Yuvavahini

ಸಸಿಹಿತ್ಲು

ಕಾವ್ಯ ಕುಂಚ ಗಾಯನದಲ್ಲರಳಿದ ವಿಶುಕುಮಾರ್ ವೇದಿಕೆ

ಮಂಗಳೂರು : ವೇದಿಕೆಯ ಮೇಲೆ ಮಾತು ಆರಂಭಿಸುತ್ತಿದ್ದಂತೆ ಸ್ವಲ್ಪ ಸಮಯದ ಕೂಡಲೇ ವಿಶುಕುಮಾರ್ ಬದುಕಿನ ಚಿತ್ರಣ ರೂಪುಗೊಳ್ಳುವಂತಿತ್ತು. ತಮ್ಮ ಕಾವ್ಯದ ಪದಗಳ ಜೋಡಣೆಯೊಡನೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಸಾಹಿತಿಯ ಜೀವನದ ಕಥೆಗೆ ಸಾಕ್ಷಿಯಾಗಿದ್ದರು..ಜೊತೆಗೆ ಮೇಳೈಸುವ ರಾಗಲಾಪದೊಡನೆ ಅಲ್ಲೇ ಬದಿಯಲ್ಲಿ ಶರವೇಗದಿ ಸಾಗುತ್ತಿದ್ದ ಚಿತ್ರ ಪಟಲ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿತ್ತು. ಹೌದು,,ಇದು 2019 ಫೆಬ್ರವರಿ 17ರಂದು ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಸಸಿಹಿತ್ಲು ಘಟಕದ ಆತಿಥ್ಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆದ ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನದ ಕಾವ್ಯ […]

Read More

ರಂಗನಟ ವಸಂತ ವಿ.ಅಮೀನ್

ನಟ, ನಿರ್ದೇಶಕ, ಪತ್ರಕರ್ತ, ಸಾಹಿತಿ ದಿ.ವಿಶುಕುಮಾರ್ ಅವರ ನೆನಪಿನಲ್ಲಿ ಯುವವಾಹಿನಿ ಸಂಸ್ಥೆಯು, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಮೂಲಕ ಕೊಡಮಾಡುವ 2018 ನೇ ಸಾಲಿನ ವಿಶುಕುಮಾರ್ ಪ್ರಶಸ್ತಿಗೆ ಹಿರಿಯ ರಂಗನಟ, ನಿರ್ದೇಶಕ, ಸಾಹಿತಿ ವಸಂತ ವಿ.ಅಮೀನ್ ಅಯ್ಕೆಯಾಗಿದ್ದಾರೆ. ಯುವವಾಹಿನಿ ಸಂಸ್ಥೆಯು ಕಳೆದ 16 ವರುಷದಿಂದ ಈ ಪ್ರಸಸ್ತಿಯನ್ನು ನೀಡುತ್ತಾ ಬಂದಿದ್ದು ವಿಶುಕುಮಾರ್ ಅವರು ಸೇವೆ ಸಲ್ಲಿಸಿರುವ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯರನ್ನು ಆಯ್ಕೆ ಮಾಡಿ ಈ ಪ್ರಶಸ್ತಿ ನೀಡುತ್ತಿದೆ. 2018 ನೇ ಸಾಲಿಗೆ ರಂಗಭೂಮಿ ಕ್ಷೇತ್ರವನ್ನು ಆಯ್ಕೆ […]

Read More

ವಿಶುಕುಮಾರ್ ಸಾಹಿತ್ಯ ಸಮ್ಮೇಳನದಲ್ಲಿ..ಹಾಸ್ಯ-ಹರಟೆ….

“ನಾನು ಅದೆಷ್ಟೋ ವರ್ಷಗಳ ಕಾಲ ವಿಶ್ವವಿದ್ಯಾನಿಲಯದ ಉಪಕುಲಪತಿಯಾಗಿ ಕೆಲಸ ಮಾಡಿರುತ್ತೇನೆ.  ಹಲವಾರು ಕಾನ್ಫೆರನ್ಸಗಳಲ್ಲಿ ಪ್ರಬಂಧ ಮಂಡಿಸಿ, ಹಲವಾರು ಕೃತಿಗಳನ್ನು ಬರೆದು ಸಾಹಿತ್ಯಾತ್ಮಕವಾಗಿ ಒಂದಷ್ಟು ಕೆಲಸ ಮಾಡಿದ್ದೇನೆ. ಆದರೂ…. ದೇಶದಲ್ಲಾಗಲಿ ವಿದೇಶದಲ್ಲಾಗಲೀ ನನ್ನನ್ನು ಕಂಡಾಗ ಗುರುತಿಸುವುದು ಎಕ್ಕಸಕ್ಕ ಬರೆತಿನಾರ್ ಮೇರ್ (ಎಕ್ಕಸಕ್ಕ ಬರೆದವರು ಇವರು) ಎಂದು. “೪೦ ದಶಕಗಳ ಹಿಂದೆ ಬರೆದ ಆ ಹಾಡು ನನ್ನನ್ನು ಇವತ್ತಿಗೂ ಸಾಹಿತ್ಯಲೋಕದಲ್ಲಿ ಜೀವಂತವಾಗಿರಿಸಿದೆ. ಇಂತಹ ಜನಪ್ರಿಯತೆಯನ್ನು ಪಡೆಯಲು ಕಾರಣ ಅಂದು ನನಗೆ ಅವಕಾಶ ನೀಡಿದ ವಿಶುಕುಮಾರ್‌ರವರು. ಈ ಎಲ್ಲಾ ಕೀರ್ತಿಸಲ್ಲಬೇಕಾದುದು ವಿಶುಕುಮಾರ್ […]

Read More

ಮರೆಯಲಾಗದ ಚೇತನ ವಿಶುಕುಮಾರ್ : ಪ್ರೊ.ಬಿ.ಎ ವಿವೇಕ್ ರೈ

ಮಂಗಳೂರು : ನಮ್ಮಿಂದ ಮರೆಯಾದ ವ್ಯಕ್ತಿ ಎಲ್ಲಿಯವರೆಗೆ ಜನರ ಮನಸಲ್ಲಿ ಜೀವಂತವಾಗಿರುತ್ತಾರೋ ಅಲ್ಲಿಯವರೆಗೆ ಅವರು ಬದುಕಿರುವ ಚೇತನ, ಅಂತಹ ಮಹಾನ್ ವ್ಯಕ್ತಿ, ತನ್ನ ಸಾವಿನ 33 ವರುಷದ ಬಳಿಕವೂ ಜೀವಂತವಾಗಿರುವವರು. ವಿಶುಕುಮಾರ್ ಅವರ ಸಾಧನೆ ಅವರನ್ನು ಜೀವಂತವಾಗಿರಿಸಿದೆ ಎಂದು ಹಂಪಿ ಕನ್ನಡ ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಬಿ.ಎ ವಿವೇಕ್ ರೈ ತಿಳಿಸಿದರು. ಅವರು ದಿನಾಂಕ 17.02.2019 ರಂದು ಮಂಗಳೂರು ಪುರಭವನದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಆತಿಥ್ಯದಲ್ಲಿ ವಿಶುಕುಮಾರ್ […]

Read More

ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ

ಮಂಗಳೂರು : ಯುವವಾಹಿನಿ ಸಂಸ್ಥೆಯು ಉದಯೋನ್ಮುಖ ಯುವ ಸಾಹಿತಿಗಳಿಗಾಗಿ ಕೊಡಮಾಡುವ 2018 ನೇ ಸಾಲಿನ ಪ್ರಭಾಕರ ನೀರುಮಾರ್ಗ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿಯನ್ನು ತುಳುನಾಡ ಸ್ವರ ಮಾಣಿಕ್ಯ, ಕಂಚಿನ ಕಂಠದ ನಿರೂಪಕ, ತುಳು ಭಾಷಾ ಪರಿಪಕ್ವ ಬರಹಗಾರ, ಯುವ ಸಾಹಿತಿ ದಿನೇಶ್ ಸುವರ್ಣ ರಾಯಿ ಇವರಿಗೆ ಪ್ರದಾನ ಮಾಡಲಾಯಿತು. ಇತ್ತೀಚೆಗೆ ಮಂಗಳೂರು ಪುರಭವನದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ಸಸಿಹಿತ್ಲು ಘಟಕದ ಆತಿಥ್ಯದಲ್ಲಿ ಜರುಗಿದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]

Read More

ಯುವವಾಹಿನಿ(ರಿ) ಸಸಿಹಿತ್ಲು ಘಟಕದ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯ

ಸಸಿಹಿತ್ಲು : ಯುವವಾಹಿನಿ(ರಿ) ಸಸಿಹಿತ್ಲು ಘಟಕದ ಆಶ್ರಯದಲ್ಲಿ ದಿನಾಂಕ 30.09.2018ರಂದು ಬೆಳಿಗ್ಗೆ 9ರಿಂದ 12ಗಂಟೆಯವರೆಗೆ  ಸ್ವಚ್ಛತಾ ಕಾರ್ಯವು ಬ್ರಹ್ಮಶ್ರೀ ನಾರಯಾಣಗುರು ಸೇವಾ ಸಂಘ ಅಗ್ಗಿದಕಳಿಯ ಸಸಿಹಿತ್ಲು ವಠಾರದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಶೈಲೇಶ್ ಕುಮಾರ್ ಸಸಿಹಿತ್ಲು, ಕಾರ್ಯದರ್ಶಿ ವೀಣಾ ಅಮೀನ್ ಹಾಗೂ ಘಟಕದ ಸದಸ್ಯರು ಭಾಗವಹಿಸಿದ್ದರು.

Read More

ಕ್ರಿಯಾಶೀಲ ಮನಸುಗಳಿಂದ ಕ್ರಿಯಾಶೀಲ ಕಲ್ಪನೆಗಳ ಸ್ರಷ್ಟಿ : ಜಯಂತ್ ನಡುಬೈಲ್

ಸಸಿಹಿತ್ಲು : ಕ್ರೀಯಾಶೀಲ ಮನಸುಗಳು ಇದ್ದಾಗ ಕ್ರೀಯಾತ್ಮಕ ಕಲ್ಪನೆಗಳು ಹುಟ್ಟಿಕೊಳ್ಳುತ್ತದೆ, ಮಾಡುವ ಕೆಲಸದಲ್ಲಿ ಬದ್ದತೆ ಇದ್ದಾಗ ಲಭಿಸುವ ಫಲಿತಾಂಶವೂ ಫಲಪ್ರದವಾಗಿರುತ್ತದೆ ಇದಕ್ಕೆ ಯುವವಾಹಿನಿ ಸಸಿಹಿತ್ಲು ಘಟಕ ಹಮ್ಮಿಕೊಂಡಿರುವ ಶ್ರೀಕೃಷ್ಣ ವೇಷ ಸ್ಪರ್ಧೆಯೇ ಸಾಕ್ಷಿ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲ್ ತಿಳಿಸಿದರು. ಅವರು, ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಆಶ್ರಯದಲ್ಲಿ ದಿನಾಂಕ 01.09.2018 ರಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಅಗ್ಗಿದಕಳಿಯ ಸಸಿಹಿತ್ಲು ಮತ್ತು ಲಯನ್ಸ್-ಲಯನೆಸ್ ಕ್ಲಬ್ […]

Read More

ಫ್ರೌಡ ಶಾಲೆಗೆ ಕಂಪ್ಯೂಟರ್ ಕೊಡುಗೆ

ಸಸಿಹಿತ್ಲು : ದಿನಾಂಕ 17.08.2018 ರಂದು ಸುರತ್ಕಲ್ ಎನ್.ಐ,ಟಿ,ಕೆ, ಕನ್ನಡ ಮಾಧ್ಯಮ ಫ್ರೌಡ ಶಾಲೆಗೆ ಯುವವಾಹಿನಿ (ರಿ) ಸಸಿಹಿತ್ಲು ಘಟಕದ ವತಿಯಿಂದ ಕಂಪ್ಯೂಟರನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು , ನಿಕಟಪೂರ್ವ ಅಧ್ಯಕ್ಷರಾದ ಯಶವಂತ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!