Yuvavahini

ಇತರೆ

ಜಾಗೃತಿ, ಜವಾಬ್ದಾರಿ ಮತ್ತು ಸಹಕಾರವೇ ಸುರಕ್ಷಿತ ಮಂಗಳೂರಿನ ಮೂಲ ಮಂತ್ರ : ತಿಪ್ಪಾ ರೆಡ್ಡಿ

ಮಂಗಳೂರು : ಡಿಜಿಟಲ್ ಯುಗದಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ವಂಚನೆಗಳು, ಸೈಬರ್ ಅಪರಾಧಗಳ ವಿಧಗಳು ಮತ್ತು ಅವುಗಳಿಂದ ರಕ್ಷಿಸಿಕೊಳ್ಳುವ ಮಾರ್ಗಗಳ ಬಗ್ಗೆ ನಾವು ಜಾಗ್ರತರಾಗಬೇಕಿದೆ. ನಶೆಯ ದುಷ್ಪರಿಣಾಮಗಳು ಹಾಗೂ ನಶಮುಕ್ತ ಸಮಾಜ ನಿರ್ಮಾಣದಲ್ಲಿ ಯುವಜನರ ಪಾತ್ರದ ಮಹತ್ವವನ್ನು ತಿಳಿಯಬೇಕಿದೆ. ಜಾಗೃತಿ, ಜವಾಬ್ದಾರಿ ಮತ್ತು ಸಹಕಾರವೇ ಸುರಕ್ಷಿತ ಹಾಗೂ ಆರೋಗ್ಯಕರ ಸಮಾಜದ ಮೂಲಮಂತ್ರವೆಂದು ಸೈಬರ್ ಕ್ರೈಂ ಪೊಲೀಸ್ ಅಧಿಕಾರಿ ತಿಪ್ಪಾ ರೆಡ್ಡಿ ಇವರು ತಿಳಿಸಿದರು. ಅವರು ದಿನಾಂಕ 10.01.2026 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ.) ಮಂಗಳೂರು ಮಹಿಳಾ […]

Read More

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್ ಆಯ್ಕೆ

ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿ ಗೌರವಿಸಲಾಯಿತು. ಸಾಮಾಜಿಕ, ಸಂಘಟನಾ ಹಾಗೂ ವೃತ್ತಿಪರ ಕ್ಷೇತ್ರಗಳಲ್ಲಿ ತೋರಿದ ಸಾಧನೆ ಮತ್ತು ಸೇವೆಯನ್ನು ಪರಿಗಣಿಸಿ ಈ ಗೌರವವನ್ನು ನೀಡಲಾಗಿದೆ. ಈ ಪುರಸ್ಕಾರ ಯುವವಾಹಿನಿಗೆ ಹೆಮ್ಮೆಯ ವಿಷಯವಾಗಿದ್ದು, ಸಂಘಟನೆಯ ಮಹಿಳಾ ಶಕ್ತಿಗೆ ಸ್ಫೂರ್ತಿಯಾಗಿದೆ. ಯುವವಾಹಿನಿ (ರಿ.) ಕೇಂದ್ರ ಸಮಿತಿಯು […]

Read More

ಯುವವಾಹಿನಿ (ರಿ.) ಸುರತ್ಕಲ್ ಘಟಕದಿಂದ ಮನೆ–ಮನೆ ಭಜನಾ ಸೇವೆ

ಸುರತ್ಕಲ್ : ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ದಿನಾಂಕ 06-01-2026ರಂದು ಮನೆ–ಮನೆ ಭಜನಾ ಸೇವೆಯನ್ನು ಘಟಕದ ಅಧ್ಯಕ್ಷರಾದ ವಾಣಿ ಗಣೇಶ್ ಅವರ ಮನೆಯಲ್ಲಿ ಭಕ್ತಿಭಾವದಿಂದ ನಡೆಸಲಾಯಿತು. ಈ ಭಜನಾ ಸೇವೆಯಲ್ಲಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿ, ಧಾರ್ಮಿಕ ವಾತಾವರಣವನ್ನು ನಿರ್ಮಿಸಿದರು. ಕಾರ್ಯಕ್ರಮವು ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಚೈತನ್ಯವನ್ನು ಮೂಡಿಸುವ ಉದ್ದೇಶದಿಂದ ಯಶಸ್ವಿಯಾಗಿ ನೆರವೇರಿತು

Read More

ಬಿಲ್ಲವ ಪ್ರೀಮಿಯರ್ ಲೀಗ್–2026: ಮಹಿಳಾ ಕ್ರಿಕೆಟ್ ಮೂಲಕ ಸಂಘಟನೆ, ಏಕತೆ ಮತ್ತು ಸಬಲೀಕರಣಕ್ಕೆ ವೇದಿಕೆ

ಪಡುಬಿದ್ರಿ : ಯುವವಾಹಿನಿ (ರಿ.), ಪಡುಬಿದ್ರಿ ಘಟಕದ ವತಿಯಿಂದ ಆಹ್ವಾನಿತ ತಂಡಗಳ ಮಹಿಳಾ ಕ್ರಿಕೆಟ್ ಪಂದ್ಯಾವಳಿ “ಬಿಲ್ಲವ ಪ್ರೀಮಿಯರ್ ಲೀಗ್ (BPL)–2026” ಅನ್ನು 2026ರ ಜನವರಿ 31 ಮತ್ತು ಫೆಬ್ರವರಿ 1ರಂದು ರಾಜೀವ್ ಗಾಂಧಿ ಕ್ರೀಡಾಂಗಣ, ಹೆಜಮಾಡಿದಲ್ಲಿ ಆಯೋಜಿಸಲಾಗಿದೆ. ಕ್ರೀಡೆಯ ಮೂಲಕ ಸಂಘಟನೆ, ಏಕತೆ ಮತ್ತು ಮಹಿಳಾ ಸಬಲೀಕರಣವನ್ನು ಉತ್ತೇಜಿಸುವುದು ಈ ಪಂದ್ಯಾಕೂಟದ ಮುಖ್ಯ ಉದ್ದೇಶವಾಗಿದ್ದು, ಈ ಸಂದರ್ಭದಲ್ಲಿ ಪ್ರತಿಭಾವಂತ ಆಟಗಾರ್ತಿಯರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲಾಗುವುದು. ಪಂದ್ಯಾಕೂಟದ ವಿಜೇತರಿಗೆ ಒಟ್ಟು ₹1,75,000 […]

Read More

ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿ

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ದಿನಾಂಕ: 05-01-2026 ರಂದು ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ಲಹರಿ ತಂಡ ಬಿಜೈ ಮಂಗಳೂರು ಇವರ ಸಹಯೋಗದಿಂದ ನೆರವೇರಿತು. ಯುವವಾಹಿನಿ (ರಿ.) ಮಂಗಳೂರು ಘಟಕದ ಒಂದನೇ ಉಪಾಧ್ಯಕ್ಷರು ಹರೀಶ್ ಕೆ. ಸುವರ್ಣ ಮತ್ತು ಸದಸ್ಯರು ಉಪಸ್ಥಿತಿ ಇದ್ದರು.

Read More

ಸೇವೆ–ಕ್ರೀಡೆ–ಸೌಹಾರ್ದತೆಯ ಸಂಗಮ: ದಶ ಸಂಭ್ರಮಕ್ಕೆ ಯುವವಾಹಿನಿಯಿಂದ ಸಮಾಜಮುಖಿ ಸಂದೇಶ

ಬೆಳ್ತಂಗಡಿ: ನೊಂದ ಕುಟುಂಬಗಳಿಗೆ ಸಾಂತ್ವನ ನೀಡುವ ಜೊತೆಗೆ ಯುವಜನತೆಯಲ್ಲಿ ಸ್ನೇಹ, ಸೌಹಾರ್ದತೆ ಮತ್ತು ಸಂಘಟನಾ ಮನೋಭಾವವನ್ನು ಬೆಳೆಸುವ ಕಾರ್ಯದಲ್ಲಿ ಯುವವಾಹಿನಿಯ ಪಾತ್ರ ಶ್ಲಾಘನೀಯವಾಗಿದೆ ಎಂದು ವಿವಿಧ ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಶ ಸಂಭ್ರಮದ ಪ್ರಯುಕ್ತ ಆಯೋಜಿಸಲಾದ ಕ್ರೀಡಾಕೂಟ ಹಾಗೂ ಸಾಂತ್ವನ ನಿಧಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಂಗೇರ ಬ್ರಿಗೇಡ್ ಅಧ್ಯಕ್ಷ ಬಿನುತಾ ಬಂಗೇರ ಮಾತನಾಡಿ, ನೊಂದ ಕುಟುಂಬಗಳಿಗೆ ಆರ್ಥಿಕ ಸಹಾಯ ನೀಡುವ ಜೊತೆಗೆ ಮನಸ್ಸಿಗೆ ಧೈರ್ಯ ತುಂಬುವ ಸಂಘಟನೆ […]

Read More

ಮನೋರಂಜನಾ ಚಟುವಟಿಕೆಗಳಿಂದ ಸಂಘಟನೆ ಸದೃಢ

ಹೆಜಮಾಡಿ: ಯುವ ಸಂಘಟನೆಗಳು ಮನೋರಂಜನಾ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿದಾಗ ಸಂಘಟನೆಗಳು ಇನ್ನಷ್ಟು ಸದೃಢವಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ ಹೇಳಿದರು. ಅವರು ಯುವವಾಹಿನಿ (ರಿ.) ಹೆಜಮಾಡಿ ಘಟಕದ ವತಿಯಿಂದ ಆಯೋಜಿಸಲಾದ ತುಳು ಹಾಸ್ಯಮಯ ನಾಟಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಯುವವಾಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ವಿದ್ಯಾನಿಧಿ ಸಹಾಯಾರ್ಥವಾಗಿ ದಿನಾಂಕ 04-01-2026ರಂದು ಡಾ. ದೇವದಾಸ್ ಕಾಪಿಕಾಡ್ ಅವರ “ಎನ್ನನೇ ಕಥೆ” ತುಳು ಹಾಸ್ಯಮಯ […]

Read More

ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯ ಕ್ಷೇತ್ರದರ್ಶನ

ಮಂಗಳೂರು: ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ, ದಿನಾಂಕ 04-01-2026 ರ ಆದಿತ್ಯವಾರದಂದು ಯುವವಾಹಿನಿ (ರಿ.) ಕೆಂಜಾರು–ಕರಂಬಾರು ಘಟಕದ ವತಿಯಿಂದ ಕ್ಷೇತ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬೆಳಿಗ್ಗೆ 10 ಗಂಟೆಗೆ ಕರಂಬಾರು ಮಾರಿಯಮ್ಮ ಕೋಟೆ ಬಬ್ಬುಸ್ವಾಮಿ ಪರಿವಾರ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ, ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಯುವವಾಹಿನಿ ಸದಸ್ಯರು, ಗ್ರಾಮಸ್ಥರು ಹಾಗೂ ಮಕ್ಕಳು ಸೇರಿ ಒಟ್ಟು 72 ಮಂದಿ ಒಂದೇ ಬಸ್ಸಿನಲ್ಲಿ ಪುಣ್ಯಕ್ಷೇತ್ರಕ್ಕೆ ತೆರಳಿದರು. ದೇವಾಲಯದ ಕೆರೆಯಲ್ಲಿ ಸ್ನಾನ ಮಾಡಿ, ಅರ್ಚಕರ […]

Read More

ಯುವವಾಹಿನಿ (ರಿ) ಸುರತ್ಕಲ್ ಘಟಕದಿಂದ ಎರಡು ದಿನಗಳ ಪ್ರವಾಸ

ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ ವತಿಯಿಂದ ಎರಡು ದಿನಗಳ ಸಂಘಟನಾ ಪ್ರವಾಸವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ದಿನಾಂಕ 03.01.2026ರಂದು ಸುರತ್ಕಲ್ ಬಸ್‌ಸ್ಟ್ಯಾಂಡ್‌ನಿಂದ ಪ್ರಯಾಣ ಆರಂಭಿಸಿದ ತಂಡವು ಸೂರ್ಮನೆ ವಾಟರ್‌ಫಾಲ್, ಹೊರನಾಡು ದೇವಸ್ಥಾನ, ಕ್ಯಾತನಮಕ್ಕಿ ರೆಸಾರ್ಟ್ ಹಾಗೂ ಸನ್‌ಸೆಟ್ ಪಾಯಿಂಟ್ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿತು. ದಿನಪೂರ್ತಿ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಿದ ನಂತರ ತಂಡವು ರೆಸಾರ್ಟ್‌ನಲ್ಲಿ ವಿಶ್ರಾಂತಿ ಪಡೆದುಕೊಂಡಿತು. ಮರುದಿನ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಊಟ ಮುಗಿಸಿ, ಹಿಂತಿರುಗುವ ಸಂದರ್ಭದಲ್ಲಿ ದಾರಿಮಧ್ಯೆ ಕಂಡುಬಂದ […]

Read More

ಸಂಭ್ರಮ ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಬೆಳ್ತಂಗಡಿ: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹಾಗೂ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ, ಬೆಳ್ತಂಗಡಿ ತಾಲೂಕು ಇವರ ಸಹಕಾರದೊಂದಿಗೆ ದಿನಾಂಕ 30-12-2025ರಂದು ಸಂಭ್ರಮ ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಘಟಕದ ನಿರ್ದೇಶಕ ಸೌಮ್ಯ ಲಾಯಿಲಾ ಅವರ “ಕನಸು” ನಿವಾಸದಲ್ಲಿ ಯುವವಾಹಿನಿ ಕುಟುಂಬ ಸದಸ್ಯರ ಭಾಗವಹಿಸುವಿಕೆಯೊಂದಿಗೆ ನಡೆಯಿತು. ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಅವರ ಅಧ್ಯಕ್ಷತೆಯಲ್ಲಿ ಆರಂಭವಾದ ಕಾರ್ಯಕ್ರಮವನ್ನು ಹಿರಿಯರಾದ ಗಿರಿಧರ ಪೂಜಾರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಕುಮಾರ್ ಮೂಡುಕೋಡಿ, […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!