Yuvavahini

ಕಂಕನಾಡಿ

ಕೇಶ ವಿನ್ಯಾಸ ತರಬೇತಿ ಕಾರ್ಯಾಗಾರ

ಯುವವಾಹಿನಿ (ರಿ) ಕಂಕನಾಡಿ ಘಟಕದ ಆಶ್ರಯದಲ್ಲಿ ಮಹಿಳೆಯರಿಗಾಗಿ ವೈವಿಧ್ಯಮಯ ಹಾಗೂ ವಿಶಿಷ್ಟ ವಿನ್ಯಾಸದ ಕೇಶ ವಿನ್ಯಾಸ ಕಾರ್ಯಾಗಾರ ದಿನಾಂಕ 18.04.2017 ರಂದು ಜರುಗಿತು. ಯುವವಾಹಿನಿ ಮಹಿಳಾ ಘಟಕದ ನಿಕಟಪೂರ್ವ ಅಧ್ಯಕ್ಷೆ ಹಾಗೂ ಬ್ಯುಟಿಷೀಯನ್ ಶ್ರೀಮತಿ ವಿದ್ಯಾ ರಾಕೇಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರ ನಡೆಸಿಕೊಟ್ಟರು. ಹಾಗೂ ಈ ಸಂದರ್ಭದಲ್ಲಿ ಸರಳ ವಿಧಾನಗಳ ಮೂಲಕ ಮಹಿಳೆಯರ ಸೌಂದರ್ಯ ಹೆಚ್ಚಿಸುವ ಮೇಕಪ್ ವಿಧಾನದ ಬಗ್ಗೆ ಮಾಹಿತಿ ನೀಡಿದರು. ಮಂಗಳೂರಿನ ಗೋರಿಗುಡ್ಡದಲ್ಲಿ ಜರುಗಿದ ಈ ಕಾರ್ಯಾಗಾರದಲ್ಲಿ 50 ಕ್ಕೂ ಹೆಚ್ಚು ಮಹಿಳೆಯರು […]

Read More

ಕಂಕನಾಡಿ ಯುವವಾಹಿನಿಯ 2017-18ನೇ ಸಾಲಿನ ಪದಗ್ರಹಣ

ಯುವವಾಹಿನಿ(ರಿ) ಕಂಕನಾಡಿ ಘಟಕದ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 26.03.2017 ನೇ ಆದಿತ್ಯವಾರ ಉಜ್ಜೋಡಿ ಶ್ರೀ ಮಹಾಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಜರುಗಿತು. ಗೋಪಾಲ ಪೂಜಾರಿ ನೇತೃತ್ವದ 21 ಸದಸ್ಯರ ತಂಡವು ಸಂಘಟನೆಯನ್ನು ಸಮರ್ಥವಾಗಿ ಮುನ್ನಡೆಸುವ ಬಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. 2017-18 ನೇ ಸಾಲಿನ ಕಾರ್ಯಕಾರಿ ಸಮಿತಿ : ಅಧ್ಯಕ್ಷರು : ಗೋಪಾಲ ಪೂಜಾರಿ ಉಪಾಧ್ಯಕ್ಷರು : ಭವಿತ್ ರಾಜ್ ಕಾರ್ಯದರ್ಶಿ : ಮೋಹನ್ ಜಿ.ಅಮೀನ್ ಜತೆ ಕಾರ್ಯದರ್ಶಿ : ಶ್ರೀಮತಿ ನಯನಾ ಕೋಶಾಧಿಕಾರಿ […]

Read More

ಯುವವಾಹಿನಿ ಕ್ರಾಂತಿಕಾರಿ ಬದಲಾವಣೆಯ ರೂವಾರಿ – ನವನೀತ ಡಿ.ಹಿಂಗಾಣಿ

ಆಧುನಿಕ ಸಮಾಜದಲ್ಲಿ ಬದಲಾಗುತ್ತಿರುವ ಜೀವನ ಕ್ರಮದಲ್ಲಿ ಯುವವಾಹಿನಿ ಸಮಾಜಕ್ಕೆ ಅನಿವಾರ್ಯವಾಗಿದೆ. ಕಳೆದ 30 ವರ್ಷಗಳಿಂದ ಯುವವಾಹಿನಿ ಬಿಲ್ಲವ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಿದೆ ಎಂದು ಬೆಂಗಳೂರಿನ ಖ್ಯಾತ ವಕೀಲರಾದ ನವನೀತ ಡಿ.ಹಿಂಗಾಣಿ ತಿಳಿಸಿದರು. ಅವರು ಉಜ್ಜೋಡಿ ಶ್ರೀ ಮಹಾಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ(ರಿ) ಕಂಕನಾಡಿ ಘಟಕ 2017-18 ನೇ ಸಾಲಿನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವ್ಯಕ್ತಿತ್ವ ವಿಕಸನ, ಸಾಮಾಜಿಕ ಸ್ಥಾನಮಾನ, ನಾಯಕತ್ವದ ಬೆಳವಣಿಗೆ ಹಾಗೂ ಸಹಸ್ರಾರು ಜನರ ವ್ಯಕ್ತಿತ್ವವನ್ನು ರೂಪಿಸುವಂತಹ ಕಾರ್ಯವನ್ನು ಯುವವಾಹಿನಿ […]

Read More

ಕಂಕನಾಡಿ ಘಟಕದ ವತಿಯಿಂದ ಶ್ರೀ ಮಹಾಂಕಾಳಿ ದೈವಸ್ಥಾನಕ್ಕೆ ಕುರ್ಚಿ ಕೊಡುಗೆ

ದಿನಾಂಕ 29-12-2016 ರಂದು ಕಂಕನಾಡಿ ಘಟಕದ ವತಿಯಿಂದ ಶ್ರೀ ಮಹಾಂಕಾಳಿ ದೈವಸ್ಥಾನದಲ್ಲಿ ವಾರದ ಪೂಜೆ ಹಾಗೂ ಭಜನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಅಲ್ಲದೆ ದೈವಸ್ಥಾನಕ್ಕೆ 50 ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಘಟಕದ ಸಲಹೆಗಾರರಾದ ಜಿ. ಪರಮೇಶ್ವರ ಪೂಜಾರಿ, ಘಟಕದ ಅಧ್ಯಕ್ಷ ಹರೀಶ್ ಕೆ. ಸನಿಲ್, ಶ್ರೀ ಮಹಾಂಕಾಳಿ ದೈವಸ್ಥಾನದ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಘಟಕದ ಕಾರ್ಯದರ್ಶಿ ಭವಿತ್‌ರಾಜ್ ಹಾಗೂ ನಿಕಟಪೂರ್ವ ಅಧ್ಯಕ್ಷ ಶೇಖರ್ ಅಮೀನ್ ಉಪಸ್ಥಿತರಿದ್ದರು.

Read More

ಕಂಕನಾಡಿ ಯುವವಾಹಿನಿಯ ಸಾಂಸ್ಕೃತಿಕ ಲೋಕ ಅನಾವರಣ

ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016 ನೇ ಆದಿತ್ಯವಾರ ಜರಗಿತು. ಯುವವಾಹಿನಿ ಕಂಕನಾಡಿ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕೃತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.

Read More

ಕಂಕನಾಡಿ ಯುವವಾಹಿನಿ : ಪ್ರಥಮ ಬಹುಮಾನ

ಯುವವಾಹಿನಿ ಕಂಕನಾಡಿ ಘಟಕ ಆಶ್ರಯದಲ್ಲಿ ಘಟಕದ ಕ್ರಿಯಾಶೀಲ ಸದಸ್ಯರ ತಂಡವು ವೈವಿಧ್ಯಮಯವಾಗಿ ರಚಿಸಿದ ಗೂಡುದೀಪವು ನೀರುಮಾರ್ಗದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿ ಆಯೋಜಿಸಿದ್ದ ಗೂಡು ದೀಪ ಸ್ಪರ್ಧೆಯಲ್ಲಿ  ಪ್ರಥಮಸ್ಥಾನ ಪಡೆದಿರುತ್ತದೆ ಹಾಗೂ ನಮ್ಮ ಕುಡ್ಲ ವಾರ್ತಾ ವಾಹಿನಿಯು ಆಯೋಜಿಸಿದ್ದ ಗೂಡುದೀಪ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿರುತ್ತದೆ.

Read More

ಕಂಕನಾಡಿ ಯುವವಾಹಿನಿಯಿಂದ ಸಹಾಯ ಹಸ್ತ

ದಿನಾಂಕ 22-10-2016 ರಂದು ಕಂಕನಾಡಿ ಘಟಕದ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಮಗು ರಿಶಿತ್ ಕುಮಾರ್ ಅವರಿಗೆ ಧಾನಿಗಳ ಸಹಕಾರದಿಂದ ಒಟ್ಟು ಮಾಡಿದ ರೂ. 17,000/-ದ ಚೆಕ್‌ನ್ನು ಘಟಕಾಧ್ಯಕ್ಷರು ವಿತರಿಸುತ್ತಿರುವುದು.

Read More

ಗುರುಜಯಂತಿ ಆಚರಣೆ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

ದಿನಾಂಕ 25-9-2016 ರಂದು ಯುವವಾಹಿನಿ (ರಿ) ಕಂಕನಾಡಿ ಘಟಕದ ವತಿಯಿಂದ ಉಜ್ಜೋಡಿಯ ಮಹಾಂಕಾಳಿ ದೈವಸ್ಥಾನದ ವಠಾರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 162 ನೇ ಜಯಂತಿ ಆಚರಣೆ ಹಾಗೂ ಗುರುಗಳ ಬಗ್ಗೆ ಶಾಲಾ ಮಕ್ಕಳಿಗೆ ಏರ್ಪಡಿಸಿದ ಭಾಷಣ ಹಾಗೂ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಜರಗಿತು. ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್‌ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ, ಸಿಂಚನ ಲೈಟಿಂಗ್ ಕಂಟ್ರೋಲ್‌ನ CEO ರತ್ನಾಕರ ಸುವರ್ಣ, ಮಾಜಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!