ಯುವ ಸಂಗಮ : ಸಾಂಸ್ಕೃತಿಕ ಸಮಾಗಮ
19-01-2026, 8:58 AM
18-01-2026, 11:34 PM
ಶಕ್ತಿನಗರ : ಯುವವಾಹಿನಿ (ರಿ) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 18.01.2026ರಂದು ಮುಂಜಾನೆ ಪ್ರಾರ್ಥನೆಯೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ನಮಸ್ಕರಿಸಿ ಒಂದು ದಿನದ ಕಿರುಪ್ರವಾಸವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ಘಟಕದ ಅಧ್ಯಕ್ಷರಾದ ಸುಜಾತ ನವೀನ್, ಕಾರ್ಯದರ್ಶಿಗಳಾದ ಚರಣ್ ರಾಜ್ ಹಾಗೂ ಮಾಜಿ ಅಧ್ಯಕ್ಷರಾದ ಭಾರತಿ ಗಣೇಶ್ ಅವರು ಪ್ರವಾಸದ ಮುಂದಾಳತ್ವವನ್ನು ವಹಿಸಿದ್ದರು. ಸುಮಾರು 40 ಮಂದಿ ಸದಸ್ಯರು ಭಾಗವಹಿಸಿದ ಈ ಕ್ಷೇತ್ರ ದರ್ಶನದಲ್ಲಿ ಮೊದಲಿಗೆ ಶ್ರೀ ಕ್ಷೇತ್ರ ಕಲಶೇಶ್ವರ ದೇವಾಲಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಲಾಯಿತು. ನಂತರ ಶ್ರೀ […]
18-01-2026, 7:00 PM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ. 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಗೀತಾ ವಸಂತ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಗೀತಾ ವಸಂತ್ಪ್ರಥಮ ಉಪಾಧ್ಯಕ್ಷರು : ಮುಕೇಶ್ ಕುಮಾರ್ದ್ವಿತೀಯ ಉಪಾಧ್ಯಕ್ಷರು : ತುಳಸಿ ಸುಜೀರ್ಕಾರ್ಯದರ್ಶಿ : ವಂದೀಪ್ ಕೆ ಸುವರ್ಣಜೊತೆ ಕಾರ್ಯದರ್ಶಿ : ಮಮತಾ ಪುಷ್ಪರಾಜ್ಕೋಶಾಧಿಕಾರಿ : ಸುಮಾ ಶಿವುವ್ಯಕ್ತಿತ್ವ ವಿಕಸನ ನಿರ್ದೇಶಕರು : ವಿಪ್ಪೇಶ್ ಬೋಳೂರುಕ್ರೀಡಾ ನಿರ್ದೇಶಕರು : ಲೋಕೇಶ್ ಪೂಜಾರಿಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ಶ್ವೇತಾ ರಾಹುಲ್ಆರೋಗ್ಯ ನಿರ್ದೇಶಕರು : […]
18-01-2026, 1:11 PM
ಕೂಳೂರು : ಯುವವಾಹಿನಿ ಸಂಸ್ಥೆಯು ಯಾವ ಉದ್ದೇಶದಿಂದ ಪ್ರಾರಂಭವಾಯಿತು ಎಂಬುದನ್ನು ಅರಿತು ಆ ದಿಕ್ಕಿನಲ್ಲಿ ಮುನ್ನಡೆಯುವ ಜವಾಬ್ದಾರಿ ಯುವ ಸಮುದಾಯದ ಮೇಲಿದೆ ಎಂದು ಶ್ರೀ ಕೃಷ್ಣ ಭಜನಾ ಮಂದಿರ, ವಿದ್ಯಾನಗರದ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಸುವರ್ಣ ಹೇಳಿದರು. ಅವರು ದಿನಾಂಕ 18-01-2026ರಂದು ಕೂಳೂರು ಫಲ್ಗುಣಿ ಸಭಾಂಗಣದಲ್ಲಿ ನಡೆದ ಯುವವಾಹಿನಿ (ರಿ) ಕೂಳೂರು ಘಟಕದ ಪದಗ್ರಹಣ–2026 ಹಾಗೂ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಹಿರಿಯರು ಯುವವಾಹಿನಿ ಸಂಸ್ಥೆಯನ್ನು ಸ್ಥಾಪಿಸಿದ ಉದ್ದೇಶವನ್ನು ಅರಿತು ಯುವ ಪೀಳಿಗೆಯು ಮುಂದಿನ […]
18-01-2026, 1:00 PM
ಸುರತ್ಕಲ್ : ಯುವವಾಹಿನಿ ಸಂಸ್ಥೆಯು ಸ್ಥಾನಮಾನ, ಹಣಬಲ ಅಥವಾ ಹಿನ್ನಲೆ ನೋಡದೆ ಪ್ರತಿಯೊಬ್ಬ ಸಾಮಾನ್ಯ ವ್ಯಕ್ತಿಯಲ್ಲೂ ಅಡಗಿರುವ ನಾಯಕತ್ವದ ಶಕ್ತಿಯನ್ನು ಗುರುತಿಸಿ ಅದನ್ನು ಸಮಾಜಮುಖಿಯಾಗಿ ಅರಳಿಸುವ ಮಹತ್ತಾದ ಸಂಕಲ್ಪವನ್ನು ಹೊಂದಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಹೇಳಿದರು. ಸಂಸ್ಥೆಯು ಸದಸ್ಯರಲ್ಲಿ ಆತ್ಮವಿಶ್ವಾಸ, ಸೇವಾಭಾವ ಮತ್ತು ಜವಾಬ್ದಾರಿಯ ಅರಿವು ಮೂಡಿಸುವ ಮೂಲಕ ಅವರನ್ನು ಉತ್ತಮ ನಾಯಕರೆಂದು ರೂಪಿಸುತ್ತದೆ. ಸಮಾಜದ ಅಭಿವೃದ್ಧಿಗೆ ಸಾಮಾನ್ಯ ವ್ಯಕ್ತಿಯ ಪಾತ್ರವೇ ಅತ್ಯಂತ ಪ್ರಮುಖವಾಗಿದ್ದು, ಅಂಥ ವ್ಯಕ್ತಿಗಳಿಗೆ ಅವಕಾಶ ನೀಡುವುದು […]
18-01-2026, 1:00 PM
ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ. 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ರೇವತಿ ನವೀನ್ ಆಯ್ಕೆಯಾಗಿದ್ದಾರೆ ಅಧ್ಯಕ್ಷರು : ರೇವತಿ ನವೀನ್ಪ್ರಥಮ ಉಪಾಧ್ಯಕ್ಷರು : ಸುಲತ ಪೂಜಾರಿದ್ವಿತೀಯ ಉಪಾಧ್ಯಕ್ಷರು : ದಿವಿತ್ ಕುಮಾರ್ಕಾರ್ಯದರ್ಶಿ : ಸನೀಶ್ ಎಸ್ ಅಂಚನ್ಜೊತೆ ಕಾರ್ಯದರ್ಶಿ : ಸುರೇಶ್ ಪೂಜಾರಿಕೋಶಾಧಿಕಾರಿ : ಅಮಿತ ದಿಲೀಪ್ವ್ಯಕ್ತಿತ್ವ ವಿಕಾಸನ ನಿರ್ದೇಶಕರು : ಶಶಾಂಕ್ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕರು : ಲಿಖಿತ್ ರಾಜ್ಕಲೆ ಮತ್ತು ಸಾಹಿತ್ಯ ನಿರ್ದೇಶಕರು : ಶಿವಾನಿಉದ್ಯೋಗ ಮತ್ತು ಭವಿಷ್ಯ ನಿರ್ಮಾಣ […]
14-01-2026, 9:59 AM
ಕಾರ್ಕಳ: ದಿನಾಂಕ 14.01.2025 ರಂದು ಶ್ರೀ ಕೃಷ್ಣ ಕ್ಷೇತ್ರ ಆನೆಕೆರೆ, ಕಾರ್ಕಳದಲ್ಲಿ ಆಯೋಜಿಸಲಾದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಸಂದರ್ಭದಲ್ಲಿ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಹಿರಿಯರಾದ ಭಾಸ್ಕರ್ ಕೋಟ್ಯಾನ್ ಇರುವತ್ತೂರು ಅವರನ್ನು ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸನ್ಮಾನ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರಾದ ವಿ. ಸುನಿಲ್ ಕುಮಾರ್, ಯುವವಾಹಿನಿ ಕಾರ್ಕಳ ಘಟಕದ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ, ಕಾರ್ಯದರ್ಶಿ ರಾಕೇಶ್ ಅಮಿನ್, ಘಟಕದ ಪೂರ್ವಾಧ್ಯಕ್ಷರು, ನಿರ್ದೇಶಕರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ […]
11-01-2026, 10:00 AM
ಕಡಬ : ಕಡಬ ಶ್ರೀ ಮಹಾವಿಷ್ಣು ದೇವಸ್ಥಾನ, ಪಿಜಕ್ಕಳದಲ್ಲಿ ದಿನಾಂಕ 11.01.2026 ನೇ ಬೆಳಿಗ್ಗೆ ಧನುಪೂಜೆ ಪ್ರಯುಕ್ತ ಯುವವಾಹಿನಿ (ರಿ.) ಕಡಬ ಘಟಕದ ಸದಸ್ಯರು ಭಕ್ತಿಭಾವಪೂರ್ಣ ಭಜನಾ ಸೇವೆಯನ್ನು ಸಲ್ಲಿಸಿದರು. ಬೆಳಿಗ್ಗೆ 4.00 ಗಂಟೆಯಿಂದ 5.15 ಗಂಟೆಯವರೆಗೆ ನಡೆದ ಭಜನಾ ಸೇವೆಯಲ್ಲಿ ಭಕ್ತಿಗೀತೆಗಳು ಹಾಗೂ ನಾಮಸಂಕೀರ್ತನೆಯ ಮೂಲಕ ದೇವರ ಸ್ಮರಣೆಯಲ್ಲಿ ತೊಡಗಿಸಿಕೊಂಡರು. ಯುವವಾಹಿನಿ ಕಡಬ ಘಟಕದ ಈ ಸೇವೆಗೆ ದೇವಾಲಯದ ಆಡಳಿತ ಮಂಡಳಿ ಹಾಗೂ ಭಕ್ತಾದಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
11-01-2026, 3:46 AM
ಕಂಕನಾಡಿ : ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಮಂಗಳೂರು ಮೋರ್ಗನ್ಸ್ ಗೇಟ್ನಲ್ಲಿರುವ ಕ್ರೂಸ್ ಆ್ಯಂಡ್ ಡೈನ್ ಕೇಂದ್ರಕ್ಕೆ ಒಂದು ದಿನದ ಕಿರು ಪ್ರವಾಸವನ್ನು ದಿನಾಂಕ 11-01-2026 ರಂದು ಆಯೋಜಿಸಲಾಯಿತು. ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ನಡೆದ ಈ ಪ್ರವಾಸದಲ್ಲಿ ಘಟಕದ ಸದಸ್ಯರು ಹಾಗೂ ಅವರ ಬಂಧು–ಮಿತ್ರರು ಉತ್ಸಾಹಭರಿತವಾಗಿ ಭಾಗವಹಿಸಿ ಸಂತಸದ ಕ್ಷಣಗಳನ್ನು ಕಳೆಯಿದರು. ಬೆಳಿಗ್ಗೆ ಚಹಾ–ತಿಂಡಿಯೊಂದಿಗೆ ಆರಂಭವಾದ ಪ್ರವಾಸ, ಬೋಟಿನಲ್ಲಿ ಸಾಗುವ ಮೂಲಕ ಸುತ್ತಮುತ್ತಲಿನ ಮನೋಹರ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸುವ ಅನುಭವವನ್ನು ನೀಡಿತು. […]