Yuvavahini

ಇತರೆ

ಶಿವಗಿರಿ ಯಾತ್ರೆ

  ಯುವವಾಹಿನಿ (ರಿ) ಪಣಂಬೂರು -ಕುಳಾಯಿ ಘಟಕದ ವತಿಯಿಂದ ಅಕ್ಟೋಬರ್ 2ರಿಂದ 5ರ ತನಕ  ಬ್ರಹ್ಮ ಶ್ರೀ ನಾರಾಯಣ ಗುರುಗಳ ಜನ್ಮ ಸ್ಥಳವಾದ ಕೇರಳದ ಶಿವಗಿರಿಗೆ  50   ಸದಸ್ಯರ ತಂಡ ದೊಂದಿಗೆ ಯಾತ್ರೆಯನ್ನು ಹಮ್ಮಿ ಕೊಂಡು  ಯಶಸ್ವಿಯಾಗಿದೆ

Read More

ಶ್ರೀ ಚಾಮುಂಡಿ ರಾಹು ಗುಳಿಗ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ

ಶ್ರೀ ಚಾಮುಂಡಿ ರಾಹು ಗುಳಿಗ ದೇವಸ್ಥಾನದಲ್ಲಿ ನಮ್ಮ ಯುವವಾಹಿನಿ(ರಿ)ಶಕ್ತಿನಗರ ಘಟಕದ ವತಿಯಿಂದ ಭಜನಾ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು ,ಒಂದು ಘಂಟೆಗಳ ಸುಶ್ರಾವ್ಯ ಗಾಯನದೊಂದಿಗೆ ಶ್ರೀ ಯಶವ0ತ ಕರ್ಕೇರ ಎಲ್ಲಾರ ಮನ ಗೆದ್ದರು ಭಜನೆಯಲ್ಲಿ ಶ್ರೀನಿವಾಸ ಪೂಜಾರಿ, ಜಯರಾಮ ಪೂಜಾರಿ , ಲಕ್ಷ್ಮೀಕಾಂತ್, ಮಾರ್ರಪ್ಪ ಪೂಜಾರಿ, ಭವಾನಿಶಂಕರ, ಭವ್ಯಕುಮಾರ್, ಯೋಗೀಶ್ ಸುವರ್ಣ, ರೋಹಿಣಿ, ರಾಜೀವಿ, ಸುರೇಖಾ, ಶಂಕರ್ ಪೂಜಾರಿ, ಅನನ್ಯ ಮುಂತಾದ ಹಲವೂ ಸದಸ್ಯರು ಪಾಲ್ಗೊಂಡು ಕಾರ್ಯಕ್ರಮ ಚಂದಗಾಣಿಸಿದರು..

Read More

ಯಶಸ್ವಿ ಉದ್ಯಮಕ್ಕೆ ಚೇತರಿಕಾ-2019

ದಿನಾಂಕ 29.09.2019 ರಂದು ಯುವವಾಹಿನಿ(ರಿ) ಮಂಗಳೂರು ಘಟಕ ಮತ್ತು ಕಾರ್ಕಳ ಘಟಕ ಇದರ ಜಂಟಿ ಆಶ್ರಯದಲ್ಲಿ ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರು, ವ್ಯಾಪಾರಸ್ಥರು, ಸ್ವ ಉದ್ಯೋಗಿಗಳಿಗೆ, ಹೊಸದಾಗಿ ಉದ್ಯಮ ಪ್ರಾರಂಭಿಸುವವರಿಗೆ ಮತ್ತು ನಿರುದ್ಯೋಗಿಗಳಿಗೆ ಯಶಸ್ವಿ ಉದ್ಯಮಕ್ಕೆ ಸಮಗ್ರ ಮಾರ್ಗದರ್ಶನ ಚೇತರಿಕಾ 2019 ಎಂಬ ಕಾರ್ಯಕ್ರಮವು ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ನಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಯಮಿ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಇದರ ಪ್ರಧಾನ ಕಾರ್ಯದರ್ಶಿ ರವಿಪೂಜಾರಿ ಚಿಲಿಂಬಿ ಉದ್ಘಾಟಿಸಿದರು. ಯುವವಾಹಿನಿಯು ಅವಕಾಶ ವಂಚಿತ ವರ್ಗಗಳಿಗೆ […]

Read More

ಕ್ರಿಯಾಶೀಲತೆಗೆ ಹೆಸರುವಾಸಿ ಕೂಳೂರು ಘಟಕ – ನರೇಶ್ ಸಸಿಹಿತ್ಲು

ಯುವವಾಹಿನಿ ಕೂಳೂರು ಘಟಕವು ಕ್ರಿಯಾಶೀಲತೆಗೆ ಹೆಸರುವಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುವವಾಹಿನಿಯ ಇತಿಹಾಸದಲ್ಲೇ ವಿಭಿನ್ನತೆ ತಂದುಕೊಟ್ಟಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ನರೇಶ್ ಸಸಿಹಿತ್ಲು ಹೇಳಿದರು. ಅವರು ದಿನಾಂಕ 22.09.19 ರಂದು ಕೂಳೂರು ಚರ್ಚ್ ಹಾಲ್ ನಲ್ಲಿ ನಡೆದ ಯುವಜನತೆಯ ಪ್ರೇರೇಪಣೆಗಾಗಿ ಯೂತ್ ಫೆಸ್ಟ್ 2019 ನಮ್ಮ ಚಿತ್ತ ಪ್ರತಿಭೆಗಳ ಅನಾವರಣದತ್ತ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ ಮಾತನಾಡಿದರು. ಮಂಗಳೂರು ನಗರ ಪೂರ್ವ ಪೋಲಿಸ್ ಠಾಣೆಯ ನಿರೀಕ್ಷಕರಾದ ಶಾಂತರಾಮ್ ಕುಂದಾರ್ ಕಾರ್ಯಕ್ರಮದ ಸ್ಪರ್ಧೆಗಳನ್ನು ಉದ್ಘಾಟಿಸಿದರು. ನಂತರ ಮಾತನಾಡಿದ […]

Read More

ಯುವವಾಹಿನಿ ಭಜನಾ ಸಮಿತಿಯ ಉಧ್ಘಾಟನಾ ಕಾರ್ಯಕ್ರಮ

ನಮ್ಮ ಎಲ್ಲಾ ಯುವವಾಹಿನಿ ಭಂಧುಗಳು ದಿನಾಂಕ17/09/2019ನೇ ಮಂಗಳವಾರ ಸಮಯ 6:45ಕ್ಕೆ ನಮ್ಮ ಯುವವಾಹಿನಿ ಶಕ್ತಿನಗರ ಘಟಕವು ನೂತನವಾಗಿ ರಚಿಸಿರುವ “ಯುವವಾಹಿನಿ ಭಜನಾ ಸಮಿತಿ” ಯ ಉಧ್ಘಾಟನಾ ಕಾರ್ಯಕ್ರಮ ಹಾಗೂ ತಂಡದಿಂದ ಭಜನಾ ಕಾರ್ಯಕ್ರಮ ಕೊಂಗೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಜರುಗಿದೆ, ಭಜನೆ ಸಮಿತಿಯನ್ನು ಮಠದ ಧರ್ಮದರ್ಶಿ ನೆರವೇರಿಸಿ ಧಾರ್ಮಿಕ ಉಪಾನ್ಯಾಸ ಮಾಡಿದ ಧರ್ಮದರ್ಶಿ ಅನಂತಕ್ರಷ್ಣರವರು ಭಜನೆ ಯಿಂದ ವಿಭಜನೆ ಆಗಲಾರದು ಹಾಗೂ ಎಲ್ಲರಿಗೂ ಒಳಿತಾಗಲಿ ದುರ್ಗಾಪರಮೇಶ್ವರಿ ದೇವಿಯ ಅನುಗ್ರಹ ನಿಮ್ಮೆಲ್ಲರಿಗೂ ಇರಲಿ ಎಂದು ಆಶಿರ್ವದಿಸಿದರು ನಮ್ಮೊಂದಿಗೆ […]

Read More

ಗುರು ಸಂದೇಶ ಸಂಕಲ್ಪ : ಮದ್ಯಪಾನ ಮುಕ್ತ ಮದರಂಗಿ

ನಮ್ಮ ಸಮಾಜದಲ್ಲಿ ಮದುವೆಯ ಮದರಂಗಿ ಕಾರ್ಯಕ್ರಮದಲ್ಲಿ ಮದ್ಯಪಾನವು ವಿಪರೀತವಾಗಿದ್ದು ಅದರಿಂದ ಆಗುವ ತೊಂದರೆಗಳು ಹಲವಾರು. ಬ್ರಹ್ಮಶ್ರೀ ನಾರಾಯಣ ಗುರುಗಳು ಮದ್ಯಪಾನವನ್ನು ಬಹಳ ವಿರೋಧಿಸಿದ್ದರು. ಮೂಡಬಿದ್ರೆ ಯುವವಾಹಿನಿ ಘಟಕ ಬ್ರಹ್ಮಶ್ರೀ ನಾರಾಯಣ ಗುರುಗಳ 165 ಜನ್ಮದಿನಾಚರಣೆಯ ಅಂಗವಾಗಿ ಮದ್ಯಪಾನ ಮುಕ್ತ ಮದರಂಗಿ ಕಾರ್ಯಕ್ರಮವನ್ನು ನಡೆಸಬೇಕೆಂದು ವಿನಂತಿಸುವ ಗುರು ಸಂದೇಶ ಸಂಕಲ್ಪ ಎಂಬ ನಾಮಾಂಕಿತ ಮನವಿ ಪತ್ರವನ್ನು ದಿನಾಂಕ 15/09/2019 ರಂದು  ಕಡಂದಲೆ ಪಾಲಡ್ಕ ಬಿಲ್ಲವ ಸಂಘದಲ್ಲಿ ನಡೆದ ಗುರು ಜಯಂತಿ ಕಾರ್ಯಕ್ರಮದಲ್ಲಿ  ಹೊಸ್ಮಾರು ಬಲ್ಲೆಟ್ಟು ಸ್ವಾಮಿಗಳಾದ ಶ್ರೀಶ್ರೀಶ್ರೀ ವಿಖ್ಯಾತಾನಂದ […]

Read More

ನಾರಾಯಣ ಗುರು ಜಯಂತಿ : ಭಜನಾ ಕಾರ್ಯಕ್ರಮ

ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕವು ನಾರಾಯಣ ಗುರು ಜಯಂತಿಯ ಪ್ರಯುಕ್ತ ಗುರುವರ್ಯರು ಸಮಾಜಕ್ಕೆ ಕೊಟ್ಟ ಸಂದೇಶವಾದ ಒಂದೇ ಜಾತಿ,ಒಂದೇ ಮತ,ಒಂದೇ ದೇವರು ಎಂಬ ಮಾತಿನಂತೆ ವಿವಿಧ ಮಹಿಳಾ ಮಂಡಳಿಗಳನ್ನು ಜೊತೆಗೂಡಿಸಿ ಬೆಳಗ್ಗೆ12ರಿಂದ ಸಂಜೆ 7 ಘಂಟೆಯವರೆಗೆ ಭಜನಾ ಕಾರ್ಯಕ್ರಮವನ್ನು ನಡೆಯಸಿತು. ಕಾರ್ಯಕ್ರಮಕ್ಕೆಗುರುಸ್ತೋತ್ರ ಹಾಗೂ ಭಜನೆ ಮೂಲಕ ಮಂಗಳೂರು ಮಹಿಳಾ ಘಟಕವು ಚಾಲನೆ ನೀಡಿ ನಂತರ ವಿವಿಧ ಮಹಿಳಾ ಮಂಡಳಿಗಳಿಗೆ ಅವಕಾಶಕೊಟ್ಟು ನಂತರ ಕೊನೆಯ ಹಂತವನ್ನು ಮಂಗಳೂರುಘಟಕದವರೊಂದಿಗೆ ಸೇರಿ ಮುಕ್ತಾಯ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಉಮಾಶ್ರೀಕಾಂತ್, ನೈನವಿಶ್ವನಾಥ್,ರವಿಕಲ,  ನಾರಾಯನಗುರು ತತ್ವ […]

Read More

ಹಳ್ಳಿಡೊಂಜಿ ದಿನ

ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 08.09.19 ರಂದು ಹಳ್ಳಿಡೊಂಜಿ ದಿನ ಕಾರ್ಯಕ್ರಮವು ಘಟಕದ ಸದಸ್ಯರಾದ *ಪ್ರಸಾದ್ ಈದು ಬಟ್ಟೇಣಿ ಇವರ ಊರು ಈದು ಬಟ್ಟೇಣಿ, ಕಾರ್ಕಳ* ಇಲ್ಲಿ ನಡೆಯಿತು. ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಘಟಕದ 50 ಸದಸ್ಯರು ಕೂಳೂರಿನಿಂದ ಹೊರಟು 10.30 ಕ್ಕೆ ಶಿರ್ತಾಡಿ ತಲುಪಿ ಘಟಕದ ಸದಸ್ಯರಾದ *ಜಯ ಬಂಗೇರ* ಅವರ ಮನೆಯಲ್ಲಿ ಉಪಹಾರ ಮುಗಿಸಿ ನಂತರ ಅಲ್ಲಿಂದ ಹೊಸ್ಮಾರು ಆಶ್ರಮಕ್ಕೆ ಭೇಟಿ ನೀಡಿ, *ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರ ದರ್ಶನ […]

Read More

ಸೋಣ ಸಂಭ್ರಮ

ದಿನಾಂಕ 08/09/2019 ರಂದು ಯುವವಾಹಿನಿ ಸಭಾಂಗಣದಲ್ಲಿ ಸೋಣ ಸಂಭ್ರಮ ಕಾರ್ಯಕ್ರಮವು ಬೆಳಗ್ಗೆ 9:30ರಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಮಾಶ್ರೀಕಾಂತ್ ವಹಿಸಿಕೊಂಡಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಗೋಕರ್ಣನಾಥೇಶ್ವರ ಬಿ ಎಡ್ ಕಾಲೇಜಿನ ಪ್ರಾಂಶುಪಾಲರಾದ ದೀಪ್ತಿ ನಾಯಕ್ ಉದ್ಘಾಟಿಸಿದರು. ಇಲ್ಲಿನ ಸಂಸ್ಕೃತಿಯ ಬಗ್ಗೆ ನಾನು ಕಲಿತೆ ಹಾಗೂ ಈ ಸಂಸ್ಕೃತಿ ಮುಂದಿನ ಪೀಳಿಗೆಗೆ ತಿಳಿಸಿವ ಕೆಲಸ ನಮ್ಮಿಂದ ಆಗಬೇಕು ಹಾಗಾಗಿ ಆದಷ್ಟು ಮಕ್ಕಳನ್ನು ಜೋಡಿಸಿಕೊಳ್ಳುವಂತೆ ತಿಳಿಸಿದರು.ನಂತರ  ಶಕ್ತಿ ಎಜುಕೇಶನ್ ಟ್ರಸ್ಟ್ ನ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ್  ಆಚಾರ್ಯ ಸೋಣದ ಮದಿಪನ್ನು ನೀಡಿ […]

Read More

ಗುರು ಜಯಂತಿಯ ಅಂಗವಾಗಿ ಕ್ರೀಡಾಕೂಟ

ಯುವವಾಹಿನಿ (ರಿ) ಹೆಜಮಾಡಿ ಘಟಕ . ಬ್ರಹ್ಮ್ಮಶ್ರೀ ನಾರಾಯಣ ಗುರುವರ್ಯರ 165 ನೇ ಗುರು ಜಯಂತಿಯ ಅಂಗವಾಗಿ ಹೆಜಮಾಡಿ ಬಿಲ್ಲವರ ಹತ್ತು ಸಮಸ್ತರಿಗೆ ವಿವಿಧ ಕ್ರೀಡಾಕೂಟಗಳು ದಿನಾಂಕ 25/08/2019 ರಂದು ಹೆಜಮಾಡಿ ಬಿಲ್ಲವ ಸಂಘದ ವಠಾರದಲ್ಲಿ ಜರಗಿತು . ಈ ಪಂದ್ಯಾಟದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಹರೀಶ್ ವಹಿಸಿದ್ದರು . ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಹರೀಶ್ ಸರ್ವರನ್ನು ಸ್ವಾಗತಿಸಿದರು . ಹೆಜಮಾಡಿ ಬಿಲ್ಲವರ ಸಂಘ ದ ಉಪಾಧ್ಯಕ್ಷರು, ಹೆಜಮಾಡಿ ಮಹಾಲಿಂಗೇಶ್ವರ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!