ಬೆದ್ರ ಗೂಡುದೀಪ ಮತ್ತು ರಂಗೋಲಿ ಸ್ಪರ್ಧೆ - 2024

ಲೋಕದ ಅಭ್ಯುದಯಕ್ಕಾಗಿ ಕೊಡುಗೆ ನೀಡುವ ದೀಪಗಳಾಗೋಣ

ಮೂಡುಬಿದಿರೆ: ಹಣತೆಯು ತಾನು ಬೆಳಕು ಚೆಲ್ಲುವ ಜೊತೆಗೆ ಇತರ ಹಣತೆಗಳನ್ನೂ ಬೆಳಗಿಸಿ ಬೆಳಕನ್ನು ಆಚರಿಸುವ ಪ್ರಕ್ರಿಯೆಯಲ್ಲಿ ಜೀವನ ಸಾರ್ಥಕ್ಯ ಸಾರುತ್ತದೆ‌. ನಾವೂ ಲೋಕದ ಅಭ್ಯುದಯಕ್ಕಾಗಿ ಕೊಡುಗೆ ನೀಡುವ ದೀಪಗಳಾಗಬೇಕಾಗಿದೆ. ಗಂಧದಂತೆ ಸವೆಸಿಕೊಂಡು ತ್ಯಾಗಿಯಾಗಿ ಪರಿಮಳಿಸಬೇಕಾಗಿದೆ ಎಂದು ಎಸ್.ಎನ್.ಎಂ ಪಾಲಿಟೆಕ್ನಿಕ್ ಉಪನ್ಯಾಸಕ ಡಾ. ಎಸ್.ಪಿ.ಗುರುದಾಸ್ ಅಭಿಪ್ರಾಯಪಟ್ಟರು.

ಸಮಾಜ ಮಂದಿರ ಸಭಾ (ರಿ) ಮೂಡುಬಿದಿರೆ ಮತ್ತು ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಇವರ ಜಂಟಿ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ 3ನೇ ವರ್ಷದ ಬೆದ್ರ ಗೂಡುದೀಪ ಮತ್ತು ರಂಗೋಲಿ ಸ್ಪರ್ಧೆ – 2024ರ ಸಭಾ ಕಾರ್ಯಕ್ರಮದಲ್ಲಿ ಅವರು ದೀಪಾವಳಿ ಸಂದೇಶ ನೀಡಿ, ಕತ್ತಲ ಭ್ರಮೆ ನೀಗಲು ಸೂರ್ಯ, ಚಂದ್ರ, ನಕ್ಷತ್ರ, ಅಗ್ನಿ ಎಲ್ಲದರ ಬಳಿಕ ಪ್ರಜ್ವಲಿಸುವುದೆಂದರೆ ನಮ್ಮ ಮಾತು. ಕೊನೆಗೆ ಬೆಳಕಾಗಿ ಉಳಿಯುವುದೆಂದರೆ ನಮ್ಮೊಳಗೆ ಜ್ಯೋತಿ, ಸ್ವರೂಪದಲ್ಲಿರುವ ಆತ್ಮಶಕ್ತಿ, ಅದು ಶುದ್ದವಾಗಿರಲಿ ಎಂದರು.

ಸಮಾಜ ಮಂದಿರ ಸಭಾ ಅಧ್ಯಕ್ಷ ಹಾಗೂ ಮಾಜಿ ಸಚಿವ ಕೆ. ಅಭಯ ಚಂದ್ರ ಜೈನ್ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಮಾಜ ಮಂದಿರ ಮತ್ತು ಯುವವಾಹಿನಿ ಘಟಕವು ಗೂಡುದೀಪ ಮತ್ತು ರಂಗೋಲಿ ಸ್ಪರ್ಧೆಯನ್ನು ಆಯೋಜಿಸಿ ಉತ್ತಮ ಸಂದೇಶವನ್ನು ನೀಡುತ್ತಿದೆ ಎಂದು ಹೇಳಿ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್.ಆರ್ ಕಾರ್ಯಕ್ರಮದ ಆಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮೂಡುಬಿದಿರೆ ರೋಟರಿ ಟೆಂಪಲ್ ಟೌನ್ ಅಧ್ಯಕ್ಷ ಪೂರ್ಣಚಂದ್ರ ಜೈನ್, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಬಿಂದಿಯಾ ಶರತ್ ಡಿ ಶೆಟ್ಟಿ, ಪವರ್ ಫ್ರೆಂಡ್ಸ್ ಬೆದ್ರದ ಅಧ್ಯಕ್ಷ ವಿನಯಕುಮಾರ್, ಉದ್ಯಮಿ ನಾಗರಾಜ್ ಹೆಗ್ಗಡೆ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಬಹುಮುಖ ಪ್ರತಿಭೆ ಆಧ್ಯಾ.ವಿ. ಕೋಟ್ಯಾನ್ ಅಲಂಗಾರು ಇವರನ್ನು ಸನ್ಮಾನಿಸಲಾಯಿತು.

ಮೂಡುಬಿದಿರೆ ಘಟಕದ ಮಾಜಿ ಅಧ್ಯಕ್ಷ ಹಾಗೂ ಪ್ರಸ್ತುತ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಜಗದೀಶ್ಚಂದ್ರ ಡಿ.ಕೆ, ಸಮಾಜ ಮಂದಿರ ಸಭಾ ಕಾರ್ಯದರ್ಶಿ ಸುರೇಶ್ ಪ್ರಭು, ಸಮಾಜ ಮಂದಿರ ಹಾಗೂ ಯುವವಾಹಿನಿಯ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಶಂಕರ್ ಎ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಮಾಜ ಮಂದಿರದ ಜೊತೆ ಕಾರ್ಯದರ್ಶಿ ಗಣೇಶ್ ಕಾಮತ್ ಎಂ ಸ್ವಾಗತಿಸಿದರು.

ಯುವವಾಹಿನಿ ಮೂಡುಬಿದಿರೆ ಘಟಕದ ಮಾಜಿ ಅಧ್ಯಕ್ಷ ನವಾನಂದ ಗೂಡು ದೀಪ ಹಾಗೂ ರಂಗೋಲಿ ಸ್ಪರ್ಧೆಯ ವಿಜೇತರ ಪಟ್ಟಿಯನ್ನು ವಾಚಿಸಿದರು.

ಸಂಪತ್ ಬಂಗೇರ ನಿರೂಪಿಸಿದರು. ಯುವವಾಹಿನಿ ಘಟಕದ ಕಾರ್ಯದರ್ಶಿ ಗಿರೀಶ್ ಕೋಟ್ಯಾನ್ ಧನ್ಯವಾದ ಸಲ್ಲಿಸಿದರು.

ಗೂಡುದೀಪ ಸ್ಪರ್ಧೆಯ ಫಲಿತಾಂಶ:

1. ಸಾಂಪ್ರದಾಯಿಕ ವಿಭಾಗ:

ರಕ್ಷಿತ್ ಕುಮಾರ್ ಮಂಗಳೂರು (ಪ್ರಥಮ)

ಆದಿತ್ಯ ಗುರುಪುರ (ದ್ವಿತೀಯ)

ಸುತೀಂದ್ರ ಕುಮಾರ್ (ತೃತೀಯ)

2. ಆಧುನಿಕ ವಿಭಾಗ

ವಿಠ್ಠಲ್ ಭಟ್ ಕಾರ್ ಸ್ಟ್ರೀಟ್ ಮಂಗಳೂರು (ಪ್ರಥಮ)

ಜಗದೀಶ್ ಅಮೀನ್ ಸುಂಕದಕಟ್ಟೆ (ದ್ವಿತೀಯ)

ಭೋಜ ಮಾರ್ನಾಡು (ತೃತೀಯ)

3. ಮಾದರಿ ವಿಭಾಗ

ರಂಜಿತ್ ಹಾಗೂ ಅನಿರುದ್ದ್ ಮೂಡುಬಿದಿರೆ (ಪ್ರಥಮ)

ಕಿಶೋರ್ ಪಡುಮಾರ್ನಾಡು (ದ್ವಿತೀಯ)

ಯತೀಶ್ ಆಚಾರ್ಯ ಮಾಸ್ತಿಕಟ್ಟೆ (ತೃತೀಯ)

ರಂಗೋಲಿ ಸ್ಪರ್ಧೆ

ಶ್ರಾವ್ಯ ಎಸ್ ಆಚಾರ್ಯ ಜೈನ್ ಪಿಯು ಕಾಲೇಜ್ (ಪ್ರಥಮ)

ಕೋಕಿಲ ಮಹಾವೀರ ಕಾಲೇಜ್ (ದ್ವಿತೀಯ)

ವಿದ್ಯಾಶ್ರೀ ಸುರೇಶ್ (ತೃತೀಯ

ಸಮಾಧಾನಕರ ಬಹುಮಾನ:

ಸೌಮ್ಯ ಯು, ಶ್ರೇಯ ಮತ್ತು ಅನುಷಾ ನಾಯಕ್ ಮಹಾವೀರ ಕಾಲೇಜ್.

ಕಾರ್ಯಕ್ರಮದಲ್ಲಿ 55 ಮಂದಿ ಗೂಡುದೀಪವನ್ನು ತಯಾರಿಸಿ, ಪ್ರದರ್ಶಿಸಿರುವರು. 30 ಮಂದಿ ಸ್ಪರ್ಧಾಳುಗಳು ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗನ್ನು ತಂದು ಕೊಟ್ಟಿರುವರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!