Yuvavahini

ಕೂಳೂರು

ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಆರೋಗ್ಯ ನಿಧಿ

ಕೂಳೂರು : ದಿನಾಂಕ 22/04/2019 ಸೋಮವಾರ ಯುವವಾಹಿನಿ(ರಿ)ಕೂಳೂರು ಘಟಕದ ವತಿಯಿಂದ ಯುವವಾಹಿನಿ(ರಿ) ಮೂಡಬಿದ್ರಿ ಘಟಕದ ಸದಸ್ಯರಾದ ಅಶ್ವಿನಿ ಇವರ ಪತಿ ರಾಜೇಶ್ ಪೂಜಾರಿ ಇವರ 2 ಕಿಡ್ನಿಗಳು ವಿಫಲವಾಗಿ ಚಿಕಿತ್ಸೆಗಾಗಿ ನೆರವು ಕೋರಿದ್ದ ಸಲುವಾಗಿ ಯುವವಾಹಿನಿ(ರಿ) ಕೂಳೂರು ಘಟಕದ ಸದಸ್ಯರು ವೈಯಕ್ತಿವಾಗಿ 15 ಸಾವಿರ ರೂಪಾಯಿ ಮೊತ್ತ ಹಾಗೂ ಕೂಳೂರು ನಾರಾಯಣ ಗುರು ಮoದಿರದ ಸದಸ್ಯರೆಲ್ಲರು ಸೇರಿ ಒಟ್ಟಾಗಿ 40 ಸಾವಿರ ರೂಪಾಯಿಯನ್ನು ಅವರ ತಾಯಿ ಉಮಾವತಿ ಇವರಿಗೆ ಹಸ್ತಾಂತರಿಸಲಾಯಿತು . ಈ ಸಂದರ್ಭದಲ್ಲಿ ಕೂಳೂರು ಘಟಕದ […]

Read More

ಯುವವಾಹಿನಿ( ರಿ) ಕೂಳೂರು ಘಟಕದ ಶಿವಗಿರಿ ಪ್ರವಾಸ

ಕೂಳೂರು : ಯುವವಾಹಿನಿ( ರಿ) ಕೂಳೂರು ಘಟಕದ ವತಿಯಿಂದ 52 ಸದಸ್ಯರ ತಂಡವು ಶಿವಗಿರಿ ಪ್ರವಾಸವನ್ನು ದಿನಾಂಕ 10-04-2019 ರಿಂದ 12-04-2019 ವರೆಗೆ ಕೈಗೊಂಡಿದ್ದು ಇದರ ಸಂಚಾಲಕತ್ವವನ್ನು ವಿದ್ಯಾರ್ಥಿ ಸಂಘಟನೆಯ ವಿನೀತ್ ಕುಮಾರ್ ಇವರು ವಹಿಸಿದ್ದರು. ಪರಮಪೂಜ್ಯ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರ ಆಶೀರ್ವಾದಗಳೊಂದಿಗೆ ತಾರೀಖು 10-04-2019 ಬುಧವಾರ ಸಂಜೆ 5.30ಕ್ಕೆ ಮಂಗಳೂರಿನ ಸೆಂಟ್ರಲ್ ರೈಲ್ವೇ ನಿಲ್ದಾಣನಿಂದ ಹೊರಡುವ ಮಾವೇಲಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಶಿವಗಿರಿಗೆ ಪ್ರಯಾಣ ಆರಂಭ ಮಾಡಿ ಮರುದಿನ ಬೆಳಿಗ್ಗೆ 6 ಗಂಟೆಗೆ […]

Read More

ಅನಾಥ ಮಗುವಿಗೆ ಆಸರೆಯಾದ ಯುವವಾಹಿನಿ ಕೂಳೂರು ಘಟಕ

ಕೂಳೂರು : ಅನಾಥಾಶ್ರಮದಲ್ಲಿ ಬೆಳೆಯುತ್ತಿದ್ದ ಲಕ್ಷ್ಮಿ ಎಂಬ ವಿದ್ಯಾರ್ಥಿನಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯ ಮೊತ್ತವನ್ನು ನೀಡಲು ಅಸಾಧ್ಯವಾಗಿರುವುದರಿಂದ ಯುವವಾಹಿನಿ ಕೂಳೂರು ಘಟಕದ ವತಿಯಿಂದ ವಿದ್ಯಾರ್ಥಿನಿಗೆ ಆಸ್ಪತ್ರೆ ಶುಲ್ಕ ಭರಿಸಲು 20,000 /- ರೂಪಾಯಿ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್

Read More

ಯುವವಾಹಿನಿ ಕೂಳೂರು ಘಟಕದಿಂದ ವಿದ್ಯಾನಿಧಿ ಹಸ್ತಾಂತರ

ಕೂಳೂರು : ಬೋಂದೆಲ್ ನಿವಾಸಿ ಅನುಪಮ ಇವರ ಪುತ್ರ ಧನರಾಜ್ ಬಂಗೇರ ಇವರ ಶಾಲಾ ಫೀಸ್ ಪಾವತಿಸಲು ಅಸಾಧ್ಯವಾದ ಕಾರಣ ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ 13,500/- ರೂಪಾಯಿಯನ್ನು ಎಲ್ಲರ ಒಪ್ಪಿಗೆಯ ಮೇರೆಗೆ ಅವರಿಗೆ ದಿನಾಂಕ 20/03/2019 ರ ವಾರದ ಸಭೆಯಲ್ಲಿ ಸಲಹೆಗಾರರಾದ ನೇಮಿರಾಜ್ ಹಸ್ತಾಂತರಿಸಿದರು. ಈ ಸoದರ್ಭದಲ್ಲಿ ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ಕಾರ್ಯದರ್ಶಿ ಪವಿತ್ರ ಅಚನ್, ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಪಧಾದಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು .

Read More

ಯುವವಾಹಿನಿ ಪ್ರೀಮಿಯರ್ ಲೀಗ್ ಕ್ರಿಕೆಟ್

ಕೂಳೂರು : ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ(ರಿ) ಕೂಳೂರು ಘಟಕದ ಆತಿಥ್ಯದಲ್ಲಿ ಯುವ ವಾಹಿನಿ ವಿದ್ಯಾನಿಧಿಯ ಬಲವರ್ಧನೆಗಾಗಿ ಯುವವಾಹಿನಿ ಪ್ರೀಮಿಯರ್ ಲೀಗ್ (YPL-201) ಮಾರ್ಚ್ 9 ಹಾಗೂ 10 ರಂದು ಎನ್.ಎಂ.ಪಿ.ಟಿ ಮೈದಾನ ಪಣಂಬೂರು ಇಲ್ಲಿ ನಡೆಯಿತು .ಬೆಳಗ್ಗೆ 7 ಗಂಟೆಗೆ ಸರಿಯಾಗಿ ನಾರಾಯಣ ಗುರುಗಳ ಆಶೀರ್ವಾದ ಪಡೆದು ದೀಪ ಬೆಳಗಿಸಿ ಕ್ರಿಕೆಟ್ ಪಂದ್ಯಾಟವನ್ನು ಪ್ರಾರಂಭಿಸಲಾಯಿತು .ಎರಡು ಪಂದ್ಯಗಳ ನಂತರ ಬೆಳಗ್ಗೆ 9 ಗಂಟೆಗೆ ಸರಿಯಾಗಿ ಉದ್ಘಾಟನಾ ಸಮಾರಂಭ ಜರಗಿತು .ಉದ್ಘಾಟನಾ ಸಮಾರಂಭದ ಅಧ್ಯಕ್ಷ […]

Read More

ಬಾಂಧವ್ಯ ಬೆಸುಗೆ -2019

ಯುವವಾಹಿನಿ(ರಿ)ಕೂಳೂರು ಘಟಕದ ವತಿಯಿಂದ ಯುವವಾಹಿನಿ ಸದಸ್ಯರ ಬಾಂಧವ್ಯಗಳ ಕೊಂಡಿ ಮತ್ತಷ್ಟು ಭದ್ರವಾಗಲಿ ಎಂಬ ಆಶಯದೊಂದಿಗೆ  ಬಾಂಧವ್ಯ ಬೆಸುಗೆ-2019 ಯುವವಾಹಿನಿ ಕುಟುಂಬ ಸಮ್ಮಿಲನ ಕಾರ್ಯಕ್ರಮವು ದಿನಾಂಕ 20/01/2019 ರವಿವಾರದಂದು ಮುಂಜಾನೆಯಿಂದ ಮುಸ್ಸಂಜೆವರೆಗೆ ‘ಕೆರೆಬಿಯನ್ ರೆಸಾರ್ಟ್ ‘ಮೂಲ್ಕಿ ಇಲ್ಲಿ ನಡೆಯಿತು .ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು .ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ,ಸಂಚಾಲಕರಾದ ವಿಮಲಾ ರಾಜೇಶ್ , ಘಟಕದ ಮಾರ್ಗದರ್ಶಕರಾದ ಗಿರಿಧರ್ ಸನಿಲ್ ಉಪಸ್ಥಿತರಿದ್ದರು .ಅಧ್ಯಕ್ಷರು ಎಲ್ಲರನ್ನು ಸ್ವಾಗತಿಸಿದರು .ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ […]

Read More

ಯುವವಾಹಿನಿಯ ವಿದ್ಯಾನಿಧಿ ಯೋಜನೆ ಶ್ಲಾಘನೀಯ : ಅನಿಲ್ ಕುಮಾರ್

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 13-01-2019 ರಂದು ವಿದ್ಯಾನಿಧಿಯ ಬಲವರ್ಧನೆಗಾಗಿ ಶಾರದಾ ಕಲಾ ಆರ್ಟ್ಸ್ ಕಲಾವಿದೆರ್(ರಿ) ಮಂಜೇಶ್ವರ ಇವರ ಬತ್ತಿಯಿಂದ ‘ ನಿತ್ಯೆ ಬನ್ನಗ ‘ ಎಂಬ ನಾಟಕವನ್ನು ಆಯೋಜಿಸಲಾಗಿತ್ತು .ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು .ಮುಖ್ಯ ಅತಿಥಿಗಳಾಗಿ ಅನಿಲ್ ಕುಮಾರ್ -ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ,ನವೀನ್ ಚಂದ್ರ ಬಿ ಪೂಜಾರಿ – ಬಿಜೆಪಿ ಉತ್ತರ ವಿಧಾನಸಭಾ ಕ್ಷೇತ್ರ ಹಿಂದುಳಿದ […]

Read More

ನದಿ ಮಡಿಲಿನ ಕಡೆಗೆ ಯುವವಾಹಿನಿಯ ಸ್ವಚ್ಛತೆಯ ನಡಿಗೆ

ಮಂಗಳೂರು : ನಿರಂತರವಾಗಿ ಸ್ವಚ್ಚತಾ ಕಾರ್ಯ ನಡೆಸುವ ಯುವವಾಹಿನಿ ಕೂಳೂರು ಘಟಕವು ಈ ಬಾರಿ ಜೀವಜಲ‌ ನೀಡುವ ನದಿಯನ್ನು ಸ್ವಚ್ಚ ಗೊಳಿಸುವ ಮೂಲಕ ಮಾದರಿಯಾಗಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಶಾಸಕರಾದ ಭರತ್ ಶೆಟ್ಟಿ ತಿಳಿಸಿದರು. ಅವರು ದಿನಾಂಕ 06.01.2019 ರಂದು ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ಜರುಗಿದ ಮಂಗಳೂರಿನ ಫಲ್ಗುಣಿ ನದಿಯ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ ಕೋಟ್ಯಾನ್ ,ಕಾರ್ಯದರ್ಶಿ […]

Read More

ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಶಿರಡಿ ಪ್ರವಾಸ

ಕೂಳೂರು: ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಶಿರಡಿ ಪ್ರವಾಸ ದಿನಾಂಕ 18/11/2018 ರಿಂದ ದಿನಾಂಕ 22/11/2018ರ ತನಕ ಏರ್ಪಡಿಸಲಾಗಿದ್ದು 45 ಮಂದಿ ಸದಸ್ಯರನ್ನೊಳಗೊಂಡ ತಂಡಕ್ಕೆ ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಅವರು ಚಾಲನೆ ನೀಡಿದರು. ದಿನಾಂಕ 18/11/2018 ರವಿವಾರ ರಾತ್ರಿ 9.45 ಕ್ಕೆ ಮಂಗಳೂರಿನಿಂದ ಹೊರಟು 19/11/18 ಸೋಮವಾರ ಸಂಜೆ 6 ಗಂಟೆಗೆ ಸರಿಯಾಗಿ ನಾಸಿಕ್ ತಲುಪಿದೆವು. ಅದೇ ದಿನ ರಾತ್ರಿ ಮೊದಲನೆಯದಾಗಿ ಬಿಲ್ಲವರ ಗುರುವಾದ ಗಿರ್ನಾರ್‍ದಲ್ಲಿರುವ ನಾರಾಯಣಗುರು ಸ್ವಾಮಿಯವರ ಮಂದಿರಕ್ಕೆ ಭೇಟಿ ನೀಡಿದೆವು. […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!