ಗೌರವ ಅಭಿನಂದನೆ

ಯುವವಾಹಿನಿ ಗೌರವ ಅಭಿನಂದನೆ ಪ್ರದಾನ

ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ವಿವಿಧ ಕ್ಷೇತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದ ಸಮಾಜದ ಬಂಧುಗಳಿಗೆ ಗೌರವ ಅಭಿನಂದನಾ ಸಮಾರಂಭ ನಡೆಯಿತು. ಪ್ರಸ್ತುತ ಸಾಲಿನಲ್ಲಿ ಡಾಕ್ಟರೇಟ್ ಪದವಿ ಪಡೆದ ಲಾವಣ್ಯ ಡಿ. ಕಟೀಲು , ಡಾ. ಪ್ರವೀಣ್ ಸುವರ್ಣ , ಡಾ.ನೇಹಾ ಅಭಿನಂದನ್ , ಡಾ. ಮೀರಾ ದೇವಿ , ಡಾ.ವರುಣ್ ವೆಂಕಟೇಶ್ ಮತ್ತು […]

Read More

ಯುವವಾಹಿನಿ ಗೌರವ ಅಭಿನಂದನೆ ಪ್ರದಾನ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. ರೋಟರಿ ಜಿಲ್ಲೆ 3181 ಇದರ ರಾಜ್ಯಪಾಲ […]

Read More

ಡಾ| ನಿಖಿತಾ ಸುಕೇಶ್

ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯವು ನಡೆಸಿದ 2016ನೇ ಸಾಲಿನ ಸ್ನಾತಕೋತ್ತರ ದಂತ ವೈದ್ಯಕೀಯ (M.D.S. Ortho) ಪರೀಕ್ಷೆಯಲ್ಲಿ ಸುಳ್ಯದ K.V.G. ದಂತ ಮಹಾವಿದ್ಯಾಲಯದ ವಿದ್ಯಾರ್ಥಿನಿ ಮಂಗ ಳೂರು ಸುರತ್ಕಲ್‍ನ ಡಾ| ನಿಖಿತಾ ಸುಕೇಶ್ 4ನೇ ರ್ಯಾಂಕ್ ಗಳಿಸಿದ್ದು ಬಿಲ್ಲವ ಸಮಾಜಕ್ಕೆ ಕೀರ್ತಿ ತಂದಿದ್ದಾರೆ. ಸ್ನಾತಕೋತ್ತರ ವಿಭಾಗದಲ್ಲಿ ಕಾಲೇಜಿಗೆ ದೊರೆತ ಒಟ್ಟು 8 ರ್ಯಾಂಕ್‍ಗಳಲ್ಲಿ 4ನೇ ರ್ಯಾಂಕ್ ಪಡೆದು ಕಾಲೇಜಿಗೂ ಹೆಮ್ಮೆ ಎನಿಸಿದ್ದಾರೆ. ಕಾಲೇಜಿನ ವಕ್ರ ದಂತ ವಿಭಾಗದ ಮುಖ್ಯಸ್ಥರಾದ ಡಾ| ಶರತ್ ಕುಮಾರ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ […]

Read More

ಸಿ.ಎ ಪರೀಕ್ಷೆಯಲ್ಲಿ ಉತ್ತೀರ್ಣ ರಾಕೇಶ್ ಪೂಜಾರಿ ಕೈರೋಡಿ

ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಸದಾನಂದ ಪೂಜಾರಿ ಮತ್ತು ಲಕ್ಷ್ಮೀ ದಂಪತಿಗಳ ಸುಪುತ್ರ. ಹೊಸದಿಲ್ಲಿಯ ದಿ ಇನ್ಸ್‍ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ವತಿಯಿಂದ 2016ರ ನವೆಂಬರ್‍ನಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಮೊದಲ ಹಂತದಲ್ಲೇ ಉತ್ತೀರ್ಣರಾಗಿದ್ದಾರೆ. ಪ್ರಸ್ತುತ ಇವರು ಮುಂಬಯಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದ ಸುಸಂದರ್ಭದಲ್ಲಿ ಗೌರವ ಅಭಿನಂದನೆ ಸಲ್ಲಿಸಲು ಸಂತೋಷಪಡುತ್ತೇವೆ. ಇವರಿಗೆ ತಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸುತ್ತಾ ಯುವವಾಹಿನಿ (ರಿ) ಕೇಂದ್ರ ಸಮಿತಿ, […]

Read More

ಡಾ| ರಶ್ಮಿ ಕೆ.ಯಸ್.

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮಂಗಳೂರು, ಮಣಿಪಾಲ ಯುನಿವರ್ಸಿಟಿ ಇಲ್ಲಿ ಪಿಸಿಯೋಲಜಿ ವಿಭಾಗದಲ್ಲಿ ಉಪನ್ಯಾಸಕಿಯಾಗಿರುವ ಇವರು ಮಂಡಿಸಿದ ಮಹಾಪ್ರಬಂಧ ‘‘Role of Nucleus Akumbence & Retaled Subcortical Center’s in Alcohol Addiction in male vistor Albino rots’ ‘ರೋಲ್ ಆಫ್ ನ್ಯೂಕ್ಲಿಯಸ್ ಆಕುಂಬೆನ್ಸ್ ಆಂಡ್ ರಿಲೇಟೆಡ್ ಸಬ್‍ಕಾರ್ಟಿಕಲ್ ಸೆಂಟರ್ಸ್ ಇನ್ ಆಲ್ಕೋಹಾಲ್ ಆಡಿಕ್ಷನ್ ಇನ್ ಮೇಲ್ ವಿಸ್ಟಾರ್ ಆಲ್ಬಿನೊ ರಾಟ್ಸ್’ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಮಣಿಪಾಲ ವಿಶ್ವವಿದ್ಯಾನಿಲಯವು 2016 ಆಗಸ್ಟ್‍ನಲ್ಲಿ ಡಾಕ್ಟರೇಟ್ (ಪಿಎಚ್‍ಡಿ) ಪದವಿಯನ್ನು […]

Read More

ಡಾ| ಅಚ್ಯುತ್ತ ಪೂಜಾರಿ

ಇವರು ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಕಣಿಯಾರು ದಿ| ಸುಬ್ಬಪ್ಪ ಪೂಜಾರಿ ಹಾಗೂ ಲೀಲಾವತಿ ದಂಪತಿಗಳ ಪುತ್ರ. ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಪ್ರಸ್ತುತ ಪ್ರಾಂಶುಪಾಲರಾಗಿರುವ ಪ್ರೊ| ಅಚ್ಯುತ್ತ ಪೂಜಾರಿ ಕೆ. ಅವರಿಗೆ ಪಿಎಚ್‍ಡಿ ಪದವಿ ಲಭಿಸಿದೆ. ಇವರು ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ಶಾಸ್ತ್ರ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಪ್ರೊ| ವೈ. ಮುನಿರಾಜುರವರ ಮಾರ್ಗದರ್ಶನದಲ್ಲಿ ಮಂಡಿಸಿರುವ¸An Empirical Analysis of Banker & Customer Relationship Strategies […]

Read More

ಡಾ| ಮನೋಜ್ ಕುಮಾರ್

ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕೆರೆ, ಉಡುಪಿ ಜಿಲ್ಲೆ ಇಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಮನೋಜ್ ಕುಮಾರ್ ಎಂ. ಇವರು ಮೈಸೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್ (ಪಿ.ಹೆಚ್.ಡಿ) ಪದವಿಯನ್ನು ಪಡೆದಿರುತ್ತಾರೆ. ಮೈಸೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಪ್ರೊ. ವೆಂಕಟೇಶ್ ಸಿ. ಇವರ ಮಾರ್ಗದರ್ಶನದಲ್ಲಿ ಶ್ರೀ ಮನೋಜ್‍ಕುಮಾರ್ ಎಂ ಇವರು ಮಂಡಿಸಿದ Construction of health related physical fitness Norms for 16-18 years boys of coastal Karnataka“ಎಂಬ ಮಹಾಪ್ರಬಂಧಕ್ಕೆ […]

Read More

ಡಾ. ಸದಾನಂದ ಪೂಜಾರಿ

ಪಶ್ಚಿಮ ಕರಾವಳಿ ಪರ್ವತ ಶ್ರೇಣಿಯ ತಪ್ಪಲಿನ ಬೆಳ್ತಂಗಡಿ ತಾಲೂಕು ತೆಂಕ ಕಾರಂದೂರು ಗ್ರಾಮದ ಅಂಗಡಿಬೆಟ್ಟು ಎಂಬಲ್ಲಿಯ ನಿವಾಸಿಯಾಗಿದ್ದು, ಗ್ರಾಮೀಣ ಪ್ರದೇಶದಲ್ಲಿದ್ದರೂ ಕಲಿಕೆಯಲ್ಲಿ ಹಿಂದೆ ಬೀಳದೆ ವೈದ್ಯಕೀಯ ಪದವಿ ಪಡೆದು ಉನ್ನತವಾದ ಉದ್ಯೋಗವನ್ನು ಪಡೆದು ಬಡಜನರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸುತ್ತಾ ಜನಸೇವೆ ಮಾಡುತ್ತಿರುವ ಓರ್ವ ಸಾಧಕ ಡಾ. ಸದಾನಂದ ಪೂಜಾರಿ ಇವರು. ಶ್ರೀಯುತರು ಕೃಷಿ ಕುಟುಂಬದಲ್ಲಿ ಜನಿಸಿ, ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರಕಾರಿ ಪ್ರಾಥಮಿಕ ಶಾಲೆ, ತೆಂಕ ಕಾರಂದೂರಿನಲ್ಲಿ ನಡೆಸಿ, ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯಲ್ಲಿ ಹೈಸ್ಕೂಲ್ ಶಿಕ್ಷಣ ಪಡೆದು, ಉಜಿರೆಯ […]

Read More

ಡಾ| ನವೀನ್ ಕುಮಾರ್ ತೋನ್ಸೆ

ತೋನ್ಸೆ ಗರಡಿ ಮನೆ-ಮೂಡು ತೋನ್ಸೆ ಹೊನ್ನಪ್ಪಕುದ್ರು ಇಲ್ಲಿನ ದಿ| ನಾರಾಯಣ ಪೂಜಾರಿ-ಅಮ್ಮಣ್ಣಿ ಪೂಜಾರ್ತಿ ದಂಪತಿಗಳ ಸುಪುತ್ರರಾದ ಡಾ| ನವೀನ್ ಕುಮಾರ್ ತೋನ್ಸೆಯವರು ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ತೋನ್ಸೆ ನಿಡಂಬಳ್ಳಿ ಪ್ರಾಥಮಿಕ ಶಾಲೆಯಲ್ಲಿ ಪಡೆದು ಮಿಲಾಗ್ರಿಸ್ ಹೈಸ್ಕೂಲ್‌ನಲ್ಲಿ ಪ್ರೌಢ ಹಾಗೂ ಮಿಲಾಗ್ರಿಸ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣವನ್ನು ಪೂರೈಸಿದರು. ಮಣಿಪಾಲ ವಿಶ್ವವಿದ್ಯಾನಿಲಯದ ಕಾಲೇಜ್ ಆಫ್ ಎಲೈಡ್ ಹೆಲ್ತ್ ಸೈನ್ಸ್ ಇಲ್ಲಿ ಬಿ.ಎಸ್‌ಸಿ (MLT) ಪದವಿ ಪಡೆದ ಡಾ| ತೋನ್ಸೆಯವರು ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ ಅನಾಟಮಿಯಲ್ಲಿ ಎಂ.ಎಸ್‌ಸಿ. ಪದವಿ ಪಡೆದರು. ಪ್ರೋ| […]

Read More

ಡಾ| ಪ್ರಕೃತಿ ಶ್ರೀನಾಥ್

ಮೂಲ್ಕಿ ನಾರಾಯಣಗುರು ವಿದ್ಯಾಸಂಸ್ಥೆಯಲ್ಲಿ ಕಲಿತ ಓರ್ವ ಮಹಿಳೆ ಇಂದು ವಿಶ್ವವಿಖ್ಯಾತ ಬೆಂಗಳೂರಿನ CMR Institute of Technology ಯಲ್ಲಿ ಸಹಾಯಕ ಪ್ರೊಫೆಸರ್ ಆಗಿದ್ದಾರೆ. ಹಲವು ವೈಶಿಷ್ಟ್ಯಪೂರ್ಣ ಸಾಧನೆಯ ಈ ಪ್ರತಿಭಾನ್ವಿತೆ ಸಮಾಜದ ಕೆಲವೇ ಸಾಧಕರಲ್ಲಿ ಮೆಚ್ಚುಗೆ ಗಳಿಸಿ ಯುವ ಪೀಳಿಗೆಗೆ ಆದರ್ಶಪ್ರಾಯರೆನಿಸಿದ್ದಾರೆ. ಪ್ರತಿಷ್ಠಿತ (ಈಗಿನ ವಿದ್ಯಾರ್ಥಿಗಳ ಪ್ರಥಮ ಆಯ್ಕೆ ಎನಿಸಿದ) ಬೆಂಗಳೂರಿನ BMS ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದು ಉತ್ಪಾದನಾ ವಿಜ್ಞಾನ ಹಾಗೂ ತಂತ್ರಜ್ಞಾನದಲ್ಲಿ PES Institute of Technology ಯಲ್ಲಿ M.Tech ಪದವಿ ಪಡೆದಿರುತ್ತಾರೆ. ಅಲ್ಲಿಗೇ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!