Yuvavahini

ಬಂಟ್ವಾಳ

ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ

ಬಂಟ್ವಾಳ : ಬಿರುವೆರ್ ಕುಡ್ಲ ( ರಿ.) ಬಂಟ್ವಾಳ ಘಟಕ ಮತ್ತು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಯೂನಿವರ್ಸಿಟಿ ಮತ್ತು ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಆಶ್ರಯದಲ್ಲಿ ನಡೆಯುವ ಉಚಿತ ಬೃಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ ಕಾರ್ಯಕ್ರಮವು ದಿನಾಂಕ 16-06-2019ನೇ ಆದಿತ್ಯವಾರದಂದು ನಾವೂರ ಪ್ರೌಢಶಾಲೆಯಲ್ಲಿ ನಡೆಯಿತು. ಬಿರ್ವೆರ್ ಕುಡ್ಲ (ರಿ) ಬಂಟ್ವಾಳ […]

Read More

ಸಂಪಾದಕೀಯ : ರಾಜೇಶ್ ಸುವರ್ಣ

ಚಿಂತಕರೊಬ್ಬರ ಆಶಯವಿದೆ, ಸಾಧ್ಯವಾದಷ್ಟು ಓಡು, ಓಡಲು ಸಾದ್ಯವಾಗದೇ ಹೋದರೆ ನಡಿ, ನಡೆಯಲು ಆಗದೇ ಇದ್ದರೆ ತೆವಳಿಕೊಂಡಾದರೂ ಸಾಗು, ಆದರೆ ನಿಲ್ಲಬೇಡ ಎಲ್ಲೂ, ಹೌದು ಹರಿಯುವ ನದಿಯಾಗಲಿ, ಬೆಳೆಯುವ ಸಿರಿಯಾಗಲಿ ನಡೆಯುವ ಮನುಜನೇ ಆಗಲಿ ಎಲ್ಲಿ ತನ್ನ ನಡಿಗೆಯನ್ನು ನಿಲ್ಲಿಸುತ್ತವೆಯೋ ಅಲ್ಲಿ ಜಡತ್ವ ಅಡರಿಕೊಳ್ಳುತ್ತದೆ. ಎಲ್ಲಿಯವರೆಗೆ ನದಿಗೆ ಕ್ರಿಯಾಶೀಲ ಹರಿವು ಇರುತ್ತದೋ, ಎಲ್ಲಿ ಬೆಳೆಯುವ ಸಿರಿಯಲ್ಲಿ ಸೂರ್ಯ ರಶ್ಮಿಯತ್ತ ಮುಖ ಮಾಡುವ ಚಿಂತನೆ ಇರುತ್ತದೋ, ಎಲ್ಲಿಯವರೆಗೆ ಮನುಜನಲ್ಲಿ ದುಡಿಯುವ ಸಕ್ರೀಯವಾಗುವ ಹಂಬಲವಿರುತ್ತದೋ ಅಲ್ಲಿಯ ತನಕ ಆತ ತನ್ನ ಬೆಲೆಯನ್ನು […]

Read More

ಯುವವಾಹಿನಿ (ರಿ) ಬಂಟ್ವಾಳ ಘಟಕದ ಅಧ್ಯಕ್ಷರಾಗಿ ಇಂದಿರೇಶ್ ಬಿ. ಆಯ್ಕೆ

ಬಂಟ್ವಾಳ : ಯುವವಾಹಿನಿ (ರಿ) ಬಂಟ್ವಾಳ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಇಂದಿರೇಶ್ ಬಿ. ಹಾಗೂ ಕಾರ್ಯದರ್ಶಿಯಾಗಿ ಪುರುಷೋತ್ತಮ ಪೂಜಾರಿ ಆಯ್ಕೆಯಾಗಿದ್ದಾರೆ.

Read More

ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ

ಎಸ್ ಎಸ್ ಎಲ್ ಸಿ, ಪಿಯುಸಿ ಸಾಧಕರಿಗೆ ಪುರಸ್ಕಾರ 2019 ನೇ ಸಾಲಿನ‌ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕ‌ ಗಳಿಸಿದ 34 ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ತವರುಮನೆಯ ಸನ್ಮಾನ : ಬಿ.ತಮ್ಮಯ ಯುವವಾಹಿನಿ ಸಲಹೆಗಾರ, ತುಳುಲಿಪಿ ಶಿಕ್ಷಕ, ಸಾಹಿತಿ ಬಿ.ತಮ್ಮಯ ಅವರ ಸಾಮಾಜಿಕ ಹಾಗೂ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಸನ್ಮಾನಿಸಲಾಯಿತು, ಯುವವಾಹಿನಿ ಬಂಟ್ವಾಳ ಘಟಕದ ಸನ್ಮಾನವು ತವರುಮನೆಯ ಸನ್ಮಾನದಂತೆ ಅತ್ಯಂತ ಶ್ರೇಷ್ಠವಾದ ಸನ್ಮಾನ ಈ ಸನ್ಮಾನವು ಅಚ್ಚಳಿಯದೆ ನೆನಪಿನ […]

Read More

ಯುವವಾಹಿನಿ ಬಂಟ್ವಾಳ ಘಟಕದಿಂದ ಶುಭಹಾರೈಕೆಯ ಬಿಳ್ಕೊಡುಗೆ

ಬಂಟ್ವಾಳ : ಬಂಟ್ವಾಳ ತಾಲೂಕಿನ‌ ಮಣಿನಾಲ್ಕೂರು ಸರಕಾರಿ ಪ್ರೌಡಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಪ್ರೌಡ ಶಿಕ್ಷಣವನ್ನು ಮುಗಿಸಿದ ಕೌಶಿಕ್ ಬತ್ತನಾಡಿ ಅವರು ಕೃಷ್ಣಪ್ಪ ಪೂಜಾರಿ, ಹರಿಣಾಕ್ಷಿ ದಂಪತಿಗಳ ಸುಪುತ್ರ. ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಿ ಇದೀಗ ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾದ ಕೌಶಿಕ್ ಜಪಾನ್ ದೇಶಕ್ಕೆ ತೆರಳುವ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕವು ಶಾಲು ಹೊದಿಸಿ, ಅಭಿನಂದಿಸಿ, ಶುಭಹಾರೈಸಿ ಬಿಳ್ಕೊಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ಶಿವಾನಂದ ಎಮ್, […]

Read More

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಯುವವಾಹಿನಿಯ ವಿವಿಧ ಘಟಕಗಳ ಹೊರೆಕಾಣಿಕೆ ಸೇವೆ

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಜರಗಿದ ಬೃಹತ್ ಹೊರೆಕಾಣಿಕೆ ಮೆರವಣಿಗೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯು ತನ್ನ ವಿವಿಧ ಘಟಕಗಳನ್ನು ಸಂಘಟಿಸಿ ಒಟ್ಟು 23 ಘಟಕಗಳ ಹೊರೆಕಾಣಿಕೆ ಸೇವೆಯ ಜೊತೆ ಆಕರ್ಷಕ ನಾರಾಯಣ ಗುರುಗಳ ಟ್ಯಾಬ್ಲೋ ಮೂಲಕ ಮೆರವಣಿಗೆಯಲ್ಲಿ ಭಾಗವಹಿಸಿತು. ಮೆರವಣಿಗೆಯು ಶಿಸ್ತುಬದ್ಧವಾಗಿ ಯಶಸ್ವಿಯಾಗಿ ಮೂಡಿ ಬರಲು ಯುವವಾಹಿನಿಯ ನೂರಾರು ಕಾರ್ಯಕರ್ತರು ಸಮಾಜ ಭಾಂಧವರ ಜೊತೆ ಸೇರಿಕೊಂಡು ಐತಿಹಾಸಿಕ ಮೆರವಣಿಗೆಯ ಯಶಸ್ವಿ ಗೆ ಕಾರಣಕರ್ತರಾದರು. ಈ ಸಂದರ್ಭದಲ್ಲಿ ಯುವವಾಹಿನಿಯ ಸದಸ್ಯರಲ್ಲಿ ಶ್ರೀ […]

Read More

ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ

ಯುವವಾಹಿನಿ ಸಂಸ್ಥೆಯು ಉದಯೋನ್ಮುಖ ಯುವ ಸಾಹಿತಿಗಳಿಗಾಗಿ ಕೊಡಮಾಡುವ ಪ್ರಭಾಕರ ನೀರುಮಾರ್ಗ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ ಗೆ ತುಳುನಾಡ ಸ್ವರ ಮಾಣಿಕ್ಯ, ಕಂಚಿನ ಕಂಠದ ನಿರೂಪಕ, ತುಳು ಭಾಷಾ ಪರಿಪಕ್ವ ಬರಹಗಾರ ದಿನೇಶ್ ಸುವರ್ಣ ರಾಯಿ ಆಯ್ಕೆಯಾಗಿದ್ದಾರೆ. ನಟನೆ, ನಿರ್ದೇಶನ, ನಿರೂಪಣೆ, ಪರಿಕಲ್ಪನೆ, ವಿನ್ಯಾಸ, ಬರವಣಿಗೆ, ಕಲಾ ನಿರ್ದೇಶನ ಹೀಗೆ ಬಹುಮುಖ ವ್ಯಕ್ತಿತ್ವದಿಂದ ಗುರುತಿಸಿಕೊಂಡಿರುವ ದಿನೇಶ್ ಸುವರ್ಣ ರಾಯಿ, ಬಂಟ್ವಾಳ ಕುದ್ಕೋಳಿ ರಾಯಿ ಗ್ರಾಮದ ಮೋನಪ್ಪ ಪೂಜಾರಿ ಹಾಗು ಕುಸುಮಾವತಿ ದಂಪತಿ ಪುತ್ರನಾಗಿದ್ದು, ,ಎಲೆಕ್ಟ್ರಿಕಲ್ಸ್ ನಲ್ಲಿ ಡಿಪ್ಲೊಮಾ […]

Read More

ವಿದ್ಯಾರ್ಥಿಗಳಿಗೆ ಸಾಹಿತ್ಯ ಲೋಕ ಪರಿಚಯಿಸುವ ಕಾರ್ಯ ಶ್ಲಾಘನೀಯ : ಶಸಿಕಲಾ ಕೆ.

ಬಂಟ್ವಾಳ : ಭಾಷಣ ಸ್ಪರ್ಧೆಯ ಮೂಲಕ ವಿದ್ಯಾರ್ಥಿಗಳಿಗೆ ಸಾಹಿತ್ಯಲೋಕವನ್ನು ಪರಿಚಯಿಸಿ ಅವರನ್ನು ಸಾಹಿತ್ಯಲೋಕಕ್ಕೆ ದುಮುಕಿಸಿಕೊಳ್ಳಲು ಅವಕಾಶ ಮಾಡಿ ಕೋಡುವ ಯುವವಾಹಿನಿ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಬಂಟ್ವಾಳ ಎಸ್.ವಿ.ಎಸ್ ಕಾಲೇಜಿನ ಪ್ರಾಂಶುಪಾಲರಾದ ಶಶಿಕಲಾ ಕೆ ತಿಳಿಸಿದರು. ಅವರು ದಿನಾಂಕ 11.02.2019 ರಂದು ಬಂಟ್ವಾಳ ಎಸ್.ವಿ.ಎಸ್ ಪದವಿಪೂರ್ವ ಕಾಲೇಜಿನಲ್ಲಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ(ರಿ.) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಹಾಗೂ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಹಯೋಗದಲ್ಲಿ ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಬಂಟ್ವಾಳ ವಲಯದ […]

Read More

ಶಿಕ್ಷಣವು ಶಿಕ್ಷೆಯಾಗಬಾರದು, ಆನಂದದ ಕಲಿಕೆಯಾಗಬೇಕು : ಸಂಜೀವ ಪೂಜಾರಿ

ಬಂಟ್ವಾಳ : ವಿದ್ಯೆಯು ಚೋರರಿಂದ ಅಪಹರಿಸಲ್ಪಡುವಂತದ್ದಲ್ಲ, ರಾಜನಿಂದ ಗೆದ್ದುಕೊಳ್ಳಲು ಸಾಧ್ಯವಾಗುವಂತದ್ದಲ್ಲ, ಹಂಚಿದಷ್ಟು ವೃದ್ದಿಯಾಗುವುದೇ ವಿದ್ಯೆ, ವಿದ್ಯಾದಾನ ಶ್ರೇಷ್ಠ ದಾನ, ಶಿಕ್ಷಣವು ಶಿಕ್ಷೆಯಾಗಬಾರದು, ತಪಸ್ಸಾಗಬೇಕು ಶಿಕ್ಷಣವು ಆನಂದದ ಕಲಿಕೆಯಾಗಬೇಕು. ಜ್ಞಾನಾರ್ಜನೆಯೊಂದಿಗೆ ಅನ್ವೇಷಣಾದಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸಲು ಸಹಕಾರಿಯಾಗಿದೆ ಎಂದು ಬಂಟ್ವಾಳ ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ ತಿಳಿಸಿದರು. ಅವರು ದಿನಾಂಕ 25.12.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಮೆಲ್ಕಾರ್ ಬಿರ್ವ […]

Read More

ಆರೋಗ್ಯವಂತ ಸಮಾಜ ನಿರ್ಮಾಣ ಯುವ ಸಂಘಟನೆಗಳ ಕರ್ತವ್ಯವಾಗಲಿ – ಬಿ. ರಾಮನಾಥ ರೈ

ಬಂಟ್ವಾಳ: ಸಾಮಾಜಿಕ ಹಾಗೂ ದೈಹಿಕ ಆರೋಗ್ಯ ಇವೆರಡೂ ಕೂಡ ಬಹಳ ಪ್ರಾಮುಖ್ಯವಾದುದು. ಈ ನಿಟ್ಟಿನಲ್ಲಿ ಯುವ ಸಂಘಟನೆಗಳು ಹೆಚ್ಚು ಕ್ರೀಯಾಶೀಲರಾಗಿ ಕಾರ್ಯಕ್ರಮ ರೂಪಿಸಬೇಕು. ಯುವವಾಹಿನಿ(ರಿ) ನಂತಹ ಸಂಘಟನೆಗಳು ಈ ಕುರಿತು ಹೆಚ್ಚು ಸಕಾರಾತ್ಮಕವಾಗಿ ಆಲೋಚಿಸುತ್ತಿರುವುದು ಶ್ಲಾಘನೀಯ ಎಂಬುದಾಗಿ ಮಾಜಿ ಸಚಿವರಾದ ಬಿ. ರಾಮನಾಥ ರೈ ತಿಳಿಸಿದರು. ಅವರು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಬಿ.ಸಿ. ರೋಡಿ ನ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 25-11-2018 ರಂದು ಜರುಗಿದ ರಕ್ತದಾನ ಮತ್ತು ಉಚಿತ ಆರೋಗ್ಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!