Yuvavahini

ಇತರೆ

ಕೋಟಿಚೆನ್ನಯ ಕೆಸರುಗದ್ದೆ ಕ್ರೀಡಾಕೂಟ ಸಂಪನ್ನ

ಪುತ್ತೂರು: ಹಿಂದಿನ ಕಾಲಘಟ್ಟದ ಸಂಸ್ಕೃತಿ ಕಲೆಗಳು ನಶಿಸಿ ಹೋಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಯುವವಾಹಿನಿ ಘಟಕವು ಜಿಲ್ಲೆಯ 26 ಘಟಕಗಳ ಯುವಸಮೂಹಕ್ಕೆ ಹಿಂದಿನ ಸಂಸ್ಕೃತಿ ಕಲೆಗಳನ್ನು ನೆನಪಿಸುವ ಅಪೂರ್ವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶ್ಲಾಘನೀಯ ಎಂದು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲುರವರು ಹೇಳಿದರು. ಡಿಸೆಂಬರ್ 24 ರಂದು ಆನಡ್ಕ ಕಂಬಳಗದ್ದೆ ಮರಕೂರು ಜನನ ಎಂಬಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಸಂಘಟನೆಯಾದ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಹಾಗೂ […]

Read More

ಸಮಾಜದ ಅಭಿವೃಧ್ಧಿಗೆ ಯುವವಾಹಿನಿಯ ಪೂರಕ ಕೆಲಸ ಶ್ಲಾಘನೀಯ : ವಸಂತ ಬಂಗೇರ

ಬೆಳ್ತಂಗಡಿ : ಸಮಾಜದ ಅಭಿವೃಧ್ಧಿಗೆ ಯುವವಾಹಿನಿಯ ಪೂರಕ ಕೆಲಸ ಶ್ಲಾಘನೀಯ, ಯುವವಾಹಿನಿಯು ಯುವಜನತೆಗೆ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದು ಶಾಸಕ ಕೆ ವಸಂತ ಬಂಗೇರ ಹೇಳಿದರು . ಅವರು ದಿನಾಂಕ 17.12.2017 ರಂದು ಬೆಳ್ತಂಗಡಿ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯಾನ್ ಕಲ್ಯಾಣ ಮಂಟಪದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ 2017-18 ನೆೇ ಸಾಲಿನ ಪದಪ್ರಧಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾನಂದ ಉಂಗಿಲಬೈಲು ಅಧ್ಯಕ್ಷತೆ ವಹಿಸಿದ್ದರು. ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ […]

Read More

ಯುವವಾಹಿನಿ ಸಮಾಜಕ್ಕೆ ಮಾರ್ಗದರ್ಶನ ನೀಡುವ ಕಾರ್ಯ ಮಾಡುತ್ತಿದೆ : ಪೀತಾಂಬರ ಹೆರಾಜೆ

ಮೂಡಬಿದಿರೆ: ಹಳ್ಳಿಯ ಅಭಿವೃಧ್ಧಿಯಲ್ಲಿ ಯುವಜನತೆಯ ಪಾತ್ರ ಬಲು ಮಹತ್ವಪೂರ್ಣವಾಗಿದೆ. ಹಳ್ಳಿಯ ಜನರಿಗೆ ಉದ್ಯೋಗ ಆರೋಗ್ಯ ವ್ಯವಸ್ಥೆಗಳ ಬಗ್ಗೆ ಹಾಗೂ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಮತ್ತು ಮಾರ್ಗದರ್ಶನ ನೀಡುವ ಕೆಲಸ ಯುವವಾಹಿನಿಯಂತಹ ಘಟಕಗಳಿಂದಾಗಬೇಕಾಗಿದೆ ಎಂದು ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಉಪಾಧ್ಯಕ್ಷ ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ ಹೇಳಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ 26 ನೇ ನೂತನ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ದಿನಾಂಕ 10.12.2017 ರಂದು ಮೂಡಬಿದಿರೆಯ […]

Read More

ಸಂಖ್ಯೆಗಿಂತ ಶ್ರದ್ಧೆ ಮುಖ್ಯ, ಕಾರ್ಯದಕ್ಷತೆಯಿಂದ ಕಾರ್ಯಸಾಧನೆ : ಯಶವಂತ ಪೂಜಾರಿ

ಸಸಿಹಿತ್ಲು : ಸದಸ್ಯರ ಸಂಖ್ಯೆಯನ್ನು ಅವಲಂಭಿಸಿಕೊಂಡು ನಮ್ಮ ಕೆಲಸಗಳು ಯಶಸು ಕಾಣುವುದಿಲ್ಲ ಬದಲಾಗಿ ನಾವು ಮಾಡುವ ಕೆಲಸದಲ್ಲಿನ ಬದ್ಧತೆ, ಮತ್ತು ಕಾರ್ಯದಕ್ಷತೆಯಿಂದ ನಿಜವಾದ ಕಾರ್ಯಸಾಧನೆ ಸಾಧ್ಯವಾಗುತ್ತದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಪದಗ್ರಹಣ ಸಮಾರಂಭದಲ್ಲಿ ನೂತನ ತಂಡಕ್ಕೆ ಪ್ರಮಾಣವಚನ ಭೋಧಿಸಿ ಮಾತನಾಡಿದರು. ಯುವವಾಹಿನಿ ಸಸಿಹಿತ್ಲು ಘಟಕ ಒಂದು ಗ್ರಾಮ ವ್ಯಾಪ್ತಿಯನ್ನು ಹೊಂದಿದೆ, ಹೀಗಿದ್ದರೂ ಹತ್ತಾರು ಸಮಾಜಮುಖಿ ಕಾರ್ಯವನ್ನು ನಡೆಸಿದೆ, ಸಾಂಸ್ಕೃತಿಕವಾಗಿ ಉತ್ತಮ ಹೆಸರನ್ನು […]

Read More

ಯುವವಾಹಿನಿಯಿಂದ ಸಮಾಜದಲ್ಲಿ ವಿಶಿಷ್ಟ ಸಂಚಲನ : ಕೆ ವಸಂತ ಬಂಗೇರ

ವೇಣೂರು: ಯುವವಾಹಿನಿ ಯುವಕರ ಘಟಕ ಯುವಶಕ್ತಿಯನ್ನು ಬಳಸಿಕೊಳ್ಳುತ್ತಿರುವ ಯುವವಾಹಿನಿ ಘಟಕಗಳು ಸಮಾಜದಲ್ಲಿ ಉತ್ತಮ ಕಾರ್ಯಸಾಧನೆ ಮಾಡುತ್ತಿದೆ. ಶಿಕ್ಷಣ, ಆರೋಗ್ಯದ ಜತೆಗೆ ಬಡವರಿಗೆ ಸಹಾಯ ಹಸ್ತ ನೀಡುವ ಮೂಲಕ ಸಮಾಜದಲ್ಲಿ ಯುವವಾಹಿನಿ ವಿಶಿಷ್ಟ ಸಂಚಲನ ಮೂಡಿಸಿದೆ ಎಂದು ಬೆಳ್ತಂಗಡಿ ಶಾಸಕ ಕೆ ವಸಂತ ಬಂಗೇರ ಹೇಳಿದರು.ವೇಣೂರು ಗಾರ್ಡನ್ ವ್ಯೂ ಸಭಾಂಗಣದಲ್ಲಿ ದಿನಾಂಕ 01.12.2017 ರಂದು ಶುಕ್ರವಾರ ಜರಗಿದ ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿಯ 25ನೇ ವೇಣೂರು ನೂತನ ಘಟಕದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಯುವವಾಹಿನಿ ಸಮಾಜ ಸೇವೆಯ ಜತೆಗೆ […]

Read More

ಮಕ್ಕಳ ಹಬ್ಬ- 2017

ಮಕ್ಕಳಿಗೆ ಸಣ್ಣ ಪ್ರಾಯದಲ್ಲಿ ಅವರ ಪ್ರತಿಭೆಗಳನ್ನು ಗುರುತಿಸಲು ಸಾಂಸ್ಕೃತಿಕ ವೇದಿಕೆಗಳು ಅನಿವಾರ್ಯ. ಇಂತಹ ವೇದಿಕೆಗಳ ಮೂಲಕ ಪ್ರತಿಭೆಯ ಜೊತೆಗೆ, ಆತ್ಮವಿಶ್ವಾಸ ಮೂಡಲು ಸಹಕಾರಿಯಾಗಿದೆ. ಇಂದು ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗೆ ಹೆತ್ತವರು ಮತ್ತು ಶಿಕ್ಷಕರು ಗಮನಹರಿಸುತ್ತಿರುವುದು ಅನಿವಾರ್ಯವಾಗಿದೆ ಎಂದು ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿತೇಂದ್ರ ಪುರ್ಟಾಡೋ ಹೇಳಿದರು. ಅವರು ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ ದಿನಾಂಕ 19.11.2017 ರಂದು ನಂದಿಕೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ […]

Read More

ಸೂಪರ್ ಸ್ಪಷ್ಯಾಲಿಟಿ ಆರೋಗ್ಯ ಶಿಬಿರ

ಯುವವಾಹಿನಿ (ರಿ) ಉಡುಪಿ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಕೆಮ್ತೂರು,ಸಾಧನಾ ಯುವಕ ಮಂಡಲ ಹಾಗೂ ಸಾಧನಾ ಯುವತಿ ಮಂಡಲ ಇದರ ಜಂಟಿ ಆಶ್ರಯದಲ್ಲಿ, ದಿನಾಂಕ 12.11.2017 ರಂದು ಸೂಪರ್ ಸ್ಪೆಷ್ಯಾಲಿಟಿ ಆರೋಗ್ಯ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಕೆಮ್ತೂರು, ಉಡುಪಿ ಇಲ್ಲಿ ಜರುಗಿತು . ಯುವವಾಹಿನಿ(ರಿ) ಉಡುಪಿ ಘಟಕವು ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಮೂಲಕ ಆರೋಗ್ಯ ಪೂರ್ಣ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಶಿಬಿರವನ್ನು ದೀಪ ಬೆಳಗುವುದರ ಮೂಲಕ […]

Read More

ಯುವವಾಹಿನಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]

Read More

ತುಳುವೆರೆ ತುಳಸಿ ಪರ್ಬ

ಯಶಸ್ಸು ಗಳಿಸಲು ಐಶ್ವರ್ಯ, ವಿದ್ಯಾರ್ಹತೆ, ಅಥವಾ ವ್ಯಕ್ತಿಯ ಹಿನ್ನಲೆ ಮುಖ್ಯವಾಗುವುದಿಲ್ಲ . ಆತನ ಕನಸು, ಸಾಧಿಸುವ ಛಲ, ಪರಿಶ್ರಮ ಮುಖ್ಯವಾಗುತ್ತದೆ. ಇದರೊಂದಿಗೆ ತಾವು ತೊಡಗಿಸಿಕೊಂಡು ವ್ಯಕ್ತಿಯನ್ನು ಪ್ರೀತಿಸಿ ಅದನ್ನೇ ಪ್ರವೃತ್ತಿಯನ್ನಾಗಿಸಿದಾಗ ಯಶಸ್ಸು ಸಾಧ್ಯ. ಯುವವಾಹಿನಿಯ ರಾಜ್ಯೋತ್ಸವ ಪ್ರಶಸ್ತಿಯ ಹಿಂದೆ ಮೂವತ್ತು ವರುಷಗಳ ಸಾಧನೆಯ ಶ್ರಮವಿದೆ, ಪ್ರತಿಯೊಬ್ಬ ಯುವವಾಹಿನಿ ಸದಸ್ಯನ ಬೆವರ ಹನಿ ಇದೆ. ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ಅಭಿಪ್ರಾಯ ಪಟ್ಟರು. ಅವರು ದಿನಾಂಕ 01.11.2017 ರಂದು ಯುವವಾಹಿನಿ (ರಿ) ಹೆಜಮಾಡಿ ಘಟಕದ […]

Read More

ಯುವವಾಹಿನಿಯ ಸಮಾಜಮುಖಿ ಕಾರ್ಯ ಶ್ಲಾಘನೀಯ : ಹರಿಶ್ಚಂದ್ರ ಅಮೀನ್

ಆಧುನಿಕ ಜೀವನ ಶೈಲಿಯಿಂದ ನಾವು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ತೀರಾ ಅಗತ್ಯ, ಸ್ವಯಂಪ್ರೇರಿತ ರಕ್ತದಾನ ಮಾಡಿದ ಕಟಪಾಡಿ ಯುವವಾಹಿನಿ ಯುವಕರ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತ ಮಂಡಳಿಯ ಗೌರವ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್ ತಿಳಿಸಿದರು. ದಿನಾಂಕ 22.10.2017 ರಂದು ಯುವವಾಹಿನಿ(ರಿ) ಕಟಪಾಡಿ ಘಟಕದ ಆಶ್ರಯದಲ್ಲಿ ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ, ವೇದವ್ಯಾಸ ಭಜನಾ ಮಂದಿರ ಅಂಬಾಡಿ, ಬಿಲ್ಲವ ಒಕ್ಕೂಟ ಪಡುಏನಗುಡ್ಡೆ, ರಿಕ್ಷಾ ಚಾಲಕ ಮಾಲಕರ ಸಂಘ ಕಟಪಾಡಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!