ಯುವವಾಹಿನಿ(ರಿ) ಕೇಂದ್ರ ಸಮಿತಿ

ವಿದ್ಯಾನಿಧಿ ಟ್ರಸ್ಟ್ ವತಿಯಿಂದ ’ಪ್ರೇರಣ-2017’

ದಿನಾಂಕ 8-01-2017 ನೇ ರವಿವಾರದಂದು ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ) ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ, ವೃತ್ತಿ ಮಾರ್ಗದರ್ಶನ ಹಾಗೂ ಯುವಜನತೆಗೆ ಮತ್ತು ಪೋಷಕರಿಗೆ ಉಪಯೋಗವಾಗುವ ಕಾರ್ಯಕ್ರಮವಾಗಿ ಪ್ರೇರಣ-2017’ ಎನ್ನುವ ಕಾರ್ಯಕ್ರಮವು ಶ್ರೀಗೋಕರ್ಣನಾಥೇಶ್ವರ ಕಾಲೇಜು, ಗಾಂಧಿನಗರ, ಮಂಗಳೂರು ಇಲ್ಲಿ ಜರಗಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್‌ರವರು ಪ್ರೇರಣಾ ಶಿಬಿರವನ್ನು ಉದ್ಘಾಟಿಸಿ, ಶುಭಕೋರಿದರು. ಯುವ ವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಶ್ರೀ ಪದ್ಮನಾಭ ಮರೋಳಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಗೋಕರ್ಣನಾಥ ಕಾಲೇಜು ಮಂಗಳೂರು ಇದರ ಪ್ರಾಂಶುಪಾಲ ಗಂಗಾಧರ ಬಿ. ಪೂಜಾರಿ, ಯುವವಾಹಿನಿಯ ಸಲಹೆಗಾರ ಬಿ. ತಮ್ಮಯ್ಯ ಹಾಗೂ ವಿದ್ಯಾನಿಧಿ ಟ್ರಸ್ಟ್‌ನ ಟ್ರಸ್ಟಿಗಳಾದ ಸಂಜೀವ ಪೂಜಾರಿಯವರು ಹಾಗೂ ಜಯಂತ್ ನಡುಬೈಲ್‌ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವ್ಯಕ್ತಿತ್ವ ವಿಕಸನ ಮತ್ತು ವೃತ್ತಿ ಮಾರ್ಗದರ್ಶನ ಎಂಬ ಶೈಕ್ಷಣಿಕ ಕಾರ್ಯಾಗಾರವನ್ನು ಪೂರ್ವಾಹ್ನ ಗಂಟೆ 10 ರಿಂದ 12 ರ ವರೆಗೆ ನಡೆಸಲಾಯಿತು. ಮಂಗಳೂರಿನ ಹಿರಿಯ ತರಬೇತುದಾರ ಅಭಿಜಿತ್ ಕರ್ಕೇರರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರವನ್ನು ವಿದ್ಯಾರ್ಥಿಗಳ ಹಾಗೂ ಯುವಜನರ ಉಪಯೋಗಕ್ಕಾಗಿ ಆಕರ್ಷಕವಾಗಿ ನಡೆಸಿಕೊಟ್ಟರು.

ಹಾಗೆಯೇ ಇನ್ನೊಂದು ಸಭಾಂಗಣದಲ್ಲಿ ಪೂರ್ವಾಹ್ನ ಗಂಟೆ 10.30 ರಿಂದ 12 ರವರೆಗೆ ಯುವಜನರು ಮತ್ತು ಪೋಷಕರು ಎಂಬ ಕಮ್ಮಟವನ್ನು ಯುವಜನರ ಮತ್ತು ಪೋಷಕರ ಉಪಯೋಗಕ್ಕಾಗಿ ನಡೆಸಲಾಯಿತು. ಜೇಸೀ ಸಂಸ್ಥೆಯ ರಾಷ್ಟ್ರೀಯ ತರಬೇತುದಾರರಾದ ರಾಮಚಂದ್ರ ರಾವ್‌ರವರು ಸಂಪನ್ಮೂಲ ವ್ಯಕ್ತಿಯಾಗಿ ಈ ಕಮ್ಮಟವನ್ನು ಬಹುಪಯೋಗಿಯಾಗಿ ನಡೆಸಿಕೊಟ್ಟರು.

ಅಪರಾಹ್ನ ಗಂಟೆ 12.30 ಕ್ಕೆ ಸರಿಯಾಗಿ ನಡೆದ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿಯವರು ಅಧ್ಯಕ್ಷರಾಗಿ ಭಾಗವಹಿಸಿದ್ದರು. ಬಿಲ್ಲವ ಸಂಘ, ಅಶೋಕನಗರ ಮಂಗಳೂರು ಇದರ ಅಧ್ಯಕ್ಷರಾದ ಡಾ| ಬಿ.ಜಿ. ಸುವರ್ಣರವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಯುವವಾಹಿನಿಯ ಕಾರ್ಯಚಟುವಟಿಕೆಗಳ ಬಗ್ಗೆ ತನ್ನ ಸಂತೋಷ ವ್ಯಕ್ತಪಡಿಸಿದರು. ಟ್ರಸ್ಟಿಗಳಾದ ಜಯಂತ್ ನಡುಬೈಲು, ಸೂರ್ಯಪ್ರಕಾಶ್ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಮೆಚ್ಚುಗೆ ನೀಡಿದರು. ಇನ್ನೋರ್ವ ಟ್ರಸ್ಟಿ ಸಂಜೀವ ಪೂಜಾರಿಯವರು ಉಪಸ್ಥಿತರಿದ್ದರು. ಸುಮಾರು 13 ವಿದ್ಯಾರ್ಥಿಗಳಿಗೆ ರೂ. 53,000/-ರಷ್ಟು ಆರ್ಥಿಕ ನೆರವು ವಿತರಿಸಲಾಯಿತು. ಇವರಲ್ಲಿ ಮೂರು ವಿದ್ಯಾರ್ಥಿಗಳು ವಿದ್ಯಾನಿಧಿ ಟ್ರಸ್ಟಿನಿಂದ ದತ್ತು ತೆಗೆದುಕೊಂಡ ವಿದ್ಯಾರ್ಥಿಗಳು ಎಂದು ತಿಳಿಸಲು ಸಂತೋಷವಾಗುತ್ತದೆ. ತರಬೇತಿ ಮತ್ತು ಅಭಿವೃದ್ಧಿ ಪರಿಶೀಲನಾ ಟ್ರಸ್ಟಿ ತಾರನಾಥ್ ಎಚ್.ಬಿ.ಯವರು ವಿದ್ಯಾರ್ಥಿಗಳ ಪರಿಚಯವನ್ನು ಸಭೆಗೆ ನೀಡಿದರು. ಆಡಳಿತ ಟ್ರಸ್ಟಿ ಸಂತೋಷ್ ಕುಮಾರ್‌ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಂ.ಸಿ.ಎಫ್.ನ ಚಂದ್ರಶೇಖರ್‌ರವರನ್ನು ಟ್ರಸ್ಟ್‌ನ ನೂತನ ಸದಸ್ಯರಾಗಿ ನೇಮಿಸಲಾಯಿತು. ಅವರ ಸೇವೆ, ಅನುಭವ ವಿದ್ಯಾರ್ಥಿಗಳ ಮಾಹಿತಿಗೆ ಬಹಳ ಅನುಕೂಲ ಎಂದು ಸಭೆಯಲ್ಲಿ ತಿಳಿಸಲಾಯಿತು.

ವಿದ್ಯಾನಿಧಿ ಟ್ರಸ್ಟ್‌ನ ಕಾರ್ಯದರ್ಶಿ ಶ್ರೀ ಪ್ರೇಮನಾಥ್ ಇವರು ಧನ್ಯವಾದ ಅರ್ಪಿಸಿ ಯುವವಾಹಿನಿ (ರಿ) ಮಂಗಳೂರು, ಕೇಂದ್ರ ಸಮಿತಿಯ ಮಾಜಿ ನಿರ್ದೇಶಕಿ ಶ್ರೀಮತಿ ಶುಭಾ ರಾಜೇಂದ್ರ ಹಾಗೂ ವಿದ್ಯಾನಿಧಿ ಟ್ರಸ್ಟ್‌ನ ಕೋಶಾಧಿಕಾರಿ ಕೆ. ರಾಜೀವ ಪೂಜಾರಿಯವರು ಕಾರ್ಯಕ್ರಮ ನಿರೂಪಣೆಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!