13-08-2017, 7:34 AM
ತುಳುನಾಡಿನಾದ್ಯಂತ ನಡೆಯುತ್ತಿರುವ ಆಟಿಡೊಂಜಿ ದಿನ,ಕೆಸರ್ ಡ್ ಒಂಜಿ ದಿನ ಮುಂತಾದ ಕಾರ್ಯಕ್ರಮಗಳನ್ನು ಸಡಗರ, ಸಂಭ್ರಮದಿಂದ ಮಾಡುತ್ತಿದ್ದೇವೆ.. ಈ ಸಂಭ್ರಮ ಒಂದು ದಿನಕ್ಕೆ ಸೀಮಿತವಾಗಿರದೆ, ನಮ್ಮ ವಿರಾಮದ ವೇಳೆಯಲ್ಲಿ ನಿತ್ಯ ನಿರಂತರವಾಗಿ ನಡೆಯಬೇಕಾಗಿದೆ. ಕೃಷಿ ಚಟುವಟಿಕೆಗಳಿಗೆ ನಾವು ಮೈಯೊಡ್ಡಿದರೆ, ನಮ್ಮ ಆರೋಗ್ಯವೃದ್ಧಿಯಾಗುವುದು.ಕೃಷಿಕರಾಗಿ ಬದುಕಿದ ನಮ್ಮ ಗುರುಹಿರಿಯರ ಆರೋಗ್ಯದ ಗುಟ್ಟು ಇದೇ ಎಂದು ಅಡ್ವೆ ರವೀಂದ್ರ ಪೂಜಾರಿಯವರು ತಿಳಿಸಿದರು. ಅವರು ದಿನಾಂಕ 13-08-2017 ಆದಿತ್ಯವಾರದಂದು ಅಡ್ವೆ ಆನಂದಿ ಸಭಾಭವನದಲ್ಲಿ ಯುವವಾಹಿನಿ(ರಿ.) ಅಡ್ವೆ ಘಟಕದ ವತಿಯಿಂದ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ […]
Read More
12-08-2017, 1:33 PM
ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದಿಂದ ವನಮಹೋತ್ಸವ ಕಾರ್ಯಕ್ರಮವು ದಿನಾಂಕ 12.08.2017 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪರಪಾದೆಯಲ್ಲಿ ನಡೆಯಿತು ಮುಖ್ಯ ಅತಿಥಿಯಾಗಿ ಆಗಮಿಸಿದ ವಲಯ ಆರಣ್ಯಧಿಕಾರಿ ಶ್ರೀ ಪಿ ಶ್ರೀಧರ್ ಮಾತನಾಡಿ ಅರಣ್ಯ ಸಂಪತ್ತಿನ ಮಹತ್ವ ಅರಿತು ಬಾಳೋಣ, ನೀರಿಗಾಗಿ ಆರಣ್ಯ ಎಂಬ ಘೋಷಣೆಯ ಮೂಲಕ ವನಮಹೋತ್ಸವ ಆಚರಣೆ ಅರ್ಥಪೂರ್ಣವಾಗಿದೆ ಹಾಗೂ ಜಾಗವನ್ನು ಒದಗಿಸಿಕೊಟ್ಟಲ್ಲಿ 50 ಗಿಡಗಳನ್ನು ನೆಟ್ಟು ಸುತ್ತ ಬೇಲಿ ಹಾಕಿ ಕೊಡುವ ಸರಕಾರದ ಉಚಿತ ಯೋಜನೆಯ ಸದುಪಯೋಗ ಪಡೆಯುವಂತೆ ವಿನಂತಿಸಿದರು.. ಕಾರ್ಯಕ್ರಮದಲ್ಲಿ ಕೇOದ್ರ […]
Read More
12-08-2017, 10:30 AM
ಅವಕಾಶಗಳು ಎಳವೆಯಲ್ಲಿಯೇ ಸಿಕ್ಕಾಗ ಮಕ್ಕಳ ಪ್ರತಿಭಾ ವಿಕಸನವು ಅತ್ಯಂತ ವೇಗದಿಂದ ಸಾಗುತ್ತದೆ. ಮಕ್ಕಳ ಪ್ರಾಯಕ್ಕೆಅನುಗುಣವಾದ ಸಾಮಥ್ರ್ಯಗಳು ಪ್ರತಿಯೊಬ್ಬರಲ್ಲೂ ಇದೆ ಅದನ್ನು ಗುರುತಿಸಿಕೊಳ್ಳುವ ಕೆಲಸವನ್ನು ಹೆತ್ತವರು ಮಾಡಬೇಕಿದೆ, ಇಂತಹ ಅವಕಾಶಗಳಲ್ಲಿ ಇಂದಿನ ಕಾರ್ಯಕ್ರಮವೂ ಹೆಚ್ಚು ಪ್ರಸ್ತುತ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ) ಅಗ್ಗಿದಕಳಿಯ ಸಸಿಹಿತ್ಲು ಇದರ ಅಧ್ಯಕ್ಷರಾದ ಪ್ರಕಾಶ್ಕುಮಾರ್ ಬಿಎನ್ ತಿಳಿಸಿದರು. ಅವರು ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಯುವವಾಹಿನಿ(ರಿ) ಸಸಿಹಿತ್ಲು ಘಟಕದ ವತಿಯಿಂದ ನಡೆದ ಶ್ರೀ ಕೃಷ್ಣ ವೇಷ ಸ್ಪರ್ಧೆಯನ್ನು […]
Read More
10-08-2017, 9:07 AM
ಸಹೋದರ ಸಹೋದರಿಯ ಪವಿತ್ರ ಸಂಬಂಧ ಬೆಸೆಯುವ ರಕ್ಷಾ ಬಂಧನದ ಮಹತ್ವ ಹಾಗೂ ದೇಶದ ರಕ್ಷಣೆಯಲ್ಲಿ ಪ್ರತಿ ಪ್ರಜೆಗಳ ಪಾತ್ರ ಬಗ್ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಕಾರ್ಯವಹ ರಾಜೇಶ್ ಉಪನ್ಯಾಸ ನೀಡಿದರು.ಅವರು ದಿನಾಂಕ 10.08.2017ರಂದು ಯುವವಾಹಿನಿ ಕಂಕನಾಡಿ ಘಟಕದ ವತಿಯಿಂದ ಉಜ್ಜೋಡಿ ಮಹಾಂಕಾಳಿ ದೈವಸ್ಥಾನದ ವಠಾರದಲ್ಲಿ ಜರುಗಿದ ರಕ್ಷಾಬಂಧನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು ಯುವವಾಹಿನಿ ಕಂಕನಾಡಿ ಘಟಕದ ಅಧ್ಯಕ್ಷರಾದ ಗೋಪಾಲ ಪೂಜಾರಿ ಸಭೆಯ ಅದ್ಯಕ್ಷತೆಯನ್ನು ವಹಿಸಿದ್ದರು.ವೇದಿಕೆಯಲ್ಲಿ ಘಟಕದ ಸಲಹೆಗಾರರಾದ ಪರಮೇಶ್ವರ ಪೂಜಾರಿ, ನಿಕಟಪೂರ್ವ […]
Read More
06-08-2017, 1:58 PM
ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯವು ನಡೆಸಿದ 2016ನೇ ಸಾಲಿನ ಸ್ನಾತಕೋತ್ತರ ದಂತ ವೈದ್ಯಕೀಯ (M.D.S. Ortho) ಪರೀಕ್ಷೆಯಲ್ಲಿ ಸುಳ್ಯದ K.V.G. ದಂತ ಮಹಾವಿದ್ಯಾಲಯದ ವಿದ್ಯಾರ್ಥಿನಿ ಮಂಗ ಳೂರು ಸುರತ್ಕಲ್ನ ಡಾ| ನಿಖಿತಾ ಸುಕೇಶ್ 4ನೇ ರ್ಯಾಂಕ್ ಗಳಿಸಿದ್ದು ಬಿಲ್ಲವ ಸಮಾಜಕ್ಕೆ ಕೀರ್ತಿ ತಂದಿದ್ದಾರೆ. ಸ್ನಾತಕೋತ್ತರ ವಿಭಾಗದಲ್ಲಿ ಕಾಲೇಜಿಗೆ ದೊರೆತ ಒಟ್ಟು 8 ರ್ಯಾಂಕ್ಗಳಲ್ಲಿ 4ನೇ ರ್ಯಾಂಕ್ ಪಡೆದು ಕಾಲೇಜಿಗೂ ಹೆಮ್ಮೆ ಎನಿಸಿದ್ದಾರೆ. ಕಾಲೇಜಿನ ವಕ್ರ ದಂತ ವಿಭಾಗದ ಮುಖ್ಯಸ್ಥರಾದ ಡಾ| ಶರತ್ ಕುಮಾರ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ […]
Read More
06-08-2017, 1:54 PM
ಉಡುಪಿಯ ಶ್ರೀ ಕಿಶೋರ್ ಮತ್ತು ಶ್ರೀಮತಿ ಪ್ರೇಮಲತಾ ದಂಪತಿಗಳ ಸುಪುತ್ರಿ. ಕಲ್ಯಾಣಪುರ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಪ್ರತೀಕ್ಷಾ ಕೆ. ಇವರು ವಾಲಿಬಾಲ್ ಕ್ರೀಡೆಯಲ್ಲಿ ಮಿಂಚುತ್ತಿರುವ ಧ್ರುವತಾರೆ. ಓರ್ವ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿ ಹಲವು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳ ಸರಮಾಲೆಯನ್ನು ಕೊರಳಿಗೆ ಹಾಕಿಕೊಂಡಿರುವ ಸಾಧಕಿ ಇವರು 2014ರಲ್ಲಿ ನಡೆದ ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಪ್ರಥಮ, 2015 ರಲ್ಲಿ ಬೆಂಗಳೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ದ್ವಿತೀಯ, 2016ರಲ್ಲಿ ಮಂಗಳೂರಿನಲ್ಲಿ […]
Read More
06-08-2017, 1:53 PM
ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಸದಾನಂದ ಪೂಜಾರಿ ಮತ್ತು ಲಕ್ಷ್ಮೀ ದಂಪತಿಗಳ ಸುಪುತ್ರ. ಹೊಸದಿಲ್ಲಿಯ ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ವತಿಯಿಂದ 2016ರ ನವೆಂಬರ್ನಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಮೊದಲ ಹಂತದಲ್ಲೇ ಉತ್ತೀರ್ಣರಾಗಿದ್ದಾರೆ. ಪ್ರಸ್ತುತ ಇವರು ಮುಂಬಯಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದ ಸುಸಂದರ್ಭದಲ್ಲಿ ಗೌರವ ಅಭಿನಂದನೆ ಸಲ್ಲಿಸಲು ಸಂತೋಷಪಡುತ್ತೇವೆ. ಇವರಿಗೆ ತಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸುತ್ತಾ ಯುವವಾಹಿನಿ (ರಿ) ಕೇಂದ್ರ ಸಮಿತಿ, […]
Read More
06-08-2017, 1:48 PM
ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮಂಗಳೂರು, ಮಣಿಪಾಲ ಯುನಿವರ್ಸಿಟಿ ಇಲ್ಲಿ ಪಿಸಿಯೋಲಜಿ ವಿಭಾಗದಲ್ಲಿ ಉಪನ್ಯಾಸಕಿಯಾಗಿರುವ ಇವರು ಮಂಡಿಸಿದ ಮಹಾಪ್ರಬಂಧ ‘‘Role of Nucleus Akumbence & Retaled Subcortical Center’s in Alcohol Addiction in male vistor Albino rots’ ‘ರೋಲ್ ಆಫ್ ನ್ಯೂಕ್ಲಿಯಸ್ ಆಕುಂಬೆನ್ಸ್ ಆಂಡ್ ರಿಲೇಟೆಡ್ ಸಬ್ಕಾರ್ಟಿಕಲ್ ಸೆಂಟರ್ಸ್ ಇನ್ ಆಲ್ಕೋಹಾಲ್ ಆಡಿಕ್ಷನ್ ಇನ್ ಮೇಲ್ ವಿಸ್ಟಾರ್ ಆಲ್ಬಿನೊ ರಾಟ್ಸ್’ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಮಣಿಪಾಲ ವಿಶ್ವವಿದ್ಯಾನಿಲಯವು 2016 ಆಗಸ್ಟ್ನಲ್ಲಿ ಡಾಕ್ಟರೇಟ್ (ಪಿಎಚ್ಡಿ) ಪದವಿಯನ್ನು […]
Read More
06-08-2017, 1:48 PM
ಇವರು ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಕಣಿಯಾರು ದಿ| ಸುಬ್ಬಪ್ಪ ಪೂಜಾರಿ ಹಾಗೂ ಲೀಲಾವತಿ ದಂಪತಿಗಳ ಪುತ್ರ. ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಪ್ರಸ್ತುತ ಪ್ರಾಂಶುಪಾಲರಾಗಿರುವ ಪ್ರೊ| ಅಚ್ಯುತ್ತ ಪೂಜಾರಿ ಕೆ. ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ. ಇವರು ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ಶಾಸ್ತ್ರ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಪ್ರೊ| ವೈ. ಮುನಿರಾಜುರವರ ಮಾರ್ಗದರ್ಶನದಲ್ಲಿ ಮಂಡಿಸಿರುವ¸An Empirical Analysis of Banker & Customer Relationship Strategies […]
Read More
06-08-2017, 1:41 PM
ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕೆರೆ, ಉಡುಪಿ ಜಿಲ್ಲೆ ಇಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಮನೋಜ್ ಕುಮಾರ್ ಎಂ. ಇವರು ಮೈಸೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್ (ಪಿ.ಹೆಚ್.ಡಿ) ಪದವಿಯನ್ನು ಪಡೆದಿರುತ್ತಾರೆ. ಮೈಸೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಪ್ರೊ. ವೆಂಕಟೇಶ್ ಸಿ. ಇವರ ಮಾರ್ಗದರ್ಶನದಲ್ಲಿ ಶ್ರೀ ಮನೋಜ್ಕುಮಾರ್ ಎಂ ಇವರು ಮಂಡಿಸಿದ Construction of health related physical fitness Norms for 16-18 years boys of coastal Karnataka“ಎಂಬ ಮಹಾಪ್ರಬಂಧಕ್ಕೆ […]
Read More