Yuvavahini

ಇತರೆ

ರಾಜ್ ಕುಮಾರ್ ಬೆಹರೈನ್ ಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ

ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಾಲಿನ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು 2022ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ರಾಜ್ ಕುಮಾರ್ ಬೆಹರೈನ್ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಇಂಧನ , ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ […]

Read More

ಡಾ.ಸದಾನಂದ ಪೂಜಾರಿ ಇವರಿಗೆ ಯುವವಾಹಿನಿ ವಿಶೇಷ ಪುರಸ್ಕಾರ ಪ್ರದಾನ

ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ವಿಶೇಷ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಾಲಿನ ಯುವವಾಹಿನಿ ವಿಶೇಷ ಪುರಸ್ಕಾರವನ್ನು ಭಾರತೀಯ ವೈದ್ಯಕೀಯ ಸಂಘದ ಅತ್ಯುತ್ತಮ ಕಾರ್ಯದರ್ಶಿ ಪ್ರಶಸ್ತಿ ಪುರಸ್ಕೃತರಾದ ಡಾ.ಸದಾನಂದ ಪೂಜಾರಿ ಇವರಿಗೆ ವಿಶೇಷ ಪುರಸ್ಕಾರ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಇಂಧನ , ಕನ್ನಡ ಮತ್ತು ಸಂಸ್ಕೃತಿ […]

Read More

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022 ಡಿಸೆಂಬರ್ 25 ರಂದು ಭಾನುವಾರದಂದು ಅರ್ಪಣ ತೆರೆದ ಸಭಾಂಗಣ ವಿಜಯಾ ಕಾಲೇಜು ಮುಲ್ಕಿನಲ್ಲಿ ಸಂಪನ್ನಗೊಂಡಿತು. ಯುವಸಮುದಾಯದ ಪ್ರೇರಕ ಶಕ್ತಿಯಾಗಿರುವ ಯುವವಾಹಿನಿಗೆ ಅರ್ಹವಾಗಿಯೇ ಪ್ರಶಸ್ತಿ ಲಭಿಸಿದೆ : ವಿ.ಸುನೀಲ್ ಕುಮಾರ್ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ […]

Read More

ನೇತ್ರ ತಪಾಸಣಾ ಉಚಿತ ಶಿಬಿರ

ಮಂಗಳೂರು:- ಮಂಗಳೂರು ಕೆಮಿಕಲ್ಸ್ ಆ್ಯಂಡ್ ಫರ್ಟಿಲೈಜರ್ಸ್‌ ಲಿಮಿಟೆಡ್ (ಎಂಸಿಎಫ್), ಪಣಂಬೂರು ಸಾರಥ್ಯದಲ್ಲಿ ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೆಬಲ್ ಆಸ್ಪತ್ರೆ ದೇರಳಕಟ್ಟೆ, ಧೂಮಾವತಿ ಫ್ರೆಂಡ್ಸ್ ಸರ್ಕಲ್ ಕೃಷ್ಣಾಪುರ ಮತ್ತು ಯುವವಾಹಿನಿ ಸುರತ್ಕಲ್ ಘಟಕದ ಸಹಯೋಗದಲ್ಲಿ ದಿನಾಂಕ 18 ಡಿಸೆಂಬರ್ ಭಾನುವಾರದಂದು ನೇತ್ರ ತಪಾಸಣಾ ಉಚಿತ ಶಿಬಿರ ನಡೆಯಿತು. ಎಂಸಿಎಫ್‌ನ ಸಿಎಂ ಗಿರೀಶ್ ಅಧ್ಯಕ್ಷತೆ ವಹಿಸಿದ್ದರು. ಸಾರಾಳ ಧೂಮಾವತಿ ದೈವಸ್ಥಾನ ಅಧ್ಯಕ್ಷ ಹರೀಶ್ ಸುವರ್ಣ ಶಿಬಿರವನ್ನು ಉದ್ಘಾಟಿಸಿದರು. ಧೂಮಾವತಿ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷ ಅರುಣ್ ಅಂಚನ್, ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೆಬಲ್ ಆಸ್ಪತ್ರೆಯ […]

Read More

ಸಹಾಯಾರ್ಥ ನಾಟಕ ಪ್ರದರ್ಶನ

ಉಡುಪಿ:- ಯುವವಾಹಿನಿ ಉಡುಪಿ ಘಟಕದಿಂದ ತಲೆಗೊಂದು ಸೂರು ಯೋಜನೆಯ ಬಡ ಕುಟುಂಬದ ಮನೆ ಕಟ್ಟಿ ಕೊಡುವ ಸಹಾಯಾರ್ಥ ದಿನಾಂಕ 17 ಡಿಸೆಂಬರ್ 2022 ಶನಿವಾರದಂದು ಅಜ್ಜರಕಾಡು ಬಯಲು ರಂಗ ಮಂದಿರದಲ್ಲಿ ಅಭಿನಯ ಕಲಾವಿದರು ಉಡುಪಿ ತಂಡದ “ಶಾಂಭವಿ” ನಾಟಕ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ರಾಜಕುಮಾರ್ ಅಂಬಲಪಾಡಿ ಇವರನ್ನು ಗೌರವಿಸಲಾಯಿತು, ಅತಿಥಿಗಳಾಗಿ ಆಗಮಿಸಿದಂತ ಕೃಷ್ಣ ಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ, ಪೊಲೀಸ್ ಅಧಿಕಾರಿಗಳಾದ ರಾಮಚಂದ್ರ ಬೈಂದೂರು , ಅಭಿನಯ ತಂಡದ ಅಧ್ಯಕ್ಷರಾದ […]

Read More

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ ವಿದ್ಯಾನಿಧಿ ಟ್ರಸ್ಟ್ ಸಂಜೀವಿನಿಯಾಗಿದೆ ಎಂದು ಬೆಳ್ತಂಗಡಿಯ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ಇವರು ತಿಳಿಸಿದರು. ಅವರು ದಿನಾಂಕ 13 ಡಿಸೆಂಬರ್ 2022ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಗ್ಲಾಸ್ […]

Read More

ರಾಜಧಾನಿಯಲ್ಲಿ ಮೇಳೈಸಿದ ಯುವ ವೈಭವ

ಬೆಂಗಳೂರು :- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಇದರ ಸಹಯೋಗದಲ್ಲಿ ಯುವವಾಹಿನಿ (ರಿ.) ಬೆಂಗಳೂರು ಘಟಕದ ನೇತೃತ್ವದಲ್ಲಿ “ಯುವ ವೈಭವ-2022” ಎಂಬ ಸಾಂಸ್ಕೃತಿಕ ಹಬ್ಬವು ದಿನಾಂಕ 04 ಡಿಸೆಂಬರ್ 2022ರಂದು ಡಾ| ರಾಜಕುಮಾರ್ ಒಳಾಂಗಣ ಕ್ರೀಡಾಂಗಣ, ಮಹಾಲಕ್ಷ್ಮಿ ಲೇಔಟ್ ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಬೆಂಗಳೂರು ಘಟಕದ ಅಧ್ಯಕ್ಷರಾದ ಶ್ರೀಧರ ಡಿ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಕಿಶನ್ […]

Read More

ಪದಪ್ರದಾನ ಸಮಾರಂಭ

ಕಡಬ :- ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಕಡಬ ಘಟಕದ 2022-23ನೇ ಸಾಲಿನ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ದಿನಾಂಕ 19 ನವೆಂಬರ್ 2022 ನೇ ಶನಿವಾರದಂದು ಶ್ರೀ ದುರ್ಗಂಬಿಕಾ ಅಮ್ಮನವರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದ ಪುತ್ತೂರು ಬಿಲ್ಲವ ಸಂಘದ ಕೋಶಾಧಿಕಾರಿ ಬಿ. ಟಿ ಮಹೇಶ್ಚಂದ್ರ ಸಾಲ್ಯಾನ್ ಇವರು ಈ ವರ್ಷದ ಕೆಲಸ ಕಾರ್ಯಗಳನ್ನು ಗಮನಿಸಿ ಅಭಿನಂದಿಸಿ ನೂತನ ತಂಡಕ್ಕೆ ಶುಭ ಹಾರೈಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ್ ಅಮೀನ್ […]

Read More

ಯುವವಾಹಿನಿ ಸೇವಾ ಮನೋಭಾವ ಹೊಂದಿರುವ ವಿಭಿನ್ನ ಸಂಸ್ಥೆ : ಡಾ. ಭರತ್ ವೈ ಶೆಟ್ಟಿ

ಕುಪ್ಪೆಪದವು :- ಯುವವಾಹಿನಿಯ ಶಿಸ್ತು ಬದ್ಧ ಕಾರ್ಯಕ್ರಮ, ಪಾರದರ್ಶಕತೆ, ಎಲ್ಲವನ್ನು ಗಮನಿಸಿ ಈ ಬಾರಿ ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದೆ. ಈ ಸಂಸ್ಥೆಯು ಬೇರೆ ಸಂಘಟನೆಗಿಂತ ವಿಭಿನ್ನವಾಗಿದೆ. ಸೇವಾ ಮನೋಭಾವ ಹೊಂದಿರುವ ಸಂಸ್ಥೆಯ ಕಾರ್ಯಕ್ರಮಕ್ಕೆ ಬೇರೆ ಯಾವ ಕಾರ್ಯಕ್ರಮದ ಒತ್ತಡವಿದ್ದರೂ ಕೂಡ ಪಾಲ್ಗೊಳ್ಳುವ ಅವಕಾಶ ಬಿಟ್ಟುಕೊಡಲಾರೆ. ಯುವವಾಹಿನಿ ಸಂಸ್ಥೆಗೆ ಯಾವುದೇ ರೀತಿಯ ಸಹಕಾರ ನೀಡಲು ಸದಾ ಸಿದ್ಧ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆ ಮತ್ತು ತತ್ವಾದರ್ಶಗಳು ಸರ್ವರಿಗೂ ಅನ್ವಯವಾಗುವಂತಿವೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!