ಯುವವಾಹಿನಿ (ರಿ.) ಕುಪ್ಪೆಪದವು

ಯುವವಾಹಿನಿ ಸೇವಾ ಮನೋಭಾವ ಹೊಂದಿರುವ ವಿಭಿನ್ನ ಸಂಸ್ಥೆ : ಡಾ. ಭರತ್ ವೈ ಶೆಟ್ಟಿ

ಕುಪ್ಪೆಪದವು :- ಯುವವಾಹಿನಿಯ ಶಿಸ್ತು ಬದ್ಧ ಕಾರ್ಯಕ್ರಮ, ಪಾರದರ್ಶಕತೆ, ಎಲ್ಲವನ್ನು ಗಮನಿಸಿ ಈ ಬಾರಿ ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದೆ. ಈ ಸಂಸ್ಥೆಯು ಬೇರೆ ಸಂಘಟನೆಗಿಂತ ವಿಭಿನ್ನವಾಗಿದೆ. ಸೇವಾ ಮನೋಭಾವ ಹೊಂದಿರುವ ಸಂಸ್ಥೆಯ ಕಾರ್ಯಕ್ರಮಕ್ಕೆ ಬೇರೆ ಯಾವ ಕಾರ್ಯಕ್ರಮದ ಒತ್ತಡವಿದ್ದರೂ ಕೂಡ ಪಾಲ್ಗೊಳ್ಳುವ ಅವಕಾಶ ಬಿಟ್ಟುಕೊಡಲಾರೆ. ಯುವವಾಹಿನಿ ಸಂಸ್ಥೆಗೆ ಯಾವುದೇ ರೀತಿಯ ಸಹಕಾರ ನೀಡಲು ಸದಾ ಸಿದ್ಧ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆ ಮತ್ತು ತತ್ವಾದರ್ಶಗಳು ಸರ್ವರಿಗೂ ಅನ್ವಯವಾಗುವಂತಿವೆ ಎಂದು ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ ತಿಳಿಸಿದರು. ಅವರು ಕುಪ್ಪೆಪದವು ನೇಲಚ್ಚಿಲ್ ನಾಗಂದಡಿ ಕ್ರೀಡಾಂಗಣದಲ್ಲಿ ಜರಗಿದ ಯುವವಾಹಿನಿ ಕುಪ್ಪೆಪದವು ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ , ಸಾಧಕರಿಗೆ ಸನ್ಮಾನ , ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯುವವಾಹಿನಿ ಕುಪ್ಪೆಪದವು ಘಟಕದ ಅಧ್ಯಕ್ಷ ಜಗದೀಶ್ ದುರ್ಗ ಕೋಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ನೂತನ ಪದಾಧಿಕಾರಿಗಳಿಗೆ ಪದಪ್ರದಾನ ಮಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಸತೀಶ್ ಹೊಸಮನೆ ನೂತನ ಪದಾಧಿಕಾರಿಗಳ ಪ್ರಕ್ರಿಯೆ ನಡೆಸಿಕೊಟ್ಟರು. ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಪೂಜಾರಿ, ಕುಪ್ಪೆ ಪದವು ಗ್ರಾಮ ಪಂಚಾಯತ್ ಅಧ್ಯಕ್ಷ ಡಿ ಪಿ ಹಮ್ಮಬ್ಬ, ಘಟಕದ ಕಾರ್ಯದರ್ಶಿ ರಕ್ಷಿತ್ ಅಟ್ಟೆ ಪದವು, ನೂತನ ಅಧ್ಯಕ್ಷ ಸೌಮ್ಯ ಕೋಟ್ಯಾನ್, ನೂತನ ಕಾರ್ಯದರ್ಶಿ ರಜನಿ, ಮುತ್ತೂರು ಗ್ರಾಮ ಪಂಚಾಯತ್ ಸದಸ್ಯರಾದ ಪುಷ್ಪ ನಾಯಕ್, ಸುಷ್ಮಾ ಸಂತೋಷ್, ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ, ಕೋಶಾಧಿಕಾರಿ ಜಗದೀಶ್ ಚಂದ್ರ ಡಿ. ಕೆ ಹಾಜರಿದ್ದರು. ಗೌರವಾರ್ಪಣೆ :
ಶಾಸಕ ಡಾ. ಭರತ್ ಶೆಟ್ಟಿ ವೈ, ರಾಷ್ಟ್ರಮಟ್ಟದ ವೇಟ್ ಲಿಫ್ಟರ್ ಆಳ್ವಾಸ್ ವಿದ್ಯಾರ್ಥಿನಿ ನಿಶ್ಮಿತಾ ಜೆ ಪೂಜಾರಿ, ಬಜ್ಪೆ ಪೊಲೀಸ್ ಠಾಣೆಯ ಎ ಎಸ್ ಐ ಗೋಪಾಲ್ ಕೃಷ್ಣ ಕುಂದರ್, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಫೈನಲ್ ಲಿಸ್ಟ್ ಶ್ರಾವ್ಯ ಕಟ್ಟೆ ಮಾರ್, ಹಿರಿಯರಾದ ಉಮೇಶ್ ಆಮೀನ್ ನಾಗಂದಡಿ, ಜಗದೀಶ್ ದುರ್ಗ ಕೋಡಿ ಮತ್ತು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಉದಯ್ ಆಮೀನ್ ಮಟ್ಟು ಅವರನ್ನು ಗೌರವಿಸಲಾಯಿತು. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಅರುಣ್ ಕುಮಾರ್ ಅಂಬೆಲೊಟ್ಟು ಸ್ವಾಗತಿಸಿದರು. ಅಜಯ್ ಆಮೀನ್ ಪ್ರಸ್ತಾವಿಕವಾಗಿ ಮಾತನಾಡಿದರು. ರಜನಿ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!