Yuvavahini

ಉಪ್ಪಿನಂಗಡಿ

ನೂತನ ಸದಸ್ಯರುಗಳಿಗೆ ಮಾಹಿತಿ ಕಾರ್ಯಕ್ರಮ-ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ಘಟಕದಲ್ಲಿ ಹೊಸದಾಗಿ ಸದಸ್ಯರಾಗಿ ಸೇರ್ಪಡೆ ಗೊಂಡ ಸದಸ್ಯರಿಗೆ ಮಾಹಿತಿ ಕಾರ್ಯಕ್ರಮವು ದಿನಾಂಕ 20.07.2025ರ ಆದಿತ್ಯವಾರ ಉಪ್ಪಿನಂಗಡಿ ಸಹಸ್ರ ಕೋಚಿಂಗ್ ಸೆಂಟರ್ ನಲ್ಲಿ ನಡೆಯಿತು. ತಣ್ಣೀರುಪಂತ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ಜಯಾನಂದ ಕಲ್ಲಾಪು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಪಡ್ಪು ನೂತನ ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು. ಕೇಂದ್ರ ಸಮಿತಿಯ ಮಾಜಿ ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಶ್ರೀ ಅಜಿತ್ ಕುಮಾರ್ ಪಾಲೇರಿ ನೂತನ […]

Read More

“ಸ್ವಯಂ ಸೇವಾ ಕಾರ್ಯ” -ಯುವವಾಹಿನಿ(ರಿ.)ಉಪ್ಪಿನಂಗಡಿ ಘಟಕ

ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ದಿನಾಂಕ 07.09.2025ರಂದು ನಡೆದ ಗುರುಗಳ 171ನೇ ಜಯಂತಿ ಕಾರ್ಯಕ್ರಮದಲ್ಲಿ ಘಟಕದ ವತಿಯಿಂದ ಸ್ವಯಂ ಸೇವೆಯಲ್ಲಿ ಭಾಗವಹಿಸಲಾಯಿತು. ಘಟಕದ ಹೆಚ್ಚಿನ ಸದಸ್ಯರು ಬೆಳಿಗ್ಗೆಯಿಂದಲೇ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು. ಅಧ್ಯಕ್ಷರಾದ ನಾಣ್ಯಪ್ಪ ಕೋಟ್ಯಾನ್ ಅವರೊಂದಿಗೆ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಸ್ವಯಂ ಸೇವೆಯಲ್ಲಿ  ಭಾಗವಹಿಸಿದ್ದರು.

Read More

ಮಾಹಿತಿ ಕಾರ್ಯಗಾರ -ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ಘಟಕ ಮತ್ತು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವತಿಯಿಂದ ಪದವಿ ವ್ಯಾಸಂಗ ಮಾಡಿ ಬ್ಯಾಂಕಿಂಗ್ ಉದ್ಯೋಗದ ಆಸಕ್ತಿ ಇರುವ ಆಕಾಂಕ್ಷಿಗಳಿಗಾಗಿ ದಿನಾಂಕ 13.09.2025ರಂದು ಮಾಹಿತಿ ಕಾರ್ಯಕ್ರಮ ನಡೆಸಲಾಯಿತು. ಉಪ್ಪಿನಂಗಡಿ ಸಹಸ್ರ ಕೋಚಿಂಗ್ ಸೆಂಟರ್ ನಲ್ಲಿ ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ಮಂಗಳೂರಿನ ಸರ್ವಜ್ಞ IAS ಅಕಾಡೆಮಿಯ ಸುರೇಶ್ ಎಂ ಎಸ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ್ಪಿನಂಗಡಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್ ಪಾಲೇರಿ ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ […]

Read More

ಯುವವಾಹಿನಿ(ರಿ.) ಉಪ್ಪಿನಂಗಡಿ ಘಟಕ-ಗುರುಸ್ಮರಣೆ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ “ಗುರು ಸ್ಮರಣೆ” ಸಂಕೀರ್ತನಾ ಕಾರ್ಯಕ್ರಮ, ಮಾಸಿಕ ಸಭೆ ದಿನಾಂಕ 31.01.2025ರ ಶುಕ್ರವಾರ ಶತಭಿಷಾ ನಕ್ಷತ್ರ ದಿನ ಸಂಜೆ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಘಟಕದ ವತಿಯಿಂದ “ಗುರು ಸ್ಮರಣೆ” ಸಂಕೀರ್ತನಾ ಕಾರ್ಯಕ್ರಮ ನಡೆಯಿತು.ಪ್ರಸಾದ ವಿತರಣೆ ಬಳಿಕ ಸಂಜೆ ಘಟಕದ ಮಾಸಿಕ ಸಭೆಯು ಅಧ್ಯಕ್ಷರಾದ ನಾಣ್ಯಪ್ಪ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ಪುತ್ತೂರು ಬ್ರಹ್ಮಶ್ರೀ ನಾಾಯಣಗುರು ಸಭಾಭವನದಲ್ಲಿ ನಡೆಯಿತು.ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಯವರಾದ ಡಾ. ರಾಜಾರಾಮ್ ಕೆ ಬಿ […]

Read More

2025ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ವಿದ್ಯಾರ್ಥಿ ವೇತನ ಕಾರ್ಯಕ್ರಮ

ಉಪ್ಪಿನಂಗಡಿ : ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 21.12.2024ನೇ ಶನಿವಾರ, ಅಪರಾಹ್ನ ಗಂಟೆ 6.30ಕ್ಕೆ ಉಪ್ಪಿನಂಗಡಿ ಹೆಚ್ ಎಂ ಆಡಿಟೋರಿಯಂ ನಲ್ಲಿ ಘಟಕದ ಅಧ್ಯಕ್ಷರಾದ ಶ್ರೀ ಸೋಮಸುಂದರ್ ಕೊಡಿಪ್ಪಾನ ರವರ ಅಧ್ಯಕ್ಷತೆಯಲ್ಲಿ ಜರುಗಿತು. ಘಟಕದ ಮಾಜಿ ಅಧ್ಯಕ್ಷರಾದ ಡಾ.ಸದಾನಂದ ಕುಂದರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕೆಡೆಂಜಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಸಾಮಾಜಿಕ ಕಳಕಳಿಯ ಸಂಘಟನೆ ಯೊಂದಿಗೆ […]

Read More

ಯುವತುಡರ್ – 2024 ದೀಪಾವಳಿ ಸಂಭ್ರಮ

ಉಪ್ಪಿನಂಗಡಿ : ದಿನಾಂಕ 13.11.2024 ರಂದು ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ವತಿಯಿಂದ ದೀಪಾವಳಿ ಹಬ್ಬದ ಆಚರಣೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಸೋಮಸುಂದರ್ ಕೊಡಿಪ್ಪಾನ ಇವರ ಅಧ್ಯಕ್ಷತೆಯಲ್ಲಿ, ಘಟಕದ ಪದಾಧಿಕಾರಿ ಶ್ರೀ ಅಂಕಿತ್ ರವರ ಸೂರಜ್ ಮನೆಯಲ್ಲಿ ನಡೆಸಲಾಯಿತು. ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರದ ಮುಂದೆ ದೀಪ ಬೆಳಗಿಸಿ, ಭಜನಾ ಸೇವೆಯೊಂದಿಗೆ ಕಾರ್ಯಕ್ರಮ ಪ್ರಾರಂಭಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು, ಉಪ್ಪಿನಂಗಡಿಯ ಖ್ಯಾತ ದಂತ ವೈದ್ಯರಾದ ಡಾ. ರಾಜಾರಾಮ್ ಕೆ.ಬಿ ಯವರು […]

Read More

ಅಶಕ್ತ ಮಕ್ಕಳ ಮನೆಗಳಿಗೆ ನೆರವು

ಉಪ್ಪಿನಂಗಡಿ : ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳಿಂದ ಸ್ಥಾಪಿತ ಕುದ್ರೋಳಿ ಗೋಕರ್ಣನಾಥ- ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವದ ಸುಸಂದರ್ಭದಲ್ಲಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನಾಚರಣೆ ಪ್ರಯುಕ್ತ ಉಪ್ಪಿನಂಗಡಿ ಯುವವಾಹಿನಿ ಘಟಕದ ವತಿಯಿಂದ ಎಂಡೋ ಪೀಡಿತ, ಅಶಕ್ತ ಮಕ್ಕಳ ಮನೆಗಳಿಗೆ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು. ಗ್ರೀಷ್ಮ ಬೆದ್ರೋಡಿ, ಪ್ರಜ್ಞಾ ವಳಾಲು, ರೂಪೇಶ್ ಮಣ್ಣಂಗಳ- ವಳಾಲು, ಸುರೇಶ್ ಕಾಂಚನ ಕ್ರಾಸ್ ಬಳಿ ಮತ್ತು ಪ್ರತೀಕ್ ಶಿವಾರು […]

Read More

ಶಿಕ್ಷಕರ ದಿನಾಚರಣೆ

ಉಪ್ಪಿನಂಗಡಿ : ಯುವವಾಹಿನಿ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಿವೃತ ಶಿಕ್ಷಕರಿಗೆ ಗೌರವಾರ್ಪಣೆ ಸಲ್ಲಿಸುವ ಗುರು ವಂದನಾ ಕಾರ್ಯಕ್ರಮವನ್ನು ಘಟಕದ ಅಧ್ಯಕ್ಷರಾದ ಸೋಮಸುಂದರ್ ರವರ ಅಧ್ಯಕ್ಷತೆಯಲ್ಲಿ, ದಿನಾಂಕ 05-09-2024ರಂದು ಅಪರಾಹ್ನ ನಡೆಸಲಾಯಿತು. ಬೆಳ್ತಂಗಡಿ ತಾಲೂಕು ಪುತ್ತಿಲ ಗ್ರಾಮದ ಪೀಲ್ಯ ಮನೆ ಅಣ್ಣು ಪೂಜಾರಿಯವರನ್ನು ಅವರ ಪೀಲ್ಯ ಮನೆಯಲ್ಲಿ ಶಾಲು ಹೊದಿಸಿ, ಫಲಪುಷ್ಪ, ಸ್ಮರಣಿಕೆ ಹಾಗೂ ಸನ್ಮಾನ ಪತ್ರ ನೀಡಿ ಗೌರವಿಸಲಾಯಿತು. ಅವಿಭಜಿತ ಪುತ್ತೂರು ತಾಲೂಕಿನ ಆಲಂತಾಯ ಗ್ರಾಮದ ಬಟ್ಲಡ್ಕ ಮನೆಯಲ್ಲಿ ನಿವೃತ್ತ ಶಿಕ್ಷಕ ದಂಪತಿಗಳಾದ ಸಂಜೀವ […]

Read More

ತರಬೇತಿ ಕಾರ್ಯಗಾರ

ಉಪ್ಪಿನಂಗಡಿ: ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ವತಿಯಿಂದ, ಘಟಕದ ಸದಸ್ಯರುಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ದಿನಾಂಕ 18-08-2024 ರಂದು ರೋಟರಿ ಸಭಾಭವನ ಉಪ್ಪಿನಂಗಡಿಯಲ್ಲಿ ನಡೆಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀ ಸೋಮಸುಂದರ್ ಕೊಡಿಪ್ಪಾನ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಉಪ್ಪಿನಂಗಡಿ ಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ) ಅಧ್ಯಕ್ಷರು ಹಾಗೂ ಘಟಕದ ಗೌರವ ಸಲಹೆಗಾರರೂ ಆಗಿರುವ ಶ್ರೀ ವರದಾರಾಜ್ ಎಂ. ದೀಪ ಬೆಳಗಿಸಿ ಉದ್ಘಾಟಿಸಿದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು, ಖ್ಯಾತ ದಂತ […]

Read More

ಸದಸ್ಯರ ಪ್ರವಾಸ

ಉಪ್ಪಿನಂಗಡಿ: ಯುವವಾಹಿನಿ(ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಬ್ರಹ್ಮಾವರದ ಕಿಂಗ್ ಆಫ್ ಕಿಂಗ್ಸ್ ರೆಸಾರ್ಟ್ ಗೆ ಒಂದು ದಿನದ ಪ್ರವಾಸ ಕಾರ್ಯಕ್ರಮವನ್ನು 26-05-2024ರ ಆದಿತ್ಯವಾರ ಹಮ್ಮಿಕೊಳ್ಳಲಾಗಿತ್ತು. ಪ್ರವಾಸ ಸಂಚಾಲಕರು ಗುಣಕರ ಅಗ್ನಾಡಿಯವರ ಮಾರ್ಗದರ್ಶನದಲ್ಲಿ ಘಟಕದ ಅಧ್ಯಕ್ಷರಾದ ಸೋಮಸುಂದರ್, ಪ್ರವಾಸ ನಿರ್ದೇಶಕರಾದ ನಾಣ್ಯಪ್ಪ ಪೂಜಾರಿ ಮತ್ತು ಕಾರ್ಯದರ್ಶಿ ಅನಿತಾ ಸತೀಶ್ ಇವರುಗಳು ಮುಂದಾಳತ್ವ ವಹಿಸಿಕೊಂಡಿದ್ದರು. ಸದಸ್ಯರುಗಳು ತಮ್ಮ ಕುಟುಂಬದ ಜೊತೆಗೂಡಿ ಒಟ್ಟು 66 ಮಂದಿ ಪ್ರವಾಸಿಗರು ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಿಂದ ಶುಭ ಲಕ್ಷ್ಮೀ ಹಾಲಿಡೇಸ್ ಲಕ್ಸುರಿ ಬಸ್ಸಿನಲ್ಲಿ ಹೊರಟು, ರೆಸಾರ್ಟ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!