Yuvavahini

ಪಣಂಬೂರು-ಕುಳಾಯಿ

ಶೋಷಿತ ಸಮಾಜಕ್ಕೆ ದೇವರನ್ನು ತೋರಿಸಿದ ನಾರಾಯಣಗುರುಗಳು : ರಾಜೀವ ಪೂಜಾರಿ.

ಪಣಂಬೂರು : ದೇವಸ್ಥಾನವನ್ನು ನಿರ್ಮಿಸಿ, ದೇವರನ್ನು ಪ್ರತಿಷ್ಟೆ ಮಾಡಿ ಶೋಷಿತ ಸಮಾಜಕ್ಕೆ ದೇವರನ್ನು ಕಾಣುವ ಭಾಗ್ಯವನ್ನು ಕರುಣಿಸಿ, ತಾನು ಗಳಿಸಿದ ಜ್ಞಾನದಿಂದ ಸಮಾಜ ಪರಿವರ್ತನೆಯನ್ನು ಮಾಡಿದ ಸಮಾಜ ಸುದಾರಕ, ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರುಗಳು. ಅವರ ತತ್ವಾದರ್ಶಗಳು ಅಂದಿಗೂ, ಇಂದಿಗೂ, ಮುಂದೆಯೂ ಅಳಿಯದ ಸಂದೇಶವಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ರಾಜೀವ ಪೂಜಾರಿ ತಿಳಿಸಿದರು. ದಿನಾಂಕ 21.10.2018 ರಂದು ಯುವವಾಹಿನಿ (ರಿ) ಪಣಂಬೂರು ಘಟಕದ ಆಶ್ರಯದಲ್ಲಿ ಕುಳಾಯಿ ಮೂಡುಬೆಟ್ಟು ತುಕಾರಾಮ ಕರ್ಕೇರರವರ ಮನೆಯಲ್ಲಿ ಜರಗಿದ ಬಿಲ್ಲವ ಸಮಾಜ […]

Read More

ಹಿಂದುಳಿದವರ ಪ್ರಗತಿಗೆ ನಾರಾಯಣಗುರುಗಳು ಪ್ರೇರಣೆ : ರಾಜೀವ ಪೂಜಾರಿ.

ಪಣಂಬೂರು : ಬ್ರಹ್ಮಶ್ರೀ ನಾರಾಯಣಗುರುಗಳು ಸನಾತನ ಪರಂಪರೆ, ಧ್ಯಾನ, ತಪಸ್ಸನ್ನು ಪ್ರತಿಪಾದಿಸಿದ್ದರು. ಈ ಮೂಲಕ ಸಮಾಜದಲ್ಲಿ ಆ ಕಾಲದಲ್ಲಿದ್ದ ಅಸ್ಪ್ರಶ್ಯತೆ, ಅಂಧಶ್ರದ್ಧೆ ಮೊದಲಾದ ಸಮಸ್ಯೆಗಳ ಬಗ್ಗೆ ಕ್ರಾಂತಿಕಾರಿ ಬದಲಾವಣೆ ತರಲು ಯತ್ನಿಸಿದ್ದರು. ತಪಸ್ಸನ್ನು ಆಚರಿಸಿ ಭಗವತ್ ಸಾಕ್ಷಾತ್ಕಾರವನ್ನು ಪಡೆದು ಸಮಾಜ ಪರಿವರ್ತನೆಯನ್ನು ಮಾಡುವ ಮೂಲಕ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸಿದರು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ರಾಜೀವ ಪೂಜಾರಿ ತಿಳಿಸಿದರು. ದಿನಾಂಕ 07.10.2018 ರಂದು ಯುವವಾಹಿನಿ (ರಿ) ಪಣಂಬೂರು ಘಟಕದ ಆಶ್ರಯದಲ್ಲಿ ಎಂ ಟಿ ಸಾಲ್ಯಾನ್ […]

Read More

ಗುರುಗಳ‌ ಸಂದೇಶ ಜಗತ್ತಿನ ಕತ್ತಲೆಯನ್ನು ದೂರವಾಗಿಸುವ ಬೆಳಕಾಗಿದೆ : ರಾಜೀವ ಪೂಜಾರಿ

ಪಣಂಬೂರು : ಬ್ರಹ್ಮಶ್ರೀ ನಾರಾಯಣಗುರುವರ್ಯರ ಸಂದೇಶ ಜಗತ್ತಿನ ಕತ್ತಲೆಯನ್ನು ದೂರವಾಗಿಸುವ ಬೆಳಕಾಗಿದೆ. ಆದ್ದರಿಂದ ಅವರ ಸಂದೇಶಗಳನ್ನು ದೇಶದೆಲ್ಲೆಡೆ ಸಾರುವ ಕೆಲಸವಾಗಬೇಕಾಗಿದೆ. ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು ಎಂಬ ಬೀಜಮಂತ್ರದಿಂದ ಎಲ್ಲಾ ಮತದ ಜನಮನವನ್ನು ಗೆದ್ದು ಆಧ್ಯಾತ್ಮಿಕ ಆಂದೋಲನಕ್ಕೆ ವೇದಿಕೆ ನಿರ್ವಿುಸಿದ ನಾರಾಯಣಗುರುಗಳು ವಿಶ್ವಮಾನವರಾಗಿ ಬೆಳಗುತ್ತಿದ್ದಾರೆ.ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ರಾಜೀವ ಪೂಜಾರಿ ತಿಳಿಸಿದರು. ದಿನಾಂಕ 23.09.2018 ರಂದು ಯುವವಾಹಿನಿ (ರಿ) ಪಣಂಬೂರು ಘಟಕದ ಆಶ್ರಯದಲ್ಲಿ ದಿ.ಲಿಂಗಪ್ಪ ಕರ್ಕೇರ ಸುಬ್ಬ ಮನೆ […]

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಸಂಸ್ಕ್ರತಿ ಉಳಿಸುವಲ್ಲಿ ಮಹಿಳೆಯರ ಪಾತ್ರ ಪ್ರಮುಖ : ವಿಜಯಲಕ್ಷ್ಮಿ

ಕುಳಾಯಿ : ತುಳುನಾಡಿನ ಸಂಸ್ಕೃತಿ ಉಳಿಸುವಲ್ಲಿ ಮಹಿಳೆಯರ ಹೊಣೆಗಾರಿಕೆ ಪ್ರಾಮುಖ್ಯವಾಗಿದೆ. ಯುವವಾಹಿನಿ ಸಂಘಟನೆ ಯುವಕರಲ್ಲಿ ಶಿಕ್ಷಣ, ಸಂಘಟನೆ ಬಗ್ಗೆ ಜಾಗ್ರತಿ ಮೂಡಿಸಿ ಸುಸಂಸ್ಕ್ರತ ಪ್ರಜೆಗಳನ್ನಾಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಆಟಿದ ಪೊನ್ನುಪೊಂಜೊವುಲು ಎಂಬ ವಿಷಯದಲ್ಲಿ ಉಪನ್ಯಾಸ ನೀಡುತ್ತಾ ಪೆರ್ಮನ್ನೂರು ಸರಕಾರಿ ಪ್ರೌಢಶಾಲೆ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮಿ ಕಟೀಲು ತಿಳಿಸಿದರು. ಅವರು ದಿನಾಂಕ 29-07-2018ನೇ ಆದಿತ್ಯವಾರದಂದು ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ, ಯುವವಾಹಿನಿ(ರಿ) ಪಣಂಬೂರು ಘಟಕ ಮತ್ತು ಯುವವಾಹಿನಿ(ರಿ) ಸುರತ್ಕಲ್ […]

Read More

ಪ್ರಕೃತಿ ಸಂರಕ್ಷಣೆ ಮತ್ತು ಮಾದಕ ವ್ಯಸನ ವಿಚಾರ ಸಂಕಿರಣ

ಪಣಂಬೂರು : ಯುವವಾಹಿನಿ (ರಿ) ಪಣಂಬೂರು ಘಟಕದ ದಿನಾಂಕ 02-07-2018ನೇ ಸೋಮವಾರದಂದು ಪ್ರಕೃತಿ ಸಂರಕ್ಷಣೆ ಮತ್ತು ಮಾದಕ ವ್ಯಸನ” ಎನ್ನುವ ವಿಚಾರ ಸಂಕಿರಣ ಕಾರ್ಯಕ್ರಮ ಜರುಗಿತು . “ಪ್ರಕೃತಿ ಸಂರಕ್ಷಣೆ ಮತ್ತು ಮಾದಕ ವ್ಯಸನ” ಎನ್ನುವ ವಿಚಾರದ ವಿಚಾರ ಸಂಕಿರಣ ಜರಗಿತು. ಶ್ರೀ ಯೋಗೀಶ್ ಮಲ್ಲಿಗೆಮಾಡು, ರೋಶನಿ ನಿಲಯ, ಮಂಗಳೂರು ಇವರು ಅತ್ಯುತ್ತಮವಾದ ವಿಚಾರಗಳನ್ನು ಮಂಡಿಸಿದರು. ಈ ಪ್ರಕೃತಿ ಅದರ ವೈಶಿಷ್ಟ್ಯ, ನಾವು ಹೇಗೆ ಪ್ರಕೃತಿಯಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಪಡೆಯುತ್ತಿದ್ದೇವೆ, ಯಾವ ರೀತಿಯಾಗಿ ನಾವು ಪ್ರಕೃತಿಯ ಕೊಡುಗೆಯನ್ನು […]

Read More

ಸಮಾಜದ ನೆಮ್ಮದಿ ಯುವವಾಹಿನಿಯ ಗುರಿ : ಯಶವಂತ ಪೂಜಾರಿ

ಪಣಂಬೂರು : ಅವ್ಯವಸ್ಥೆಯನ್ನು ತಿಂದುಂಡು ಹೊದ್ದು ಮಲಗೇಳುವ ನಮ್ಮ ಪರಿಸ್ಥಿತಿಯನ್ನು ಬದಲಾಯುಸೋ ಪ್ರಯತ್ನಕ್ಕೆ ಯುವವಾಹಿನಿ ಸಂಘಟನೆ ಅನಿವಾರ್ಯ ಹಾಗೂ ಆಗ ಮಾತ್ರ ಒಂದು ಸುಭದ್ರ ನಾಳೆ, ಒಂದು ನೆಮ್ಮದಿಯ ನಾಳೆ, ಒಂದು ನಿರಾತಂಕ ನಾಳೆ, ಒಂದು ಸ್ಪಷ್ಟ ನಾಳೆ, ಒಂದು ಸಮೃದ್ಧಿಯ ನಾಳೆ ನಿರ್ಮಾಣಕ್ಕೆ ಸಾಧ್ಯ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 09.06.2018 ರಂದು ಪಣಂಬೂರು, ನವಮಂಗಳೂರು ಬಂದರು ಮಂಡಳಿಯ ರಿಕ್ರಿಯೇಶನ್ ಕ್ಲಬ್ ಇಲ್ಲಿ ಯುವವಾಹಿನಿ(ರಿ) ಪಣಂಬೂರು ಘಟಕದ […]

Read More

ಅಧ್ಯಕ್ಷರಾಗಿ ಜಗದೀಶ್ ಸುವರ್ಣ ಆಯ್ಕೆ

ಪಣಂಬೂರು : ಯುವವಾಹಿನಿ (ರಿ) ಪಣಂಬೂರು ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಜಗದೀಶ್ ಸುವರ್ಣ ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು ಅಧ್ಯಕ್ಷರು : ಜಗದೀಶ್ ಸುವರ್ಣ ಉಪಾಧ್ಯಕ್ಷರು : ನರೇಶ್ ಕುಮಾರ್ ಕಾರ್ಯದರ್ಶಿ : ರಾಜೇಶ್ ಆರ್ ಪೂಜಾರಿ ಜತೆ ಕಾರ್ಯದರ್ಶಿ : ಸುರೇಶ್ ಕುಮಾರ್ ಕುಲಾಯಿ ಕೋಶಾಧಿಕಾರಿ : ರಂಜನ್ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಅರುಣಾನಂದ ಕಿಶೋರ್ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ನಿತಿನ್ ಕ್ರೀಡೆ ಮತ್ತು ಆರೋಗ್ಯ ; ಮಹೇಶ್ ಕುಲಾಯಿ ಸಮಾಜ […]

Read More

ಜಿ.ಎಸ್.ಟಿ ಮಾಹಿತಿ ಕಾರ್ಯಾಗಾರ

ಯುವವಾಹಿನಿ (ರಿ) ಸುರತ್ಕಲ್ ಹಾಗೂ ಪಣಂಬೂರು ಘಟಕದ ಆಶ್ರಯದಲ್ಲಿ ದಿನಾಂಕ 30.04.2018 ರಂದು ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಜಿ.ಎಸ್.ಟಿ.ತರಿಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಸೋಪ್ಟ್ ಲಿಂಕ್ ಸಂಸ್ಥೆಯ ಮೆನೇಜರ್ ಬಾಲಕೃಷ್ಣ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ‌ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್, ಯುವವಾಹಿನಿ ಪಣಂಬೂರು ಘಟಕದ ಅಧ್ಯಕ್ಷರಾದ ಉದಯ ಕುಮಾರ್ ಯುವವಾಹಿನಿ ಸುರತ್ಕಲ್ ಘಟಕದ ಸಲಹೆಗಾರರಾದ ಸಾಧು ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಸುರತ್ಕಲ್ […]

Read More

ಕೋಟಿ ಚೆನ್ನಯ ನಾಟಕಕ್ಕೆ ಹೊಸ ಛಾಪು ಮೂಡಿಸಿದ ಯುವವಾಹಿನಿ ಕಲಾವಿದರು

ಕಥೆಗಾರ,ಕಾದಂಬರಿಗಾರ,ನಾಟಕಗಾರ ದಿ.ವಿಶುಕುಮಾರ್‌ ಅವರ ಕೋಟಿ ಚೆನ್ನಯ ನಾಟಕಕ್ಕೆ ಮರ ಜೀವ ತುಂಬಿದ ಯುವವಾಹಿನಿ ಕಲಾವಿದರು ಇಂದು ತುಳು ನಾಟಕರಂಗದಲ್ಲಿ ಹೊಸ ಛಾಪು ಮೂಡಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯಅಕಾಡೆಮಿ ಮಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆಸಿದ ಎಂಟು ದಿನಗಳ ನಾಟಕ ಪರ್ಬದಲ್ಲಿ ಯುವವಾಹಿನಿನಿಯ ೫೧ ಮಂದಿ ಕಲಾವಿದರು ವಿಶುಕುಮಾರ್‌ ಅವರ ಕೋಟಿಚೆನ್ನಯ ನಾಟಕ ಅಭಿನಯಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.ಐದು ದಶಕದ ಹಿಂದೆ ತುಳು ರಂಗಭೂಮಿಯಲ್ಲಿ ಸಂಚಲನ ಸೃಷ್ಟಿಸಿದ್ದ, ಬಳಿಕ ಸಿನಿಮವಾಗಿ ಪ್ರೇಕ್ಷಕರ ಮನ ಗೆದ್ದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!