Yuvavahini

ಕೂಳೂರು

ಸ್ವಚ್ಚತಾ ಅಭಿಯಾನ ಕಾರ್ಯಕ್ರಮ

ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ 25ನೇ ಸ್ವಚ್ಛತಾ ಅಭಿಯಾನವು ಗಾಂಧಿ ಜಯಂತಿ ಪ್ರಯುಕ್ತ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಪರಪಾದೆ ಆಕಾಶಭವನ ಇಲ್ಲಿ ದಿನಾಂಕ 02 ಅಕ್ಟೋಬರ್ 2022 ಭಾನುವಾರದಂದು ನಡೆಯಿತು. ಸದಸ್ಯರಾದ ಜಯ ಬಂಗೇರರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ , ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಭಾಸ್ಕರ್ ಕೋಟ್ಯಾನ್, ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಸಂಘಟನಾ ಕಾರ್ಯದರ್ಶಿ ಸಚಿನ್ ಪೂಜಾರಿ , ಮಹಿಮೂನಾ S.D.M.C.ಅಧ್ಯಕ್ಷರು, […]

Read More

ಮನೆ ಮನೆ ಭಜನೆ

ಕೂಳೂರು :- ಹರಿನಾಮ ಸಂಕೀರ್ತನೆಯೇ ಸಾಕು ಎಲ್ಲರ ಪಾಪಸಂಚಯವನ್ನು ಉಪಶಮನಗೊಳಿಸಲು. ಶೃತಿ, ತಾಳ, ಲಯ ಬದ್ಧವಾಗಿ ಭಜನೆಯ ರೂಪದಲ್ಲಿ ಭಗವಂತನನ್ನು ಸೇವಿಸಬಹುದು ಹಾಗೂ ಆರಾಧಿಸಬಹುದು. ದೇವರ್ಷಿಗಳಾದ ನಾರದರು ಹೇಳುತ್ತಾರೆ ಭಗವನ್ನಾಮವು ಒಂದೇ ನನ್ನ ಪ್ರಾಣ. ಆಧ್ಯಾತ್ಮಿಕ ಅಂಧಕಾರದ ಕಲಿಯುಗದಲ್ಲಿ ಭಗವನ್ನಾಮಹೊರತು ಬೇರೆಯಾವುದೇ ಆಶ್ರಯವಿಲ್ಲ. ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಆನಂದ್ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನೆ ಕಾರ್ಯಕ್ರಮವು ಲಕ್ಷ್ಮೀ ಪೂಜೆಯ […]

Read More

ಬ್ರಹ್ಮಶ್ರೀ ನಾರಾಯಣಗುರುವರ್ಯರ 168ನೇ ಜನ್ಮ ದಿನಾಚರಣೆ

ಕೂಳೂರು :- ಬ್ರಹ್ಮ ಶ್ರೀ ನಾರಾಯಣ ಗುರು ವರ್ಯರ 168 ನೇ ಜನುಮ ದಿನದ ಪ್ರಯುಕ್ತ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಸ್ನೇಹ ಭಾರತಿ ವಿದ್ಯಾ ಸಂಸ್ಥೆ ನಮ್ಮ ಹಿರಿಯರ ಮನೆ ಜೋಕಟ್ಟೆ ಪೊರ್ಕೋಡಿಯಲ್ಲಿ ಸೇವಾ ಕಾರ್ಯಕ್ರಮವು ದಿನಾಂಕ 10 ಸೆಪ್ಟೆಂಬರ್ 2022 ರಂದು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ವಹಿಸಿದ್ದರು. ಗುರುಗಳ ಭಾವಚಿತ್ರಕ್ಕೆ ಹಿರಿಯರಾದ ಸುನಂದರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಘಟಕದ ಮಾಜಿ ಅಧ್ಯಕ್ಷರಾದ […]

Read More

ಬೃಹತ್ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ

ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕ, ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಫಲ್ಗುಣಿ, ಹಿಂದ್ ಕುಷ್ಟ್ ನಿವಾರಣ್ ಸಂಘ್ ಹಾಗೂ ರೆಡ್ ಕ್ರಾಸ್ ಸಂಸ್ಥೆ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 04 ಸೆಪ್ಟೆಂಬರ್ 2022 ರಂದು ಬೃಹತ್ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರವು ಫಲ್ಗುಣಿ ಸಭಾಂಗಣ ಕೂಳೂರುನಲ್ಲಿ ನಡೆಯಿತು. ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಯುವವಾಹಿನಿ ಮತ್ತು ಲಯನ್ಸ್ […]

Read More

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ

ಕೂಳೂರು :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೂಳೂರು ಘಟಕ ಹಾಗೂ ಲಯನ್ಸ್ ಮತ್ತು ಲಿಯೋಕ್ಲಬ್ ಪಲ್ಗುಣಿ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಮಾರಂಭವು ದಿನಾಂಕ 15 ಆಗಸ್ಟ್ 2022ರ ಸೋಮವಾರ ದಂದು ಫಲ್ಗುಣಿ ಸಭಾಂಗಣ ಕೂಳೂರಿನಲ್ಲಿ ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ರವರು ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಜಯ ಬಂಗೇರ ಇವರು ಧ್ವಜಾರೋಹಣವನ್ನು ಮಾಡಿದರು. […]

Read More

ಕ್ರೀಡಾ ಸಾಮಾಗ್ರಿ ವಿತರಣೆ

ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಭಾರತದ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಗ್ರಾಮೀಣ ಪ್ರದೇಶದ ಮಕ್ಕಳ ಕ್ರೀಡೆಗೆ ಪ್ರೋತ್ಸಾಹ ಕೊಡುವ ಉದೇಶದೊಂದಿಗೆ ಕ್ರೀಡಾ ನಿರ್ದೇಶಕರ ಸಂಚಾಲಕತ್ವದಲ್ಲಿ ದಿನಾಂಕ 15 ಆಗಸ್ಟ್ 2022 ಸೋಮವಾರದಂದು ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಬೋರುಗುಡ್ಡೆ, ಜೋಕಟ್ಟೆ ಇಲ್ಲಿ ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮವು ನಡೆಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಪದ್ಮಾ ರವರು ಎಲ್ಲರನ್ನೂ ಸ್ವಾಗತಿಸಿ, ಘಟಕದ ಸಮಾಜ ಮುಖಿ ಕೆಲಸವನ್ನು ಶ್ಲಾಘಿಸಿದರು. ಘಟಕದ ಕ್ರೀಡಾ ನಿರ್ದೇಶಕರಾದ ಪ್ರದೀಪ್ ಶಿಕ್ಷಕರು […]

Read More

28ನೇ ಮನೆ ಮನೆ ಭಜನೆ

ಕೂಳೂರು :- ಸಂಗೀತ ಎಂಬ ದೇವತಾರಾಧನೆ ಕಲೆಯ ಮೊದಲ ಮೆಟ್ಟಿಲು ಭಜನೆ. ಭಕ್ತಿ ತನ್ಮಯತೆಯಿಂದ ದಿನವೂ ದೇವರ ನಾಮ ಹಾಡುವುದರಿಂದ ನಮ್ಮ ಮನಸ್ಸು ಸಾತ್ವಿಕತೆಯ ಒಂದು ಮಾರ್ಗವನ್ನು ಸಾಗುತ್ತದೆ.”ಹರಿ ಭಜನೆ ಮಾಡೋ ನಿರಂತರ, ಹರಿ ಭಜನೆ ಮಾಡೋ ನಿರಂತರ, ಪರ ಗತಿಗಿದು ನಿರ್ಧಾರ” ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಆನಂದ್ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನೆ ಕಾರ್ಯಕ್ರಮವು ಘಟಕದ ಸದಸ್ಯರಾದ […]

Read More

ಸಾಹಿತ್ಯ ಸೌರಭ

ಕೂಳೂರು :- ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ , ಯುವವಾಹಿನಿ (ರಿ.) ಉಡುಪಿ ಘಟಕದ ಅತಿಥ್ಯದಲ್ಲಿ, ಕಲೆ ಮತ್ತು ಸಾಹಿತ್ಯ ನಿರ್ದೇಶಕರ ಯೋಜನೆಯಡಿಯಲ್ಲಿ ನಡೆಯುವ ಡೆನ್ನನ ಡೆನ್ನಾನ -2022 ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿರುವ ಸಾಹಿತ್ಯ ಸೌರಭ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳ ತತ್ವ ಸಂದೇಶವನ್ನು ಸಾರುವ ಉದ್ದೇಶದೊಂದಿಗೆ ಶಾಲಾ ಮಕ್ಕಳಿಗೆ ಹಮ್ಮಿಕೊಂಡಿರುವ ಚಿತ್ರ ಕಲಾ ಸ್ಪರ್ಧೆಯು ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 04 ಆಗಸ್ಟ್ 2022 ಗುರುವಾರದಂದು ದ.ಕ.ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ […]

Read More

ಭಾರತ ಮಾತೆಯ ಕೆಚ್ಚೆದೆಯ ಸೈನಿಕನನ್ನು ಎಂದಿಗೂ ಸೋಲಿಸಲು ಸಾಧ್ಯವಿಲ್ಲ:- ಡಾ. ಪ್ರವೀಣ್ ಶೆಟ್ಟಿ, ಮಾಜಿ ಸೈನಿಕರು

ಕೂಳೂರು :- ಈ ಭೂಮಿಯ ಮೇಲೆ ಯಾರನ್ನು ಬೇಕಾದರೂ ಸೋಲಿಸಬಹುದು ಆದರೆ ಒಬ್ಬ ಭಾರತ ಮಾತೆಯ ಕೆಚ್ಚೆದೆಯ ಸೈನಿಕನನ್ನು ಎಂದಿಗೂ ಸೋಲಿಸಲು ಸಾಧ್ಯವಿಲ್ಲ ಎಂದು ಆಪರೇಷನ್ ವಿಜಯ್ ಮತ್ತು ಆಪರೇಷನ್ ಸ್ಟಾರ್ ವಿಜಯ್ ಕಾರ್ಗಿಲ್ ಯುದ್ಧದ ಪದಕ ವಿಜೇತರಾದ ಡಾ.ಪ್ರವೀಣ್ ಶೆಟ್ಟಿ ಇವರು ದಿನಾಂಕ 03 ಆಗಸ್ಟ್ 2022 ಬುಧವಾರದಂದು ಫಲ್ಗುಣಿ ಸಭಾಂಗಣ ಕೂಳೂರಿನಲ್ಲಿ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ನಡೆದ ಕಾರ್ಗಿಲ್ ವಿಜಯ ದಿವಸ್ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ದೀಪ ಬೆಳಗಿಸುವ […]

Read More

ಮುಗ್ದ ಮನಸ್ಸಿನ ಸಮ್ಮಿಲನ

ಕೂಳೂರು:- ದಿನಾಂಕ 19 ಜೂನ್ 2022 ರಂದು ಯುವವಾಹಿನಿ ಕೂಳೂರು ಘಟಕದ ವತಿಯಿಂದ “ಮುಗ್ದ ಮನಸ್ಸಿನ ಸಮ್ಮಿಲನ” ಕಾರ್ಯಕ್ರಮವು ಸರಕಾರಿ ಬಾಲಕರ ಬಾಲ ಮಂದಿರ ಬೊಂದೆಲ್ ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹೂವಿನ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ರಾಜೇಶ್ ಬಂಟ್ವಾಳ್ ಮಕ್ಕಳ ಮನಸ್ಸು ಆವೆ ಮಣ್ಣಿನ ತರಹ ಅದಕ್ಕೆ ನಾವು ಯಾವ ರೀತಿ ಆಕಾರ ನೀಡುತ್ತೆವೋ ಅದೇ ರೂಪ ಪಡೆಯುತ್ತದೆ,ಮುಗ್ದ ಮನಸ್ಸಿನ ಮಕ್ಕಳ ಜೊತೆ ಒಂದು ದಿನ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!