Yuvavahini

ಇತರೆ

ಮಂಗಳೂರು ಮಹಿಳಾ ಯುವವಾಹಿನಿಯಿಂದ ಮಹಿಳಾ ಆರೋಗ್ಯ ಹಾಗೂ ಸ್ತನ ರೋಗಗಳ ಮಾಹಿತಿ

ಆಧುನಿಕ ವೈದ್ಯಕೀಯ ಕ್ಷೇತ್ರವು ತುಂಬಾ ಮುಂದುವರಿದಿದ್ದು ಆರಂಬಿಕ ಹಂತದಲ್ಲೇ ಗುರುತಿಸಿದರೆ ಕ್ಯಾನ್ಸರ್ ಸಂಪೂರ್ಣ ಗುಣಪಡಿಸಬಹುದು. ಆಧುನಿಕ ಜೀವನ ಶೈಲಿ, ಆಹಾರ ಪದ್ಧತಿ, ಹಾಗೂ ಆರೋಗ್ಯದ ಮೇಲೆ ಇರುವ ನಿರ್ಲಕ್ಷತನದಿಂದ ಸ್ತನ ಕ್ಯಾನ್ಸರ್ ವ್ಯಾಪಕವಾಗಿ ಹಬ್ಬಿದೆ ಎಂದು ಡಾ.ವೆಂಕಟೇಶ ಸಂಜೀವ ಅಭಿಪ್ರಾಯ ಪಟ್ಟರು. ಅವರು ಮಂಗಳೂರು ರಥಬೀದಿಯ ಮಹಿಳಾ ಪ್ರಥಮ ದರ್ಜೆ ಕಾಲೇಜು ಇಲ್ಲಿನ ಮಹಿಳಾ ವೇದಿಕೆ ಹಾಗೂ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 01.04.2017 ರಂದು ಜರುಗಿದ ಮಹಿಳಾ ಆರೋಗ್ಯ ಮತ್ತು ಸ್ತನ ರೋಗಗಳ […]

Read More

ಪುತ್ತೂರು ಯುವವಾಹಿನಿ :- ಶಿವಭಕ್ತ ವೀರಮಣಿ – ಯಕ್ಷಗಾನ ತಾಳಮದ್ದಳೆ

ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಪ್ರತಿಷ್ಠಾ ವರ್ದತ್ಯುತ್ಸವದ ಪ್ರಯುಕ್ತ  ದಿನಾಂಕ 26.03.2017 ಬೆಳಗ್ಗೆ 10.00 ರಿಂದ ಪುತ್ತೂರು ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದಲ್ಲಿ  ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ಶಿವಭಕ್ತ ವೀರಮಣಿ – ಯಕ್ಷಗಾನ ತಾಳಮದ್ದಳೆ  ಜರುಗಿತು. ಪುತ್ತೂರು ಬಿಲ್ಲವ ಸಂಘದ ಅದ್ಯಕ್ಷರಾದ ಜಯಂತ ನಡುಬೈಲು ಸಮಾರಂಭ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಯುವವಾಹಿನಿ ಅದ್ಯಕ್ಷ ಜಯಂತ ಪೂಜಾರಿ, ಕಾರ್ಯದರ್ಶಿ ಉದಯ ಕೊಲಾಡಿ, ಶಶಿಧರ ಕಿನ್ನಿಮಜಲು,ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read More

ಕಂಕನಾಡಿ ಯುವವಾಹಿನಿಯ 2017-18ನೇ ಸಾಲಿನ ಪದಗ್ರಹಣ

ಯುವವಾಹಿನಿ(ರಿ) ಕಂಕನಾಡಿ ಘಟಕದ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 26.03.2017 ನೇ ಆದಿತ್ಯವಾರ ಉಜ್ಜೋಡಿ ಶ್ರೀ ಮಹಾಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಜರುಗಿತು. ಗೋಪಾಲ ಪೂಜಾರಿ ನೇತೃತ್ವದ 21 ಸದಸ್ಯರ ತಂಡವು ಸಂಘಟನೆಯನ್ನು ಸಮರ್ಥವಾಗಿ ಮುನ್ನಡೆಸುವ ಬಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. 2017-18 ನೇ ಸಾಲಿನ ಕಾರ್ಯಕಾರಿ ಸಮಿತಿ : ಅಧ್ಯಕ್ಷರು : ಗೋಪಾಲ ಪೂಜಾರಿ ಉಪಾಧ್ಯಕ್ಷರು : ಭವಿತ್ ರಾಜ್ ಕಾರ್ಯದರ್ಶಿ : ಮೋಹನ್ ಜಿ.ಅಮೀನ್ ಜತೆ ಕಾರ್ಯದರ್ಶಿ : ಶ್ರೀಮತಿ ನಯನಾ ಕೋಶಾಧಿಕಾರಿ […]

Read More

ಯುವವಾಹಿನಿ ಕ್ರಾಂತಿಕಾರಿ ಬದಲಾವಣೆಯ ರೂವಾರಿ – ನವನೀತ ಡಿ.ಹಿಂಗಾಣಿ

ಆಧುನಿಕ ಸಮಾಜದಲ್ಲಿ ಬದಲಾಗುತ್ತಿರುವ ಜೀವನ ಕ್ರಮದಲ್ಲಿ ಯುವವಾಹಿನಿ ಸಮಾಜಕ್ಕೆ ಅನಿವಾರ್ಯವಾಗಿದೆ. ಕಳೆದ 30 ವರ್ಷಗಳಿಂದ ಯುವವಾಹಿನಿ ಬಿಲ್ಲವ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಿದೆ ಎಂದು ಬೆಂಗಳೂರಿನ ಖ್ಯಾತ ವಕೀಲರಾದ ನವನೀತ ಡಿ.ಹಿಂಗಾಣಿ ತಿಳಿಸಿದರು. ಅವರು ಉಜ್ಜೋಡಿ ಶ್ರೀ ಮಹಾಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ(ರಿ) ಕಂಕನಾಡಿ ಘಟಕ 2017-18 ನೇ ಸಾಲಿನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವ್ಯಕ್ತಿತ್ವ ವಿಕಸನ, ಸಾಮಾಜಿಕ ಸ್ಥಾನಮಾನ, ನಾಯಕತ್ವದ ಬೆಳವಣಿಗೆ ಹಾಗೂ ಸಹಸ್ರಾರು ಜನರ ವ್ಯಕ್ತಿತ್ವವನ್ನು ರೂಪಿಸುವಂತಹ ಕಾರ್ಯವನ್ನು ಯುವವಾಹಿನಿ […]

Read More

ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕ ನಡೆದು ಬಂದ ದಾರಿ

ಲೋಕ ಶಾಂತಿ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುವರ್ಯರ ತತ್ವಾದರ್ಶದ ನೆಲೆಯಲ್ಲಿ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ ಎಂಬ ಬೋಧನೆಯ ಅನುಸಾರ ವಿದ್ಯೆ-ಉದ್ಯೋಗ-ಸಂಪರ್ಕ ಎಂಬ ಮೂರು ಮುಖ್ಯ ಧ್ಯೇಯಗಳನ್ನಿಟ್ಟುಕೊಂಡು ಸಮಾಜ ಅಭ್ಯುದಯದ ಕೈಂಕರ್ಯಕ್ಕಾಗಿ 1987  ಅಕ್ಟೋಬರ್ 2 ರಂದು ಸುಂಕದಕಟ್ಟೆಯ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದ ಸನ್ನಿಧಿಯಲ್ಲಿ ಅಸ್ತಿತ್ವಕ್ಕೆ ಬಂದ ಬಿಲ್ಲವ ಸಮಾಜದ ನಿಸ್ವಾರ್ಥ ಸಮಾನ ಮನಸ್ಕ ಯುವಕರ ಸಂಘಟನೆ ಯುವವಾಹಿನಿ. ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಸಮಾಜದಲ್ಲಿ ಬಿಲ್ಲವರು ಬಲಿಷ್ಠರಾಗಬೇಕು ಎಂಬ ಸಂಕಲ್ಪದಲ್ಲಿ ಯುವವಾಹಿನಿ 1987 ರಿಂದಲೂ ಕೆಲಸ ನಿರ್ವಹಿಸುತ್ತಿದೆ. ದಕ್ಷಿಣ ಕನ್ನಡ […]

Read More

ಮೂಲ್ಕಿ ಯುವವಾಹಿನಿ : ಸ್ನೇಹ ಮಿಲನ

ಯುವವಾಹಿನಿ ಮುಲ್ಕಿ ಘಟಕದ ಕುಟುಂಬ ಸದಸ್ಯರ ಸ್ನೇಹ ಮಿಲನವು ದಿನಾಂಕ 19-03-2017 ರಂದು ಪ್ರಕೃತಿಯ ರಮಣೀಯ ಸ್ಥಳ ಮೂಲ್ಕಿ ಸಮೀಪದ ಮಟ್ಟು ನದಿ ತೀರದಲ್ಲಿ ಯಶಸ್ವಿಯಾಗಿ ಜರುಗಿತು. ತೆಂಗಿನಕಾಯಿ ಒಡೆಯುವ ಮೂಲಕ ಸ್ನೇಹ ಮಿಲನದ ಉದ್ಘಾಟನೆ ವಿಶಿಷ್ಟವಾಗಿ ನಡೆಯಿತು. ಈ ಸಂದರ್ಭದಲ್ಲಿ ಘಟಕದ ಸದಸ್ಯರಿಗೆ ವಿವಿದ ಮನೋರಂಜನಾ ಕಾರ್ಯಕ್ರಮ ಹಾಗೂ ಆಟೋಟ ಸ್ಪರ್ಧೆಗಳು ಆಯೇೂಜಿಸಲಾಯಿತು. ವಿಜೇತರಿಗೆ ಬಹುಮಾನ ವಿತರಿಸಿ ಔತಣಕೂಟದೊಂದಿಗೆ ಸ್ನೇಹ ಮಿಲನ ಸಮಾಪ್ತಿಯಾಯಿತು.

Read More

ಉಪ್ಪಿನಂಗಡಿ ಯುವವಾಹಿನಿಯಿಂದ ಪ್ರವಾಸ

ಯುವವಾಹಿನಿ ಉಪ್ಪಿನಂಗಡಿ ಘಟಕದ ಸದಸ್ಯರು ದಿನಾಂಕ 19.03.2017ರಂದು ಸಂಪರ್ಕದ ದೃಷ್ಟಿಯಿಂದ ಏಕದಿನ ಪ್ರವಾಸ ಕಾರ್ಯಕ್ರಮ ಜರುಗಿತು. ಅಂದು ಬೆಳಗ್ಗೆ 7 ರಿಂದ ಪ್ರವಾಸ ಆರಂಭಗೊಂಡಿತು. ಪುನರುಸ್ಥಾನಗೊಳ್ಳುತ್ಥಿರುವ ವೀರ ಪುರುಷರಾದ ಕೋಟಿ ಚೆನ್ನಯರ ಜನ್ಮಸ್ಥಾನ ಗೆಜ್ಜೆಗಿರಿ ನಂದನಬಿತ್ತಲ್ ಇಲ್ಲಿಗೆ ಭೇಟಿ ನೀಡಿ ಜನ್ಮಸ್ಥಾನದ ಅಭಿವೃದ್ಧಿ ಕಾರ್ಯಗಳು ಹಾಗೂ ಕ್ಷೇತ್ರದ ಇತಿಹಾಸದ ಬಗ್ಗೆ ಸ್ಥಳೀಯರಾದ ಮಹಾಬಲ ಇವರು ವಿವರ ನೀಡಿದರು, ನಂತರ ಹನುಮಗಿರಿ ಆಂಜನೇಯ ದೇವಸ್ಥಾನ, ಕಾಸರಗೋಡು ಮಲ್ಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಾಯಿತು. ಕೇರಳದ […]

Read More

ಸಂವೇದನಾಶೀಲ ಕಾರ್ಯ ಸಾಧನಾಶೀಲ ಮಹಿಳೆಯರ ಸಂವಾದ

ಯಶಸ್ಸು ನಮ್ಮನ್ನು ಜಗತ್ತಿಗೆ ಪರಿಚಯಿಸುತ್ತದೆ ಆದರೆ ಸೋಲು ನಮಗೆ ಜಗತ್ತನ್ನು ಪರಿಚಯಿಸುತ್ತದೆ. ಎಂದು ಸುವರ್ಣ ನ್ಯೂಸ್ ವಾರ್ತಾ ವಾಚಕಿ ವೀಣಾ ಪೂಜಾರಿ ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯ ಗ್ಲಾಸ್ ಹೌಸ್ ನಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಜರುಗಿದ ಸಂವೇದನಾ ಶೀಲ ಕಾರ್ಯ ಸಾಧನಾಶೀಲ ಮಹಿಳೆಯರ – ಸಂವಾದ – ಆಂತರ್ಯ – ಮನದೊಳಗಿನ ಮಾತು ಕಾರ್ಯಕ್ರಮದಲ್ಲಿ ಸಂವಾದ ನಿರ್ವಹಿಸಿ ಮಾತನಾಡಿದರು. […]

Read More

ಸಂವೇದನಾಶೀಲ ಕಾರ್ಯ ಸಾಧನಾಶೀಲ ಮಹಿಳೆಯರ ಅಭಿನಂದನೆ

ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಜರುಗಿತು. ಸೌಂದರ್ಯ ತಜ್ಞರ ವೇದಾ ಎಸ್.ಸುವರ್ಣ, ಚಲನಚಿತ್ರ ನಿರ್ದೇಶಕಿ ಅಶ್ವಿನೀ ಡಿ ಕೋಟ್ಯಾನ್, ಸುವರ್ಣ ನ್ಯೂಸ್ ವಾರ್ತಾ ವಾಚಕಿ ವೀಣಾ ಪೂಜಾರಿ, ಸಂಘಟಕಿ ಕೆ.ಎ.ರೋಹಿಣಿ,ಯುವ ಸಾಕ್ಸ್ ಫೋನ್ ವಾದಕಿ ಕುಮಾರಿ ಜ್ಯೋತಿ, ಯುವ ಉದ್ಯಮಿ ಕುಮಾರಿ ಉಷಾ, ಯುವ ಸಾಹಿತಿ ಪ್ರಮೀಳಾ ದೀಪಕ್ ಪೆರ್ಮುದೆ ಇವರುಗಳ ಸಾಧನೆಯನ್ನು ಗುರುತಿಸಿ, ಗೌರವಿಸಿ […]

Read More

ಆಂತರ್ಯ – ಮನದೊಳಗಿನ ಮಾತು – ಸಮಾರೋಪ

ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾದಾಗ ಮಾತ್ರ ಅತ್ಯಾಚಾರ ಶೋಷಣೆ ಮುಂತಾದ ಅಪರಾಧಗಳು ಕಡಿಮೆಯಾಗಬಹುದು. ಗಂಡಿಗಿಂತ ಹೆಚ್ಚಾಗಿ ಹೆಣ್ಣಿಗೆ ನೋವು ಸಹಿಸುವ ಶಕ್ತಿ ಇದೆ. ಮಹಿಳೆಯರ ಸಂಕಷ್ಟಕ್ಕೆ ಮಹಿಳೆಯರೇ ಬೆಂಬಲಕ್ಕೆ ನಿಂತಾಗ ಮಾತ್ರ ಮಹಿಳಾ ದಿನಾಚರಣೆಗೆ ನಿಜವಾದ ಅರ್ಥ ಬರುತ್ತದೆ. ಎಂದು ರೋಶನಿ ನಿಲಯದ ಪಿ.ಜಿ.ಸೆಂಟರ್ ಡೀನ್ ಡಾ.ರಮೀಳಾ ಶೇಖರ್ ತಿಳಿಸಿದರು. ಅವರು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಆಂತರ್ಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!