಿಯನ್ನು ಅವಲಂಬಿಸಿ ಬದುಕಿದ ನಮ್ಮ ಹಿರಿಯರ ಜೀವನವೇ ಅದರ್ಶ ಎಂದು ಮುಲ್ಕಿ-ಮೂಡಬಿದಿರೆ ಕ್ಷೇತ್ರದ ಶಾಸಕರಾದ ಉಮನಾಥ್ ಕೋಟ್ಯಾನ್ ತಿಳಿಸಿದರು. ಅವರು ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ “ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಆತಿಥಿಯಾಗಿ ಭಾಗವಹಿಸಿ ಮಾತನಾಡಿದರು.


ಸಂಘಟನೆಗಳು ಸಮುದಾಯದ ಶಕ್ತಿಯಾಗಬೇಕು :- ಪದ್ಮರಾಜ್ ಆರ್
ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಂದೇಶದಂತೆ ನಾವು ಸಂಘಟನೆಯ ಮೂಲಕ ಬಲಯುತರಾಗಬೇಕು ಅದರೊಂದಿಗೆ , ಪ್ರಸ್ತುತ ಕಾಲ ಘಟ್ಟದಲ್ಲಿ ಸಂಘಟನೆಗಳು ಸಮುದಾಯದ ಶಕ್ತಿಯಾಗಿ ಬೆಳೆಯಬೇಕಾದರೆ ಎಲ್ಲರನ್ನು ಒಟ್ಟುಗೂಡಿಸುವ ಇಂತಹ ಕ್ರೀಡಾ ಕೂಟಗಳ ಅಗತ್ಯವಿದೆ ಕಾರ್ಯಕ್ರಮವು ಅರ್ಥಪೂರ್ಣವಾಗಿ ಮೂಡಿಬಂದಿದೆ ಎಂದು ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಅಭಿಪ್ರಾಯ ಪಟ್ಟರು.ಶ್ರೀ ನಾರಾಯಣ ಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷರಾದ ಸತ್ಯಜಿತ್‌ ಸುರತ್ಕಲ್ ಮಾತನಾಡಿ ನಾರಾಯಣ ಗುರುಗಳ ಸಂದೇಶದಂತೆ ನಾವು ಸಂಘಟಿತರದಾಗ ಸರಕಾರದ ವತಿಯಿಂದ ಸಿಗಬೇಕಾದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿದೆ ಈ ನಿಟ್ಟಿನಲ್ಲಿ ನಾವು ಕಾರ್ಯೋನ್ಮುಖರಾದ ಅಗತ್ಯವಿದೆ ಎಂದು ತಿಳಿಸಿದರು. ಬೆಳ್ತಂಗಡಿ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಇವರು ಆಗಮಿಸಿ ಕ್ರೀಡಾ ಕೂಟಕ್ಕೆ ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸುದರ್ಶನ್, ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ಗೌರವ ಅಧ್ಯಕ್ಷರಾದ ಜಯಂತ ನಡುಬೈಲ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಮ್, ಅಧ್ಯಕ್ಷರು ಬಿ. ಜೆ. ಪಿ ಯುವಮೋರ್ಚಾ ಮೂಡಬಿದ್ರೆ ಅಶ್ವಥ್ ಪಣಪಿಲ, ಸುಜಿತಾ ವಿ ಬಂಗೇರ ಅಧ್ಯಕ್ಷರು ಮಹಿಳಾ ಬಿಲ್ಲವ ವೇದಿಕೆ ಬೆಳ್ತಂಗಡಿ, ಸಂಪತ್ ಬಿ ಸುವರ್ಣ ಅಧ್ಯಕ್ಷರು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಬೆಳ್ತಂಗಡಿ, ಧಾರ್ಮಿಕ ಪರಿಷತ್ ಸದಸ್ಯರಾದ ಶೈಲೇಶ್ , ಜಯಂತ್ ಕೋಟ್ಯಾನ್ , ಬೆಳ್ತಂಗಡಿ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಚಿದಾನಂದ ಎಲ್ದಕ್ಕ , ಗುರುದೇವ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಪದ್ಮನಾಭ ಮಾಣಿಂಜ , ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ರಾದ ಉದಯ ಅಮೀನ್ ಮಟ್ಟು, ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ, ಉಪಾಧ್ಯಕ್ಷ ರುಗಳಾದ ರಾಜೇಶ್ ಬಂಟ್ವಾಳ, ಹರೀಶ್ ಪೂಜಾರಿ ಮಂಗಳೂರು, ಕೋಶಾಧಿಕಾರಿ ಜಗದೀಶ್ಚಂದ್ರ ಡಿ.ಕೆ , ಜಯವಿಕ್ರಂ ಕಲ್ಲಾಪು, ಯುವ ವಕೀಲರಾದ ಮನೋಹರ್ ಕುಮಾರ್, ಹರೀಶ್ ಕುಮಾರ್ ಪೊಕ್ಕಿ ಅಧ್ಯಕ್ಷರು ಗುರು ನಾರಾಯಣಸ್ವಾಮಿ ಸೇವಾ ಸಂಘ ವೇಣೂರು ಮತ್ತಿತರು ಉಪಸ್ಥಿತರಿದ್ದರು. ಸತೀಶ್ ಕಿಲ್ಪಾಡಿ ಸ್ವಾಗತಿಸಿ, ಯೋಗೀಶ್ ಬಿಕ್ರೋಟ್ಟು ವಂದಿಸಿ, ಗಣೇಶ್ ಬಿ ಅಳಿಯೂರ್ ರವರು ಕಾರ್ಯಕ್ರಮ ನಿರೂಪಿಸಿದರು. ಕೆಸರು ಗದ್ದೆ ಕ್ರೀಡಾ ಕೂಟದ ಸಮಗ್ರ ಪ್ರಶಸ್ತಿ ಗೆ -ಮಾಣಿ ಘಟಕವು ಭಾಜನವಾಯಿತು. ಒಟ್ಟು 27 ಘಟಕಗಳ 1500 ಮಂದಿ ಸದಸ್ಯರು ಭಾಗವಹಿಸಿದ್ದರು. ವೇಣೂರು ಘಟಕದ ಉತ್ತಮವಾದ ಆತಿಥ್ಯ ಹಾಗೂ ಅಚ್ಚುಕಟ್ಟಾದ ವ್ಯವಸ್ಥೆಯು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!