Yuvavahini

ಇತರೆ

ಏಷ್ಯನ್ ಪವರ್‌ಲಿಫ್ಟಿಂಗ್‌ನ 2016 ರ  ಚಾಂಪಿಯನ್‌ಶಿಪ್ ಸ್ಪರ್ಧೆಯ ಪದಕ ವಿಜೇತೆ ಕು| ಸುಪ್ರೀತಾ ಪೂಜಾರಿ

ಸಾಧಕಿ ಸಾಧಿಸುವ ಛಲ, ನಿರಂತರ ಪರಿಶ್ರಮ, ನಿರ್ದಿಷ್ಟ ಗುರಿ, ಆತ್ಮ ವಿಶ್ವಾಸದೊಂದಿಗೆ ಏನನ್ನಾದರೂ ಸಾಧಿಸಬಹುದೆನ್ನುವುದಕ್ಕೆ ಬಿಲ್ಲವ ಕುವರಿ ಸುಪ್ರೀತಾ ಪೂಜಾರಿ ಒಂದು ನಿದರ್ಶನ. ಪವರ್ ಲಿಫ್ಟಿಂಗ್‌ನಂತಹ ಕಠಿಣ ತರಬೇತಿ ಬೇಡುವ ಕ್ರೀಡೆಯಲ್ಲಿ ಸಾಧನೆಯ ಹಾದಿಯಲ್ಲಿದ್ದಾರೆ ನಮ್ಮ ಹೆಮ್ಮೆಯ ಸುಪ್ರೀತಾ ಪೂಜಾರಿ. ಒಂದೆಡೆ ಚಿಕ್ಕಂದಿನಿಂದಲೇ ಅಂಟಿಕೊಂಡು ಬಂದ ಬಡತನ, ಇನ್ನೊಂದೆಡೆ ಕ್ರೀಡೆಯ ಬಗ್ಗೆ ಆಸಕ್ತಿ, ಇವೆರಡನ್ನೂ ಜೊತೆ ಜೊತೆಯಾಗಿಯೇ ಅನುಭವಿಸಿ ಕೊನೆಗೂ ತಾನು ಅಂದುಕೊಂಡಿದ್ದನ್ನು ಸಾಧಿಸುವ ಹಾದಿಯಲ್ಲಿದ್ದಾರೆ ಈ ನಮ್ಮ ವಿಶಿಷ್ಟ ಸಾಧಕಿ. ಚಿಕ್ಕಂದಿನಲ್ಲೇ ತಂದೆಯನ್ನು ಕಳೆದುಕೊಂಡು ತಾಯಿಯ […]

Read More

ಕರಾಟೆ ಮಿಂಚು ಸಂಚಲನದ ಯುವ ಪ್ರತಿಭೆ ಕು| ಚೈತ್ರಾ ಸಾಲಿಯಾನ್

ಕರಾಟೆ – ಆತ್ಮರಕ್ಷಣೆಯ ಕಲೆ. ವಿದ್ಯಾರ್ಥಿ ಜೀನದಲ್ಲಿ ಕಲಿಕೆಯೊಂದಿಗೆ ಈ ಕ್ರೀಡೆಯಲ್ಲಿ ತನ್ನನ್ನು ಪರಿಪೂರ್ಣವಾಗಿ ಸಮರ್ಪಿಸಿ ಮಾರ್ಗದರ್ಶಕ ಶ್ರೀ ಸತೀಶ್ ಪೂಜಾರಿ ಬೆಳ್ಮಣ್ ಇವರ ಗರಡಿಯಲ್ಲಿ ಪಳಗಿ ಉನ್ನತ ಕಪ್ಪು ಪಟ್ಟಿ ಪದವಿಗಳಸಿ ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿ ಕೊಂಡು ತಂದೆ ತಾಯಿ, ಸಮಾಜ ಮಾತ್ರವಲ್ಲ ಜಿಲ್ಲೆಗೇ ಹೆಸರು ತಂದ ಕು| ಚೈತ್ರಾ ಸಾಲಿಯಾನ್ ಓರ್ವ ಉದಯೋನ್ಮುಖ ಪ್ರತಿಭೆ. ತಂದೆ ಶ್ರೀ ಅಶೋಕ್ ಸಾಲ್ಯಾನ್ -ತಾಯಿ ಶ್ರೀಮತಿ ಸಾಲ್ಯಾನ್ ದಂಪತಿಗಳಿಗೆ ಗೌರವ ಹೆಮ್ಮೆ […]

Read More

ಶ್ರೀಮತಿ ಎಂ. ಜಾನಕಿ ಬ್ರಹ್ಮಾವರರವರಿಗೆ 2016 ರ ಸಾಲಿನ ವಿಶುಕುಮಾರ್ ಪ್ರಶಸ್ತಿ

ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕತೆಗಾರ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ಬರಹಗಾರರಾಗಿ, ಕನ್ನಡ, ತುಳು ಚಲನಚಿತ್ರಗಳ ನಿರ್ದೇಶಕರಾಗಿ, ರಾಜಕಾರಣಿಯಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದುಹೋದ ನಮ್ಮ ನಾಡಿನ ನಡೆ ನುಡಿಯ ಧೀಮಂತ ಸಾಹಿತಿ ದಿ| ವಿಶುಕುಮಾರ್‌ರವರ ಸ್ಮರಣಾರ್ಥ ಯುವವಾಹಿನಿಯ ವಿಶುಕುಮಾರ್ ದತ್ತಿನಿಧಿ ಸಂಚಾಲನಾ ಸಮಿತಿಯು ಕಳೆದ 14 ವರ್ಷಗಳಿಂದ ಸಾಹಿತ್ಯದ ವಿವಿಧ ಕ್ಷೇತ್ರಗಳಲ್ಲಿ ದುಡಿದ, ಗಣನೀಯ ಸಾಧನೆ ಮಾಡಿದ ಮಹನೀಯರನ್ನು ಗುರುತಿಸಿ ವಿಶುಕುಮಾರ್ ಪ್ರಶಸ್ತಿ ನೀಡುತ್ತಾ ಬಂದಿರುತ್ತದೆ. 2016ರ ಸಾಲಿನ ವಿಶುಕುಮಾರ್ ಪ್ರಶಸ್ತಿಯು ದ್ವಿಭಾಷಾ ಕವಿ, […]

Read More

ರಮ್ಯಾ ಸುಜೀರ್ ಇವರಿಗೆ ಯುವವಾಹಿನಿ ಯುವ ಸಾಹಿತ್ಯ ಪುರಸ್ಕಾರ – 2016

ಬಂಟ್ವಾಳ ತಾಲೂಕಿನ ಪುದು ಗ್ರಾಮದ ಸುಜೀರು ದೈಯಡ್ಕ ಮನೆ, ತಿಮ್ಮಪ್ಪ ಪೂಜಾರಿ ಹಾಗೂ ಶ್ರೀಮತಿ ಪುಷ್ಪಾರವರ ಸುಪುತ್ರಿಯಾದ ರಮ್ಯ ಸುಜೀರ್‌ರವರು ತನ್ನ ವಿದ್ಯಾಭ್ಯಾಸದ ಜೊತೆಯಲ್ಲಿಯೇ ಸಾಹಿತ್ಯದ ಬಗ್ಗೆ ಆಸಕ್ತಿ ಹೊಂದಿದವರು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ತುಳು ಅಧ್ಯಯನ ವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡಿದ್ದಾರೆ. ಸಂತ ಅಲೋಶಿಯಸ್ ಕಾಲೇಜಿನಲ್ಲಿ ಬಿ.ಎ. ಬಿ.ಎಡ್. ಪದವಿಯನ್ನು ಪಡೆದಿರುತ್ತಾರೆ. ಸೈಂಟ್ ಜೋನ್ಸ್ ಪದವಿ ಪೂರ್ವ ಕಾಲೇಜು ಗಂಡಸಿ ಹಾಸನ ಇಲ್ಲಿ 1 ವರ್ಷ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿರುತ್ತಾರೆ. ಸೈಂಟ್ ಆನ್ಸ್ ಆಂಗ್ಲಮಾಧ್ಯಮ ಪ್ರೌಢಶಾಲೆ […]

Read More

ಸುಖದ ಪ್ರಸವ – ನಮ್ಮ ಪ್ರವಾಸ

ಪ್ರವಾಸಾನುಭವ ’ದೇಶ ಸುತ್ತಿ ನೋಡು, ಕೋಶ ಓದಿ ನೋಡು ಎಂಬ ತತ್ವವನ್ನಿರಿಸಿಕೊಂಡು ಹಲವು ಚಿಕ್ಕ-ದೊಡ್ಡ ಪ್ರವಾಸಗಳನ್ನು ಏರ್ಪಡಿಸುತ್ತ ಬಂದಿರುವ ಯುವವಾಹಿನಿ ಮಂಗಳೂರು ಘಟಕವು ಈ ಬಾರಿ ದಕ್ಷಿಣ ಭಾರತ ಪ್ರವಾಸವನ್ನು ಏರ್ಪಡಿಸಿತ್ತು. 2014 ರಲ್ಲಿ ಉತ್ತರ ಭಾರತ ಮತ್ತು ನೇಪಾಳದ 10 ದಿನಗಳ ಪ್ರವಾಸದಲ್ಲಿ ಭಾಗಿಯಾಗಿದ್ದ ನಾನು 2015 ರ ಉತ್ತರ ಭಾರತ ಪ್ರವಾಸ (ವಾರಣಾಸಿ, ಹೃಷಿಕೇಶ, ಹರಿದ್ವಾರ, ವೈಷ್ಣೋದೇವಿ, ದೆಹಲಿ, ಅಮೃತಸರ್, ವಾಘಾ ಬೋರ್ಡರ್ ಇತ್ಯಾದಿ ಸ್ಥಳಗಳಿಗೆ)ಕ್ಕೆ ಹೋಗಲಾಗಲಿಲ್ಲ. ಈ ಬಾರಿ ದಕ್ಷಿಣ ಭಾರತದ ತಮಿಳುನಾಡು ಮತ್ತು ಕೇರಳದ ಆಯ್ದ […]

Read More

ಸ್ವಪ್ರಯತ್ನವೇ ಜೀವಾಳ – ಶಶಾಂತ್ ಬಿ.

ಬಂಟ್ವಾಳ ಕಸ್ಬಾ ಗ್ರಾಮದ ಭೋಜ ಪೂಜಾರಿ ಮತ್ತು ವನಿತಾ ದಂಪತಿಗಳ ಸುಪುತ್ರ ಶಶಾಂತ್ ಬಿ. ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡು ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಗಣಿತ ಮತ್ತು ಸಂಸ್ಕೃತದಲ್ಲಿ 100 ಅಂಕಗಳನ್ನು ಪಡೆದು 625 ಕ್ಕೆ 614 (98.24%) ಅಂಕ ಗಳಿಸಿರುವುದು ಶ್ಲಾಘನೀಯ. ಬಿಡುವಿನ ವೇಳೆಯಲ್ಲಿ ತಾನೇ ದುಡಿದು ಶಾಲಾ ಶುಲ್ಕವನ್ನು ಭರಿಸಿ ಹೆತ್ತವರಿಗೆ ಹೊರೆಯಾಗದೆ ಎಲ್ಲರ ಪ್ರೀತಿ ಸಂಪಾದಿಸಿದ್ದಾರೆ. ತಾನೇ ನಾಟಕ ರಚಿಸಿ, ಅಭಿನಯಿಸಿದ ಉತ್ತಮ ರಂಗ ಕಲಾವಿದ. ಶಾಲಾ ದಿನಗಳಲ್ಲೇ ನಾಯಕತ್ವ ಗುಣ […]

Read More

ಕಲಿಕೆಯಲ್ಲಿ ನಿಧಿಯೇ ಸರಿ – ಕು| ನಿಧಿಶ್ರೀ ಯು. ಪೂಜಾರಿ

ಶ್ರೀಮತಿ ಭಾರತಿ ಹಾಗೂ ಶ್ರೀ ಉಮಾನಾಥ ದಂಪತಿಗಳಿಗೆ ಉತ್ತಮ ಹೆಮ್ಮೆ ಪಡತಕ್ಕೆ ಸಾಧನೆಯ ಕುವರಿ ನಿಧಿಶ್ರೀಯ ಬಗ್ಗೆ ಮತ್ತು ಅವಳ ಸಾಧನೆಯ ಬಗ್ಗೆ ಅರಿವಿರಲಿಕ್ಕಿಲ್ಲ ತಮ್ಮ ಜೀವನದ ಹಾದಿಯಲ್ಲಿ ತಮ್ಮ ಮಗಳು ಒಂದುದಿನ ಸ್ವಪ್ರತಿಭೆಯಿಂದ ಜನ ಮನ್ನಣೆಯನ್ನು ಗಳಿಸಿ ಕೊಡಲಿದ್ದಾಳೆ ಎಂಬ ಅರಿವಿರಲಿಕ್ಕಿಲ್ಲ. ಕಾರಣ ಅವರಿದ್ದದ್ದು 62 ತೋಕೂರು ಜೋಕಟ್ಟೆ ಎಂಬ ಸಣ್ಣ ಊರಿನಲ್ಲಿ. ಸಾಮಾನ್ಯವಾಗಿ ಅತ್ಯಂತ ಗ್ರಾಮೀಣ ಪ್ರದೇಶದಲ್ಲಿ ಬೆಳೆದವರಿಗೆ ಬದುಕಿನ ಸೂಕ್ಷತೆಗಳ ಅರಿವಿರುತ್ತದೆ. ಜೀವನದ ಕಷ್ಟ ಕಾರ್ಪಣ್ಯಗಳ ಸರಿಯಾದ ದೃಷ್ಟಿಕೋನ ಇರುತ್ತದೆ ಇವರ ಬಾಳಿನಲ್ಲೂ ನಡೆದದ್ದು […]

Read More

ಪುತ್ತೂರು ಘಟಕದ ಪದಗ್ರಹಣ ಕಾರ್ಯಕ್ರಮ

ವಿದ್ಯೆ, ಉದ್ಯೋಗ ಮತ್ತು ಸಂಪರ್ಕವೆಂಬ ನಾರಾಯಣ ಗುರುಗಳ ತತ್ವದಂತೆ ಯುವವಾಹಿನಿ ಸದಸ್ಯರು ಕೆಲಸ ಮಾಡುತ್ತಿದ್ದು ಜನರ ಅನಿಸಿಕೆ ಹಾಗೂ ನಿರೀಕ್ಷೆಯನ್ನು ಹುಸಿಗೊಳಿಸಲಿಲ್ಲ. ಯುವವಾಹಿನಿ ಯಂತೆ ಪ್ರತಿಯೊಂದು ಸಂಘಟನೆಗಳು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಸಂಘಟನೆಗಳಿಗೆ ನಿಜವಾದ ಅರ್ಥ ಹಾಗೂ ಬೆಲೆ ಸಿಗುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಸಂತೋಷ್ ಕುಮಾರ್‌ರವರು ಹೇಳಿದರು. ಅವರು ಜು. 24 ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ 2016-17 ನೇ ಸಾಲಿನ ಯುವವಾಹಿನಿ ಪುತ್ತೂರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ […]

Read More

ಹಳೆಯಂಗಡಿ ಘಟಕದ ವತಿಯಿಂದ ಆಟಿದ ಆಯನ ಕಾರ್ಯಕ್ರಮ

ಯುವವಾಹಿನಿ(ರಿ) ಹಳೆಯಂಗಡಿ ವತಿಯಿಂದ ದಿನಾಂಕ 24-7-2016 ರಂದು ಆಟಿದ ಆಯನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕೋಟಿ ಚೆನ್ನಯರು ಆರಾಧಿಸಿದ ಕೆಮ್ಮಲೆಜೆಯ ನಾಗಬ್ರಹ್ಮ ಗುಡಿಯ ಆಕರ್ಷಕ ರಂಗ ವಿನ್ಯಾಸದ ವೇದಿಯಲ್ಲಿ ಹಳೆಯಂಗಡಿ ಯುವವಾಹಿನಿಯ ಅವಳಿ ಸದಸ್ಯರ ಕೋಟಿ-ಚೆನ್ನಯ ಕಿರು ರೂಪಕದೊಂದಿಗೆ ಕಾರ್ಯಕ್ರಮ ಆರಂಭ. ದ.ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಕಸ್ತೂರಿ ಪಂಜ ಹಾಗೂ ತುಳು ಚಿತ್ರನಟ, ರಂಗಭೂಮಿ ಕಲಾವಿದ ಶ್ರೀ ಅರವಿಂದ ಬೋಳಾರ್ ಇವರು ನಾಗಬ್ರಹ್ಮ ಗುಡಿಯ ಜೋಡು ನಂದಾ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಅತ್ಯಂತ ವಿಶಿಷ್ಠವಾಗಿ […]

Read More

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ವಿವಿಧ ಕಾರ್ಯಕ್ರಮಗಳು

ಘಟಕದ ವತಿಯಿಂದ ತಾ. 16-7-2016 ರಂದು ಕೋಡಿಕಲ್ ದ.ಕ. ಜಿಲ್ಲಾ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಆಚರಣೆ, ಸಸಿ ವಿತರಣೆ ಹಾಗೂ ಶಾಲೆಯ 30 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಜರಗಿರುತ್ತದೆ. ಕಾರ್ಯಕ್ರಮವನ್ನು ಕೋಡಿಕಲ್ ಬಿಲ್ಲವ ಸಂಘ ಇದರ ಅಧ್ಯಕ್ಷೆ ಶ್ರೀಮತಿ ಲೋಲಾಕ್ಷಿ ದೇವೇಂದ್ರ ಕೋಟ್ಯಾನ್‌ರವರು ಉದ್ಘಾಟಿಸಿದರು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಯ ಜಯಪ್ಪ ಅದ್ಯಪಾಡಿ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ವೀಣಾ ಶೆಟ್ಟಿ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ವಿದ್ಯಾ ರಾಕೇಶ್, ಘಟಕದ ಸಲಹೆಗಾರರ ಸಾಧು ಪೂಜಾರಿ ಹಾಗೂ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!