23-06-2026, 1:00 PM
ಮೂಡುಬಿದಿರೆ, ಜೂನ್ 23: ಯುವವಾಹಿನಿ (ರಿ.) ಮೂಡುಬಿದರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರ ಮೂಡುಬಿದರೆ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ 5 ದಿನಗಳ ಉಚಿತ ಸೀರೆ ಕುಚ್ಚು ಕೌಶಲ್ಯ ತರಬೇತಿ ಕಾರ್ಯಕ್ರಮವು ಮಂಗಳವಾರ ಮೂಡುಬಿದರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ಉದ್ಘಾಟನೆಯಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಕ್ರೀಡಾ ನಿರ್ದೇಶಕರಾದ ಶಂಕರ್ ಕೋಟ್ಯಾನ್ ಅವರು ಮಾತನಾಡಿ, “ಹೊಲಿಗೆ ಕಲಿತ ಮಹಿಳೆಯರು […]
Read More
22-06-2026, 9:00 PM
ಮಂಗಳೂರು: ದಿನಾಂಕ: 22-06-2026 ರಂದು ಸೋಮವಾರ ಸಂಜೆ 5.30 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ಶ್ರೀ ಗೋಪಾಲಕೃಷ್ಣ ಮಹಿಳಾ ಭಜನಾ ತಂಡ ಕದ್ರಿ ಕಂಬಳ ಇವರ ಸಹಯೋಗದೊಂದಿಗೆ ನಡೆಯಿತು. ಭಕ್ತಿ ಭಾವದಿಂದ ತುಂಬಿದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳಿಗೆ ಸಮರ್ಪಿಸಿದರು. ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ, ಭಜನಾ ತಂಡದ […]
Read More
21-06-2026, 1:00 PM
ಬಂಟ್ವಾಳ : ಯುವವಾಹಿನಿ ಸಂಸ್ಥೆಯ ಶಿಸ್ತು, ಸಂಘಟನಾ ಸಾಮರ್ಥ್ಯ ಹಾಗೂ ಸಮಾಜಮುಖಿ ಕಾರ್ಯಚಟುವಟಿಕೆಗಳು ನಿಜಕ್ಕೂ ಅನುಕರಣೀಯವಾಗಿವೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಹೇಳಿದರು. ಅವರು ಜೂನ್ 21 ರಂದು ಬಿ.ಸಿ.ರೋಡ್ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ 38 ವರ್ಷಗಳಿಂದ ಯುವವಾಹಿನಿ ಯುವಜನರನ್ನು ಒಗ್ಗೂಡಿಸಿ ಶಿಕ್ಷಣ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ […]
Read More
16-06-2026, 7:30 PM
ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವು ಜೂನ್ 16ರಂದು ನಡೆಯಿತು. ಕಾರ್ಯಕ್ರಮವು ಗುರು ಪೂಜೆಯೊಂದಿಗೆ ಆರಂಭಗೊಂಡು, ಗುರು ಸ್ತುತಿಯ ಬಳಿಕ ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಅಧ್ಯಕ್ಷರು ಸಭಿಕರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಅರೋಲಿನ್ ಡಿ’ಸೋಜ ಅವರು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಮಹತ್ವ ಹಾಗೂ […]
Read More
14-06-2026, 2:00 PM
ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದಿನಾಂಕ 14 ಜೂನ್ 2026 ರಂದು ಬೆಂಗಳೂರಿನ ವಿಧಾನಸೌಧದ ಬಳಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಅತ್ಯಂತ ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಸಾಂಘಿಕ ಮನೋಭಾವದಿಂದ ನೆರವೇರಿತು. . ಸಂಘಟನಾ ಸಾಮರ್ಥ್ಯ ಶ್ಲಾಘನೀಯ : ಜೆ.ಪಿ.ಸುಧಾಕರ್ಬೆಂಗಳೂರು ಘಟಕದ ಸಂಘಟನಾ ಸಾಮರ್ಥ್ಯ, ಸಮಯಪಾಲನೆ, ಶಿಸ್ತು ಮತ್ತು ಸದಸ್ಯರ ನಡುವಿನ ಐಕ್ಯತೆಯು ಶ್ಲಾಘನೀಯ ಎಂದು ಸಮಾರಂಭ ಉದ್ಘಾಟಿಸಿ ಮಾತನಾಡಿದ ಖ್ಯಾತ […]
Read More
14-06-2026, 2:00 PM
ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ ಪದಗ್ರಹಣ ಸಮಾರಂಭವು ಸಂಘಟನಾ ಬದ್ಧತೆ, ಏಕತೆ ಹಾಗೂ ಪರಸ್ಪರ ಸಹಕಾರದ ಭಾವನೆಯನ್ನು ಅನಾವರಣಗೊಳಿಸಿದ ಸ್ಮರಣೀಯ ಕಾರ್ಯಕ್ರಮವಾಗಿ ಯಶಸ್ವಿಯಾಗಿ ನೆರವೇರಿತು. ಈ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಮಾಜಿ ಅಧ್ಯಕ್ಷರು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಸೇರಿದಂತೆ ಒಟ್ಟು 60ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿದ್ದು ವಿಶೇಷವಾಗಿತ್ತು. ಈ ಸಂಖ್ಯೆಯು ಕೇವಲ ಹಾಜರಾತಿಯನ್ನು ಮಾತ್ರ ಸೂಚಿಸುವುದಲ್ಲ; ಸಂಘಟನೆಯ ಮೇಲಿನ ಸದಸ್ಯರ ಬದ್ಧತೆ, ಪ್ರೀತಿ ಹಾಗೂ ಅಚಲ ನಂಬಿಕೆಯ […]
Read More
13-06-2026, 9:00 PM
ಮುಲ್ಕಿ : ಯುವವಾಹಿನಿ (ರಿ.) ಮುಲ್ಕಿ ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜೂನ್ 13, 2026ರಂದು ಸಂಜೆ 6 ಗಂಟೆಗೆ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ನಡೆಯಿತು. ಬ್ರಹ್ಮಶ್ರೀ ನಾರಾಯಣಗುರು ದೇವರ ಪೂಜೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಘಟಕದ ಸದಸ್ಯೆ ರಾಜೇಶ್ವರಿ ನಿತ್ಯಾನಂದ ಪ್ರಾರ್ಥನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುಲ್ಕಿ ನಗರ ಪಂಚಾಯತ್ನ ಮಾಜಿ ಅಧ್ಯಕ್ಷ ಸತೀಶ್ ಅಂಚನ್ ಮಾತನಾಡಿ, ಯುವ ಸಮಾಜವು ಶೈಕ್ಷಣಿಕ, […]
Read More
13-06-2026, 1:00 PM
ಮಂಗಳೂರು : ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ (ರಿ) ಹಾಗೂ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ನಡೆದ ಮಹಿಳಾ ಆರೋಗ್ಯ, ಋತುಬಂಧ ಮತ್ತು ಕ್ಯಾನ್ಸರ್ ತಡೆ ಅರಿವು ಕಾರ್ಯಕ್ರಮದಲ್ಲಿ, ಋತುಬಂಧದ ಸಂದರ್ಭದಲ್ಲಿ ಉಂಟಾಗುವ ದೈಹಿಕ ಹಾಗೂ ಮಾನಸಿಕ ಬದಲಾವಣೆಗಳು, ಕ್ಯಾನ್ಸರ್ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳು, ನಿಯಮಿತ ತಪಾಸಣೆಯ ಮಹತ್ವ ಹಾಗೂ ಆರೋಗ್ಯಕರ ಜೀವನಶೈಲಿಯ ಅಗತ್ಯತೆಯ ಕುರಿತು ಸಂಪನ್ಮೂಲ ವ್ಯಕ್ತಿ ಡಾ. ನಿಶಿತಾ ಶೆಟ್ಟಿಯಾನ್ ಫೆರ್ನಾಂಡಿಸ್ ಮಾಹಿತಿ ನೀಡಿದರು. 40 ವರ್ಷಗಳ ಬಳಿಕ […]
Read More
07-06-2026, 10:00 PM
ಶಕ್ತಿನಗರ : ವರ್ಷದಲ್ಲಿ ಕೇವಲ 28 ದಿನಗಳ ಕಾಲ ಮಾತ್ರ ದರ್ಶನಕ್ಕೆ ಅವಕಾಶವಿರುವ ಈ ಪುಣ್ಯಕ್ಷೇತ್ರಕ್ಕೆ ತೆರಳಲು ಜೂನ್ 6, 2026ರಂದು ಶನಿವಾರ ರಾತ್ರಿ 10.45 ಗಂಟೆಗೆ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಸುಮಾರು 33 ಮಂದಿ ನಾಲ್ಯಪದವು ಶಕ್ತಿನಗರ ಶಾಲೆಯ ಬಳಿ ಸೇರಿದರು. ಪ್ರಯಾಣ ಆರಂಭಿಸುವ ಮುನ್ನ ಎಲ್ಲರೂ ಗುರುಗಳಿಗೆ ಪ್ರಾರ್ಥನೆ ಸಲ್ಲಿಸಿ, ಮಹಾದೇವನ ದರ್ಶನದ ಸಂಕಲ್ಪದೊಂದಿಗೆ ಯಾತ್ರೆಯನ್ನು ಆರಂಭಿಸಿದರು. ಮರುದಿನ ಬೆಳಿಗ್ಗೆ ಸುಮಾರು 4.30 ಗಂಟೆಗೆ ಕೊಟ್ಟಿಯೂರು ತಲುಪಿದ […]
Read More
07-06-2026, 10:00 PM
ಕೂಳೂರು : ಕೇರಳದ ಕಣ್ಣೂರು ಜಿಲ್ಲೆಯಲ್ಲಿರುವ ಕೊಟ್ಟಿಯೂರು ಮಹಾದೇವ ದೇವಸ್ಥಾನವು ಅತ್ಯಂತ ಪವಿತ್ರ ಹಾಗೂ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿದ್ದು, ತನ್ನ ಆಧ್ಯಾತ್ಮಿಕ ಮಹತ್ವದಿಂದ ಭಕ್ತರಿಗೆ ವಿಶಿಷ್ಟ ಅನುಭವವನ್ನು ನೀಡುತ್ತಿದೆ. ಈ ಪುಣ್ಯಕ್ಷೇತ್ರಕ್ಕೆ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ವಿಶೇಷ ತೀರ್ಥಯಾತ್ರೆಯನ್ನು ಆಯೋಜಿಸಲಾಯಿತು. ಜೂನ್ 6, 2026ರಂದು ರಾತ್ರಿ 10.00 ಗಂಟೆಗೆ ಕೂಳೂರಿನಿಂದ ಬಸ್ಸಿನ ಮೂಲಕ ಯಾತ್ರೆ ಆರಂಭಗೊಂಡಿತು. ಈ ಯಾತ್ರೆಯಲ್ಲಿ ಘಟಕದ ಮಾಜಿ ಅಧ್ಯಕ್ಷರು, ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಸುಮಾರು 40 ಮಂದಿ […]
Read More