Yuvavahini

ಬಂಟ್ವಾಳ

ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕ ನಡೆದು ಬಂದ ದಾರಿ

ಲೋಕ ಶಾಂತಿ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುವರ್ಯರ ತತ್ವಾದರ್ಶದ ನೆಲೆಯಲ್ಲಿ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ ಎಂಬ ಬೋಧನೆಯ ಅನುಸಾರ ವಿದ್ಯೆ-ಉದ್ಯೋಗ-ಸಂಪರ್ಕ ಎಂಬ ಮೂರು ಮುಖ್ಯ ಧ್ಯೇಯಗಳನ್ನಿಟ್ಟುಕೊಂಡು ಸಮಾಜ ಅಭ್ಯುದಯದ ಕೈಂಕರ್ಯಕ್ಕಾಗಿ 1987  ಅಕ್ಟೋಬರ್ 2 ರಂದು ಸುಂಕದಕಟ್ಟೆಯ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದ ಸನ್ನಿಧಿಯಲ್ಲಿ ಅಸ್ತಿತ್ವಕ್ಕೆ ಬಂದ ಬಿಲ್ಲವ ಸಮಾಜದ ನಿಸ್ವಾರ್ಥ ಸಮಾನ ಮನಸ್ಕ ಯುವಕರ ಸಂಘಟನೆ ಯುವವಾಹಿನಿ. ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಸಮಾಜದಲ್ಲಿ ಬಿಲ್ಲವರು ಬಲಿಷ್ಠರಾಗಬೇಕು ಎಂಬ ಸಂಕಲ್ಪದಲ್ಲಿ ಯುವವಾಹಿನಿ 1987 ರಿಂದಲೂ ಕೆಲಸ ನಿರ್ವಹಿಸುತ್ತಿದೆ. ದಕ್ಷಿಣ ಕನ್ನಡ […]

Read More

ಬಂಟ್ವಾಳ ಯುವವಾಹಿನಿಯಿಂದ ಪ್ರಕಾಶ್ ಅಂಚನ್­ಗೆ ಅಭಿನಂದನೆ

ಸರಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ದೇಶಾದ್ಯಂತ ಶಿಕ್ಷಣ ಸುಧಾರಣಾ ಅಭಿಯಾನ ನಡೆಸುತ್ತಿರುವ ಹಾಗೂ ಬಂಟ್ವಾಳ ದಡ್ಡಲಕಾಡು ಸರಕಾರಿ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪಿಸಿದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅದ್ಯಕ್ಷ ಶ್ರೀ ಪ್ರಕಾಶ್ ಅಂಚನ್ ಅವರ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಗಣನೀಯ ಸಾಧನೆಯನ್ನು ಗುರುತಿಸಿ ಕೇಲ್ದೋಡಿ ಶ್ರೀ ವೈದ್ಯನಾಥ ಕೊಡಮಣಿತ್ತಾಯ ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ದಿನಾಂಕ 03.03.2017 ನೇ ಶುಕ್ರವಾರದಂದು ಜರುಗಿದ ಹುಟ್ಟೂರ ಅಭಿನಂದನಾ ಸಮಾರಂಭದಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಅಭಿನಂದಿಸಲಾಯಿತು. ಈ […]

Read More

ಅನ್ವೇಷಣಾ-2016 ರಾಜ್ಯಮಟ್ಟದ ಒಂದು ದಿನದ ಕಾರ್ಯಾಗಾರ ಸಮಾರೋಪ

ಶಿಕ್ಷಣವು ಇಂದಿನ ಮೊದಲ ಅವಶ್ಯಕತೆಯಾಗಬೇಕು. ಪಠ್ಯ ಕೇಂದ್ರಿತ ಶಿಕ್ಷಣದ ಜೊತೆಗೆ ಕೌಶಲ ಅಭಿವೃದ್ಧಿಗೊಳಿಸುವ ತರಬೇತಿ ಕಾರ್ಯಕ್ರಮಗಳ ಅವಶ್ಯಕತೆ ಇದೆ. ಸ್ಪರ್ಧಾತ್ಮಕವಾದ ಯುಗವು ಬದುಕಿನ ಎಲ್ಲಾ ರಂಗಗಳಲ್ಲೂ ಸವಾಲನ್ನು ಎದುರು ಹಾಕುತ್ತದೆ. ಸವಾಲುಗಳನ್ನು ಧಾಟಿ ಬದುಕು ಕಟ್ಟಿಕೊಳ್ಳುವ ತುರ್ತು ವರ್ತಮಾನದ್ದಾಗಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಕ್ರಿಯಾಶೀಲರಾಗಬೇಕು. ಅದಕ್ಕೆ ಇಂತಹ ಕಾರ್ಯಕ್ರಮಗಳು ಅಗತ್ಯವಾಗಿದೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಬೇಬಿ ಕುಂದರ್ ಅಭಿಪ್ರಾಯಪಟ್ಟರು. ಅವರು ಬಿ.ಸಿ.ರೋಡು ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಯುವವಾಹಿನಿ […]

Read More

ಯುವವಾಹಿನಿ ಬಂಟ್ವಾಳ ತಾಲ್ಲೂಕು ಘಟಕ ಅನ್ವೇಷಣಾ -2016 ; ರಾಜ್ಯಮಟ್ಟದ ಒಂದು ದಿನದ ಕಾರ್ಯಾಗಾರ ಉದ್ಘಾಟನೆ

ಶಿಕ್ಷಣವು ಮಾನವನನ್ನು ಪರಿಪೂರ್ಣ ಮಾನವೀಯ ಪ್ರಜ್ಞೆಯ ನಾಗರಿಕನನ್ನಾಗಿಸುತ್ತದೆ. ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯಚಟುವಟಿಕೆಯ ಜೊತೆಗೆ ಜೀವನ ಮೌಲ್ಯ, ಸಂವಹನ ಕೌಶಲಗಳನ್ನು ರೂಢಿಸಿಕೊಳ್ಳುವ ವ್ಯಕ್ತಿತ್ವ ವಿಕಸನಗೊಳಿಸುವ ಶಿಕ್ಷಣದ ಅಗತ್ಯತೆಯೂ ಇದೆ. ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಪಡೆಯುವ ಹಂತದಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಳ್ಳಬೇಕು. ನಿರಂತರ ಪರಿಶ್ರಮದ ಮೂಲಕ ಗುರಿಯನ್ನು ಮುಟ್ಟಲು ಸಾಧ್ಯ. ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಅನ್ವೇಷಣಾ-2016 ನಂತಹ ಕಾರ್ಯಾಗಾರಗಳ ಅಗತ್ಯತೆ ಇದೆ ಎಂದು ಕಕ್ಯಪದವು ಎಲ್.ಸಿ.ಆರ್. ವಿದ್ಯಾಸಂಸ್ಥೆಯ ಸಂಸ್ಥಾಪಕ ರೋಹಿನಾಥ ಪಾದೆ ಅಭಿಪ್ರಾಯಪಟ್ಟರು. ಅವರು ಬಿ.ಸಿ.ರೋಡು ಗಾಣದಪಡ್ಪುವಿನ ಬ್ರಹ್ಮಶ್ರೀ […]

Read More

ಬಂಟ್ವಾಳ ಯುವವಾಹಿನಿಯ ಸಾಂಸ್ಕ್ರತಿಕ ಲೋಕ ಅನಾವರಣ

ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016ನೇ ಆದಿತ್ಯವಾರ ಜರಗಿತು. ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕೃತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.

Read More

ಬಂಟ್ವಾಳ ಯುವವಾಹಿನಿಯ ವತಿಯಿಂದ ಪೊಲೀಸ್ ಅಧಿಕಾರಿ ಶಾಂತಾರಾಮ್ ಇವರಿಗೆ ಅಭಿನಂದನೆ

ಪೊಲೀಸ್ ಇಲಾಖೆಯಲ್ಲಿನ ತಮ್ಮ ವಿಶೇಷ ಸೇವೆಗಾಗಿ 2015-16 ನೇ ಸಾಲಿನ ಮುಖ್ಯ ಮಂತ್ರಿಗಳ ಚಿನ್ನದ ಪದಕ ಪಡೆದ ಪ್ರಾಮಾಣಿಕ, ನಿಷ್ಠಾವಂತ ದಕ್ಷ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್ ಇವರನ್ನು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಮಾರ್, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್, ಯುವವಾಹಿನಿ ಸಲಹೆಗಾರರಾದ ಬಿ. ತಮ್ಮಯ, ಅಣ್ಣು ಪೂಜಾರಿ, ಅಧ್ಯಕ್ಷರಾದ ರಾಜೇಶ್ ಸುವರ್ಣ, ಕೋಶಾಧಿಕಾರಿ […]

Read More

ಹರೀಶ್ ಕುಟುಂಬಕ್ಕೆ ಬಂಟ್ವಾಳ ಯುವವಾಹಿನಿಯ ಸಹಾಯ ಹಸ್ತ

ಬಂಟ್ವಾಳ ತಾಲೂಕಿನ ನಾವೂರು ಹಳೆಗೇಟು ಬಳಿ ಗುರುವಾರ ರಾತ್ರಿ ಅಮಾಯಕ ಯುವಕ ಹರೀಶ್ ಪೂಜಾರಿಯನ್ನು ಹತ್ಯೆ ಮಾಡಿರುವುದು ಕ್ರೂರ ಹಾಗೂ ಸಹಿಸಲಸಾಧ್ಯವಾದ ಉಗ್ರ ಕೃತ್ಯ ಹಾಗೂ ಅಮಾಯಕ ಹರೀಶ್ ಪೂಜಾರಿಯನ್ನು ಕೊಲೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರದಲ್ಲಿ ಬಂಧಿಸಿ ಉಗ್ರ ಶಿಕ್ಷೆಗೆ ಗುರಿಪಡಿಸಬೇಕೆಂದು ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ರಾಜೇಶ್ ಸುವರ್ಣ ತಿಳಿಸಿದ್ದಾರೆ. ದಿನಾಂಕ 15-11-2015 ನೇ ಆದಿತ್ಯವಾರದಿಂದ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಸುಮಾರು 40 ಸದಸ್ಯರು ಮೃತ ಹರೀಶ ಪೂಜಾರಿ ಮನೆಗೆ ತೆರಳಿ ಸಾಂತ್ವಾನ […]

Read More

ಬಂಟ್ವಾಳ ಯುವವಾಹಿನಿಯ ವತಿಯಿಂದ ತುಳು ಲಿಪಿ ಕಲಿಕಾ ಕಾರ್ಯಾಗಾರ

ಬಂಟ್ವಾಳ : ತುಳು ಭಾಷೆ ಮತ್ತು ಲಿಪಿಯನ್ನು ಪ್ರಚಾರ ಮಾಡುವ ಕೆಲಸ ಬಹಳ ಮುಖ್ಯ. ತುಳು ಭಾಷೆ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಲು ಇಂತಹಾ ರಚನಾತ್ಮಕ ಕೆಲಸದ ಅಗತ್ಯ ಇದೆ ಎಂದು ತುಳು ಒಕ್ಕೂಟದ ಅಧ್ಯಕ್ಷ ಮಾಜಿ ಜಿ.ಪಂ.ಸದಸ್ಯ ಎ.ಸಿ.ಭಂಡಾರಿ ನುಡಿದರು. ಅವರು ಬಿ.ಸಿ.ರೊಡ್ ಯುವವಾಹಿನಿ ಭವನದಲ್ಲಿ ಜರಗಿದ ತುಳು ಸಾಹಿತ್ಯ ಅಕಾಡಮಿ ಮತ್ತು ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ತುಳು ಲಿಪಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಬಿ.ತಮ್ಮಯ್ಯನವರ 6ನೇ ತುಳು ಸಂಚಿಕೆ ’ತುಳುವೆರ್’ […]

Read More

ಯುವವಾಹಿನಿ ಕೇಂದ್ರ ಸಮಿತಿ ಪದಗ್ರಹಣ-2015-16

ಯುವವಾಹಿನಿ ಕೇಂದ್ರ ಸಮಿತಿಯ 2015-16 ನೇ ಸಾಲಿನ ಪದಗ್ರಹಣ ಸಮಾರಂಭವು ಬಂಟ್ವಾಳ ಮೆಲ್ಕಾರಿನ ಬಿರ್ವ ಆಡಿಟೋರಿಯಂ ಇಲ್ಲಿ 09.08.2015 ರಂದು ಜರಗಿತು. ಚುನಾವಣಾಧಿಕಾರಿ ರವಿಚಂದ್ರ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಭೋದಿಸಿದರು. ಅಧ್ಯಕ್ಷರಾಗಿ  ಸಂತೋಷ್ ಕುಮಾರ್ ಉಡುಪಿ ನೇತೃತ್ವದ ತಂಡವು ಪ್ರಮಾಣ ವಚನ ಸ್ವೀಕರಿಸಿತು.

Read More

ಬಿಲ್ಲವಾನ್ ದುಬೈಸಂಸ್ಥೆಗೆ ಯುವವಾಹಿನಿ ಸಾಧನಾ ಶ್ರೇಷ್ಟ ಪ್ರಶಸ್ತಿ -2015

ಆಗಸ್ಟ್ 9, 2015 ರಂದು ಮೆಲ್ಕಾರ್ ಬಿರ್ವ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 28ನೇ ವಾರ್ಷಿಕ ಸಮಾವೇಶದಲ್ಲಿ ಬಿಲ್ಲವಾನ್ ದುಬೈ ಮತ್ತು ನಾರ್ಥನ್ ಎಮಿರೇಟ್ಸ್ ಸಂಸ್ಥೆಗೆ ಸಾಮಾಜಿಕ ಕ್ಷೇತ್ರದ ಸಮಗ್ರ ಸಾಧನೆಯನ್ನು ಗುರುತಿಸಿ ಯುವವಾಹಿನಿ ಸಾಧನಾ ಶ್ರೇಷ್ಟ ಪ್ರಶಸ್ತಿ – 2015 ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್, ಮುಂಬಯಿ ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷರಾದ ನಿತ್ಯಾನಂದ ಡಿ. ಕೊಟ್ಯಾನ್, ದ.ಕ.ಜಿಲ್ಲಾ ಮೂರ್ತೆದಾರರ ಮಹಾ ಮಂಡಲದ ಅಧ್ಯಕ್ಷರಾದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!