24-01-2026, 10:00 PM
ಬಜಪೆ : ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ 11ನೇ ವರ್ಷದ ಅಂಗವಾಗಿ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೆ ನೆರವಾಗುವ ಉದ್ದೇಶದಿಂದ ಸ್ಥಾಪಿಸಲಾದ ‘ವಿದ್ಯಾನಿಧಿ’ಯನ್ನು ಬಲವರ್ಧನೆಗೊಳಿಸುವ ಸಲುವಾಗಿ ದಿನಾಂಕ 24/01/2026 ರಂದು ಶನಿವಾರ ಬಜಪೆ ಕೇಂದ್ರ ಮೈದಾನದಲ್ಲಿ ಪ್ರಪ್ರಥಮ ಬಾರಿಗೆ ತುಳು ಪೌರಾಣಿಕ ಸಿನಿ ನಾಟಕ ‘ಪೊರಿಪುದಪ್ಪೆ ಜಲದುರ್ಗೆ’ ಪ್ರದರ್ಶನವನ್ನು ಹಮ್ಮಿಕೊಳ್ಳಲಾಯಿತು. ಬೆನಕ ಆರ್ಟ್ಸ್ ಕುಡ್ಲ ಕಲಾವಿದರಿಂದ ನಡೆದ ಈ ನಾಟಕಾಭಿನಯ ಅಭೂತಪೂರ್ವ ಯಶಸ್ಸು ಕಂಡು, ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರೇಕ್ಷಕರು ಹಾಗೂ ಕಲಾಭಿಮಾನಿಗಳಿಂದ ಅಪಾರ […]
Read More
24-01-2026, 1:00 PM
ಮೂಲ್ಕಿ : ಯುವವಾಹಿನಿ (ರಿ.) ಮೂಲ್ಕಿ ಘಟಕ ಹಾಗೂ ಶ್ರೀ ನಾರಾಯಣಗುರು ಸಂಯುಕ್ತ ಪದವಿ ಪೂರ್ವ ಕಾಲೇಜು, ಮೂಲ್ಕಿ ಇವರ ಸಹಯೋಗದಲ್ಲಿ ದಿನಾಂಕ 24.01.2026 ರಂದು ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ ಶೈಕ್ಷಣಿಕ ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಯಿತು. ರಾಷ್ಟ್ರೀಯ ತರಬೇತುದಾರರಾದ ಜೆ.ಸಿ. ರಾಜೇಂದ್ರ ಭಟ್ ಅವರು ಶಿಬಿರ ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಶಾಲಾ ಸಂಚಾಲಕರಾದ ಹರೀಂದ್ರ ಸುವರ್ಣ ಅವರು ಉದ್ಘಾಟಿಸಿದರು. ಯುವವಾಹಿನಿ ಮೂಲ್ಕಿ ಘಟಕದ ಅಧ್ಯಕ್ಷ ವಿನಯ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ […]
Read More
23-01-2026, 4:58 PM
ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಸಾರಥ್ಯದಲ್ಲಿ 2026ರ ಜನವರಿ 31 ಹಾಗೂ ಫೆಬ್ರವರಿ 01ರಂದು ಹೆಜಮಾಡಿಯ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಬಿಲ್ಲವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟ ಆಯೋಜಿಸಲ್ಪಟ್ಟಿದ್ದು, ಇದರ ಅಂಗವಾಗಿ ಟೈಟಲ್ ಸಾಂಗ್ ಬಿಡುಗಡೆ ಕಾರ್ಯಕ್ರಮ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಗುರುದೇವರ ಸ್ಮರಣೆಯೊಂದಿಗೆ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯುವವಾಹಿನಿ (ರಿ.) ಅಡ್ವೆ ಘಟಕದ ಅಧ್ಯಕ್ಷರಾದ ಪ್ರಸಾದ್ ಪಲಿಮಾರು ಅವರು ಮಾತನಾಡಿ, ಯುವವಾಹಿನಿ (ರಿ.) […]
Read More
19-01-2026, 4:00 PM
ಪಣಂಬೂರು–ಕುಳಾಯಿ : ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ ದಿನಾಂಕ 19-01-2026 ಸೋಮವಾರ ಮಧ್ಯಾಹ್ನ 2.30ರಿಂದ 4.00 ಗಂಟೆಯವರೆಗೆ ಬೈಕಂಪಾಡಿಯ ಭಟ್ಟರಾಂಡ್ ರಶೆಲ್ ಶಾಲೆಯಲ್ಲಿ ಅಲ್ಲಿನ ಮಕ್ಕಳಿಗಾಗಿ ವ್ಯಸನ ಮುಕ್ತ ಜೀವನ ಮತ್ತು ಪರಿಸರ ಸ್ವಚ್ಛತೆ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪಣಂಬೂರು ಠಾಣಾ ಅಧಿಕಾರಿ ಜ್ಞಾನ ಶೇಖರ್ ಮಾತನಾಡಿ, ಮಾದಕ ವ್ಯಸನಗಳಿಂದ ಯುವಕರು ಹೇಗೆ ದಾರಿ ತಪ್ಪುತ್ತಿದ್ದಾರೆ, ಅದರ ದುಷ್ಪರಿಣಾಮಗಳು ಏನೆಂಬುದನ್ನು ಮಕ್ಕಳಿಗೆ ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ವಿವರಿಸಿದರು. […]
Read More
19-01-2026, 1:00 PM
ವೇಣೂರು : ಸಂಸ್ಥೆ ಎಂಬುದು ಕೇವಲ ಸಂಘಟನೆಯಷ್ಟೇ ಅಲ್ಲ, ಅದು ಸಮಾಜವನ್ನು ರೂಪಿಸುವ ಶಕ್ತಿ ಕೇಂದ್ರವಾಗಿರುತ್ತದೆ. ಯುವವಾಹಿನಿಯ ಪ್ರತಿಯೊಬ್ಬ ಸದಸ್ಯನಲ್ಲೂ ನಾಯಕತ್ವದ ಗುಣ ಅಡಗಿದೆ. ಸೇವೆ, ಶಿಸ್ತು ಮತ್ತು ಸಮರ್ಪಣೆಯ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಯುವವಾಹಿನಿ ಶಕ್ತಿಯಾಗಿ ಹೊರಹೊಮ್ಮಿದೆ. ಒಟ್ಟಾಗಿ ಚಿಂತಿಸಿ, ಒಟ್ಟಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಸಂಸ್ಥೆಯ ಗುರಿ ಸಾಕಾರವಾಗುತ್ತದೆ. ಇಂದಿನ ನಿಮ್ಮ ಸೇವೆಯೇ ನಾಳೆಯ ಶ್ರೇಷ್ಠ ಸಮಾಜದ ಅಡಿಗಲ್ಲು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಡಿ […]
Read More
18-01-2026, 11:34 PM
ಶಕ್ತಿನಗರ : ಯುವವಾಹಿನಿ (ರಿ) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 18.01.2026ರಂದು ಮುಂಜಾನೆ ಪ್ರಾರ್ಥನೆಯೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ನಮಸ್ಕರಿಸಿ ಒಂದು ದಿನದ ಕಿರುಪ್ರವಾಸವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ಘಟಕದ ಅಧ್ಯಕ್ಷರಾದ ಸುಜಾತ ನವೀನ್, ಕಾರ್ಯದರ್ಶಿಗಳಾದ ಚರಣ್ ರಾಜ್ ಹಾಗೂ ಮಾಜಿ ಅಧ್ಯಕ್ಷರಾದ ಭಾರತಿ ಗಣೇಶ್ ಅವರು ಪ್ರವಾಸದ ಮುಂದಾಳತ್ವವನ್ನು ವಹಿಸಿದ್ದರು. ಸುಮಾರು 40 ಮಂದಿ ಸದಸ್ಯರು ಭಾಗವಹಿಸಿದ ಈ ಕ್ಷೇತ್ರ ದರ್ಶನದಲ್ಲಿ ಮೊದಲಿಗೆ ಶ್ರೀ ಕ್ಷೇತ್ರ ಕಲಶೇಶ್ವರ ದೇವಾಲಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಲಾಯಿತು. ನಂತರ ಶ್ರೀ […]
Read More