ಯುವವಾಹಿನಿ (ರಿ.) ಕೊಲ್ಯ ಘಟಕ

ಮುಸ್ಸಂಜೆಯಲ್ಲಿ ಕಣ್ಮಣ ಸೆಳೆದ ಕನ್ನಡ ರಾಜ್ಯೋತ್ಸವ ಭಾವಲಹರಿ-ಕವಿ-ಕಾವ್ಯ-ಗಾಯನದ ರಸದೌತಣ

ಕೊಲ್ಯ :- ಯುವವಾಹಿನಿ (ರಿ.) ಕೊಲ್ಯ ಘಟಕದ ಆಶ್ರಯದಲ್ಲಿ ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಸೋಮೇಶ್ವರ ಮತ್ತು ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ಹಾಗೂ ಚುಟುಕು ಸಾಹಿತ್ಯ ಪರಿಷತ್ ಉಳ್ಳಾಲ ಘಟಕ ಇದರ ಸಹಭಾಗಿತ್ವದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಯುವಸಂಜೆ- ಭಾವಲಹರಿ, ಕವಿ ಕಾವ್ಯ ಗಾಯನವು ದಿನಾಂಕ 01 ನವೆಂಬರ್ 2022 ರಂದು ಸಂಜೆ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನ ಕೊಲ್ಯದಲ್ಲಿ ಜರುಗಿತು. ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ಇದರ ವಿದ್ಯಾರ್ಥಿಗಳು ನಾಡಗೀತೆಯೊಂದಿಗೆ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಚ್ಚೇವು ಕನ್ನಡದ ದೀಪ…ಈ ಹಾಡಿನ ಮೂಲಕ ದೀಪ ಬೆಳಗಿಸುವುದರ ಮೂಲಕ ಉಪನ್ಯಾಸಕರೂ, ಧರ್ಮಶಿಕ್ಷಣದ ಗುರುಗಳೂ ಆಗಿರುವ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಡಾ.ಅರುಣ್ ಉಳ್ಳಾಲ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು.


ಅತಿಥಿಗಳಾಗಿ ಭಾಗವಹಿಸಿದ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ದ.ಕ.ಜಿಲ್ಲೆ ಇದರ ಜಿಲ್ಲಾಧ್ಯಕ್ಷರಾದ ಹ.ಸು.ಒಡ್ಡಂಬೆಟ್ಟು ಮತ್ತು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ಕಾ.ವೀ.ಕೃಷ್ಣದಾಸ್ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಸೋಮೇಶ್ವರದ ಅಧ್ಯಕ್ಷರಾದ ವೇಣುಗೋಪಾಲ್ ಕೊಲ್ಯರವರು ಅತಿಥಿಗಳಾಗಿ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಯುವವಾಹಿನಿ ಕೊಲ್ಯ ಘಟಕದ ಅಧ್ಯಕ್ಷರಾದ ಸುಂದರ್ ಸುವರ್ಣ ರವರು ಪ್ರಸ್ತಾವನೆಗೈದು ಸ್ವಾಗತಿಸಿದರು. ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ಕು.ಅನ್ವಿತಾರವರು ಧನ್ಯವಾದ ಸಮರ್ಪಿಸಿದರು. ಯುವವಾಹಿನಿ ಕೊಲ್ಯ ಘಟಕದ ಪ್ರಚಾರ ನಿರ್ದೇಶಕರಾದ ಜೀವನ್ ಕೊಲ್ಯ ಮತ್ತು ಪ್ರಥಮ ಉಪಾಧ್ಯಕ್ಷರಾದ ಲತೀಶ್ ಎಂ ಸಂಕೋಳಿಗೆ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಆರಂಭದಲ್ಲಿ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ಇದರ ವಿದ್ಯಾರ್ಥಿಗಳು ನಿತ್ಯಾನುಷ್ಠಾನ ಶ್ಲೋಕವನ್ನು ಪಠಿಸಿದರು.ಯುವವಾಹಿನಿ ಕೊಲ್ಯ ಘಟಕದ ಸದಸ್ಯರಾಗಿರುವ ಉದಯೋನ್ಮುಖ ಗಾಯಕರಿಂದ ಗಾಯನ, ಭಾವಲಹರಿ ಕಾರ್ಯಕ್ರಮ ಜರುಗಿತು. ಚುಟುಕು ಸಾಹಿತ್ಯ ಪರಿಷತ್ ಉಳ್ಳಾಲ ಘಟಕ ಇದರ ಆಯ್ದ ಹತ್ತು ಜನ ಕವಿ ಕವಯತ್ರಿಗಳು ಕವನ ವಾಚಿಸಿದರು. ಯುವವಾಹಿನಿ ಕೊಲ್ಯ ಘಟಕದ ಸದಸ್ಯರಾದ ಕು.ಅನ್ವಿತ ಮಲಯಾಳಕೋಡಿ ಮತ್ತು ಸಚೇತಾ ಕೊಲ್ಯ ನೃತ್ಯ ಪ್ರದರ್ಶನ ನೀಡಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!