Yuvavahini

ಇತರೆ

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ಪದಗ್ರಹಣ ಸಮಾರಂಭವು 24-11-2024 ರಂದು ಘಟಕದ ಸಭಾಂಗಣದಲ್ಲಿ ನೆರವೇರಿತು. ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಪಟ್ಟಿಯನ್ನು ಚುನಾವಣಾಧಿಕಾರಿ ಆದ ಶ್ರೀ ಮಹಾಬಲ ಅಮೀನ್ವಾಚಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ಕೆ ಪೂಜಾರಿಯವರು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ದಯಾನಂದ ಕರ್ಕೇರಾ ಹಾಗೂತಂಡದವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ಹೆಚ್ ಹೊಳೆಯಪ್ಪ. ವಾಣಿಜ್ಯ ತೆರಿಗೆಗಳ ಉಪ ಆಯುಕ್ತರು, ಉಡುಪಿ, ಇವರು ಶುಭ ಹಾರೈಸಿದರು. ಬಿಲ್ಲವ ಸೇವಾ […]

Read More

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ ದೃಶ್ಯವಳಿ.

Read More

ಪದಗ್ರಹಣ ಸಮಾರಂಭ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಪದಗ್ರಹಣ ಕಾರ್ಯಕ್ರಮ ದಿ. 16-11-2024 ರಂದು ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು.  ಗುರು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಜಯಾನಂದ ಎಮ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಿಲ್ಲವ ಸಮಾಜದ ಪ್ರತಿಷ್ಟಿತ ಸಂಘಟನೆಯಾದ ಯುವವಾಹಿನಿ ಉತ್ತಮ ಸಮಾಜ ಮುಖಿ ಕಾರ್ಯಕ್ರಮಗಳನ್ನು ನಿರ್ವಹಿಸುತ್ತಿದ್ದು, ಮಹಿಳಾ ಘಟಕದ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದರು. ಶ್ರೀ ಬಪ್ಪನಾಡು ಕ್ಷೇತ್ರ ಮೂಲ್ಕಿಯ ಕಾರ್ಯನಿರ್ವಹಣಾ ಅಧಿಕಾರಿ ಶ್ವೇತಾ ಪಳ್ಳಿ ಮಾತನಾಡಿ, ನಮ್ಮ ಸಮಾಜದ ಹೆಚ್ಚು ಹೆಚ್ಚು […]

Read More

ತುಳುವೆರೆ ತುಳಸಿ ಪರ್ಬ

ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ಹೆಜಮಾಡಿ ಬಿಲ್ಲವ ಸಂಘದ ವಠಾರದಲ್ಲಿ ನವೆಂಬ‌ರ್ 13 ರಂದು ತುಳುವೆರೆ ತುಳಸಿ ಪರ್ಬ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷೆ ದೀಪಾ ದಿನೇಶ್ ವಹಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ (ರಿ ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಉದಯ ಅಮೀನ್ ಮಟ್ಟು, ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷರು ಮೋಹನ್ ದಾಸ್ ಹೆಜಮಾಡಿ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೆಸರರು ದಯಾನಂದ ಹೆಜಮಾಡಿ, […]

Read More

ಲೋಕದ ಅಭ್ಯುದಯಕ್ಕಾಗಿ ಕೊಡುಗೆ ನೀಡುವ ದೀಪಗಳಾಗೋಣ

ಮೂಡುಬಿದಿರೆ: ಹಣತೆಯು ತಾನು ಬೆಳಕು ಚೆಲ್ಲುವ ಜೊತೆಗೆ ಇತರ ಹಣತೆಗಳನ್ನೂ ಬೆಳಗಿಸಿ ಬೆಳಕನ್ನು ಆಚರಿಸುವ ಪ್ರಕ್ರಿಯೆಯಲ್ಲಿ ಜೀವನ ಸಾರ್ಥಕ್ಯ ಸಾರುತ್ತದೆ‌. ನಾವೂ ಲೋಕದ ಅಭ್ಯುದಯಕ್ಕಾಗಿ ಕೊಡುಗೆ ನೀಡುವ ದೀಪಗಳಾಗಬೇಕಾಗಿದೆ. ಗಂಧದಂತೆ ಸವೆಸಿಕೊಂಡು ತ್ಯಾಗಿಯಾಗಿ ಪರಿಮಳಿಸಬೇಕಾಗಿದೆ ಎಂದು ಎಸ್.ಎನ್.ಎಂ ಪಾಲಿಟೆಕ್ನಿಕ್ ಉಪನ್ಯಾಸಕ ಡಾ. ಎಸ್.ಪಿ.ಗುರುದಾಸ್ ಅಭಿಪ್ರಾಯಪಟ್ಟರು. ಸಮಾಜ ಮಂದಿರ ಸಭಾ (ರಿ) ಮೂಡುಬಿದಿರೆ ಮತ್ತು ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಇವರ ಜಂಟಿ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ 3ನೇ ವರ್ಷದ ಬೆದ್ರ ಗೂಡುದೀಪ ಮತ್ತು ರಂಗೋಲಿ […]

Read More

ಯುವವಾಹಿನಿ (ರಿ) ಕಡಬ ಘಟಕ : ಗುರುಸ್ಪೂರ್ತಿ, ಭಜನೆ, ಸಾಧಕರಿಗೆ ಸನ್ಮಾನ

ಕಡಬ : ಯುವವಾಹಿನಿ (ರಿ ) ಕಡಬ ಘಟಕದ ವತಿಯಿಂದ ದಿನಾಂಕ 09-11-2024 ನೇ ಶನಿವಾರ ಸಂಜೆ 5 ರಿಂದ ಉಮೇಶ್ ಪೂಜಾರಿ ಬುಡೆಂಗಿ ಬಳ್ಪ ಮನೆಯಲ್ಲಿ ಗುರು ಸ್ಫೂರ್ತಿ, ಭಜನೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ನಾಟಿ ವೈದ್ಯರಾದ ಶ್ರೀಮತಿ ಬಾಲಕ್ಕ ಕೊರಪ್ಪಣೆ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರು ಸುಂದರ ಪೂಜಾರಿ ಅಂಗಣ ವಹಿಸಿದ್ದರು. ವೇದಿಕೆಯಲ್ಲಿ ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಶಿವಪ್ರಸಾದ್ ನೂಚಿಲ, ಗಣೇಶ್ ನಡವಾಲ್, […]

Read More

ವಿಜಿಲೆನ್ಸ್ ಜಾಗೃತಿ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ವಿಜಿಲೆನ್ಸ್ ಜಾಗೃತಿ ದಿನದ ಅಂಗವಾಗಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 28-10-2024 ರಂದು ಸೋಮವಾರ ಮಧ್ಯಾಹ್ನ 2.00 ಗಂಟೆಗೆ ಸ.ಪ.ಪೂ. ಕಾಲೇಜು ಉದ್ಯಾವರದಲ್ಲಿ ಸೈಬರ್ ಕ್ರೈಂ ಮತ್ತು ಲೋಕಾಯುಕ್ತ ಕಾಯಿದೆ ಮಾಹಿತಿ ಕಾರ್ಯಾಗಾರವು ನಡೆಯಿತು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮೂಕಾಂಬಿಕಾ ಎಲ್ಲರನ್ನೂ ಸ್ವಾಗತಿಸಿದರು. ಘಟಕದ ಅಧ್ಯಕ್ಷೆ ಶ್ರೀಮತಿ ಅಮಿತಾಂಜಲಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವವಾಹಿನಿ (ರಿ) […]

Read More

ಮಂಗಳೂರು ದಸರಾದಲ್ಲಿ ಮನಸೂರೆಗೊಂಡ ಯುವವಾಹಿನಿಯ ದಸರಾ ಡೆನ್ನಾನ

ಮಂಗಳೂರು : ಜಗದ್ವಿಖ್ಯಾತ ಮಂಗಳೂರು ದಸರಾ ಮಹೋತ್ಸವದಲ್ಲಿ ಯುವವಾಹಿನಿಯ ವಿವಿಧ ಘಟಕಗಳು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಸಂತೋಷಿ ಕಲಾ ಮಂಟಪದಲ್ಲಿ ನೀಡಿದ ಸಾಂಸ್ಕೃತಿಕ ಕಾರ್ಯಕ್ರಮ ದಸರಾ ಡೆನ್ನಾನ ಪ್ರೇಕ್ಷಕರ ಮನಸೂರೆಗೊಂಡಿತು. ಬಂಟ್ವಾಳ, ಮೂಡಬಿದ್ರೆ, ಮಂಗಳೂರು, ಕೊಲ್ಯ, ಸುರತ್ಕಲ್, ಕೂಳೂರು, ಮತ್ತು ಕಟಪಾಡಿ ಘಟಕಗಳ ಸದಸ್ಯ ಕಲಾವಿದರು ಪ್ರೇಕ್ಷಕರಿಗೆ ಕಲಾ ರಸದೌತಣ ಉಣಬಡಿಸಿದರು. ಯುವವಾಹಿನಿ ಕಟಪಾಡಿ ಘಟಕದಿಂದ “ಯಾ ದೇವಿ ಸರ್ವ ಭೂತೇಷು” ನವದುರ್ಗೆಯರ ಕಥಾಮೃತ ಪ್ರದರ್ಶನ ನಡೆಯಿತು ಯುವವಾಹಿನಿ ಉಡುಪಿ ಘಟಕದ ಸಚೇಂದ್ರ ಅಂಬಾಗಿಲು ಹಾಗೂ ಯುವವಾಹಿನಿ […]

Read More

ಸಂಘಟನೆಯಿಂದ ಸಾಮಾಜಿಕ ಬಲವರ್ಧನೆ ಸಾಧ್ಯವಿದ್ದು, ಸಂಘಟನೆಯೊಂದು ಸಮಾಜಮುಖಿಯಾದ ತನ್ನ ಚಿಂತನೆಗಳಲ್ಲಿ ರಚನಾತ್ಮಕತೆಯನ್ನು ಅಳವಡಿಸಿಕೊಂಡಾಗ ಅದು ಸರ್ವಮಾನ್ಯತೆಯನ್ನು ಪಡೆದುಕೊಳ್ಳುತ್ತದೆ : ಉದ್ಯಮಿ ಲೋಕೇಶ್ ಪೂಜಾರಿ

ಮಂಗಳೂರು : ಯುವವಾಹಿನಿ (ರಿ) ಕಂಕನಾಡಿ ಘಟಕದ ಸಹಯೋಗದಲ್ಲಿ ದಿನಾಂಕ 08-09-2024 ಗರೋಡಿ ಸಮೃದ್ಧಿ ಸಭಾಭವನದಲ್ಲಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿದ ಲೋಕೇಶ್ ಪೂಜಾರಿ, ಸಂಘಟನೆಗಳ ಸಮಾಜಮುಖಿ ಕಾರ್ಯಗಳು ಸರ್ವರನ್ನೂ ಒಳಗೊಳ್ಳುವ ಒಲವು ಹೊಂದಿರಬೇಕು. ಈ ನಿಟ್ಟಿನಲ್ಲಿ ಯುವವಾಹಿನಿ ಕಂಕನಾಡಿ ಘಟಕವು ಹಮ್ಮಿಕೊಂಡಿರುವ ಸಮಾಜಮುಖಿ ಹತ್ತು ಹಲವು ಕಾರ್ಯಕ್ರಮವು ಸರ್ವಸ್ಪರ್ಶಿ ಉದ್ದೇಶವನ್ನು ಹೊಂದಿದ್ದು, ನಾರಾಯಣ ಗುರುಗಳ ತತ್ವಾದರ್ಶಗಳಿಗೆ ಪೂರಕವಾಗಿವೆ ಎಂದು ನುಡಿದರು. ಯುವವಾಹಿನಿ (ರಿ) ಕಂಕನಾಡಿ ಘಟಕ ಅಧ್ಯಕ್ಷ ಲೋಕೇಶ್ ಅಮೀನ್ ಅಧ್ಯಕ್ಷತೆ ವಹಿಸಿ, […]

Read More

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥವನ್ನು ದಿನಾಂಕ‌ 24-08-2024ನೇ ಶನಿವಾರ ಕುದ್ರೋಳಿ ಶ್ರೀ ಗ್ರಂಥ ಗೋಕರ್ಣನಾಥ ಕ್ಷೇತ್ರದಲ್ಲಿ ಲೋಕಾರ್ಪಣೆ ಮಾಡಲಾಯಿತು. ಜಗತ್ತಿಗೆ ಮಾನವೀಯತೆಯ ಸಂದೇಶ ನೀಡಿದವರಲ್ಲಿ ಬುದ್ಧ ಮತ್ತು ಬಸವಣ್ಣರ ಬಳಿಕದ ಸ್ಥಾನ ಬ್ರಹ್ಮಶ್ರೀ ನಾರಾಯಣಗುರುಗಳಿಗೆ ಸಲ್ಲುತ್ತದೆ ಎಂದು ಗ್ರಂಥ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!