Yuvavahini

ಬಂಟ್ವಾಳ

ಬಡ ಕುಟುಂಬದ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ

ವರುಷಕ್ಕೊಂದು ಮನೆ ಹರುಷಕ್ಕೊಂದು ನೆಲೆ ಎಂಬ ಘೋಷ ವಾಕ್ಯದ ಮೂಲಕ ಕಳೆದ ವರ್ಷ ಯುವವಾಹಿನಿ ಬಂಟ್ವಾಳ ತಾಲೂಕು ಘಟಕವು ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಅಜಕಳ‌ ನಿವಾಸಿ ಅಕ್ಕಮ್ಮ ಎಂಬ ಬಡ ಕುಟುಂಬಕ್ಕೆ ಸುಮಾರು ಐದು ಲಕ್ಷ ವೆಚ್ಚದ ಮನೆ ನಿರ್ಮಿಸಿ ಹಸ್ತಾಂತರ ಮಾಡಿದೆ. ಈ ಸಾಲಿನಲ್ಲಿ ಬಂಟ್ವಾಳ ಮೂಡ ಗ್ರಾಮದ ನಂದಬೆಟ್ಟು ಎಂಬಲ್ಲಿನ‌ ಪ್ರೇಮ ಎಂಬ ಬಡ ಕುಟುಂಬಕ್ಕೆ ಮನೆ ನಿರ್ಮಾಣದ ಯೋಜನೆ ರೂಪಿಸಿದೆ. ಈ ನಿಟ್ಟಿನಲ್ಲಿ ದಿನಾಂಕ 18.03.2018 ರಂದು ನಾಟಿ ಕೇಶವ ಶಾಂತಿ […]

Read More

ಬಂಟ್ವಾಳದಲ್ಲಿ ‘ಡೆನ್ನಾನ… ಡೆನ್ನನ’ದ ಇಂಪು

ತುಳು ನಾಡ ವೀರ ಪುರುಷರ ಕಥೆಗಳು ಇಂದಿಗೂ ಜೀವಂತವಾಗಿದೆ ಎಂದರೆ ಅದು ತುಳುನಾಡ ಪಾಡ್ದನದ ಮೂಲಕ. ಅದು ನಮ್ಮ ಹಿರಿಯರ ಸಂಸ್ಕೃತಿಯ ಮೂಲಕ , ತುಳುನಾಡ ಸಂಸ್ಕೃತಿಯಲ್ಲಿ ಬೆರೆತು ಹೋದ ವೀರ ಪುರುಷರ, ಮಾತೆಯರ ಕಥೆಗಳು ಪ್ರಾರಂಭವಾಗುವುದೇ ಪಾಡ್ದನದ ಮೊದಲ ಎರಡು ಪದಗಳಾದ ಡೆನ್ನಾನ ಡೆನ್ನಾನದಿಂದ ಬಿ.ಸಿ ರೋಡಿನ ನಾರಾಯಣ ಗುರು ವೃತದ ಬಳಿಯಿರುವ ಸ್ಪರ್ಶ ಕಲಾಮಂದಿರದಲ್ಲಿ , ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಬಂಟ್ವಾಳ ಆತಿಥ್ಯದಲ್ಲಿ . ಡೆನ್ನಾನ ಡೆನ್ನಾನ […]

Read More

ಗುಪ್ತಗಾಮಿನಿ ಯುವವಾಹಿನಿ…….. ರಮ್ಯ ಸುಜೀರ್

ಬದುಕು ಆಧುನೀಕತೆಯತ್ತ ಹೊರಳುತ್ತಿದೆ. ಗತವೈಭವದ ಸಂದಿ ಪಾಡ್ದನಗಳು ನೇಪಥ್ಯಕ್ಕೆ ಸರಿಯುತ್ತಿದೆ. ತುಳುವ ಆಚಾರ-ವಿಚಾರ, ಹಿರಿಮೆ-ಗರಿಮೆಗಳು ಸದ್ದಡಗಿಸಿ ಮೂಕವಾಗಿದೆಯೆನೋ ಎನ್ನುವಂತಹ ದಿನಗಳಲ್ಲಿಯೇ, ಸಂದಿ ಹೋದ ಕಾಲವನ್ನು ಮರುಕಳಿಸುವಂತೆ ಮಾಡಿ, ಸತ್ಯದ ಹೊಳಪ ಲೇಪನವನ್ನು ನೀಡುತ್ತಾ, ನಿತ್ಯ-ನಿರಂತರ ಗುಪ್ತಗಾಮಿನಿಯಾಗಿ ಹರಿಯುತ್ತಾ, ತನ್ನೊಂದಿಗೆ ತುಳುವ ಮಣ್ಣಿನ ಸತ್ವ-ಸಾರ, ಬಿರುವ ಸಮುದಾಯದ ಯುವಜನತೆಯ ಪ್ರತಿಭಾ ಕೌಶಲ್ಯವನ್ನು ಒಗ್ಗೂಡಿಸಿಕೊಂಡು, ಎಲ್ಲೋ ಮರೆಯಾಗಿ ಹೋಗುತ್ತಿರುವ ಪ್ರತಿಭೆಗಳ ಮೇಲೆ ಬೆಳಕು ಚೆಲ್ಲಿ, ಅವರಿಗೆ ವೇದಿಕೆಯನ್ನು ಕಲ್ಪಿಸಿಕೊಟ್ಟು, ಸಾಧನಾಲೋಕಕ್ಕೆ ಪರಿಚಯಿಸಿಕೊಂಡು ಸಾಧನೆಯ ಮೇರುಶಿಖರದ ಅನಂತತೆಯ ಪಥದತ್ತ ಸಾಗಿಬರುತ್ತಿರುವ ಹೆಮ್ಮೆಯ […]

Read More

ಮುಗಿಲು ಮುಟ್ಟಿತು ಯುವವಾಹಿನಿಯ ಡೆನ್ನಾನ ಡೆನ್ನನ ….ಇಂಪು

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ 28-01-2018ನೇ ಆದಿತ್ಯವಾರದಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಯುವವಾಹಿನಿಯ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ ಯಶಸ್ವಿಯಾಗಿ ಸಂಪನ್ನಗೊಂಡಿತು. ಯುವವಾಹಿನಿಯ 28 ಘಟಕ ಗಳನ್ನು ಪ್ರತಿನಿಧಿಸುವ 28 ವರ್ಣರಂಜಿತ ಸಾಂಪ್ರದಾಯಿಕ ಶೈಲಿಯಲ್ಲಿ ನಿರ್ಮಿಸಿದ ಸ್ವಾಗತ ಗೋಪುರವು ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಯಿತು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿಯವರು ಧ್ವಜಾರೋಹಣ ಮಾಡಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ […]

Read More

ವಿಶ್ವವಿದ್ಯಾಲಯದ ಪರೀಕ್ಷೆಗಳಿಗಿಂತ ಜೀವನ ಪರೀಕ್ಷೆ ಮುಖ್ಯ : ಯಶವಂತ ಪೂಜಾರಿ

ವಿಶ್ವವಿದ್ಯಾಲಯ ಪರೀಕ್ಷೆಗಳಿಗಿಂತ ಜೀವನ ಪರೀಕ್ಷೆ ಮುಖ್ಯವಾದವು, ಈ ಪರೀಕ್ಷೆಯಲ್ಲಿ ಯಶಸ್ವೀಯಾಗುವುದರ ಮೂಲಕ ವಿದ್ಯಾರ್ಥಿ ಜೀವನ ಸಾರ್ಥಕತೆ ಪಡೆಯಬೇಕು. ಜೀವನದಲ್ಲಿ ಮಾತಿಗಿಂತ ಸಾಧನೆ ಮುಖ್ಯ, ಯಾವತ್ತೂ ಮಾತೇ ಸಾಧನೆಯಾಗಬಾರದು ಎಂದು ಕೇಂದ್ರ ಸಮಿತಿಯು ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 07.01.2017 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಸ್ಟೂಡೆಂಟ್ ವಿಂಗ್ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಲೋಕೇಶ್ ಪೂಜಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಲಹೆಗಾರರಾದ […]

Read More

ಯುವವಾಹಿನಿ ಅನ್ವೇಷಣಾ ಪ್ರಶಸ್ತಿ -2017 ಪ್ರದಾನ

ವಿದ್ಯೆಯು ವಿದ್ಯಾರ್ಥಿಗಳ ಬೌದ್ಧಿಕ ವಿಕಾಸಕ್ಕೆ ಪೂರಕವಾದುದು. ಶಿಕ್ಷಣ ದ ಬಗೆಗಿನ ಕಾಳಜಿಯು ಅಗತ್ಯವಾದುದು. ಯಾವುದೇ ಪ್ರತಿಷ್ಠೆ, ಸ್ಥಾನಮಾನಕ್ಕಾಗಿ ನಮ್ಮ ಕೆಲಸ ಕಾರ್ಯಗಳು ಇರಕೂಡದು. ನಿಸ್ವಾರ್ಥ ವಾದ ಮನಸ್ಸಿನ ಸೇವೆಯನ್ನು ಸಮಾಜ ಗುರುತಿಸುತ್ತದೆ. ಸಾಮಾಜಿಕ ಸೇವೆಯಿಂದ ದೊರೆಯುವ ತೃಪ್ತಿ ಎಲ್ಲಾ ಬಗೆಯ ಸನ್ಮಾನ ಪ್ರಶಂಸೆಗಳನ್ನು ಮೀರಿದುದು. ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಕೂಡದು ಎನ್ನುವ ಮಹತ್ವಾಕಾಂಕ್ಷೆ ಯಿಂದ ಎಲ್ ಸಿ ಆರ್ ವಿದ್ಯಾಸಂಸ್ಥೆಯನ್ನು ಪ್ರಾರಂಭಿಸಿದೆ. ಅನೇಕ ಮಂದಿ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣವನ್ನು ಈ ವಿದ್ಯಾಸಂಸ್ಥೆಯಲ್ಲಿ ಪಡೆಯುತ್ತಿದ್ದಾರೆ. ಇದು […]

Read More

ನಾರಾಯಣಗುರು ಅನುಸರಿಸಿದ್ದು ಸಂಘರ್ಷದ ಹಾದಿಯಲ್ಲ;ಸಾಮರಸ್ಯ ಮಾರ್ಗ : ದಿನೇಶ್ ಅಮೀನ್ ಮಟ್ಟು

ಬಂಟ್ವಾಳ : ಮನುಷ್ಯ ಪರಿಸರದ ಕೂಸು. ಪ್ರತಿಭೆಗೆ ಯಾವುದೇ ಜಾತಿಯ ಹಂಗಿಲ್ಲ. ನಮ್ಮೊಳಗಿನ ಕೀಳರಿಮೆಯನ್ನು ಮೊದಲು ಕಸದ ಬುಟ್ಟಿಗೆ ಹಾಕಿ ನಮ್ಮ ದೃಷ್ಟಿ ಗುರಿಯ ಸಾಧನೆಯ ಕಡೆಗೆ ಇರಬೇಕು. ಆತ್ಮ ವಿಶ್ವಾಸಕ್ಕಿಂತ ದೊಡ್ಡ ಶಕ್ತಿ ಇನ್ನೊಂದು ಇಲ್ಲ. ಚರಿತ್ರೆಯನ್ನು ಅಧ್ಯಯನ ಮಾಡಿದರೆ ನಮಗೆ ಗೊತ್ತಾಗುತ್ತೆ, ಯಾರು ಕೂಡ ಒಮ್ಮೆಲೆ ನಾಯಕರಾಗಿ ರೂಪುಗೊಳ್ಳೊದಿಲ್ಲ. ಯಾವುದಾದರೊಂದು ಹೋರಾಟದ ಕಾರಣವಾಗಿ ನಾಯಕರುಗಳು ರೂಪುಗೊಳ್ಳುತ್ತಾರೆ. ನಾರಾಯಣ ಗುರುಗಳು ಸಮಾಜಕ್ಕಾಗಿ ಬದುಕಿದವರು. ಸಮಾಜದ ಎಲ್ಲಾ ಬಗೆಯ ಸಮಸ್ಯೆಗಳಿಗೆ ಶಿಕ್ಷಣವು ಚಿಕಿತ್ಸೆ ಯಾಗುತ್ತೆ ಎಂಬ ನಂಬಿಕೆ […]

Read More

ಯುವವಾಹಿನಿ: ಅನ್ವೇಷಣಾ -2017 ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನೆ

  ಬಂಟ್ವಾಳ: ಯಾವುದೇ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ ಮುಂದುವರಿಯಲು ಶಿಕ್ಷಣವು ಅಗತ್ಯ. ಶಿಕ್ಷಣದಿಂದ ಅವಕಾಶವಂಚಿತ ವಿದ್ಯಾರ್ಥಿಗಳನ್ನು ಗುರುತಿಸಿ ಯೋಗ್ಯ ರೀತಿಯ ಶಿಕ್ಷಣವನ್ನು ಒದಗಿಸುವ ಕೆಲಸವನ್ನು ಯುವವಾಹಿನಿ ಸಂಸ್ಥೆ ಮಾಡುತ್ತಿದೆ. ಶಿಕ್ಷಣವು ಮಾನವನನ್ನು ವಿದ್ಯಾವಂತನನ್ನಾಗಿ ಮಾಡುವುದು ಮಾತ್ರವಲ್ಲ, ಆರೋಗ್ಯಪೂರ್ಣ ಸಮಾಜವನ್ನು ನಿರ್ಮಾಣ ಮಾಡುವ ಮಹತ್ವಪೂರ್ಣ ಕೆಲಸವನ್ನೂ ನಿರ್ವಹಿಸುತ್ತದೆ. ಯುವ ಮನಸ್ಸುಗಳಿಗೆ ಸೂಕ್ತ ರೀತಿಯ ತರಬೇತಿ ನೀಡುವ ಮೂಲಕ ಸಮರ್ಥ ರಾಷ್ಟ್ರವನ್ನು ಕಟ್ಟಬಹುದು ಎಂದು ಬ್ರಹ್ಮಶ್ರೀ ನಾರಾಯಣ ಗುರು ಸೇವಾಸಂಘ ಸಜೀಪ ಮೂಡದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಭಿಪ್ರಾಯ […]

Read More

ಯುವವಾಹಿನಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]

Read More

ರಕ್ತದಾನ ಮತ್ತು ಉಚಿತ ಕಣ್ಣು ಪರೀಕ್ಷಾ ಶಿಬಿರ

ರಕ್ತದಾನ ಮಹಾದಾನ ಶ್ರೇಷ್ಠ ದಾನ ,ಇದು ಮಾನವೀಯತೆಯ ಪ್ರತೀಕ ,ನಾವೆಲ್ಲಾ ಒಂದೇ ತಾಯಿಯ ಮಕ್ಕಳು ಎಂಬ ಸಂದೇಶ ಸಾರುತ್ತದೆ , ಅಸ್ತಿತ್ವಕ್ಕೆ ಬಂದ ಕೆಲವೇ ದಿನಗಳಲ್ಲಿ ಯುವವಾಹಿನಿ ಮಾಣಿ ಘಟಕದ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಗೌರವಾಧ್ಯಕ್ಷರಾದ ಈಶ್ವರ ಪೂಜಾರಿ ತಿಳಿಸಿದರು. ಯುವವಾಹಿನಿ (ರಿ) ಮಾಣಿ ಮತ್ತು ಬಂಟ್ವಾಳ ಘಟಕ, ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್‌ ಇದರ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲೆ ರಕ್ತನಿಧಿ, ಸರಕಾರಿ ಲೇಡಿಗೋಷನ್ ಆಸ್ಪತ್ರೆ, […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!