06-04-2026, 8:00 PM
ಕೊಲ್ಯ: “ನಿಮ್ಮ ಆರೋಗ್ಯ ನಿಮ್ಮ ಕಾಲು ಮತ್ತು ಕೈಗಳಲ್ಲಿ” ಎಂಬ ಧ್ಯೇಯವಾಕ್ಯದೊಂದಿಗೆ, ಯುವವಾಹಿನಿ (ರಿ) ಕೊಲ್ಯ ಘಟಕ ಮತ್ತು ಮಂಗಳೂರಿನ ಕಂಪಾನಿಯೋ ಶ್ರೀದೇವಿ ವೆಲ್ನೆಸ್ ಸೆಂಟರ್ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಮಾಹಿತಿ ಕಾರ್ಯಕ್ರಮವು ದಿನಾಂಕ 06-04-2026 ರಂದು ಕೊಲ್ಯದ ನಾರಾಯಣ ಗುರು ಸಭಾಭವನದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ) ಕೊಲ್ಯ, ಸೋಮೇಶ್ವರ ಇವರ ಸಹಕಾರದೊಂದಿಗೆ ನಡೆಯುತ್ತಿರುವ 15 ದಿನಗಳ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಭಾಗವಾಗಿ ಈ ಕಾರ್ಯಕ್ರಮವನ್ನು […]
Read More
29-03-2026, 10:00 AM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ, ಕಂಪಾನಿಯೋ ಶ್ರೀದೇವಿ ವೆಲ್ನೆಸ್ ಸೆಂಟರ್, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಹಾಗೂ ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ) ಕೊಲ್ಯ, ಸೋಮೇಶ್ವರ ಇವರ ಸಹಕಾರದೊಂದಿಗೆ 15 ದಿನಗಳ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನಾ ಸಮಾರಂಭವು ಕೊಲ್ಯದ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನೆರವೇರಿತು.ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಇದರ ಅಧ್ಯಕ್ಷರಾದ ಗೋಪಾಲ್ ಕೊಂಡಾಣ ಅವರು ಉದ್ಘಾಟಿಸಿ, ಇಂತಹ ಉಚಿತ ಆರೋಗ್ಯ ಶಿಬಿರಗಳ ಸದುಪಯೋಗವನ್ನು ಸಾರ್ವಜನಿಕರು […]
Read More
14-03-2026, 2:00 PM
ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ (ರಿ.) ಕೊಲ್ಯ ಘಟಕದ ಆತಿಥ್ಯದಲ್ಲಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ “ಸಖೀ […]
Read More
12-03-2026, 1:07 PM
ಮಂಗಳೂರು: ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ (ರಿ.) ಕೊಲ್ಯ ಘಟಕದ ಆತಿಥ್ಯದಲ್ಲಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ “ಸಖೀ ಸಂವಾದ – 2026” ಸಂವಾದ ಕಾರ್ಯಾಗಾರವು ಮಾರ್ಚ್ 14 ರಂದು ಬೆಳಿಗ್ಗೆ 9:30ರಿಂದ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಉದ್ಘಾಟನೆ ಮತ್ತು ಅತಿಥಿಗಳುದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ […]
Read More
28-02-2026, 9:00 PM
ಕೊಲ್ಯ : ತುಳುನಾಡಿನ ಪವಿತ್ರ ಧಾರ್ಮಿಕ ಕ್ಷೇತ್ರವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್ನಲ್ಲಿ ಜರುಗಿದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಕೊಲ್ಯ ಘಟಕದ ಸದಸ್ಯರು ಭಕ್ತಿಪೂರ್ವಕವಾಗಿ ಸ್ವಯಂ ಸೇವೆಯನ್ನು ಸಲ್ಲಿಸಿದರು.ಆದಿ ದೈವ ಧೂಮಾವತಿ, ಸಾಯನ ಬೈದ್ಯರ ಗುರುಪೀಠ ಹಾಗೂ ದೇಯಿ ಬೈದ್ಯೆತಿ-ಕೋಟಿ ಚೆನ್ನಯರ ಮೂಲಸ್ಥಾನವಾದ ಈ ಪವಿತ್ರ ಕ್ಷೇತ್ರದಲ್ಲಿ ಫೆಬ್ರವರಿ 28ರಂದು ಜರುಗಿದ ಕಾರ್ಯಕ್ರಮದಲ್ಲಿ ಘಟಕದ ಹೆಚ್ಚಿನ ಸಂಖ್ಯೆಯ ಸದಸ್ಯರು ಪಾಲ್ಗೊಂಡರು. ಬೆಳಿಗ್ಗೆಯಿಂದ ಸಂಜೆಯವರೆಗೆ ಕ್ಷೇತ್ರದ ಪ್ರಸಾದ ಪ್ಯಾಕಿಂಗ್ ಹಾಗೂ ದೇಯಿ ಬೈದ್ಯೆತಿ […]
Read More
25-02-2026, 7:00 PM
ಕೊಲ್ಯ: ದಿನಾಂಕ 25-02-2026ರಂದು TMG ಸುನಿಧಿ ಫೌಂಡೇಶನ್ ಟ್ರಸ್ಟ್, ಭಾರತೀಯ ವಿಕಾಸ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಕೊಲ್ಯ ಘಟಕದ ಸಹಕಾರದಲ್ಲಿ ಆರ್ಥಿಕ ಸಾಕ್ಷರತೆ, ಬ್ಯಾಂಕಿಂಗ್ ಸೌಲಭ್ಯಗಳು ಹಾಗೂ ಸೌರ ಶಕ್ತಿ ಆಧಾರಿತ ಜೀವನೋಪಾಯ ಯಂತ್ರಗಳ ಕುರಿತು ಮಾಹಿತಿ ಕಾರ್ಯಕ್ರಮವು ಬಿಲ್ಲವ ಸೇವಾ ಸಮಾಜ, ಕೊಲ್ಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೊಲ್ಯ ಘಟಕದ ಪ್ರಥಮ ಉಪಾಧ್ಯಕ್ಷರಾದ ಜೀವನ್ ಕೊಲ್ಯ ಮಾತನಾಡಿ, ಪ್ರತಿಯೊಬ್ಬ ನಾಗರಿಕರೂ ಹಣಕಾಸು ಸಾಕ್ಷರತೆ, ಬ್ಯಾಂಕಿಂಗ್ ಸೌಲಭ್ಯಗಳು, ಕೌಶಲ್ಯ […]
Read More
21-02-2026, 12:50 PM
ಕೊಲ್ಯ : ಬ್ರಹ್ಮಶ್ರೀ ನಾರಾಯಣಗುರುಗಳು ಮಂಗಳೂರಿನ ಕುದ್ರೋಳಿಯಲ್ಲಿ 1912 ಫೆಬ್ರವರಿ 21 ರಂದು ಶಿವಲಿಂಗ ಪ್ರತಿಷ್ಠಾಪಿಸಿದ ಐತಿಹಾಸಿಕ ದಿನದ ಪವಿತ್ರ ಸ್ಮರಣೆಗಾಗಿ ಹಮ್ಮಿಕೊಳ್ಳಲಾಗಿದ್ದ “ನಮ್ಮ ನಡಿಗೆ ಶ್ರೀ ಗುರುವಿನೆಡೆಗೆ” ಎಂಬ ಸಂಕಲ್ಪದ ಕುದ್ರೋಳಿ ತೀರ್ಥಾಟನೆ ಮೆರವಣಿಗೆಯಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ಸದಸ್ಯರು ಅತ್ಯಂತ ಭಕ್ತಿ ಮತ್ತು ಉತ್ಸಾಹದಿಂದ ಭಾಗವಹಿಸಿದರು. ಶ್ರೀ ಗುರುಗಳ ತತ್ವ ಮತ್ತು ಆದರ್ಶಗಳನ್ನು ಯುವ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ನಡೆದ ಈ ಮೆರವಣಿಗೆಯಲ್ಲಿ ಕೊಲ್ಯ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ […]
Read More
17-02-2026, 9:11 PM
ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ ಮಾರ್ಚ್ 14ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ವಿಶ್ವ ಮಹಿಳಾ ದಿನಾಚರಣೆಯ ವಿಶೇಷ ಕಾರ್ಯಕ್ರಮ “ಸಖೀ ಸಂವಾದ”ಕಾರ್ಯಾಗಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಐಎಎಸ್ . ಹಾಗೂ ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಾಜು ಕೆ KAS ಅವರನ್ನು ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು ಈ ಸಂದರ್ಭದಲ್ಲಿ ಯುವವಾಹಿನಿ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು, ಯುವಜನತೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ […]
Read More
13-02-2026, 8:24 PM
ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಮಾರ್ಚ್ 14ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ವಿಶ್ವ ಮಹಿಳಾ ದಿನಾಚರಣೆಯ ವಿಶೇಷ ಕಾರ್ಯಕ್ರಮ “ಸಖೀ ಸಂವಾದ”ಕಾರ್ಯಾಗಾರಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು, ಯುವಜನತೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಕೈಗೊಳ್ಳಲಾಗುತ್ತಿರುವ ಚಟುವಟಿಕೆಗಳ ಕುರಿತು ಕಮಿಷನರ್ ಅವರಿಗೆ ವಿವರಿಸಲಾಯಿತು. […]
Read More
06-02-2026, 9:00 PM
ಕೊಲ್ಯ : ದಿನಾಂಕ 03-02-2026ರಿಂದ 06-02-2026ರವರೆಗೆ ಉಮಾಪುರಿ ಕಾಪಿಕಾಡಿನ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಜರಗಿದ ಅಷ್ಟಬಂಧ ಬ್ರಹ್ಮಕಲಶೋತ್ಸವ ಮಹೋತ್ಸವದಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ಸದಸ್ಯರು ಶ್ರದ್ಧಾ–ಭಕ್ತಿಯಿಂದ ಸ್ವಯಂಸೇವೆಯಲ್ಲಿ ತೊಡಗಿ ಭಕ್ತರ ಸೇವೆಯಲ್ಲಿ ನಿರತರಾದರು. ಧಾರ್ಮಿಕ ಭಾವನೆ ಮತ್ತು ಸೇವಾ ಮನೋಭಾವದಿಂದ ದೇವಸ್ಥಾನದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಶ್ರೀದೇವಿಯ ಸಾನಿಧ್ಯದಲ್ಲಿ ಕೃತಾರ್ಥರಾದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ನಿತಿನ್ ಕರ್ಕೇರ ಅವರು ಸ್ವಯಂಸೇವೆಯಲ್ಲಿ ಭಾಗವಹಿಸಿದ ಎಲ್ಲಾ ಸದಸ್ಯರಿಗೆ ಅಭಿನಂದನೆ ಸಲ್ಲಿಸಿ, ಅವರ ಸಹಕಾರ ಮತ್ತು ಸಮರ್ಪಣಾ ಮನೋಭಾವಕ್ಕೆ […]
Read More