09-12-2018, 2:53 PM
ಬಜಪೆ : ಸಮಾಜ ಕಟ್ಟುವ ದೇಶ ಕಟ್ಟುವ ಕಾರ್ಯ ಇಂದಿನ ಯುವಕರಿಂದ ಇನ್ನೂ ಹೆಚ್ಚು ಹೆಚ್ಚು ಆಗಬೇಕಾಗಿದೆ. ಅಂತಹ ಯುವಕರು ಇಂತಹ ಕಾರ್ಯಕ್ರಮಗಳನ್ನು ನಡೆಸಿ ಸಂಘಟನಾತ್ಮಕಗೊಳಿಸಿ ಸಮಾಜವನ್ನು ಆರೋಗ್ಯಪೂರ್ಣಗೊಳಿಸಬೇಕು. ರಸಗೀತಾ ಕಾರ್ಯಕ್ರಮ ಇಂತಹುದಕ್ಕೆ ವೇದಿಕೆಯಾಗಲಿ, ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಬಜಪೆ-ಕರಂಬಾರು ಇದರ ಉಪಾಧ್ಯಕ್ಷರಾದ ಶ್ರೀ ಚಂದಪ್ಪ ಕುಂದರ್ ಇವರು ದಿನಾಂಕ 09.12.2018ರಂದು ಶ್ರೀ ನಾರಾಯಣಗುರು ಸಮುದಾಯ ಭವನ ಬಜಪೆ ಇಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ.) […]
Read More
19-10-2018, 3:12 PM
ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]
Read More
03-10-2018, 3:26 PM
ಬಜಪೆ : ದಿನಾಂಕ 03.10.2018 ರಿಂಡ್ 05.10.2018 ರವರೆಗೆ ಯುವವಾಹಿನಿ (ರಿ ) ಬಜಪೆ ಘಟಕದ ವತಿಯಿಂದ ಶಿವಗಿರಿ ಯಾತ್ರೆಯನ್ನು ಹಮ್ಮಿಕೊಳ್ಳಲಾಯಿತು. ಒಟ್ಟು 48 ಸದಸ್ಯರು ಈ ಒಂದು ಯಾತ್ರೆಯಲ್ಲಿ ಭಾಗವಹಿಸಿದ್ದರು. ಶಿವಗಿರಿ ಮಠದ ಪೂಜ್ಯ ಸತ್ಯಾನಂದ ತೀರ್ಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಾರಾಯಣ ಗುರುಗಳ ಮಹಾ ಸಮಾಧಿ, ಕೆಲವು ಐತಿಹಾಸಿಕ ಸ್ಥಳಗಳು, ಗುರುಗಳ ಪೂರ್ವಾಶ್ರಮದ ಮನೆ, ಸುಬ್ರಮಣ್ಯ ದೇವಸ್ಥಾನ, ಅರವಿಪುರಂ ದೇವಸ್ತಾನ, ಕನ್ಯಾಕುಮಾರಿಯ ದೇವಿ ದರ್ಶನ, ಮಾರುತಮಲೈ ಬೆಟ್ಟ, ಕನ್ಯಾಕುಮಾರಿ, ಅನಂತ ಪದ್ಮನಾಭ ದರ್ಶನದೊಂದಿಗೆ ಯಾತ್ರೆ ಸಮಾಪನಗೊಂಡಿತು […]
Read More
23-09-2018, 5:45 PM
ಮಂಗಳೂರು : ದಿನಾಂಕ 23.09.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಇದರ ಸಹಯೋಗದೊಂದಿಗೆ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ಯುವವಾಹಿನಿ ಅಂತರ್ ಘಟಕ ಕುಣಿತ ಭಜನಾ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಯುವವಾಹಿನಿ ಬಜಪೆ ಘಟಕ ಪ್ರಥಮ,(ರೂ. 10,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ ಉಡುಪಿ ಘಟಕ ದ್ವಿತೀಯ (ರೂ 7,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ […]
Read More
23-09-2018, 2:01 PM
ಬಜ್ಪೆ : ಕೇಂದ್ರ ಸರಕಾರದ ಸಲಹೆಯ ಪ್ರಕಾರ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ಕೈಗೊಂಡಿರುವ “ಸ್ವಚ್ಚತಾ ಸೇವಾ” ಕಾರ್ಯಕ್ರಮದನ್ವಯ MRPL, ರೋಟರಿ ಕ್ಲಬ್ ಬಜ್ಪೆ ಮತ್ತು ಯುವವಾಹಿನಿ(ರಿ.) ಬಜ್ಪೆ ಘಟಕದ ಆಶ್ರಯದಲ್ಲಿ ದಿನಾಂಕ 23/09/2018ರಂದು ಬಜ್ಪೆ ಪೇಟೆಯ ಪರಿಸರದಲ್ಲಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸ್ಥಳೀಯ ಸಂಘ ಸಂಸ್ಥೆಗಳೊಂದಿಗೆ ಸೇರಿ ನಡೆಸಿದ ಈ ಕಾರ್ಯಕ್ರಮದಲ್ಲಿ 350 ಹೆಚ್ಚು ಜನರು ಸಕ್ರೀಯವಾಗಿ ಭಾಗವಹಿಸಿದರು. MRPL ಸಂಸ್ಥೆ ಭಾಗವಹಿಸಿದ ಎಲ್ಲರಿಗೂ ಟೀ-ಶರ್ಟ್ ಹಾಗೂ ಉಪಹಾರದ […]
Read More
16-09-2018, 4:36 PM
ಪೆರ್ಮುದೆ -ಎಕ್ಕಾರು ; ದಿನಾಂಕ 16 .09 .18 ರಂದು ಭಾನುವಾರ ಪೆರ್ಮುದೆ -ಎಕ್ಕಾರು ಇಲ್ಲಿ ಯುವವಾಹಿನಿಯ ನೂತನ ಘಟಕ ರಚಿಸುವ ನಿಟ್ಟಿನಲ್ಲಿ ಸಮಲೋಚನಾ ಸಭೆಯು ಬ್ರಹ್ಮಶ್ರೀ ನಾರಾಯಣಗುರು ಸಂಘ ಎಕ್ಕಾರು -ಪೆರ್ಮುದೆ ಇಲ್ಲಿ ನಡೆಯಿತು. ಯುವವಾಹಿನಿ (ರಿ) ಕೆಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲು, ಪ್ರಧಾನ ಕಾರ್ಯದರ್ಶಿ ಸುನಿಲ್ ಅಂಚನ್, ಉಪಾದ್ಯಕ್ಷರಾದ ನರೇಶ್ ಸಸಿಹಿತ್ಲು, ನಿಕಟ ಪೂರ್ವ ಅಧ್ಯಕ್ಷರಾದ ಯಶವಂತ ಪೂಜಾರಿ ,ಯುವಸಿಂಚನ ಸಂಪಾದಕ ರಾಜೇಶ ಸುವರ್ಣ , ಮಾಜಿ ಅಧ್ಯಕ್ಷರಾದ ಪರಮೇಶ್ವರ ಪೂಜಾರಿ ಮಧು […]
Read More
15-09-2018, 2:33 AM
ಬಜಪೆ : ಶ್ರೀ ನಿರಂಜನ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಸುಂಕದಕಟ್ಟೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯುವ ರೆಡ್ ಕ್ರಾಸ್ ಘಟಕ, ರೆಡ್ ರಿಬ್ಬನ್ ಕ್ಲಬ್, ಕಾಲೇಜು ಅಭಿವೃದ್ಧಿ ಸಮಿತಿ, ಶಿಕ್ಷಕ ರಕ್ಷಕ ಸಂಘ, ಹಳೆ ವಿದ್ಯಾರ್ಥಿ ಸಂಘ, ಸುಂಕದಕಟ್ಟೆ ಬಜ್ಪೆ, ಶ್ರೀ ನಿರಂಜನ ಸ್ವಾಮಿ ಅನಿದಾನಿತ ತಾಂತ್ರಿಕ ವಿದ್ಯಾಲಯ ಸುಂಕದಕಟ್ಟೆ ಹಾಗೂ ರೋಟರಿ ಕ್ಲಬ್ ಬಜ್ಪೆ ಇವರೆಲ್ಲರ ಸಹಭಾಗಿತ್ವದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಇವರ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರ […]
Read More
27-08-2018, 3:36 PM
ಬಜಪೆ : ಯುವವಾಹಿನಿ (ರಿ) ಬಜಪೆ ಘಟಕದ ಸದಸ್ಯರಾದ ಕುಮಾರಿ ಗ್ರೀಷ್ಮ ಇವರ ಸಂಗೀತ ಕ್ಷೇತ್ರದ ಅತ್ಯುತ್ತಮ ಸಾಧನೆಯನ್ನು ಗುರುತಿಸಿ ದಿನಾಂಕ 27.08.2018 ರಂದು ಬ್ರಹ್ಮಶ್ರೀ ನಾರಾಯಣಗುರುವರ್ಯರ ೧೬೪ ನೆೇ ಜನ್ಮ ದಿನಾಚರಣೆಯು ಶುಭ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಪೆರ್ಮುದೆ ಇದರ ಆಶ್ರಯದಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಪೆರ್ಮುದೆ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.
Read More
27-08-2018, 8:56 AM
ಬಜಪೆ : ಬ್ರಹ್ಮ ಶ್ರೀ ನಾರಾಯಣ ಸಮಾಜ ಸೇವಾ ಸಂಘ ಬಜಪೆ -ಕರಂಬಾರು ,ಯುವವಾಹಿನಿ (ರಿ) ಬಜಪೆ ಘಟಕ ,ಯುವವಾಹಿನಿ (ರಿ) ಕರಂಬಾರು -ಕೆಂಜಾರು ಘಟಕ ಹಾಗೂ ಬಿರುವೆರ್ ಕುಡ್ಲ (ರಿ) ಬಜಪೆ ಘಟಕದ ಸಹಯೋಗದಲ್ಲಿ ದಿನಾಂಕ 27.08.2018 ರಂದು ಸುಂಕದಕಟ್ಟೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಿಂದ ಬಜಪೆ ನಾರಾಯಣ ಗುರು ಮಂದಿರದ ವರೆಗೆ ಶ್ರೀ ನಾರಾಯಣ ಗುರು ಸಂದೇಶ ಕಾಲ್ನಡಿಗೆ ಜಾಥಾ ಬಹಳ ವಿಜೃಂಭಣೆಯಿಂದ ನಡೆಯಿತು. ಸುಂಕದಕಟ್ಟೆ ಅನ್ನಪೂರ್ಣೆಶ್ವರಿ ದೇವಸ್ಥಾನದ ಮೊಕ್ತೇಸರರು ಹಾಗೂ ಮುಲ್ಕಿ ಮೂಡಬಿದ್ರಿ ಕ್ಷೇತ್ರದ […]
Read More
17-08-2018, 2:51 PM
ಬಜ್ಪೆಯಲ್ಲಿ ವಾಸವಾಗಿರುವ ದಿ| ಮನೋಜ್ ಕುಮಾರ್ ಮತ್ತು ಶ್ರೀಮತಿ ಶಾಲಿನಿಯವರ ಪುತ್ರಿ ಕುಮಾರಿ ದಿವ್ಯ ಇವರ ಮದುವೆ ಖರ್ಚಿನ ಸಹಾಯಾರ್ಥವಾಗಿ ದಿನಾಂಕ 17.08.2017ರಂದು ಯುವವಾಹಿನಿ (ರಿ) ಬಜ್ಪೆ ಘಟಕದ ವತಿಯಿಂದ ಧನ ಸಹಾಯ ಹಸ್ತಾಂತರಿಸಲಾಯಿತು . ಈ ಸಂದರ್ಭದಲ್ಲಿ ಸಂತೋಷ್ ಕುಮಾರ್ ಜೋಕಟ್ಟೆ, ಯುವವಾಹಿನಿ ಬಜ್ಪೆ ಘಟಕದ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
Read More