23-09-2018, 7:40 AM
ಮಂಗಳೂರು : ಭಜನೆಯಿಂದ ಪ್ರಗತಿ, ಕ್ಷಮತೆ, ಶಿಸ್ತು, ಕ್ರಿಯಾಶೀಲತೆ, ಕೌಶಲ, ಸಾಧನೆ ಹೆಚ್ಚಾಗುತ್ತದೆ. ಭಕ್ತಿಯ ಅಂತರಗಂಗೆ ಭಜನೆ ಮೂಲಕ ಜಲಪಾತವಾಗಿ ಧುಮುಕುತ್ತದೆ. ನಿಷ್ಕಲ್ಮಶ ಪ್ರೀತಿಯಿಂದ, ಮುಗ್ದ ಭಕ್ತಿಯಿಂದ ಭಜನೆ ಹಾಡಿದರೆ ಪರಮಾತ್ಮನ ಸಾಕ್ಷಾತ್ಕಾರವಾಗುತ್ತದೆ. ಭಜನಾ ಸಂಸ್ಕೃತಿಯ ಪುನರುತ್ಥಾನದೊಂದಿಗೆ ಭಜಕರು ನವಭಾರತ ನಿರ್ಮಾಣದ ಶಿಲ್ಪಿಗಳಾಗಬೇಕು , ಭಜನೆ ಆತ್ಮ ಶುದ್ಧೀಕರಣದ ಸನ್ಮಾರ್ಗ ಎಂದು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ತಿಳಿಸಿದರು. ಅವರು ದಿನಾಂಕ 23.09.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ […]
Read More
23-09-2018, 2:42 AM
ಕಂಕನಾಡಿ : ಇತ್ತೀಚೆಗೆ ಮಂಗಳಾದೇವಿ ದೇವಸ್ಥಾನದಲ್ಲಿ ಮರ ಬಿದ್ದು ಗಾಯಗೊಂಡ ಸುರೇಖಾ ಕೋಟ್ಯಾನ್ ಆರೋಗ್ಯವನ್ನು ವಿಚಾರಿಸಿ ₹.10000/- ವೈದ್ಯಕೀಯ ನೆರವು ನೀಡಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕಂಕನಾಡಿ ಘಟಕದ ಅಧ್ಯಕ್ಷ ಭವಿತ್ ರಾಜ್ ಕಾರ್ಯದರ್ಶಿ ಸುಮಾ ವಸಂತ್ , ಮಾಜಿ ಅಧ್ಯಕ್ಷ ಹರೀಶ್. ಕೆ. ಸನಿಲ್ ಮತ್ತಿತರರು ಉಪಸ್ಥಿತರಿದ್ದರು.
Read More
22-09-2018, 4:23 PM
. ಪುತ್ತೂರು : ಯುವವಾಹಿನಿ (ರಿ.) ಪುತ್ತೂರು ಘಟಕ ಇದರ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೊ ಬ್ಲಡ್ ಬ್ಯಾಂಕ್ ಪುತ್ತೂರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇದರ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕಾಲೇಜ್ ಅಭಿವೃದ್ಧಿ ಸಮಿತಿ ಇದರ ಸಹಭಾಗಿತ್ವದಲ್ಲಿ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ ” ದಿನಾಂಕ 22/9/2018ನೇ ಶನಿವಾರ ಬೆಳಿಗ್ಗೆ ಗಂಟೆ 9.30ಕ್ಕೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ(ರಿ.)ಪುತ್ತೂರು ಘಟಕದ ಅಧ್ಯಕ್ಷರಾದ […]
Read More
16-09-2018, 3:17 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ದಿನಾಂಕ 16.09.2018 ರಂದು ನಡೆದ ಶಿವಗಿರಿಯಾತ್ರೆ ಯಶಸ್ವಿಯಾಗಿ ನಡೆಯಿತು . ಮಂಗಳೂರಿನಿಂದ ರೈಲಿನ ಮೂಲಕ ಹೊರಟ ಯುವವಾಹಿನಿಯ ಯಾತ್ರಾ ತಂಡವನ್ನು ವರ್ಕಳ ರೈಲು ನಿಲ್ದಾನದಲ್ಲಿ ಶಿವಗಿರಿ ಮಠದ ಪೂಜ್ಯ ಸತ್ಯಾನಂದತೀರ್ಥ ಶ್ರೀಗಳು ಸ್ವಾಗತಿಸುವ ಮೂಲಕ ಯಾತ್ರೆಯು ಆರಂಭವಾಯಿತು. ಸ್ವಾಮೀಜಿಯವರ ನೇತೃತ್ವದಲ್ಲಿ ಶಿವಗಿರಿಯಲ್ಲಿ ನ ನಾರಾಯಣಗುರುಗಳ ಮಹಾಸಮಾಧಿ ಮತ್ತು ಕೆಲ ಐತಿಹಾಸಿಕ ಸ್ಥಳಗಳನ್ನು ಸಂದರ್ಶಿಸಿದೆವು. ಆ ಬಳಿಕ ಗುರುಗಳ ಪೂರ್ವಾಶ್ರಮದ ಮನೆ, ಸುಬ್ರಹ್ಮಣ್ಯ ದೇವಾಲಯ, ನಾರಾಯಣಗುರುಗಳೇ ತನ್ನ ಕಯ್ಯಾರೆ […]
Read More
16-09-2018, 2:38 AM
ಕಂಕನಾಡಿ : ಯುವವಾಹಿನಿ(ರಿ.) ಕಂಕನಾಡಿ ಘಟಕದ ಆಶ್ರಯದಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಡೀಮ್ಡ್ ಟು ಬಿ ಯುನಿವರ್ಸಿಟಿ ಮತ್ತು ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ಸಂಯುಕ್ತ ಸಹಯೋಗದೊಂದಿಗೆ ದಿನಾಂಕ 16-9-2018 ರಂದು ಗೋರಿಗುಡ್ಡ ಕಿಟೆಲ್ ಮೆಮೋರಿಯಲ್ ಪ್ರಾಥಮಿಕ ಶಾಲೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ ಜರುಗಿತು. ಸುಮಾರು 100ಕ್ಕೂ ಅಧಿಕ ಮಂದಿ ಈ ಶಿಬಿರದಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗವನ್ನು […]
Read More
15-09-2018, 4:45 PM
ಹಳೆಯಂಗಡಿ : ಕಟ್ಟೋಣ ನಾವು ಹೊಸ ನಾಡೊಂದನು…ಶಾಂತಿ ಸಹಬಾಳ್ವೆಯ ಬೀಡೊಂದನು… ಹೆಜ್ಜೆ ಮೇಲೆ ಹೆಜ್ಜೆ ಇಡುತ ಕುಣಿವ ಯುವಜನರ ದಂಡು, ಜೊತೆಗೆ ಹುಚ್ಚೆಬ್ಬಿಸೋ ನಾಸಿಕ್ ಬ್ಯಾಂಡು… ಹಳೆಯಂಗಡಿ ಗಣೇಶೋತ್ಸವದಲ್ಲಿ ಜನಮನ ಸೆಳೆದ ಯುವವಾಹಿನಿ ತಂಡಕ್ಕೆ ಜೈ ಹೋ . ದಿನಾಂಕ 15-09-2018 ರಂದು ನಡೆದ ಹಳೆಯಂಗಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಯಾತ್ರೆಯಲ್ಲಿ ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಸದಸ್ಯರಿಂದ “ನಾಸಿಕ್ ಬ್ಯಾಂಡ್ ” ಕಾರ್ಯಕ್ರಮ ಏರ್ಪಡಿಸಲಾಯಿತು. 60 ಸದಸ್ಯರ ದಂಡು ,ಹಳದಿ ಬಣ್ಣದ ಜರ್ಸಿ ಟಿ-ಶರ್ಟ್ ಸಮವಸ್ತ್ರದಲ್ಲಿ […]
Read More
15-09-2018, 2:33 AM
ಬಜಪೆ : ಶ್ರೀ ನಿರಂಜನ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಸುಂಕದಕಟ್ಟೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯುವ ರೆಡ್ ಕ್ರಾಸ್ ಘಟಕ, ರೆಡ್ ರಿಬ್ಬನ್ ಕ್ಲಬ್, ಕಾಲೇಜು ಅಭಿವೃದ್ಧಿ ಸಮಿತಿ, ಶಿಕ್ಷಕ ರಕ್ಷಕ ಸಂಘ, ಹಳೆ ವಿದ್ಯಾರ್ಥಿ ಸಂಘ, ಸುಂಕದಕಟ್ಟೆ ಬಜ್ಪೆ, ಶ್ರೀ ನಿರಂಜನ ಸ್ವಾಮಿ ಅನಿದಾನಿತ ತಾಂತ್ರಿಕ ವಿದ್ಯಾಲಯ ಸುಂಕದಕಟ್ಟೆ ಹಾಗೂ ರೋಟರಿ ಕ್ಲಬ್ ಬಜ್ಪೆ ಇವರೆಲ್ಲರ ಸಹಭಾಗಿತ್ವದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಇವರ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರ […]
Read More
15-09-2018, 2:28 AM
ಮಂಗಳೂರು : ಜಾಗತೀಕರಣದ ಪ್ರಭಾವ ಇಂದು ಎಲ್ಲೆಡೆ ವ್ಯಾಪಿಸುತ್ತಿದೆ. ಬದಲಾವಣೆ ಎಂಬುದು ಜೀವಂತ ಸಮಾಜದ ಲಕ್ಷಣ ಎಂಬುದನ್ನು ನಾವೆಲ್ಲಾ ಒಪ್ಪಿಕೊಳ್ಳಬೇಕು ಆದರೆ ಈ ಬದಲಾವಣೆಯ ಗತಿ ನಮ್ಮ ದೇಸಿ ನುಡಿ-ಸಂಸ್ಕೃತಿಯ ಬುಡ ಅಲುಗಾಡಿಸುವಂತಾಗಬಾರದು ಹೊಸತನ್ನು ಸ್ವೀಕರಿಸುತ್ತಲೇ ಈ ನೆಲದ ಜೀವನಮೌಲ್ಯ-ಕಲಾಮೌಲ್ಯಗಳು ಉಳಿಯುವಂತಾಗಬೇಕು. ತುಳುನಾಡಿನ ಹಬ್ಬ, ಆಚರಣೆ ಆರಾಧನೆಗಳಲ್ಲಿ ಮನುಷ್ಯ ಸಂಬಂಧವನ್ನು ಕಾಪಾಡುವ, ನಿಸರ್ಗವನ್ನು ಗೌರವಿಸುವ ಜೀವನಾದರ್ಶಗಳಿವೆ. ಎಂದು ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಮಧುಮಾಲ ತಿಳಿಸಿದರು. ಅವರು ದಿನಾಂಕ 15.09.2018 ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ […]
Read More
13-09-2018, 1:47 PM
ಕುಪ್ಪೆಪದವು :ಯುವವಾಹಿನಿ (ರಿ) ಕುಪ್ಪೆಪದವು ಘಟಕದಿಂದ ಇಲ್ಲಿನ ಸ್ಥಳೀಯ ನಿವಾಸಿ ಬಡ ಕುಟುಂಬದ ಶೇಖರ್ ಪೂಜಾರಿ ದುರ್ಗಕೊಡಿ ಇವರ ಮಗುವಿನ ಅನಾರೋಗ್ಯದ ನಿಮಿತ್ತ ದಿನಾಂಕ 13/09/2018 ರಂದು ವೈದ್ಯಕೀಯ ನೆರವು ನೀಡಲಾಯಿತು . ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ,ಉಪಾಧ್ಯಕ್ಷರಾದ ಅಜಯ್ ಅಮೀನ್.ಕಾರ್ಯದರ್ಶಿ ರಿತೇಶ್ ನೆಲ್ಲಚಿಲ್ ಹಾಗೂ ಘಟಕದ ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು
Read More
13-09-2018, 1:42 PM
ಅಡ್ವೆ: ಶ್ರೀ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ದಿನಾಂಕ13-09-2018 ರಂದು ಯುವವಾಹಿನಿ ಅಡ್ವೆ ಘಟಕದ ವತಿಯಿಂದ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ನಂತರ ನಡೆದ ಸರಳ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಜಿತೇಶ್ ಜೆ. ಕರ್ಕೇರ ವಹಿಸಿದ್ದರು. ಕಾರ್ಯಕ್ರಮದ ಅತಿಥಿಗಳಾಗಿ ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಮಿತಿ ಇದರ ಕಾರ್ಯದರ್ಶಿ ನವೀನ್ ಚಂದ್ರ ಸುವರ್ಣ, ಅರ್ಚಕರಾದ ರಾಮ ಪೂಜಾರಿ, ಹಿರಿಯರಾದ ಶೇಖರ ಪೂಜಾರಿ, ಮನೋಜ್ ಜಾನು […]
Read More