Yuvavahini

ಹಳೆಯಂಗಡಿ

ಉಚಿತ ಯೋಗ ಶಿಕ್ಷಣ ತರಗತಿ-ಯುವವಾಹಿನಿ( ರಿ.) ಹಳೆಯಂಗಡಿ ಘಟಕ

ಲಯನ್ಸ್ ಮತ್ತು ಲಿಯೋ ಕ್ಲಬ್ ಹಳೆಯಂಗಡಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ ಮಂಗಳೂರು ಮಹಾನಗರ ಇವರ ಸಹಯೋಗದಲ್ಲಿ, ದಿನಾಂಕ 05-10-2025 ನೇ ಆದಿತ್ಯವಾರ ಬೆಳಿಗ್ಗೆ ಉಚಿತ ಯೋಗ ಶಿಕ್ಷಣ ತರಗತಿಯನ್ನು – ಹಳೆಯಂಗಡಿ ಬಿಲ್ಲವ ಭವನದಲ್ಲಿ ಉದ್ಘಾಟನೆ ಮಾಡಲಾಯಿತು

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವ-ಯುವವಾಹಿನಿ(ರಿ) ಹಳೆಯಂಗಡಿ ಘಟಕ

ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವವನ್ನು ದಿನಾಂಕ 07/09/2025 ರಂದು ಹಳೆಯಂಗಡಿಯ ಬಿಲ್ಲವ ಮಂದಿರದಲ್ಲಿ ಆಚರಿಸಲಾಯಿತು. ಘಟಕದ ಸದಸ್ಯರೆಲ್ಲರು ಹೆಚ್ಚಿನ ಸಂಖ್ಯೆಯಲ್ಲಿ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿರುತ್ತಾರೆ.

Read More

ಸಾರ್ವಜನಿಕ ಶನಿ ಪೂಜೆ-ಹೆಜಮಾಡಿ ಯುವ ವಾಹಿನಿ (ರಿ) ಹೆಜಮಾಡಿ ಘಟಕ

ಹೆಜಮಾಡಿ ಯುವ ವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ಸುಮಾರು 26ನೇ ವರ್ಷಗಳಿಂದ ನಿರಂತರವಾಗಿ ಜರುಗುತ್ತಿದ್ದ ಸಾರ್ವಜನಿಕ ಶನಿ ಪೂಜೆಯು ಈ ಬಾರಿ ಗುರು ಮಂದಿರದ ಪ್ರಧಾನ ಆರ್ಚಕ ಹರೀಶ್ ಶಾಂತಿ ಹೆಜಮಾಡಿ ಮುಂಬೈ ಇವರ ಧಾರ್ಮಿಕ ಮುಂದಾಳತ್ವದಲ್ಲಿ ಮೇ ತಿಂಗಳ 3ನೇ ತಾರೀಕಿನಂದು ಜರಗಿತು. ಹೆಜಮಾಡಿ ಬಿಲ್ಲವರ ಸಂಘದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಜರಗಿದ ಕಾರ್ಯಕ್ರಮವನ್ನು ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ಹೆಜಮಾಡಿ, ಯುವ ವಾಹಿನಿ ಘಟಕದ ಅಧ್ಯಕ್ಷರಾದ ಶ್ರೀ […]

Read More

ಅಂತರಾಷ್ಟ್ರೀಯ ಯೋಗ ದಿನಾಚರಣೆ

ಹಳೆಯಂಗಡಿ: ಯುವವಾಹಿನಿ(ರಿ.) ಹಳೆಯಂಗಡಿ ಘಟಕ, ಬಿಲ್ಲವ ಸಮಾಜ ಸೇವಾ ಸಂಘ, ಹಳೆಯಂಗಡಿ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್, ಹಳೆಯಂಗಡಿ ಜಂಟಿ ಆಶ್ರಯದಲ್ಲಿ ಹತ್ತನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ದಿನಾಂಕ 21-06-2024 ರಂದು ಹಳೆಯಂಗಡಿ ಬಿಲ್ಲವ ಭವನದಲ್ಲಿ ಯೋಗ ಗುರುಗಳು ಯಾದವ ದೇವಾಡಿಗರ ಮಾರ್ಗದರ್ಶನದಲ್ಲಿ ಜರಗಿತು. ಯೋಗ ಗುರುಗಳು ಯೋಗದ ಮಹತ್ವ ಹಾಗೂ 2024 ರ ವಿಷಯವಾದ ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಬಿಲ್ಲವ ಸಂಘದ ಗೌರವಾಧ್ಯಕ್ಷರು ಗಣೇಶ್ […]

Read More

ಪದಗ್ರಹಣ ಸಮಾರಂಭ

ಹಳೆಯಂಗಡಿ: ಯುವವಾಹಿನಿ(ರಿ.) ಹಳೆಯಂಗಡಿ ಘಟಕದ ವತಿಯಿಂದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 03-03-2024 ರಂದು ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಬಿಲ್ಲವ ಭವನದಲ್ಲಿ ನಡೆಯಿತು. ಪದಗ್ರಹಣ ಯುವವಾಹಿನಿ ಸಮಾರಂಭದಲ್ಲಿ ಹಳೆಯಂಗಡಿ ಘಟಕದ ಅಧ್ಯಕ್ಷರು ಕಿರಣ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಸಮಾರಂಭದ ಉದ್ಘಾಟನೆಯನ್ನು ಬಿಲ್ಲವ ಸಮಾಜ ಸೇವಾ ಸಂಘ(ರಿ.) ಹಳೆಯಂಗಡಿ ಅಧ್ಯಕ್ಷರು ಚಂದ್ರಶೇಖರ್ ನಾನಿಲ್ ದೀಪವನ್ನು ಬೆಳಗಿಸುವುದರ ಮೂಲಕ ನೆರವೇರಿಸಿದರು. 2024- 25 ನೇ ಸಾಲಿನ ಅಧ್ಯಕ್ಷರಾಗಿ ಹಿತಾಕ್ಷಿ ನಾರಾಯಣ್, ಕಾರ್ಯದರ್ಶಿ ಪೂರ್ಣಿಮಾ ಹಾಗೂ […]

Read More

ಡೆನ್ನಾನ ಡೆನ್ನನ – 2022 : ದ್ವೀತಿಯ ಬಹುಮಾನ : ಯುವವಾಹಿನಿ ಹಳೆಯಂಗಡಿ ಘಟಕ

ಕಟಪಾಡಿ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ದ್ವೀತಿಯ ಬಹುಮಾನವನ್ನು ಯುವವಾಹಿನಿ ಹಳೆಯಂಗಡಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ ತೀವ್ರ […]

Read More

ಸಮಾಜಮುಖಿ ಕಾರ್ಯಗಳಿಗೆ ಯುವವಾಹಿನಿ ಮಾದರಿ : ಚಂದ್ರಶೇಖರ ನಾನಿಲ್

ಯುವವಾಹಿನಿ ಸಂಸ್ಥೆಯು ಯುವ ಸಮುದಾಯವನ್ನು ಕಟ್ಟಿ ಬೆಳೆಸುವ ಧ್ಯೇಯದೊಂದಿಗೆ ಇಂದು ಮಾದರಿಯಾಗಿ ಬೆಳೆದಿದೆ. ಸಮಾಜಮುಖಿ ಚಿಂತನೆಯಿಂದ ತಮ್ಮ ಸೇವೆಯನ್ನು ಎಲ್ಲಾ ಸಮಾಜಕ್ಕೂ ನೀಡುತ್ತಿರುವುದು ಶ್ಲಾಘನೀಯ ಇಂತಹ ಸೇವಾ ಸಂಸ್ಥೆಗೆ ಉತ್ತಮ ಭವಿಷ್ಯವಿದೆ ಎಂದು ಹಳೆಯಂಗಡಿ ಬಿಲ್ಲವ ಸಂಘದ ಅಧ್ಯಕ್ಷರಾದ ಚಂದ್ರಶೇಖರ ನಾನಿಲ್ ಹೇಳಿದರು. ಅವರು ದಿನಾಂಕ 20.03.2022 ರಂದು ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ವಠಾರದಲ್ಲಿ ಹಳೆಯಂಗಡಿ ಯುವವಾಹಿನಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಘಟಕದ ನಿರ್ಗಮನ ಅಧ್ಯಕ್ಷರಾದ ಹರೀಶ್ ಆರ್ […]

Read More

ಅರಸು ಕಂಬಳದ ಬಾಕಿಮಾರು ಗದ್ದೆಯಲ್ಲಿ ಸ್ವಚ್ಛತೆಯ ಕಾರ್ಯ

*ಯುವವಾಹಿನ(ರಿ.)  ಹಳೆಯಂಗಡಿಘಟಕ ಮತ್ತು ಬಿಲ್ಲವಸಮಾಜ ಸೇವಾ ಸಂಘ(ರಿ)ಹಳೆಯಂಗಡಿ,* *ಲಯನ್ಸ್ ಕ್ಲಬ್, ಪೂಜಾ ಫ್ರೆಂಡ್ಸ್ ಹಳೆಯಂಗಡಿ* ಇದರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 8-12-2019ರಂದು ಮುಲ್ಕಿ ಸೀಮೆ ಅರಸು ಕಂಬಳದ ಪ್ರಯುಕ್ತ ದಿನಾಂಕ 28-12-2019ರಂದು ನಡೆಯಲಿರುವ ಅರಸು ಕಂಬಳದ ಬಾಕಿಮಾರು ಗದ್ದೆಯಲ್ಲಿ ಬೆಳಿಗ್ಗೆ 9.00ಗಂಟೆಯಿಂದ ಮಧ್ಯಹ್ನ12.00ಗಂಟೆ ತನಕ ಸ್ವಚ್ಛತೆಯ ಕಾರ್ಯವನ್ನು ಮುಲ್ಕಿ ಸೀಮೆ ಅರಸರಾದ ಶ್ರೀ ದುಗ್ಗಣ್ಣ ಸಾವಂತರ ನೇತ್ರತ್ವದಲ್ಲಿ ಕೈಗೊಳ್ಳಲಾಯಿತು.  

Read More

ರೂ.35 ಸಾವಿರ ಮೊತ್ತದ ಪುಸ್ತಕ ವಿತರಣೆ

ಹಳೆಯಂಗಡಿ : ಯುವವಾಹಿನಿ ಹಳೆಯಂಗಡಿ ಘಟಕದ ವತಿಯಿಂದ ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ ದಿ.ಕಮಲ ಬೂಬ ಅಮೀನ್ ಸ್ಮರಣಾರ್ಥ ಅವರ ಮಕ್ಕಳ ಪ್ರಾಯೋಜಕತ್ವದಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ದಿನಾಂಕ 09.06.19 ರಂದು ಸಂಜೆ 4 ಗಂಟೆಗೆ ಸರಿಯಾಗಿ ಹಳೆಯಂಗಡಿಯ ಹರಿ ಓಂ ಸಭಾಗ್ರಹದಲ್ಲಿ ಜರಗಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬ್ಬೆಲ್ ರವರು ತನ್ನ ಬಾಲ್ಯದ ಜೀವನವನ್ನು ಮೆಲುಕು ಹಾಕುತ್ತಾ, ವಿದ್ಯಾರ್ಥಿಗಳಿಗೆ ಈ ಪುಸ್ತಕ ವಿತರಣಾ ಕಾರ್ಯಕ್ರಮದ […]

Read More

ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಪದಗ್ರಹಣ

ಹಳೆಯಂಗಡಿ : ಯುವವಾಹಿನಿ (ರಿ) ಹಳೆಯಂಗಡಿ ಘಟಕದ 2019-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ದಿನಾಂಕ 07-04-2019 ರಂದು ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ (ರಿ) ಹಳೆಯಂಗಡಿಯ ಸಭಾಗ್ರಹದಲ್ಲಿ ಜರಗಿತು. ಕಾರ್ಯಕ್ರಮವನ್ನು ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ನಾನಿಲ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಯುವವಾಹಿನಿ (ರಿ) ಹಳೆಯಂಗಡಿಯ ಘಟಕದ ಅಧ್ಯಕ್ಷರಾದ ಹೇಮನಾಥ ಕರ್ಕೇರಾರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಳ್ವಾಸ್ ಪದವಿ ಕಾಲೇಜಿನ ಉಪನ್ಯಾಸಕಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!