Yuvavahini

ಇತರೆ

ಉಡುಪಿ : ’ತಲೆಗೊಂದು ಸೂರು’ ಕಾರ್ಯಕ್ರಮದ ಶಿಲಾನ್ಯಾಸ

ಯುವವಾಹಿನಿ (ರಿ) ಉಡುಪಿ ಘಟಕದ ನೇತೃತ್ವದಲ್ಲಿ ತಾ. 14-01-2017 ರಂದು ಉದ್ಯಾವರದ ಈಂದ್ ಬೈಲಿನ ಶ್ರೀಮತಿ ಗಿರಿಜಾ ಇವರಿಗೆ, ಯುವವಾಹಿನಿಯ ಮಹತ್ವಾಕಾಂಕ್ಷೆಯ ತಲೆಗೊಂದು ಸೂರು ಕಾರ್ಯಕ್ರಮದ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ಜರುಗಿತು. ಮಾನ್ಯ ಶಾಸಕರುಗಳಾದ ವಿನಯ ಕುಮಾರ್ ಸೊರಕೆ ಹಾಗೂ ಕೋಟ ಶ್ರೀನಿವಾಸ್ ಪೂಜಾರಿಯವರು ಶಿಲಾನ್ಯಾಸದ ಕಾರ್ಯವನ್ನು ನೆರವೇರಿಸಿದರು. ಯುವವಾಹಿನಿಯ ಸದಸ್ಯರು, ಊರ ಗಣ್ಯ ವ್ಯಕ್ತಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಸಾಂಗವಾಗಿ ನೆರೆವೇರಿತು. ಸುಮಾರು 3 ರಿಂದ 5 ಲಕ್ಷದ ಖರ್ಚಿನಲ್ಲಿ ಈ ಮನೆಯ ನಿರ್ಮಾಣ ಮಾಡಲಾಗುವುದು ಎಂದು ಉಡುಪಿ ಘಟಕದ ಅಧ್ಯಕ್ಷ […]

Read More

ಉಪ್ಪಿನಂಗಡಿ ಯುವವಾಹಿನಿ : ಪದಗ್ರಹಣ 2016-17

ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಸಿದ್ಧಾಂತಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಬದುಕಿಗೊಂದು ಅರ್ಥ ಬರಲು ಸಾಧ್ಯ ಮತ್ತು ನಾವು ಸಮುದಾಯ ಅಭಿವೃದ್ಧಿಯ ಜತೆಗೆ ಸಮಾಜದ ಅಭಿವೃದ್ಧಿಯ ಕಡೆಗೂ ದೃಷ್ಟ ಹಾಯಿಸಬೇಕು ಎಂದು ಪುತ್ತೂರು ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅದ್ಯಕ್ಷ ಜಯಂತ ನಡುಬೈಲು ತಿಳಿಸಿದರು. ಉಪ್ಪಿನಂಗಡಿ ಸ.ಮಾ.ಹಿ.ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಜರಗಿದ ಉಪ್ಪಿನಂಗಡಿ ಯುವವಾಹಿನಿಯ 2016-17 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ, ಅಭಿನಂದನೆ ಹಾಗೂ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಅಸಮಾನ […]

Read More

ಯಡ್ತಾಡಿ ಯುವವಾಹಿನಿಯ ಸಾಹಿತ್ಯ ಸಾಂಸ್ಕ್ರತಿಕ ಸಮ್ಮೇಳನ ‘ದೀವಿಗೆ 2016’

ದಿನಾಂಕ 25-12-2016 ರಂದು ಸಾಬರ ಕಟ್ಟೆಯ ಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ ಯಡ್ತಾಡಿ ಘಟಕದ ವತಿಯಿಂದ ಜರಗಿದ ಕೋಟ ಹೋಬಳಿ ಮಟ್ಟದ ಬಿಲ್ಲವರ 6ನೇ ಸಾಹಿತ್ಯಿಕ-ಸಾಂಸ್ಕೃತಿಕ ಸಮ್ಮೇಳನ ’ದೀವಿಗೆ-2016’ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿಯವರು ಭಾಷಣ ಮಾಡುತ್ತಿರುವುದು.

Read More

ಹೆಣ್ಣು ಮಕ್ಕಳ ಆತ್ಮರಕ್ಷಣೆ ಮತ್ತು ತರಬೇತಿ ಕಾರ್ಯಕ್ರಮ

ಯುವವಾಹಿನಿ (ರಿ) ಮೂಲ್ಕಿ ಘಟಕದ ವತಿಯಿಂದ ದಿನಾಂಕ 19-12-2016 ರಂದು ಸರಕಾರಿ ಪ್ರೌಢಶಾಲೆ ಸದಾಶಿವ ನಗರ ಇಲ್ಲಿ ಹೆಣ್ಣು ಮಕ್ಕಳ ಆತ್ಮರಕ್ಷಣೆ ಮತ್ತು ತರಬೇತಿ ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಶಾಲಾ ಸಹಶಿಕ್ಷಕರಾದ ಅಶೋಕ್ ಜಂಬಗಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಂತರಾಷ್ಟ್ರೀಯ ಕ್ರೀಡಾಪಟು ಕಾರ್ತಿಕ್ ಎಸ್. ಕಟೀಲ್‌ರವರು ಸುಮಾರು ಒಂದೂವರೆ ಗಂಟೆಗಳ ಕಾಲ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಾತ್ಯಕ್ಷತೆಯ ಮೂಲಕ ಉತ್ತಮ ತರಬೇತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಚೇತನ್ ಕುಮಾರ್‌ರವರು ವಹಿಸಿದ್ದರು. ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಮುಖ್ಯ […]

Read More

ಅಭೂತಪೂರ್ವ ಸ್ಪಂದನೆಯಲ್ಲಿ ಸಾಕಾರಗೊಂಡ ಬಿಲ್ಲವ ವಧೂವರರ ಸಮಾವೇಶ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮಟ್ಟಿಗೆ ಅಪೂರ್ವವಾದ, ಬಿಲ್ಲವ ಸಮಾಜದ ’ವಧೂವರರ ಸಮಾವೇಶ’ ಬಿಲ್ಲವ ಸಮಾಜ ಬಾಂಧವರ ಅಭೂತಪೂರ್ವ ಸ್ಪಂದನೆಯೊಂದಿಗೆ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ಯುವವಾಹಿನಿ ಮಹಿಳಾ ಘಟಕದ ಸಾಮಾಜಿಕ ಕಳಕಳಿಯ ವೈಶಿಷ್ಟ್ಯಪೂರ್ಣ ಪರಿಕಲ್ಪನೆಯೊಂದಿಗೆ ಯುವವಾಹಿನಿ (ರಿ) ಕೇಂದ್ರ ಸಮಿತಿ ಮತ್ತು ಇತರ ಘಟಕಗಳ ಸಹಕಾರದೊಂದಿಗೆ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿಯ ಸಹಯೋಗದೊಂದಿಗೆ ದಿನಾಂಕ 18-12-2016 ರಂದು ಜರಗಿದ ಸಮಾವೇಶವು ಯುವವಾಹಿನಿಯ ಚಟುವಟಿಕೆಗಳಲ್ಲಿ ಒಂದು ಮೈಲುಗಲ್ಲಾಗಿ ಇತಿಹಾಸ ನಿರ್ಮಿಸಿತು. ಒಂದು ಮಹತ್ವಪೂರ್ಣ ಯೋಚನೆ, ಯೋಜನೆಯೊಂದಿಗೆ ಬಹಳಷ್ಟು […]

Read More

ಬಜಪೆ ಯುವವಾಹಿನಿ : ಪದಗ್ರಹಣ 2016-17

ಯುವವಾಹಿನಿ (ರಿ) ಬಜಪೆ ಘಟಕದ 2016-17 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ತಾ 26-11-2016 ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ಜರುಗಿತು. ಯುವವಾಹಿನಿ ಕೇಂದ್ರ ಸಮಿತಿ (ರಿ) ಮಂಗಳೂರು ಇದರ ಅಧ್ಯಕ್ಷರಾದ ಶ್ರೀಯುತ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳಿಗೆ ಪದಪ್ರಧಾನ ಮಾಡಿದರು. 2016-17 ನೇ ಸಾಲಿನ ಪದಾಧಿಕಾರಿಗಳ ವಿವರ ಅಧ್ಯಕ್ಷರು – ಶ್ರೀ ಚಂದ್ರಶೇಖರ. ಎಸ್. ಪೂಜಾರಿ ಉಪಾಧ್ಯಕ್ಷರು – ಶ್ರೀ ದೇವರಾಜ ಅಮೀನ್ ಕಾರ್ಯದರ್ಶಿ – ಶ್ರೀಮತಿ ಕನಕ ಮೋಹನ್ ಜತೆ ಕಾರ್ಯದರ್ಶಿ […]

Read More

ಬೆಳುವಾಯಿ ಯುವವಾಹಿನಿಯ ಸಾಂಸ್ಕ್ರತಿಕ ಲೋಕ ಅನಾವರಣ

ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕ್ರತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016ನೇ ಆದಿತ್ಯವಾರ ಜರಗಿತು. ಯುವವಾಹಿನಿ ಬೆಳುವಾಯಿ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕ್ರತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.

Read More

’ಡೆನ್ನನ ಡೆನ್ನನ’ ಯುವವಾಹಿನಿ ಅಂತರ್‌ಘಟಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ

ನ. 20 ರಂದು ಬೆಳ್ತಂಗಡಿ ಆಶಾ ಸಾಲಿಯಾನ್ ಕಲ್ಯಾಣ ಮಂಟಪದ ದಿ| ಶ್ರೀಮತಿ ಮುತ್ತಕ್ಕೆ ಮತ್ತು ದಿ| ಕೋಟ್ಯಪ್ಪ ಪೂಜಾರಿ ವರ್ಪಾಳೆ ಸಭಾ ವೇದಿಕೆಯಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿಯ ಅಂತರ್‌ಘಟಕ ಸಾಂಸ್ಕೃತಿಕ ವೈಭವ ’ಡೆನ್ನನ ಡೆನ್ನನ’ ಎಂಬ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ತೆಂಕುತಿಟ್ಟಿನ ಯುವ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಉದ್ಘಾಟಿಸಿ ಮಾತನಾಡುತ್ತಾ, ಮನುಷ್ಯ ಜನ್ಮದಲ್ಲಿ ಹುಟ್ಟಿ ಹೇಗೆ ನಡೆಯಬೇಕು ಎಂಬ ಮಾರ್ಗದರ್ಶನ ನೀಡಿದ ಬ್ರಹ್ಮಶ್ರೀ ನಾರಾಯಣಗುರುಗಳು ಹಾಗೂ […]

Read More

ಕಂಕನಾಡಿ ಯುವವಾಹಿನಿಯ ಸಾಂಸ್ಕೃತಿಕ ಲೋಕ ಅನಾವರಣ

ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016 ನೇ ಆದಿತ್ಯವಾರ ಜರಗಿತು. ಯುವವಾಹಿನಿ ಕಂಕನಾಡಿ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕೃತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!