ಯುವವಾಹಿನಿ (ರಿ.) ಮಂಗಳೂರು ಘಟಕ

ಸಂಭ್ರಮದ ದೀಪಾವಳಿ ಆಚರಣೆ

ಮಂಗಳೂರು :- ದಿನಾಂಕ 26 ಅಕ್ಟೋಬರ್ 2022ರಂದು ಮಂಗಳೂರು ಘಟಕದ ವತಿಯಿಂದ ದೀಪಾವಳಿಯ ಸಂಭ್ರಮಾಚರಣೆಯನ್ನು ಯುವವಾಹಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಪ್ರಾರಂಭದಲ್ಲಿ ಭಜನಾ ಕಾರ್ಯಕ್ರಮವನ್ನು ನಡೆಸಲಾಯಿತು. ಗುರುಗಳ ಭಾವಚಿತ್ರದ ಸಾನಿಧ್ಯದಲ್ಲಿ ಗುರು ಪೂಜೆಯನ್ನು ನಡೆಸಿ, ಎಲ್ಲರಿಗೂ ಪ್ರಸಾದ ವಿತರಿಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಎಲ್ಲಾ ಮಾಜಿ ಅಧ್ಯಕ್ಷರನ್ನು, ಪದಾಧಿಕಾರಿಗಳನ್ನು ಹಾಗೂ ಸರ್ವ ಸದಸ್ಯರನ್ನು ಆತ್ಮೀಯವಾಗಿ ಸಭೆಗೆ ಸ್ವಾಗತಿಸಿದರು. ಕಾರ್ಯದರ್ಶಿಯವರಾದ ಅಶೋಕ್ ಅಂಚನ್ ರವರು ಗತ ಸಭೆಯ ವರದಿಯನ್ನು ಮಂಡಿಸಿ, ಅನುಮೋದನೆ ಪಡಕೊಂಡರು. 2008ರಲ್ಲಿ ಮಂಗಳೂರು ಘಟಕದ ಅಧ್ಯಕ್ಷರಾಗಿ ಘಟಕವನ್ನು ಯಶಸ್ವಿಯಾಗಿ ಮುನ್ನಡೆಸಿದ ಮಾಧವ ಕೋಟ್ಯಾನ್ ರವರು ಸರ್ವ ಧರ್ಮ ಸಮನ್ವತೆಯ ದೀಪಗಳ ಹಬ್ಬ ದೀಪಾವಳಿಯ ಮೊದಲ ದಿವಸ ಬಲಿಪಾಡ್ಯಮಿ, ಎರಡನೇ ದಿನ ಲಕ್ಷ್ಮಿ ಪೂಜೆ ಹಾಗೂ ಮೂರನೇ ದಿವಸದ ಸಂಭ್ರಮದ ದೀಪಾವಳಿಯ ಆಚರಣೆಯ ಬಗ್ಗೆ ಸವಿಸ್ತಾರವಾಗಿ ಸಭೆಯಲ್ಲಿ ತಿಳಿಸಿದರು. ಮಾಧವ್ ಕೋಟ್ಯಾನ್ ರವರನ್ನು ಘಟಕದ ಎಲ್ಲಾ ಸದಸ್ಯರು ಅಭಿನಂದಿಸಿ ಹಾಗೂ ಪರಸ್ಪರ ದೀಪಾವಳಿಯ ಶುಭಾಶಯಗಳನ್ನು ಹಂಚಿಕೊಂಡರು. ಕಾರ್ಯದರ್ಶಿಯವರು ಬಂದಂತಹ ಎಲ್ಲರಿಗೂ ಧನ್ಯವಾದಗಳನ್ನು ಸಮರ್ಪಿಸಿದರೆ, ಪ್ರವೀಣ್ ಕುಮಾರ್ ಕೋಡಿಕಲ್ ರವರು ಲೋಕಕಲ್ಯಾಣ ಮಂತ್ರ ಪಠಿಸುವುದರೊಂದಿಗೆ ಸಭೆಯನ್ನು ಮುಕ್ತಾಯಗೊಳಿಸಲಾಯಿತು. ಎಲ್ಲಾ ಸದಸ್ಯರು ಗುರುಗಳ ಸಾನಿಧ್ಯದಲ್ಲಿ ಹಣತೆಯನ್ನ ಹಚ್ಚಿ, ಗುರುಗಳಿಗೆ ಪ್ರಾರ್ಥನೆ ಸಲ್ಲಿಸಿ, ವರಾಂಡದಲ್ಲಿ ಪಟಾಕಿ ಸಿಡಿಸಿ, ಸಂಭ್ರಮದಿಂದ ದೀಪಾವಳಿಯನ್ನು ಆಚರಿಸಿದರು. ಕೊನೆಯಲ್ಲಿ ಎಲ್ಲರಿಗೂ ದೀಪಾವಳಿಯ ಸಿಹಿ ತಿಂಡಿ ಹಂಚಿ, ಫಲಾಹಾರ ನೀಡಿ ಸತ್ಕರಿಸಲಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!