01-02-2026, 1:00 PM
ಪಡೀಲು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇವರ ಆಶ್ರಯದಲ್ಲಿ “ಆರೋಗ್ಯ ಸೇವಾ ಸಂಗಮ” ಎಂಬ ಶೀರ್ಷಿಕೆಯಡಿ 100ನೇ ಬೃಹತ್ ಉಚಿತ ವೈದ್ಯಕೀಯ, ನೇತ್ರ, ದಂತ ಹಾಗೂ ರಕ್ತದಾನ ಶಿಬಿರ, ವೈದ್ಯ ಸೇವಾ ಸಾಧಕರ ಅಭಿನಂದನಾ ಕಾರ್ಯಕ್ರಮ ಹಾಗೂ ಸಂಘದ ಹದಿನಾಲ್ಕನೇ ವಾರ್ಷಿಕೋತ್ಸವವು ದಿನಾಂಕ 01.02.2026ರ ಆದಿತ್ಯವಾರ ಪಡೀಲಿನ ಬೈರಾಡಿ ಕೆರೆಯ ಸಮೀಪದಲ್ಲಿರುವ ಆತ್ಮಶಕ್ತಿ ಸೌಧದಲ್ಲಿ ಯಶಸ್ವಿಯಾಗಿ ನಡೆಯಿತು. ಈ ಸಮಾರಂಭದ ಅಂಗವಾಗಿ ಶಿಬಿರಕ್ಕೆ ಸಹಯೋಗ ನೀಡಿದ ವಿವಿಧ ಸಂಘ–ಸಂಸ್ಥೆಗಳ ಗುರುತಿಸುವಿಕೆ ಮತ್ತು ಗೌರವ ಕಾರ್ಯಕ್ರಮವನ್ನು […]
Read More
01-02-2026, 11:30 AM
ಕೊಲ್ಯ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಆಯೋಜಿಸಲಾದ ಬಿಲ್ಲವಾಸ್ ವುಮೆನ್ಸ್ ಪ್ರೀಮಿಯರ್ ಲೀಗ್ – 2026 ಕ್ರಿಕೆಟ್ ಪಂದ್ಯಾಟದಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ತಂಡವು ಭಾಗವಹಿಸಿ, ಅತ್ಯುತ್ತಮ ಪ್ರದರ್ಶನ ನೀಡಿತು. ಪಂದ್ಯಾಟದ ಅವಧಿಯಲ್ಲಿ ಕೊಲ್ಯ ಘಟಕದ ಮಹಿಳಾ ಆಟಗಾರ್ತಿಯರು ತಮ್ಮ ಆಟದ ಮೂಲಕ ಕೌಶಲ್ಯ, ಆತ್ಮವಿಶ್ವಾಸ ಮತ್ತು ತಂಡಾತ್ಮಕ ಮನೋಭಾವವನ್ನು ಪ್ರದರ್ಶಿಸಿ, ಪ್ರೇಕ್ಷಕರ ಹಾಗೂ ಸಂಘಟಕರ ಮೆಚ್ಚುಗೆಗೆ ಪಾತ್ರರಾದರು.
Read More
31-01-2026, 9:00 PM
ಬೆಳ್ತಂಗಡಿ : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹಾಗೂ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ, ಬೆಳ್ತಂಗಡಿ ತಾಲೂಕು ಇವರ ಸಹಕಾರದೊಂದಿಗೆ ದಿನಾಂಕ 31.01.2026 ಶನಿವಾರ ಸಂಭ್ರಮ–2 ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಪಣಕಜೆಯ ನವಸುಮ ನಿವಾಸದಲ್ಲಿ ಆತ್ಮೀಯವಾಗಿ ನಡೆಯಿತು. ಈ ಸಂದರ್ಭದಲ್ಲಿ ವಿಶೇಷವಾಗಿ “ಸ್ಪಂದನ : ಹೃದಯ ಸ್ತಂಭನ ಹಾಗೂ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳು” ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಉಜಿರೆ ಬೆನಕ ಹೆಲ್ತ್ ಸೆಂಟರ್ನ ತುರ್ತು ಚಿಕಿತ್ಸಾ ತಜ್ಞರಾದ ಡಾ. […]
Read More
31-01-2026, 10:00 AM
ಪಡುಬಿದ್ರಿ: ಕ್ರೀಡೆ ಸಂಘಟನೆಗೆ ಏಕತೆಗೆ ಅತ್ಯುತ್ತಮ ಆಯ್ಕೆ. ಕ್ರೀಡೆ ಮೂಲಕ ಮಹಿಳಾ ಸಬಲೀಕರಣದತ್ತ ಹೆಜ್ಜೆ ಇಟ್ಟ ಯುವವಾಹಿನಿಯ ಪ್ರಯತ್ನ ಶ್ಲಾಘನೀಯ ಎಂದು ಭಾರತ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ತಿಳಿಸಿದರು. ಅವರು ಯುವವಾಹಿನಿ ಪಡುಬಿದ್ರಿ ಘಟಕದ ವತಿಯಿಂದ ಆಯೋಜಿಸಲ್ಪಟ್ಟ ಬಿಲ್ಲವಾಸ್ ವುಮನ್ಸ್ ಪ್ರೀಮಿಯರ್ ಲೀಗ್- 2026 ರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಸನ್ಮಾನ ಸ್ವೀಕರಿಸಿದ ಅಂತಾರಾಷ್ಟ್ರೀಯ ಕ್ರೀಡಾಪಟು ಕು| ರಕ್ಷಾ ರೆಂಜಾಳ ಮಾತನಾಡಿ, ಇಂತಹ ವಿನೂತನ […]
Read More
28-01-2026, 7:00 PM
ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ “ಮನೆ ಮನದಲ್ಲಿ ಭಜನೆ” ಯೋಜನೆಯ ಅಂಗವಾಗಿ, ದಿನಾಂಕ 28-01-2026 ಬುಧವಾರ ಘಟಕದ ಗೌರವ ಸದಸ್ಯರಾದ ಪ್ರಕಾಶ್ ಪೂಜಾರಿ ಅವರ ಮನೆಯಲ್ಲಿ ಸಂಜೆ 6:00 ಗಂಟೆಗೆ ಗುರುಪೂಜೆ ಹಾಗೂ ಘಟಕದ ಭಜನಾ ತಂಡದ ವತಿಯಿಂದ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಭಕ್ತಿ–ಭಾವಪೂರ್ಣ ಭಜನಾ ಕೀರ್ತನೆಯಲ್ಲಿ ಯುವವಾಹಿನಿ ಮಂಗಳೂರು ಘಟಕದ ಸದಸ್ಯರಾದ ಸದಾನಂದ ಪೂಜಾರಿ ಅವರು ಗುರುಪೂಜಾ ಕಾರ್ಯವನ್ನು ನೆರವೇರಿಸಿದರು. ಭಜನಾ ಸೇವೆಗೆ ಆತಿಥ್ಯ ವಹಿಸಿದ ಪ್ರಕಾಶ್ ಪೂಜಾರಿ ದಂಪತಿಗಳನ್ನು ಘಟಕದ ವತಿಯಿಂದ […]
Read More
27-01-2026, 8:00 PM
ಮಂಗಳೂರು : ಯುವವಾಹಿನಿ ಸಂಸ್ಥೆಯು ತನ್ನ ಸಂಘಟನಾ ಚಟುವಟಿಕೆಗಳ ಮೂಲಕ ಸಮಾಜಮುಖಿ ಮೌಲ್ಯಗಳ ಪರಿಣಾಮಕಾರಿ ಅನುಷ್ಠಾನಕ್ಕೆ ನಿರಂತರವಾಗಿ ಕೈಜೋಡಿಸುತ್ತಿದ್ದು, ಶೈಕ್ಷಣಿಕ ಪ್ರೋತ್ಸಾಹ, ಸೇವಾ ಕಾರ್ಯಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಯುವಕರಲ್ಲಿ ಸಾಮಾಜಿಕ ಹೊಣೆಗಾರಿಕೆ, ಶಿಸ್ತು ಮತ್ತು ಸೇವಾಭಾವವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಭಾರತೀಯ ವೈದ್ಯರ ಸಂಘದ ಅಧ್ಯಕ್ಷರಾದ ಡಾ. ಸದಾನಂದ ಪೂಜಾರಿ ತಿಳಿಸಿದ್ದಾರೆ.ಅವರು ದಿನಾಂಕ 27.01.2026 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಆಯೋಜಿಸಲಾದ ಯುವವಾಹಿನಿ (ರಿ) ಮಂಗಳೂರು ಘಟಕದ 2026–27ನೇ ಸಾಲಿನ ನೂತನ […]
Read More
26-01-2026, 9:00 PM
ವೇಣೂರು : ಯುವವಾಹಿನಿ (ರಿ.) ವೇಣೂರು ಘಟಕದ ವತಿಯಿಂದ ದಿನಾಂಕ 26.01.2026ರ ಸೋಮವಾರ ಸೈಂಟ್ ಮೇರಿ ದ್ವೀಪಕ್ಕೆ ಒಂದು ದಿನದ ಪ್ರವಾಸ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.ಬೆಳಿಗ್ಗೆ 9 ಗಂಟೆಗೆ ವೇಣೂರುನಿಂದ ಹೊರಟ ಪ್ರವಾಸ ತಂಡವು ಬಜಗೋಳಿಯಲ್ಲಿ ಉಪಹಾರ ಸೇವಿಸಿ, ಬಸ್ಸಿನಲ್ಲಿ ವಿವಿಧ ಮನರಂಜನಾ ಕಾರ್ಯಕ್ರಮಗಳೊಂದಿಗೆ ಮಲ್ಪೆಗೆ ಪ್ರಯಾಣಿಸಿತು. ಬಳಿಕ ಬೋಟ್ ಮೂಲಕ ಸೈಂಟ್ ಮೇರಿ ದ್ವೀಪಕ್ಕೆ ಭೇಟಿ ನೀಡಿ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸಿ ಸಂಭ್ರಮಿಸಿದರು. ಮಧ್ಯಾಹ್ನದ ಊಟವನ್ನು ಮಲ್ಪೆ ಬೀಚ್ ಸಮೀಪದ ಹೋಟೆಲ್ನಲ್ಲಿ ಸೇವಿಸಿದ ಬಳಿಕ ಮಲ್ಪೆ […]
Read More
26-01-2026, 1:00 PM
ಮಾಣಿ : ಕ್ರೀಡೆ ಎಂಬುದು ಕೇವಲ ದೈಹಿಕ ಚಟುವಟಿಕೆಗೆ ಸೀಮಿತವಲ್ಲ; ಅದು ಯುವ ಮನಸ್ಸುಗಳನ್ನು ಒಗ್ಗೂಡಿಸುವ ಬಾಂಧವ್ಯದ ಶಕ್ತಿಯಾಗಿದ್ದು, ಸಂಘಟನಾ ಬಲವರ್ಧನೆಗೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಅವರು ಹೇಳಿದರು.ಅವರು ಗಣರಾಜ್ಯೋತ್ಸವದ ಅಂಗವಾಗಿ ದಿನಾಂಕ 26/01/2026 ರಂದು ಬಂಟ್ವಾಳ ತಾಲೂಕಿನ ಅನಂತಾಡಿಯ ಚಿತ್ತರಿಗೆ ಗದ್ದೆಯಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ಆಶ್ರಯದಲ್ಲಿ ಆಯೋಜಿಸಲಾದ ಲೀಗ್ ಮಾದರಿಯ ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟ “ಯುವ ಫ್ಯಾಮಿಲಿ ಚಾಂಪಿಯನ್ಸ್ ಕ್ರಿಕೆಟ್ […]
Read More
25-01-2026, 9:00 PM
ಕಡಬ: ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ದಿನಾಂಕ 25.01.2026ರ ಆದಿತ್ಯವಾರ ಸಂಜೆ 7.15 ರಿಂದ 9.30 ಗಂಟೆಯವರೆಗೆ ಕಡಬದ ಕುತ್ಯಾಡಿ ಗ್ರಾಮದಲ್ಲಿ ಐದು ಮನೆಗಳಲ್ಲಿ ಮನೆ–ಮನೆ ಭಜನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕುತ್ಯಾಡಿಯ ಶ್ರೀಮತಿ ಮತ್ತು ಶ್ರೀ ಸುನಂದ ಪೂಜಾರಿ, ಶ್ರೀಮತಿ ಯಶೋದಾ ಪೂಜಾರಿ, ಶ್ರೀಮತಿ ಸುನಿತಾ ದಿನೇಶ್ ಪೂಜಾರಿ, ಶ್ರೀಮತಿ ಪ್ರೇಮ ಪೂಜಾರಿ, ಶ್ರೀಮತಿ ದಿವ್ಯ ಮತ್ತು ಬೇಬಿ ಪೂಜಾರಿ ಇವರ ಮನೆಗಳಲ್ಲಿ ಭಜನಾ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕಡಬ ಘಟಕದ ಸದಸ್ಯರು ಉತ್ಸಾಹದಿಂದ […]
Read More
25-01-2026, 8:30 PM
ಮಂಗಳೂರು : ಸೇವಾ ಮನೋಭಾವ, ಸಂಘಟನಾ ಶಕ್ತಿ ಮತ್ತು ಸಮಾಜಮುಖಿ ಚಿಂತನೆಯ ದಶಕದ ಪಯಣವನ್ನು ಸ್ಮರಿಸುವಂತೆ, ಯುವವಾಹಿನಿ (ರಿ.) ಕಂಕನಾಡಿ ಘಟಕದ ದಶಮಾನೋತ್ಸವ ಸಂಭ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ದಿನಾಂಕ 25-01-2026ರ ಆದಿತ್ಯವಾರ ಕಂಕನಾಡಿ ಗರೋಡಿ ಸಮೀಪದ ಸಮೃದ್ಧಿ ಭವನದಲ್ಲಿ ಅರ್ಥಪೂರ್ಣವಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಅವರು ಮಾತನಾಡಿ,“ಹಿರಿಯರು ನಡೆದು ಬಂದ ತತ್ವಾದರ್ಶಗಳೇ ಸಂಘಟನೆಯ ನೆಲೆ. ಆ ಮಾರ್ಗದರ್ಶನವಿಲ್ಲದೆ ಹೊಸಬರ ಹೆಜ್ಜೆಗಳು […]
Read More