Yuvavahini

ಇತರೆ

ಮಹಾಸಭೆ , ಪ್ರತಿಜ್ಞಾವಿಧಿ ಭೋಧನೆ

ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕದ 2017-18 ನೇ ಸಾಲಿನ ವಾರ್ಷಿಕ ಮಹಾಸಭೆಯು ಪುತ್ತೂರು ಬಿಲ್ಲವ ಸಂಘದ ಸಭಾಂಗಣದಲ್ಲಿ ದಿನಾಂಕ‌ 17.06.2018 ನೇ ಆದಿತ್ಯವಾರ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪುತ್ತೂರು ಘಟಕದ ಅಧ್ಯಕ್ಷ ಉದಯ ಕುಮಾರ್ ಕೋಲಾಡಿ ಮಾತನಾಡಿ ಕಳೆದ ಒಂದು ವರ್ಷದಲ್ಲಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಕಾರ್ಯದರ್ಶಿ ಸತ್ಯಜಿತ್ ಅಮ್ಮುಂಜೆ ವಾರ್ಷಿಕ ವರದಿ ಹಾಗೂ ಕೋಶಾಧಿಕಾರಿ ವಾರ್ಷಿಕ ಲೆಕ್ಕಪತ್ರ ಮಂಡಿಸಿ ಅನುಮೋದನೆ ಪಡೆಯಲಾಯಿತು. ಚುನಾವಣಾ ಅಧಿಕಾರಿ ಹಾಗೂ ನಿಕಟಪೂರ್ವ ಅಧ್ಯಕ್ಷ […]

Read More

ಯುವವಾಹಿನಿ ಬಂಟ್ವಾಳ ಘಟಕದ ಸಾಧನೆ ಶ್ಲಾಘನೀಯ : ಮರೋಳಿ

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಸಾಧನೆ ಶ್ಲಾಘನೀಯವಾದುದು, ಕಳೆದ 29 ವರ್ಷಗಳಿಂದ ನಿರಂತರ ಸಮಾಜಮುಖಿ ‌ಕಾರ್ಯದಲ್ಲಿ‌ ತೊಡಗಿಸಿಕೊಂಡ ಯುವವಾಹಿನಿ ಬಂಟ್ವಾಳ ಘಟಕವು ಕೇಂದ್ರ ಸಮಿತಿಯಲ್ಲಿ ವಿಶೇಷ ಗೌರವಕ್ಕೆ ಪಾತ್ರವಾಗಿದೆ, ಯುವಬಿಲ್ಲವ ಸಮಾವೇಶ, ಡೆನ್ನಾನ ಡೆನ್ನನ ದಂತಹ ದಾಖಲೆಯ ಕಾರ್ಯಕ್ರಮದ ಮೂಲಕ ಬಂಟ್ವಾಳ ಯುವವಾಹಿನಿ ಜನಮಾನಸದಲ್ಲಿ ನೆಲೆನಿಂತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಮರೋಳಿ‌ ತಿಳಿಸಿದರು. ಅವರು ದಿನಾಂಕ‌ 10.06.2018 ರಂದು ಬಿ.ಸಿ.ರೋಡ್ ಯುವವಾಹಿನಿ ಭವನದಲ್ಲಿ ಯುವವಾಹಿನಿ (ರಿ) ಬಂಟ್ವಾಳ ಘಟಕದ 2018-19 […]

Read More

ಯುವ ಸಮುದಾಯಕ್ಕೆ ಯುವವಾಹಿನಿಯೇ ದಾರೀ ದೀಪ : ಸುಮಲತಾ ಸುವರ್ಣ

ಮೂಲ್ಕಿ: ಇಂದು ಯುವ ಸಮುದಾಯವು ಹಾದಿ ತಪ್ಪುತ್ತಿದ್ದಾರೆ ಎಂದು ಹೇಳುವ ಬದಲು ಅವರನ್ನು ಯುವವಾಹಿನಿಯಂತಹ ಸಮಾಜ ಮುಖಿ ಚಿಂತನೆಯ ಸಂಘಟನೆಯಲ್ಲಿ ತೊಡಗಿಸಿಕೊಂಡು ಉತ್ತಮ ಸಮಾಜವನ್ನು ಸೃಷ್ಟಿಸುವಲ್ಲಿ ಪ್ರಯತ್ನ ನಡೆಸಬೇಕು. ಹೆಣ್ಣು ಮಕ್ಕಳು ವಿದ್ಯೆಯ ಮೂಲಕ ಸದೃಢರಾಗುತ್ತಿರುವ ಇಂದಿನ ದಿನದಲ್ಲಿ ಯುವಕರು ಯಾಕಾಗಿ ಹಿನ್ನೆಡೆಯಾಗಿದ್ದಾರೆ ಎಂದು ಹೆತ್ತವರು ಚಿಂತಿಸಬೇಕಾಗಿದೆ ಎಂದು ಮಂಗಳೂರು ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ ಹೇಳಿದರು. ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಶನಿವಾರ ನಡೆದ ಮೂಲ್ಕಿ ಯುವವಾಹಿನಿ ಘಟಕದ […]

Read More

ಹಿರಿಯರ ಸತತ ಪ್ರಯತ್ನ, ದೂರದೃಷ್ಟಿ ಯುವವಾಹಿನಿಯ ಯಶಸ್ಸು : ಯಶವಂತ ಪೂಜಾರಿ

ಉಪ್ಪಿನಂಗಡಿ : ಸ್ವಸ್ಥ ಸಮಾಜದ ಕನಸನ್ನು ಕಂಡ ಯುವವಾಹಿನಿ ಯುವಕರು ಕಳೆದ 30 ವರ್ಷಗಳಿಂದ ಅವರದೇ ಆದ ವೈಯಕ್ತಿಕ ಬದುಕನ್ನು ಪಕ್ಕಕ್ಕಿಟ್ಟು ಸಾಮೂಹಿಕ ಬದುಕಿಗೆ ಪಣತೊಟ್ಡು ಹಬ್ಬದ ವಾತಾವರಣ ಒಂದು ಮನೆಗೆ ಸೀಮಿತವಾಗಿರದೆ ಇಡೀ ಸಮಾಜವೇ ಹಬ್ಬದ ವಾತಾವರಣದಿಂದ ಕೂಡಿರಬೇಕು ಎಂಬ ಯುವವಾಹಿನಿ ಯುವಕರ ಸತತ ಪರಿಶ್ರಮದ ಫಲವೇ ಯುವವಾಹಿನಿಯ ಯಶಸ್ಸು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 14.06.2018 ನೇ ಗುರುವಾರ ಇಂದಿರಾ ವೆಂಕಟೇಶ್ ಸಭಾಂಗಣ, ಹಿರಿಯ ಪ್ರಾಥಮಿಕ […]

Read More

ಯುವವಾಹಿನಿಯ 31ನೇ ಘಟಕ ಉದ್ಘಾಟನೆ

ಕಡಬ: ಯುವ ಜನತೆ ಸ್ವಾಭಿಮಾನಿ ಸ್ವಾವಲಂಭಿ ಬದುಕಿನತ್ತ ಹೆಜ್ಜೆ ಇಟ್ಟು ಎಲ್ಲಾ ಕ್ಷೇತ್ರಗಳಲ್ಲೂ ಸಮಾಜದ ಮುಖ್ಯ ವಾಹಿನಿಗೆ ಬಂದು ಸದೃಡ ಸಮಾಜ ನಿರ್ಮಾಣಕ್ಕೆ ಕಾರಣೀಭೂತರಾಗಿರಬೇಕು ಎಂದು ಯುವವಾಹಿನಿ(ರಿ} ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಯಶವಂತ ಪೂಜಾರಿಯವರು ಹೇಳಿದರು. ಅವರು ದಿನಾಂಕ 10.06.2018 ರಂದು ಕಡಬ ದುರ್ಗಾಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆದ ಯುವವಾಹಿನಿ ಸಂಸ್ಥೆಯ 31ನೇ ಘಟಕ ಯುವವಾಹಿನಿ{ರಿ) ಕಡಬ ಘಟಕದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯುವವಾಹಿನಿ ಘಟಕ ಸ್ಥಾಪಿಸುವ ಮೂಲಕ ಬಿಲ್ಲವ ಸಮುದಾಯದ […]

Read More

ಯುವವಾಹಿನಿ(ರಿ) ಕುಪ್ಪೆಪದವು ಘಟಕದ ದೇಗುಲ ದರ್ಶನ

ದಿನಾಂಕ 10 .06.2018 ರಂದು ಘಟಕದ ವತಿಯಿಂದ ದೇಗುಲ ದರ್ಶನಕ್ಕಾಗಿ ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಕುಪ್ಪೆಪದವಿನಿಂದ ಹೊರಟೆವು ಪ್ರಥಮವಾಗಿ ನಮ್ಮ ಪ್ರಯಾಣ ಆನೆಗುಡ್ಡೆಯತ್ತ ಸಾಗಿ.ದೇವರ ದರ್ಶನ ಪಡೆದು.ಅಲ್ಲಿಂದ ಪ್ರಯಾಣ ಕಮಲಶಿಲೆಯತ್ತ ಸಾಗಿ ಬ್ರಾಹ್ಮಿ ದುರ್ಗಾಪರಮೇಶ್ವರಿ ಅಮ್ಮನವರ ಮಹಾಪೂಜೆ ದರ್ಶನ ಪಡೆದು .ಮಹಾಪ್ರಸಾದವಾದ ಅನ್ನಪ್ರಸಾದವನ್ನು ಸ್ವೀಕರಿಸಿದ ನಂತರ.ಪ್ರಯಾಣವು ಮಂದಾರ್ತಿ ಕ್ಷೇತ್ರಕ್ಕೆ ಸಾಗಿ .ಅಲ್ಲಿ ದೇವರ ದರ್ಶನ ಪಡೆದನಂತರ, ಪಯಣವು ಮಲ್ಪೆ ಕಡಲತೀರಕ್ಕೆ ಬಂದು ಅಲ್ಲಿಯ ಕಡಲತೆರೆಯ ಅಬ್ಬರದ ಸೊಬಗನ್ನು ನೋಡಿ.ಕುಪ್ಪಳಿಸಿದ ನಂತರ. ಪಾಯಣವು ಸ್ವಗ್ರಹದತ್ತ ಸಾಗಿ ಕೊನೆಗೊಂಡಿತು..ಈ […]

Read More

ಯುವವಾಹಿನಿ ಎಂಬುದು ದೇಗುಲ : ಜಯಾನಂದ

ಉಡುಪಿ : ಸಾಮೂಹಿಕ ಪ್ರಯತ್ನದಿಂದ ಮಾತ್ರ ಮಾದರಿ ಸಂಘಟನೆ ನಿರ್ಮಾಣ ಸಾಧ್ಯ, ಹಾಗೂ ಯುವವಾಹಿನಿ ಎಂಬ ದೇವಾಲಯದಲ್ಲಿ ಅಧ್ಯಕ್ಷರು ಅರ್ಚಕರಾಗಿ ಸದಸ್ಯರು ಭಕ್ತಾದಿಗಳೆಂಬ ಪರಿಕಲ್ಪನೆಯಲ್ಲಿ ಯುವವಾಹಿನಿ ಸಾಗುತ್ತಿರುವುದು ಶ್ಲಾಘನೀಯ ಎಂದು ಮೆಸ್ಕಾಮ್ ಕಾರ್ಯಪಾಲಕ‌ ಇಂಜಿನಿಯರ್ ಜಯಾನಂದ ಎಮ್ ತಿಳಿಸಿದರು ಅವರು ದಿನಾಂಕ 10.06.2018 ರಂದು ಉದ್ಯಾವರ ಬಲಾಯಿಪಾದೆ ಯುವವಾಹಿನಿ ಸಭಾಭವನದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ 2018-19 ನೇ ಸಾಲಿನ‌ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ನಿಕಟಪೂರ್ವ ಅಧ್ಯಕ್ಷ ಗಣೇಶ್ ಕುಮಾರ್ […]

Read More

ಯುವವಾಹಿನಿಯಿಂದ ಯುವಜನತೆಗೆ ಜಾಗೃತಿ : ರಮೇಶ್ ಅಂಚನ್

ಪಡುಬಿದ್ರಿ : ಸಮಾಜದಲ್ಲಿ ಯುವಜನಾಂಗವು ದಾರಿ ತಪ್ಪುತ್ತಿರುವ ಸಂದರ್ಭದಲ್ಲಿ ಸಂಘಟನೆಗಳ ಮೂಲಕ ಜಾಗೃತಿ ಮೂಡಿಸುವುದು ಅನಿವಾರ್ಯ. ಹಲವಾರು ಸಮಸ್ಯೆಗಳ ನಿವಾರಣೆಗೆ ಸಂಘಟನೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಬಿಲ್ಲವರ ಯೂನಿಯನ್, ಕುದ್ರೊಟ್ಟು, ಬ್ರಹ್ಮ ಬೈದರ್ಕಳ ಗರಡಿ ಎರ್ಮಾಳ್ ಬಡಾದ ಕಾರ್ಯದರ್ಶಿ ರಮೇಶ್ ಅಂಚನ್ ತಿಳಿಸಿದರು.   ಅವರು ಪಡುಬಿದ್ರಿ ಬಿಲ್ಲವ ಸಂಘದ ಸಭಾ ಭವನದಲ್ಲಿ ಜರಗಿದ ಯುವವಾಹಿನಿ ಪಡುಬಿದ್ರಿ ಘಟಕದ 2018 ನೇ ಸಾಲಿನ ಪದಗ್ರಹಣದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಜಯಂತ ನಡುಬೈಲು […]

Read More

ಮಾನವೀಯ ಮೌಲ್ಯಗಳ ಪ್ರೇರಕ ಶಕ್ತಿ ಯುವವಾಹಿನಿ : ನರೇಶ್

ಹೆಜಮಾಡಿ : ವಿಜ್ಞಾನ ಮುಂದುವರಿದಂತೆ ಮಾನವೀಯ ಮೌಲ್ಯಗಳು ವ್ಯವಹಾರವಾಗಿ ಬದಲಾಗುತ್ತಿದೆ, ಪ್ರೀತಿ, ವಿಶ್ವಾಸ , ನಂಬಿಕೆ, ಗೌರವ, ಸ್ನೇಹ ಇಲ್ಲದಂತಾಗಿದೆ, ಈ ನಿಟ್ಟಿನಲ್ಲಿ ಯುವವಾಹಿನಿ ಮಾನವೀಯ ಮೌಲ್ಯಗಳ ಪ್ರೇರಕ ಶಕ್ತಿಯಾಗಿ ಹೊರಹೊಮ್ಮಿದೆ ಎಂದು ಯುವವಾಹಿನಿ ಕೆಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು ತಿಳಿಸಿದರು. ದಿನಾಂಕ‌10.06.2018 ರಂದು ಯುವವಾಹಿನಿ (ರಿ) ಹೆಜಮಾಡಿ ಘಟಕದ 2018-19 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರತಿಜ್ಞಾವಿಧಿ ಭೋಧಿಸಿ ಮಾತನಾಡಿದರು. ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷ ಮಹೇಂದ್ರ ಸಾಲ್ಯಾನ್ ಸಮಾರಂಭ […]

Read More

ಯುವವಾಹಿನಿ ಸುಳ್ಯ ಘಟಕದ ಪದಗ್ರಹಣ

ಸುಳ್ಯ: ಯುವವಾಹಿನಿ ಸುಳ್ಯ ಘಟಕದ ಪದಗ್ರಹಣ ಸಮಾರಂಭ ಜೂ.9 ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಯುವಸದನದಲ್ಲಿ ನಡೆಯಿತು.  ಸುಳ್ಯ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಎನ್.ಎಸ್.ಡಿ ವಿಠಲ್‍ದಾಸ್ ಬೆಳ್ಳಾರೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಜಯಂತ ನಡುಬೈಲು ನೂತನ ಪದಾಧಿಕಾರಿಗಳಿಗೆ ಪದಪ್ರದಾನ ನೆರವೇರಿಸಿದರು. ಚಂದ್ರಶೇಖರ್ ಹೈದಂಗೂರು ನೇತೃತ್ವದ ನೂತನ ತಂಡ ಪ್ರತಿಜ್ನಾವಿಧಿ ಸ್ವೀಕರಿಸಿದರು . ಯುವವಾಹಿನಿ ಸುಳ್ಯ ಘಟಕದ ಅಧ್ಯಕ್ಷ ಶಿವಪ್ರಸಾದ್ ಕೆ.ವಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಮಿತಿಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!