10-04-2024, 11:29 AM
ಬೆಳ್ತಂಗಡಿ:ಶ್ರೀ ರಾಮ ಕ್ಷೇತ್ರ ನಿತ್ಯಾನಂದ ನಗರ ಕನ್ಯಾಡಿಯಲ್ಲಿ ದಿನಾಂಕ 10/04/2024 ರಂದು ನಡೆದ ಜಾತ್ರಾ ಮಹೋತ್ಸವ ಹಾಗೂ ಶ್ರೀ ರಾಮ ತಾರಕ ಭಜನೋತ್ಸವ ಕಾರ್ಯಕ್ರಮದಲ್ಲಿ ಸಂಜೆ 4.00 ರಿಂದ 7.00 ಗಂಟೆವರೆಗೆ ನಡೆದ ಭಜನೆಯಲ್ಲಿ ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ಸದಸ್ಯರು ಭಾಗಿಯಾಗಿದ್ದರು. ಘಟಕದ ಅಧ್ಯಕ್ಷರು, ಕಾರ್ಯದರ್ಶಿ, ಮಾಜಿ ಅಧ್ಯಕ್ಷರು, ಸಲಹೆಗಾರರು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಭಾಗವಹಿಸಿದ ಎಲ್ಲ ಸದಸ್ಯರಿಗೆ ಅರ್ಚಕರು ಪ್ರಸಾದ ನೀಡಿ ಗೌರವಿಸಿದರು.
Read More
16-03-2024, 3:21 PM
ಬೆಳ್ತಂಗಡಿ: ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ವತಿಯಿಂದ ದಿನಾಂಕ 16-03-2024 ಶನಿವಾರ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸ್ತ್ರಿ,ಕುಟುಂಬದ ಅಸ್ತಿತ್ವ ಸಶಕ್ತ ಸಮಾಜದ ಆಧಾರ ಎಂಬ ಶೀರ್ಷಿಕೆಯಡಿಯ ಕಾರ್ಯಕ್ರಮವು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿಯಲ್ಲಿ ಜರುಗಿತು. ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಜಾನಕಿ ಪಣಕಜೆ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ನಿರೂಪಕಿ ಹಾಗೂ ಬರಹಗಾರರಾದ ರೇಣುಕಾ ಕಣಿಯೂರು ಮಹಿಳೆ ಮತ್ತು ಆಕೆಯ ವಿವಿಧ ರೀತಿಯ ಶಕ್ತಿಯ ಬಗ್ಗೆ ಸವಿವರವಾಗಿ ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುಳಿಯ […]
Read More
13-02-2024, 4:50 PM
ಬೆಳ್ತಂಗಡಿ: ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ವತಿಯಿಂದ ದಿನಾಂಕ 13/02/2024 ಮಂಗಳವಾರದಂದು ಯುವವಾಹಿನಿಯ ಪದಾಧಿಕಾರಿಗಳಿಗೆ ಹಾಗೂ ಸಂಘಟನೆ ಕಾರ್ಯದರ್ಶಿಗಳಿಗೆ ಮುನ್ನುಡಿ ಮುಂದಿನ ಪಯಣಕ್ಕಾಗಿ ಎಂಬ ಶೀರ್ಷಿಕೆಯಡಿಯ ಕಾರ್ಯಕ್ರಮವು ಬೆಳ್ತಂಗಡಿಯ ಗುರು ನಾರಾಯಣ ಸೇವಾ ಸಂಘದ ಸಭಾಭವನದಲ್ಲಿ ನಡೆಯಿತು. ತರಬೇತಿಯನ್ನು ಸ್ಥಾಪಕ ಅಧ್ಯಕ್ಷರಾದ ರಾಕೇಶ್ ಮೂಡುಕೋಡಿ, ಮಾಜಿ ಅಧ್ಯಕ್ಷರಾದ ಪ್ರಸಾದ್ ಎಮ್. ಕೆ, ನಿಕಟ ಪೂರ್ವ ಅಧ್ಯಕ್ಷರಾದ ಅಶ್ವತ್ ಕುಮಾರ್ ಇವರು ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಸದಾಶಿವ ಇವರು ವಹಿಸಿದ್ದರು. ತರಬೇತಿಯಲ್ಲಿ ಮಾಜಿ ಅಧ್ಯಕ್ಷರು, ಸಲಹೆಗಾರರು, ನಿರ್ದೇಶಕರು, […]
Read More
13-11-2022, 5:26 PM
ಬೆಳ್ತಂಗಡಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಪರಿಕಲ್ಪನೆಯೊಂದಿಗೆ ಸಮಾಜ ಸೇವೆ ಮಾಡುತ್ತಿರುವ ಯುವವಾಹಿನಿ ಬೆಳ್ತಂಗಡಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ, ಸಾಧಕರಿಗೆ ಸನ್ಮಾನ ಸಾಂತ್ವನನಿಧಿ ಹಸ್ತಾಂತರ ಕಾರ್ಯಕ್ರಮ ನ.13 ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ನಡೆಯಿತು. ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿ೦ಜ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು , ಬೆಳ್ತಂಗಡಿ ಘಟಕ ಅಧ್ಯಕ್ಷೆ ಸುಜಾತ […]
Read More
10-09-2022, 5:18 PM
ಬೆಳ್ತಂಗಡಿ :- ವಿಶ್ವ ಮಾನವ ಸಂದೇಶ ಸಾರಿದ ಮಹಾನ್ ಚೇತನ, ಆಧ್ಯಾತ್ಮಿಕ ಕ್ರಾಂತಿಯನ್ನು ಹುಟ್ಟು ಹಾಕಿದ ಅಸಾಮಾನ್ಯ ಗುರು, ದೀನರ ಪಾಲಿಗೆ ದೇವರಂತೆ ಗೋಚರಿಸಿದ ಮಹಾನ್ ಸಂತ, ಬ್ರಹ್ಮಶ್ರೀ ನಾರಾಯಣ ಗುರುಗಳ 168 ನೇ ಜನ್ಮ ದಿನಾಚರಣೆ ಪಯುಕ್ತ ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಗುರು ನಮನ ಕಾರ್ಯಕ್ರಮ ಗುರುವಾಯನಕೆರೆಯಲ್ಲಿ ನಡೆಯಿತು. ದೀಪ ಪ್ರಜ್ವಲನೆ ಮಾಡಿ, ಗುರವಿನ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀಮತಿ ಸುಜಾತ ಅಣ್ಣಿ ಪೂಜಾರಿ ಎಲ್ಲರನ್ನ ಸ್ವಾಗತಿಸಿದರು, ಕೇಂದ್ರ ಸಮಿತಿ […]
Read More
21-08-2022, 3:19 PM
ಕಟಕಟಪಾಡಿ:- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ಚಾಂಪಿಯನ್ ಪಟ್ಟವನ್ನು ಯುವವಾಹಿನಿ ಬೆಳ್ತಂಗಡಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ ತೀವ್ರ ಪೈಪೋಟಿಯ […]
Read More
13-03-2022, 11:48 AM
ಬೆಳ್ತಂಗಡಿ: ”ಮಹಿಳೆ ಇನ್ನೊಬ್ಬರ ಮುಂದೆ ಕೈ ಚಾಚಿ ಬದುಕುವುದಕ್ಕಿಂತ ತಾನೇ ಹಣ ಗಳಿಸಿಕೊಳ್ಳಬೇಕು. ಆಕೆ ಅರ್ಥಿಕವಾಗಿ ಸದೃಢವಾದಾಗ ಸಮಸ್ಯೆ ದೂರವಾಗುವುದರ ಜೊತೆಗೆ ಸಮಾಜದಲ್ಲಿ ಗೌರವ, ಸ್ಥಾನಮಾನ ಸಿಗುವುದು’ ಎಂದು ಮಂಗಳೂರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕಿ ರೇಖಾ ಗೋಪಾಲ್ ಹೇಳಿದರು. ಅವರು ದಿನಾಂಕ 13.03.2022 ರಂದು ಬೆಳ್ತಂಗಡಿಯ ಸುವರ್ಣ ಆರ್ಕೆಡ್,ಇದರ ಸಭಾಂಗಣದಲ್ಲಿ ಬೆಳ್ತಂಗಡಿ ಯುವವಾಹಿನಿ ಘಟಕ, ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ, ಬೆಳ್ತಂಗಡಿ ಇವರ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ […]
Read More
20-11-2019, 2:44 PM
ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ, ಮಹಿಳಾ ಸಂಚಾಲನ ಸಮಿತಿ ನೇತೃತ್ವದಲ್ಲಿ ಸ್ತ್ರೀ ಶಕ್ತಿಯನ್ನು ಪ್ರಬಲಪಡಿಸುವ ನಿಟ್ಟಿನಲ್ಲಿ ವಿಶೇಷವಾಗಿ ಮಹಿಳೆಯರಿಗಾಗಿ ಮುನ್ನೋಟ – ಮುಂದಿನ ಹೆಜ್ಜೆಯತ್ತ ಕಾರ್ಯಕ್ರಮವನ್ನು ನವೆಂಬರ್17 ರಂದು ಗುರುವಾಯನಕೆರೆ ಶಾರದಾ ಮಂಟಪದಲ್ಲಿ ನಡೆಸಲಾಯಿತು. ಶಿಶು ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕುರಿತ ಸವಿವರ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಂಗನವಾಡಿ ಮೇಲ್ವಿಚಾರಕರಾದ ಶ್ರೀಮತಿ ನಾಗವೇಣಿ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ನಾರಾವಿಯ ವೈದ್ಯಾಧಿಕಾರಿಗಳಾದ ಡಾ ದೀಕ್ಷಿತಾ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ ಬೆಳ್ತಂಗಡಿ ಘಟಕದ […]
Read More