Yuvavahini

ಮೂಲ್ಕಿ

ಮಕ್ಕಳಿಗೆ ಸ್ವಾವಲಂಬನೆಯ ಬದುಕು, ವಾಸ್ತವದ ಅರಿವು ತಿಳಿಸುವುದು ಸೂಕ್ತ : ಜಯಂತ ನಡುಬೈಲು

ಮುಲ್ಕಿ: ಮಕ್ಕಳಿಗೆ ವಾಸ್ತವದ ಅರಿವನ್ನು ಮಾಡಿ ಸುತ್ತಾ, ಸ್ವಾವಲಂಬನೆಯ ಬದುಕನ್ನು ಕಲಿಸುವುದು ಒಳಿತು, ಅಂದಾಗ ಮಾತ್ರ ಒಂದು ಮಗು ಮುಂದಿನ ಸಮಾಜದ ಒಳ್ಳೆಯ ಪ್ರಜೆಯಾಗಲು ಸಾಧ್ಯ.ಬಾಲ್ಯವೆಂದರೆ ಹಾಗೆ ಏನೂ ತಿಳಿಯದ ಮುಗ್ಧ ಸ್ಥಿತಿ. ನೆನಪುಗಳು ಅತಿ ಸುಂದರ, ಬೆಳೆದಂತೆ ನಮ್ಮ ಬುದ್ಧಿ ವಿಕಸನ ಹೊಂದಿ ನೆನಪುಗಳ ವ್ಯೂಹದಲ್ಲಿ ಅದು ಅವಿಸ್ಮರಣೀಯ ಇತಿಹಾಸವಾಗಿ ಉಳಿದುಬಿಡುತ್ತದೆ. ಹೋದ ಹೋದಂತೆ ಅದು ಮಸುಕಾದರೂ ನಮ್ಮ ಅರಿವಿನ ಸಂಕೋಲೆಗಳಿಂದ ದೂರ ನಡೆಯುವುದಿಲ್ಲ. ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂಬ ಮಾತಿದೆ.  […]

Read More

ನಾರಾಯಣಗುರುಗಳ ತತ್ವ ಜೀವನದಲ್ಲಿ ಅಳವಡಿಸಿಕೊಳ್ಳಿರಿ : ಮುಮ್ತಾಜ್

ಮೂಲ್ಕಿ: ನಾರಾಯಣಗುರುಗಳ ತತ್ವ ಆದರ್ಶದಂತೆ ಇಂದು ಬಿಲ್ಲವ ಸಮಾಜವು ಸಂಘಟನತ್ಮಕವಾಗಿ ಬೆಳೆಯುವುದರೊಂದಿಗೆ ಸಮಾಜದಲ್ಲಿ ಕರಾವಳಿಯ ಸಂಪ್ರದಾಯವನ್ನು ಸಂಸ್ಥೆಯ ಮೂಲಕ ಉಳಿಸುವ ಪ್ರಯತ್ನ ಶ್ಲಾಘನೀಯವಾಗಿದೆ. ಯುವ ಸಮಾಜವನ್ನು ಕಟ್ಟಿ ಬೆಳೆಸುವ ಜವಬ್ದಾರಿಯನ್ನು ನಾರಾಯಣಗುರುಗಳ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿರಿ ಎಂದು ಉಡುಪಿಯ ಕಿರಿಯ ಕಾನೂನು ಅಧಿಕಾರಿ ಮುಮ್ತಾಜ್ ಹೇಳಿದರು. ಅವರು ಮೂಲ್ಕಿ ಯುವವಾಹಿನಿ ಘಟಕದ ವತಿಯಿಂದ ದಿನಾಂಕ 06.11.2018 ರಂದು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆದ 16ನೇ ವರ್ಷದ ತುಳುವೆರೆ ತುಡಾರ ಪರ್ಬವನ್ನು ಉದ್ಘಾಟಿಸಿ ಮಾತನಾಡಿದರು. ಮೂಲ್ಕಿ ಕೊಸೆಸಾಂ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]

Read More

ಬಜಪೆ ಪ್ರಥಮ, ಉಡುಪಿ ದ್ವಿತೀಯ, ಮುಲ್ಕಿ ತೃತೀಯ

ಮಂಗಳೂರು : ದಿನಾಂಕ 23.09.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಇದರ ಸಹಯೋಗದೊಂದಿಗೆ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ಯುವವಾಹಿನಿ ಅಂತರ್ ಘಟಕ ಕುಣಿತ ಭಜನಾ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಯುವವಾಹಿನಿ ಬಜಪೆ ಘಟಕ ಪ್ರಥಮ,(ರೂ. 10,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ ಉಡುಪಿ ಘಟಕ ದ್ವಿತೀಯ (ರೂ 7,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ […]

Read More

ಗುರುವಿನ ಸ್ಮರಣೆ ಸದಾಕಾಲ ಇರಲಿ. : ಜಯಂತ್ ನಡುಬೈಲ್

ಮುಲ್ಕಿ : ಶಿಕ್ಷಕನಿಗೂ ವಿದ್ಯಾರ್ಥಿಗೂ ಅವಿನಾಭಾವ ಸಂಬಂಧವಿದೆ. ಮಗು ಮೊದಲು ಶಾಲೆಗೆ ಹೋದಾಗ ಶಿಕ್ಷಕ ಹೇಳಿದ್ದನೆಲ್ಲ ನಂಬುತ್ತದೆ. ಮಗುವಿನ ಜಗತ್ತಿನಲ್ಲಿ ಶಿಕ್ಷಕನೇ “ರೋಲ್ ಮಾಡೆಲ್”, ಅವರೇ “ಸೂಪರ್ ಮ್ಯಾನ್”. ತನ್ನ ಗುರುಗಳಿಗೆ ತಿಳಿಯದ ವಿಷಯವೇ ಇಲ್ಲ ಎಂದು ಭಾವಿಸಿಕೊಳ್ಳುತ್ತದೆ. ಇಂಥ ಕಾಲದಲ್ಲಂತೂ ಶಿಕ್ಷಕನ ಜವಾಬ್ದಾರಿ ನಿಜವಾಗಿಯೂ ಮಹತ್ವದ್ದಾಗಿರುತ್ತದೆ. ಎಲ್ಲ ವಿಷಯಗಳಲ್ಲೂ ಸಮಾನತೆ ಕಾಯ್ದುಕೊಂಡು ಆರೋಗ್ಯಪೂರ್ಣ ಸಮಾಜಕ್ಕಾಗಿ ಆರೋಗ್ಯ ಪೂರ್ಣ ಪ್ರಜೆಯನ್ನು ರೂಪಿಸುವ ಜವಾಬ್ದಾರಿ ಗುರುವಿನದು. ಈ ಹಂತದಲ್ಲಿ ನೀಡಿದ ಶಿಕ್ಷಣವೇ ಮಗುವನ್ನು ಜವಾಬ್ದಾರಿಯುತ ಪ್ರಜೆಯಾಗಿ ಬೆಳೆಸುತ್ತದೆ. ನಮ್ಮ […]

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಸಂಸ್ಕೃತಿ ಪರಂಪರೆ ನಮ್ಮ ಧ್ಯೇಯವಾಗಲಿ : ಪದ್ಮನಾಭ ಕೋಟ್ಯಾನ್

ಮೂಲ್ಕಿ: ತುಳುನಾಡಿನ ಸಂಸ್ಕೃತಿ ಪರಂಪರೆ ನಮ್ಮ ಧ್ಯೇಯವಾಗಬೇಕು, ಮುಂದಿನ ಪೀಳಿಗೆಗೆ ಹಿಂದಿನ ಸಾಂಸ್ಕೃತಿಕತೆಯನ್ನು ತಿಳಿ ಹೇಳುವ ಕೆಲಸ ಇಂದು ಸಂಘ ಸಂಸ್ಥೆಗಳು ಮಾಡುತ್ತಿರುವುದು ಶ್ಲಾಘನೀಯ, ಮೂಲ್ಕಿ ಯುವವಾಹಿನಿಯಂತಹ ಸಂಸ್ಥೆಗಳಿಂದ ಯುವ ಪೀಳಿಗೆಯನ್ನು ಸಂಘಟನಾ ಶಕ್ತಿಯನ್ನು ತೋರಿಸಿರುವುದು ಸಮಾಜ ಗುರುತಿಸಿದೆ ಎಂದು ಕರ್ನಾಟಕ ಧಾರ್ಮಿಕ ಪರಿಷತ್‌ನ ಸದಸ್ಯ ಪದ್ಮನಾಭ ಕೋಟ್ಯಾನ್ ಹೇಳಿದರು. ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಮೂಲ್ಕಿಯ ಯುವವಾಹಿನಿ ಘಟಕದ ಆಶ್ರಯದಲ್ಲಿ ಭಾನುವಾರ ನಡೆದ ಹದಿನಾರನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ವೇದಿಕೆಯಲ್ಲಿ ತರಕಾರಿ, […]

Read More

ಯುವ ಸಮುದಾಯಕ್ಕೆ ಯುವವಾಹಿನಿಯೇ ದಾರೀ ದೀಪ : ಸುಮಲತಾ ಸುವರ್ಣ

ಮೂಲ್ಕಿ: ಇಂದು ಯುವ ಸಮುದಾಯವು ಹಾದಿ ತಪ್ಪುತ್ತಿದ್ದಾರೆ ಎಂದು ಹೇಳುವ ಬದಲು ಅವರನ್ನು ಯುವವಾಹಿನಿಯಂತಹ ಸಮಾಜ ಮುಖಿ ಚಿಂತನೆಯ ಸಂಘಟನೆಯಲ್ಲಿ ತೊಡಗಿಸಿಕೊಂಡು ಉತ್ತಮ ಸಮಾಜವನ್ನು ಸೃಷ್ಟಿಸುವಲ್ಲಿ ಪ್ರಯತ್ನ ನಡೆಸಬೇಕು. ಹೆಣ್ಣು ಮಕ್ಕಳು ವಿದ್ಯೆಯ ಮೂಲಕ ಸದೃಢರಾಗುತ್ತಿರುವ ಇಂದಿನ ದಿನದಲ್ಲಿ ಯುವಕರು ಯಾಕಾಗಿ ಹಿನ್ನೆಡೆಯಾಗಿದ್ದಾರೆ ಎಂದು ಹೆತ್ತವರು ಚಿಂತಿಸಬೇಕಾಗಿದೆ ಎಂದು ಮಂಗಳೂರು ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ ಹೇಳಿದರು. ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಶನಿವಾರ ನಡೆದ ಮೂಲ್ಕಿ ಯುವವಾಹಿನಿ ಘಟಕದ […]

Read More

ಬಡ ಕುಟುಂಬಕ್ಕೆ ಯುವವಾಹಿನಿ ಆಸರೆ

ಮುಲ್ಕಿ : ಇತ್ತೀಚೆಗೆ ಸುರಿದ ಗಾಳಿ ಮಳೆಯಿಂದಾಗಿ ಮುಲ್ಕಿ ಸಮೀಪದ ಕೊಳಚಿಕಂಬ್ಳದ ಕೇಶವ ಪೂಜಾರಿ ಹಾಗೂ ಮೀನಾಕ್ಷಿ ದಂಪತಿಗಳ ಬಡ ಕುಟುಂಬದ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಈ ಮನೆಯಲ್ಲಿ ವಾಸಿಸಲು‌ ಸಾಧ್ಯವಾಗದೆ ಕೇಶವ ಪೂಜಾರಿ ಯವರ ಬಡ ಕುಟುಂಬಕ್ಕೆ ದಿಕ್ಕೇ ತೋಚದಂತಾಯಿತು. ಈ‌ ಸಂದರ್ಭದಲ್ಲಿ ‌ಯುವವಾಹಿನಿ‌ ಮುಲ್ಕಿ ಘಟಕವು ಸುಮಾರು ‌ರೂಪಾಯಿ‌ 60,000/- ವೆಚ್ಚದಲ್ಲಿ ಈ ಮನೆಯನ್ನು ರಿಪೇರಿಗೊಳಿಸಿ‌ ವಾಸಿಸಲು ಯೋಗ್ಯವಾಗುವಂತೆ ಮಾಡಿ ದಿನಾಂಕ‌ ‌15.06.2018 ರಂದು‌ ಮನೆಯನ್ನು ಹಸ್ತಾಂತರಿಸಲಾಯಿತು ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ […]

Read More

ಅಧ್ಯಕ್ಷರಾಗಿ ಕುಶಲಾ ಎಸ್.ಕುಕ್ಯಾನ್ ಆಯ್ಕೆ

ಯುವವಾಹಿನಿ (ರಿ) ಮುಲ್ಕಿ ಘಟಕದ 2018-19 ನೇ ಸಾಲಿನ‌ ಅಧ್ಯಕ್ಷರಾಗಿ ಕುಶಲಾ ಎಸ್.ಕುಕ್ಯಾನ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು – ಕುಶಲಾ ಎಸ್.ಕುಕ್ಯಾನ್ ಉಪಾಧ್ಯಕ್ಷರು   :  ಸತೀಶ್ ಕಿಲ್ಪಾಡಿ , ರಾಜೀವಿ ವಿಶ್ವನಾಥ್ ಕಾರ್ಯದರ್ಶಿ  :  ಚರೀಷ್ಮಾ ಜತೆ ಕಾರ್ಯದರ್ಶಿ  :  ಭರತೇಶ್ ಮಟ್ಟು ಕೋಶಾಧಿಕಾರಿ  :  ದಿವಾಕರ್ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ  :  ಸುಲೋಚನಾ ಜಿ.ಅಂಚನ್ ನಿರ್ದೇಶಕರು : ಕ್ರೀಡೆ ಮತ್ತು ಆರೋಗ್ಯ  :  ನಿಖಿಲ್ ಕುಮಾರ್ ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನ  :  ಮನೋಜ್ ಸುವರ್ಣ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!