Yuvavahini

ಸಂಪರ್ಕ

ಯುವವಾಹಿನಿ ಕಂಕನಾಡಿ ಘಟಕದಿಂದ ಕಿರು ಪ್ರವಾಸ

ಕಂಕನಾಡಿ : ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಮಂಗಳೂರು ಮೋರ್ಗನ್ಸ್ ಗೇಟ್‌ನಲ್ಲಿರುವ ಕ್ರೂಸ್ ಆ್ಯಂಡ್ ಡೈನ್ ಕೇಂದ್ರಕ್ಕೆ ಒಂದು ದಿನದ ಕಿರು ಪ್ರವಾಸವನ್ನು ದಿನಾಂಕ 11-01-2026 ರಂದು ಆಯೋಜಿಸಲಾಯಿತು. ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ನಡೆದ ಈ ಪ್ರವಾಸದಲ್ಲಿ ಘಟಕದ ಸದಸ್ಯರು ಹಾಗೂ ಅವರ ಬಂಧು–ಮಿತ್ರರು ಉತ್ಸಾಹಭರಿತವಾಗಿ ಭಾಗವಹಿಸಿ ಸಂತಸದ ಕ್ಷಣಗಳನ್ನು ಕಳೆಯಿದರು. ಬೆಳಿಗ್ಗೆ ಚಹಾ–ತಿಂಡಿಯೊಂದಿಗೆ ಆರಂಭವಾದ ಪ್ರವಾಸ, ಬೋಟಿನಲ್ಲಿ ಸಾಗುವ ಮೂಲಕ ಸುತ್ತಮುತ್ತಲಿನ ಮನೋಹರ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸುವ ಅನುಭವವನ್ನು ನೀಡಿತು. […]

Read More

ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯ ಕ್ಷೇತ್ರದರ್ಶನ

ಮಂಗಳೂರು: ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ, ದಿನಾಂಕ 04-01-2026 ರ ಆದಿತ್ಯವಾರದಂದು ಯುವವಾಹಿನಿ (ರಿ.) ಕೆಂಜಾರು–ಕರಂಬಾರು ಘಟಕದ ವತಿಯಿಂದ ಕ್ಷೇತ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬೆಳಿಗ್ಗೆ 10 ಗಂಟೆಗೆ ಕರಂಬಾರು ಮಾರಿಯಮ್ಮ ಕೋಟೆ ಬಬ್ಬುಸ್ವಾಮಿ ಪರಿವಾರ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ, ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಯುವವಾಹಿನಿ ಸದಸ್ಯರು, ಗ್ರಾಮಸ್ಥರು ಹಾಗೂ ಮಕ್ಕಳು ಸೇರಿ ಒಟ್ಟು 72 ಮಂದಿ ಒಂದೇ ಬಸ್ಸಿನಲ್ಲಿ ಪುಣ್ಯಕ್ಷೇತ್ರಕ್ಕೆ ತೆರಳಿದರು. ದೇವಾಲಯದ ಕೆರೆಯಲ್ಲಿ ಸ್ನಾನ ಮಾಡಿ, ಅರ್ಚಕರ […]

Read More

ಯುವವಾಹಿನಿ (ರಿ) ಸುರತ್ಕಲ್ ಘಟಕದಿಂದ ಎರಡು ದಿನಗಳ ಪ್ರವಾಸ

ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ ವತಿಯಿಂದ ಎರಡು ದಿನಗಳ ಸಂಘಟನಾ ಪ್ರವಾಸವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ದಿನಾಂಕ 03.01.2026ರಂದು ಸುರತ್ಕಲ್ ಬಸ್‌ಸ್ಟ್ಯಾಂಡ್‌ನಿಂದ ಪ್ರಯಾಣ ಆರಂಭಿಸಿದ ತಂಡವು ಸೂರ್ಮನೆ ವಾಟರ್‌ಫಾಲ್, ಹೊರನಾಡು ದೇವಸ್ಥಾನ, ಕ್ಯಾತನಮಕ್ಕಿ ರೆಸಾರ್ಟ್ ಹಾಗೂ ಸನ್‌ಸೆಟ್ ಪಾಯಿಂಟ್ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿತು. ದಿನಪೂರ್ತಿ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಿದ ನಂತರ ತಂಡವು ರೆಸಾರ್ಟ್‌ನಲ್ಲಿ ವಿಶ್ರಾಂತಿ ಪಡೆದುಕೊಂಡಿತು. ಮರುದಿನ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಊಟ ಮುಗಿಸಿ, ಹಿಂತಿರುಗುವ ಸಂದರ್ಭದಲ್ಲಿ ದಾರಿಮಧ್ಯೆ ಕಂಡುಬಂದ […]

Read More

ಸಂಭ್ರಮ ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಬೆಳ್ತಂಗಡಿ: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹಾಗೂ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ, ಬೆಳ್ತಂಗಡಿ ತಾಲೂಕು ಇವರ ಸಹಕಾರದೊಂದಿಗೆ ದಿನಾಂಕ 30-12-2025ರಂದು ಸಂಭ್ರಮ ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಘಟಕದ ನಿರ್ದೇಶಕ ಸೌಮ್ಯ ಲಾಯಿಲಾ ಅವರ “ಕನಸು” ನಿವಾಸದಲ್ಲಿ ಯುವವಾಹಿನಿ ಕುಟುಂಬ ಸದಸ್ಯರ ಭಾಗವಹಿಸುವಿಕೆಯೊಂದಿಗೆ ನಡೆಯಿತು. ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಅವರ ಅಧ್ಯಕ್ಷತೆಯಲ್ಲಿ ಆರಂಭವಾದ ಕಾರ್ಯಕ್ರಮವನ್ನು ಹಿರಿಯರಾದ ಗಿರಿಧರ ಪೂಜಾರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಕುಮಾರ್ ಮೂಡುಕೋಡಿ, […]

Read More

ಆಟಿ ತಿಂಗೊಲ್ದ ಪೊಲಬು-ಯುವವಾಹಿನಿ( ರಿ.) ವಿಟ್ಲ ಘಟಕ

ಬಿಲ್ಲವ ಸಂಘ (ರಿ.) ವಿಟ್ಲ, ಬಿಲ್ಲವ ಮಹಿಳಾ ಘಟಕ ಹಾಗೂ ಘಟಕದ ವತಿಯಿಂದ ಕಾರ್ಯಕ್ರಮ ದಿನಾಂಕ 20/07/2025 ನೇ ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ವಿಟ್ಲದಲ್ಲಿ ನಡೆಯಿತು ಕಾರ್ಯಕ್ರಮದಲ್ಲಿ sslc ಮತ್ತು puc ಯಲ್ಲಿ ಶೇಕಡಾ 95% ಗಿಂತ ಅಧಿಕ ಅಂಕ ಪಡೆದ 9 ವಿದ್ಯಾರ್ಥಿಗಳನ್ನು ಗುರುತಿಸಲಾಯಿತು ಮತ್ತು ಸದಸ್ಯರು ತಯಾರಿಸಿದ ಆಟಿ ತಿಂಗಳ ಬಗ್ಗೆ ಬಗೆಯ ತಿಂಡಿಗಳನ್ನು ಪ್ರದರ್ಶನ ಬಳಿಕ ಎಲ್ಲರಿಗೂ ಬಡಿಸಲಾಯಿತು ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು

Read More

ಸಂಪರ್ಕ ನಿರ್ದೇಶಕರಾದ ಸುಜಾತ ರವರ ಸಂಚಾಲಕತ್ವದಲ್ಲಿ ಸು ಪ್ರಮ್ ಸೋ ಚಲನಚಿತ್ರ ವೀಕ್ಷಣೆ – ಯುವವಾಹಿನಿ(ರಿ.) ಕೂಳೂರು ಘಟಕ

ಸಂಪರ್ಕದ ನಿಟ್ಟಿನಲ್ಲಿ ಕುಟುಂಬ ಸಂಪರ್ಕ ನಿರ್ದೇಶಕರಾದ ಸುಜಾತ ರವರ ಸಂಚಾಲಕತ್ವದಲ್ಲಿ ದಿನಾಂಕ 11-08-2025 ರಂದು ಸು ಪ್ರಮ್ ಸೋ ಚಲನಚಿತ್ರ ವೀಕ್ಷಣೆಗೆ ಹೋಗಲಾಗಿತ್ತು. 51 ಜನ ಸದಸ್ಯರ ತಂಡ ಚಲನಚಿತ್ರ ವೀಕ್ಷಣೆ ಮಾಡಿದೆವು.

Read More

ಯುವವಾಹಿನಿ (ರಿ.) ಮಂಗಳೂರು ಘಟಕ ಚಿಕ್ಕಮಗಳೂರು ಪ್ರವಾಸ

ಮಂಗಳೂರು:- ದಿನಾಂಕ 27 ಮತ್ತು 28ರ ಆಗಸ್ಟ್ 2022ರಂದು ಚಿಕ್ಕಮಗಳೂರಿಗೆ ಕಿರು ಪ್ರವಾಸವನ್ನು ಮಂಗಳೂರು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಪ್ರವಾಸಿ ತಾಣಗಳಾದ ಕೊಟ್ಟಿಗೆಹಾರ, ಬಾಬಾಬುಡನಗಿರಿ, ದತ್ತಪೀಠ, ಝರಿ ವಾಟರ್ ಪಾಲ್ಸ್, ಮಾಣಿಕ್ಯಧಾರ, ಮುಳ್ಳಯ್ಯನ ಗಿರಿ ಬೆಟ್ಟ ಹಾಗೂ ಸುಂದರ ಪ್ರಕೃತಿಯ ಮಡಿಲಲ್ಲಿರುವ ಆಶ್ರಯ ತಾಣ ಜಪ್ಪದ್ ಕಲ್ಲು ರೆಸಾರ್ಟಿನಲ್ಲಿ ಕ್ಯಾಂಪ್ ಫ್ಯೆರ್, ರೋಪ್ ವೇ, ಸ್ವಿಮ್ಮಿಂಗ್ ಪೂಲ್, ಕ್ರಿಕೆಟ್ ಮ್ಯಾಚ್, ಮ್ಯೂಸಿಕಲ್ ಡ್ಯಾನ್ಸ್ ಮುಂತಾದ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. 40 ಜನ ಹಿರಿಯರು ಮತ್ತು ನಾಲ್ಕು ಮಂದಿ […]

Read More

ವಿಶೇಷ ಮಕ್ಕಳ ಸಂವಾದ – 2022

ಯುವವಾಹಿನಿ(ರಿ) ಕಡಬ ಘಟಕ ಹಾಗೂ ವಿದ್ಯಾ ಚೇತನ ವಿಶೇಷ ಮಕ್ಕಳ ಶಾಲೆ ರಾಮಕುಂಜ ಇದರ ಸಹಯೋಗದಲ್ಲಿ ವಿಶೇಷ ಮಕ್ಕಳ ಸಂವಾದ ಕಾರ್ಯಕ್ರಮವು 06 ಜೂನ್ 2022 ನೇ ಸೋಮವಾರ ವಿದ್ಯಾ ಚೇತನ ವಿಶೇಷ ಮಕ್ಕಳ ಶಾಲೆ ರಾಮಕುಂಜ ಇಲ್ಲಿ ನಡೆಯಿತು. ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶರವೂರು ಇದರ ವ್ಯವಸ್ಥಾಪನ ಸಮಿತಿ ಸದಸ್ಯರಾದ ಮಂಜುಳಾ ಕೆ, ಸಿ ಎಂಡೋಪೀಡಿತ ಮಕ್ಕಳನ್ನು ನೋಡಿಕೊಳ್ಳಲು ಸರಕಾರವು ಐದು ಎಕರೆ ಜಮೀನನ್ನು ಆಲಂಕಾರ್ ನಲ್ಲಿ ನಿಗದಿಪಡಿಸಿದೆ, ನಿಗದಿಪಡಿಸಿದ […]

Read More

ಕುಟುಂಬ ಸಮ್ಮಿಲನ-2022

ದಿನಾಂಕ 01.05.2022 ರಂದು “ಯುವವಾಹಿನಿ ಕುಟುಂಬ ಸಮ್ಮಿಲನ 2022” ಕಾರ್ಯಕ್ರಮವನ್ನು ಕುಳಾಯಿ ವಿಷ್ಣು ಮೂರ್ತಿ ದೇವಸ್ಥಾನದ ಪರಿಸರದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಅಂತಾರಾಷ್ಟ್ರೀಯ ಮಟ್ಟದ ಪವರ್ ಲಿಫ್ಟ್ ರ್ ಹಾಗೂ ವೈಟ್ ಲಿಫ್ಟರ್ ಸುಪ್ರಿತಾ ಪೂಜಾರಿಯವರು ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷರಾದ ಶ್ರೀ ರವಿ ಅಮೀನ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಘಟಕದ ಸದಸ್ಯರಾದ ಯಶಸ್ವಿನಿ, ಜಯಶ್ರೀ, ಕೀರ್ತಿ ಹಾಗೂ ಕುಮಾರಿ ಅಕ್ಷಿತಾ ರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಶುಭಾರಂಭಗೊಂಡಿತು. ಈ ಕಾರ್ಯಕ್ರಮದಲ್ಲಿ ಘಟಕದ […]

Read More

ಸ್ನೇಹ ಸಮ್ಮಿಲನ – 2022

ಕೂಳೂರು ಘಟಕದ ವತಿಯಿಂದ ಯುವವಾಹಿನಿಯ ಎಲ್ಲಾ ಸದಸ್ಯರ ಸಂಪರ್ಕ ಹಾಗೂ ಉತ್ತಮ ಭಾಂದವ್ಯಕ್ಕಾಗಿ ಯುವವಾಹಿನಿ (ರಿ.) ಕೂಳೂರು ಘಟಕದ ಸ್ನೇಹ ಸಮ್ಮಿಲನ 2022 ಕಾರ್ಯಕ್ರಮವು ದಿನಾಂಕ 15-05-2022 ರಂದು ಪಡುಬಿದ್ರಿ ಬ್ಲೂ ಪ್ಲ್ಲಾಗ್ ಬೀಚ್ ನಲ್ಲಿ ನಡೆಯಿತು. ಘಟಕದ ಅಧ್ಯಕ್ಷರಾದ ದೀಕ್ಷೀತ್ ಸಿ ಎಸ್ ಎಲ್ಲರನ್ನೂ ಸ್ವಾಗತಿಸಿದರು. ಪಡುಬಿದ್ರಿ ಘಟಕದ ಅಧ್ಯಕ್ಷರಾದ ಯಶೋಧರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸ್ನೇಹ ಮಿಲನ 2022 ಉತ್ತಮ ರೀತಿಯಲ್ಲಿ ಸಾಗಲಿ ಎಂದು ಶುಭ ಹಾರೈಸಿದರು. ನಂತರ ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!