Yuvavahini

ಇತರೆ

ಆರೋಗ್ಯ ಮಾಹಿತಿ ಶಿಬಿರ

ದಿನಾಂಕ 5-10-2016 ರಂದು ಕೂಳೂರು ಘಟಕದ ವತಿಯಿಂದ ಕೂಳೂರಿನ ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಸಭಾಂಗಣದಲ್ಲಿ ಆರೋಗ್ಯದ ಬಗ್ಗೆ ಮಾಹಿತಿ ಶಿಬಿರ ಜರಗಿತು. ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಮೂತ್ರರೋಗ ತಜ್ಞರಾದ ಡಾ. ಸದಾನಂದ ಪೂಜಾರಿಯವರು ಭಾಗವಹಿಸಿ ಮೂತ್ರರೋಗಗಳ ಬಗ್ಗೆ, ಕಿಡ್ನಿ ವಿಫಲತೆಯ ಕಾರಣಗಳು ಹಾಗೂ ಮೂತ್ರರೋಗವನ್ನು ಯಾವ ರೀತಿಯಲ್ಲಿ ತಡೆಗಟ್ಟಬಹುದು ಎಂಬ ಸಂಪೂರ್ಣ ಅರಿವನ್ನು ಸಭೆಗೆ ನೀಡಿದರು. ಈ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿದ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷ ಸಂಜೀವ ಪೂಜಾರಿಯವರನ್ನು ಸಭೆಯಲ್ಲಿ ವಂದಿಸಲಾಯಿತು. ಆರೋಗ್ಯ […]

Read More

ಮಂಗಳೂರು ಮಹಿಳಾ ಘಟಕದ ವಿವಿಧ ಕಾರ್ಯಕ್ರಮಗಳು

ತಾ. 3-9-2016 ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ಸದಸ್ಯರಿಗೆ ಫಿನಾಯಿಲ್ ಹಾಗೂ ಲಿಕ್ವಿಡ್ ಸೋಪ್ ತಯಾರಿಸುವುದರ ಬಗ್ಗೆ ಜರಗಿದ ಮಾಹಿತಿ ಶಿಬಿರ. ತಾ. 16-9-2016 ರಂದು ಗುರುಜಯಂತಿ ಪ್ರಯುಕ್ತ ಲೇಡಿಹಿಲ್ ವೃತ್ತದಿಂದ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದವರೆಗೆ ಜರಗಿದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು. ತಾ. 16-9-2016 ರಂದು ಗುರುಜಯಂತಿ ಪ್ರಯುಕ್ತ ವೆನ್‌ಲಾಕ್ ಹಾಗೂ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಹಾಯಕರಿಗೆ (ಮನೆಯವರಿಗೆ) ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಯುವವಾಹಿನಿ ಮಂಗಳೂರು ಮಹಿಳಾ ಘಟಕದಿಂದ ಏರ್ಪಡಿಸಲಾಗಿತ್ತು. […]

Read More

ಬೆಳುವಾಯಿ ಘಟಕದ ಪದಗ್ರಹಣ ಕಾರ್ಯಕ್ರಮ

ಬೆಳುವಾಯಿ ಘಟಕದ 2016-17 ನೇ ಸಾಲಿನ ಪದಗ್ರಹಣ ಕಾರ್ಯಕ್ರಮವು ತಾ. 18-9-2016 ರಂದು ಬೆಳುವಾಯಿಯ ಷಣ್ಮುಖಾನಂದ ಸಭಾಗೃಹದಲ್ಲಿ ಜರಗಿತು. ಕಾರ್ಯಕ್ರಮವನ್ನು ಮೂಡಬಿದ್ರೆಯ ಮಹಾವೀರ ಕಾಲೇಜಿನ ಉಪನ್ಯಾಸಕ ಹರೀಶ್ ಕೆ. ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಸಮಾಜ ಸೇವಾ ಸಂಘ ಬೆಳುವಾಯಿ ಇದರ ಅಧ್ಯಕ್ಷ ರಾಜೇಶ್ ಸುವರ್ಣ ಬೆಳುವಾಯಿ ಇವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷ ವಿಠಲ್ ಎಂ. ಪೂಜಾರಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಸಾಧು ಪೂಜಾರಿಯವರು ನೂತನ ಪದಾಧಿಕಾರಿಗಳಿಗೆ ಪ್ರಮಾಣ […]

Read More

ಬೆಳ್ತಂಗಡಿ ಘಟಕದ ಪದಗ್ರಹಣ ಕಾರ್ಯಕ್ರಮ

ಯುವವಾಹಿನಿ ಬೆಳ್ತಂಗಡಿ ಘಟಕದ 2016-17 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ದಿ. 11-9-2016 ರಂದು ಜರಗಿತು. ಕಾರ್ಯಕ್ರಮವನ್ನು ಶಾಸಕ ಕೆ. ವಸಂತ ಬಂಗೇರರವರು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿತಾಂಬರ ಹೇರಾಜೆ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರ ಬಿ. ತಮ್ಮಯ ಭಾಗವಹಿಸಿದ್ದರು. ಈ ಶುಭ ಸಂದರ್ಭದಲ್ಲಿ ಶ್ರೀ ಬಿ. ತಮ್ಮಯರವರು ಬರೆದ ತುಲುವೆ ಅನ್ನುವ ತುಳು ಲಿಪಿ […]

Read More

ಕೂಳೂರಿನಲ್ಲಿ ಚಿಗುರೊಡೆದ ಯುವವಾಹಿನಿಯ 23ನೇ ಘಟಕ

ದಿ. 11-09-2016 ರಂದು ಕೂಳೂರು ಬ್ರಹ್ಮಶ್ರಿ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಯುವವಾಹಿನಿ ಕೂಳೂರು ಘಟಕದ ಉದ್ಘಾಟನಾ ಸಮಾರಂಭ ಹಾಗೂ ಪದಗ್ರಹಣ ಕಾರ್ಯಕ್ರಮ ಜರಗಿತು. ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಗೌರವಾಧ್ಯಕ್ಷ ರಾಘವೇಂದ್ರ ಕೂಳೂರು ನೂತನ ಘಟಕದ ಉದ್ಘಾಟನೆಯನ್ನು ನೆರವೇರಿಸಿ ಘಟಕದ ಸರ್ವರಿಗೂ ಶುಭ ಹಾರೈಸಿದರು. ನೂತನ ಪದಾಧಿಕಾರಿಗಳ ಘೋಷಣೆಯನ್ನು ಮಂಗಳೂರು ತಾಲೂಕು ಸಂಘಟನಾ ಕಾರ್ಯದರ್ಶಿ ಹರೀಶ್ ಕೆ. ಪೂಜಾರಿ ಇವರು ನೆರವೇರಿಸಿಕೊಟ್ಟರು. ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿಯವರು ನೂತನ […]

Read More

ಸೋಣ ಸಂಭ್ರಮ

ದಿನಾಂಕ 21-08-2016ರಂದು ಮಂಗಳೂರು ಮಹಿಳಾ ಘಟಕದ ವತಿಯಿಂದ ಮಂಗಳೂರಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ‘ಕರಾವಳಿ ಸಭಾಭವನ’ದಲ್ಲಿ ‘ಸೋಣ ಸಂಭ್ರಮ’ಕಾರ್ಯಕ್ರಮ ಜರಗಿತು. ಕಾರ್ಯಕ್ರಮ ಸಂತ ಅಲೋಶಿಯಸ್ ಕಾಲೇಜಿನ ಪ್ರಾಚಾರ್ಯರಾದ ಡಾ| ಗಣೇಶ್ ಅಮೀನ್ ಸಂಕಮಾರ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಇದರ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸಚಿತಾ ನಂದಗೋಪಾಲ್, ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ, ಘಟಕದ ಸಲಹೆಗಾರರಾದ ಅಶೋಕ್ ಕುಮಾರ್ ಮತ್ತು ಸಾಧು ಪೂಜಾರಿ ಮೊದಲಾದವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷೆ […]

Read More

ಆಟಿಡೊಂಜಿ ದಿನ

ದಿನಾಂಕ 14-08-2016ರ ಆದಿತ್ಯವಾರ ಅಡ್ವೆ ಘಟಕದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಜರಗಿತು. ಕಾರ್ಯಕ್ರಮ ಉದ್ಘಾಟನೆಯನ್ನು ಬ್ರಹ್ಮ ಬೈದರ್ಕಳ ಸೇವಾ ಸಮಿತಿ ಅಧ್ಯಕ್ಷ ಸುಂದರ ಯು. ಸುವರ್ಣರವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಮಿತಿಯ ಅಧ್ಯಕ್ಷ ಸಂತೋಷ್‌ಕುಮಾರ್, ಸಾಹಿತಿ ಉಗ್ಗಪ್ಪ ಪೂಜಾರಿ ಬೆದ್ರ, ಚಿತ್ರನಟ ಭೋಜರಾಜ ವಾಮಂಜೂರು, ಅಥನಿ ಕಂಪೆನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಕಿಶೋರ್ ಆಳ್ವ, ನವೀನ್‌ಚಂದ್ರ ಸುವರ್ಣ, ಸುರೇಶ್ ಶೆಟ್ಟಿ ಮೂಡುಗುತ್ತು, ತ್ಯಾಂಪಣ್ಣ ಶೆಟ್ಟಿ ಮತ್ತು ಮನೋಜ್ ಕರ್ಕೇರ ಮೊದಲಾದವರು ಭಾಗವಹಿಸಿದ್ದರು. ಹಿರಿಯರಾದ ಸುಧಾಕರ ಡಿ. […]

Read More

ಮೂಲ್ಕಿ ಘಟಕದಿಂದ 14ನೇ ’ಆಟಿಡೊಂಜಿ ದಿನ’ ಕಾರ್ಯಕ್ರಮ

ಆಟಿ ತಿಂಗಳ ಆಚರಣೆಯು ಪರಿಪೂರ್ಣವಾದ ವೈಜ್ಞಾನಿಕ ವಿಷಯಗಳಿಂದ ಕೂಡಿದ್ದು, ಇದರ ಬಗ್ಗೆ ಜನರಲ್ಲಿರುವ ಮೌಢ್ಯವನ್ನು ಸೂಕ್ತ ತಿಳಿವಳಿಕೆ ನೀಡುವ ಮೂಲಕ ನಿವಾರಿಸ ಬೇಕು. ಅದರಲ್ಲಿರುವ ಉತ್ತಮ ಅಂಶಗಳನ್ನು ಬೆಳೆಸಿಕೊಂಡು ಬರುವುದು ಒಳಿತು ಎಂದು ಹಿರಿಯ ಶಿಕ್ಷಕ ಹಾಗೂ ಪತ್ರಕರ್ತ ವಾಮನ ಇಡ್ಯಾ ಹೇಳಿದರು. ಅವರು ಮೂಲ್ಕಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಜರಗಿದ 14 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ಆಚರಣೆಯಲ್ಲಿ ಅಡಗಿರುವ ಮೌಢ್ಯಗಳ ಅಂಶಗಳನ್ನು ಸರಿಪಡಿಸಿಕೊಂಡು ಮುಖ್ಯವಾಗಿ ಯುವಜನರಲ್ಲಿ ತಿಳುವಳಿಕೆಯನ್ನು ಮೂಡಿಸಿ ತುಳು […]

Read More

ಪಾದರಸದ ಓಟದ ಸರದಾರ ಮನೀಷ್ ಪೂಜಾರಿ

ಕ್ರೀಡಾ ಪಟುಗಳ ವಿಶ್ವದ ಅತ್ಯುನ್ನತ ವೇದಿಕೆ- ಒಲಿಂಪಿಕ್ಸ್ ಇದರಲ್ಲಿ ಭಾಗವಹಿಸಲು ಬೇಕಾದ ಅರ್ಹತೆಯನ್ನು ಗಳಿಸುವುದೇ ಅತ್ಯಂತ ಕಷ್ಟಕರ ಪ್ರಯಾಸಕರ ಸವಾಲು. ಕ್ರೀಡೆಯ ತನ್ನ ಆಸಕ್ತಿಗಳನ್ನು ಮಾರ್ಗದರ್ಶಕರಾದ ಶ್ರೀಯುತ ಅಬ್ಬಾಸ್ ಹಾಗೂ ಲಚ್ಚೇಂದ್ರ ರಿಂದ ಪೋಷಿಸಿಕೊಂಡು ನಂಬಲಸಾಧ್ಯ ಸಾಧನೆ- ಒಲಿಂಪಿಕ್‌ಗೆ ಆಯ್ಕೆಯ ಕನಸನ್ನು ನೆನಸಾಗಿಸಿದ ಕರ್ನಾಟಕದ ಹೆಮ್ಮೆಯ ಶ್ರೀ ಮನೀಷ್ ಪೂಜಾರಿ ಒಬ್ಬ ಧ್ರುವತಾರೆ. ಕರ್ನಾಟಕದ ಉಸೈನ್ ಬೋಲ್ಟ್ ಎಂದು ಕರೆಯಲ್ಪಡಲು ಅರ್ಹ ರಾಷ್ಟ್ರೀಯ ದಾಖಲೆಯುತ್ತ ಸಾಗುವ ಪ್ರಥಮಹಂತ, ರಾಜ್ಯ ದಾಖಲೆಯ 100ಮೀ. ಓಟದಲ್ಲಿ 10.5 ಸೆಕೆಂಡುಗಳಲ್ಲಿ ಹಾಗೂ 21.5  ಸೆ.ನಲ್ಲಿ […]

Read More

SSLC ಯಲ್ಲಿ ಶ್ರೇಷ್ಠ ಸಾಧನೆಯ ಕು| ರಕ್ಷಾ ಡಿ. ಅಂಚನ್

ವಿದ್ಯಾರ್ಥಿಯೊಬ್ಬರ ಸತತ ಪರಿಶ್ರಮದ ಸಾಧನೆಯ ಮಾನದಂಡ ಆತ/ ಆಕೆ ಗಳಿಸುವ ಶೇಕಡಾವಾರು ಅಂಕ. ಈ ನಿಟ್ಟಿನಲ್ಲಿ ಈ ಬಾರಿ SSLC ಪರೀಕ್ಷೆಯಲ್ಲಿ 625 ಕ್ಕೆ 622 ಅಂಕಗಳಸಿ ಶೇ. 99.52 % ಸಾಧನೆ ಮಾಡಿದ ಕು| ರಕ್ಷಾ ಡಿ ಅಂಚನ್ ನೋಡುವವರು ನಿಬ್ಬೆರಗಾಗುವಂತೆ ಮಾಡಿದ್ದಾರೆ. ಶ್ರೀ ದೇವಿಪ್ರಸಾದ್ ಹಾಗೂ ಶ್ರೀಮತಿ ವಿನೋದಾ ದಂಪತಿಗಳ ಈ ಹೆಮ್ಮೆಯ ಕುವರಿ. ಉಚ್ಚಿಲದ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿತಿದ್ದಾಳೆ. ಕನ್ನಡದಲ್ಲಿ 125 ಕ್ಕೆ 125, ಹಿಂದಿ, ಗಣಿತ ಹಾಗೂ ವಿಜ್ಞಾನದಲ್ಲಿ 100 ಕ್ಕೆ 100 […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!