Yuvavahini

ಮಾಹಿತಿ

ಸಮ ಸಮಾಜದ ಸರ್ವ ಸಮಾನತೆಯ ಜ್ಞಾನ ಜ್ಯೋತಿ ಬಸವಣ್ಣ ಜಯಂತಿ

ಮಂಗಳೂರು : ಯುವವಾಹಿನಿ(ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಸಮ ಸಮಾಜದ ಸರ್ವ ಸಮಾನತೆಯ ಜ್ಞಾನ ಜ್ಯೋತಿ ಬಸವಣ್ಣ ಜಯಂತಿ ಯುವವಾಹಿನಿಯ ಸಭಾಂಗಣ ದಲ್ಲಿ ಆಚರಿಸಲಾಯಿತು. ಸಾಹಿತಿ ಚಿಂತಕಿ ಶ್ರೀಮತಿ ಜ್ಯೋತಿ ಇರ್ವತ್ತೂರು ಇವರು ಬಸವಣ್ಣ ಜಯಂತಿ ಬಗ್ಗೆ ವಿಶೇಷ ಉಪನ್ಯಾಸ ನೀಡಿ ಯುವವಾಹಿನಿಯಂತಹ ಬಿಲ್ಲವ ಸಂಘಟನೆ ಯೊಂದು ಬಸವಣ್ಣ ಜಯಂತಿಯನ್ನು ಆಚರಿಸುತ್ತಿರುವುದು ಬಹಳ ಸಂತೋಷದ ವಿಷಯ. ಸಮ ಸಮಾಜದ ಸಮಾನತೆಯ ತಳಹದಿಯಲ್ಲಿ ಕೆಲಸಮಾಡಿದ ನಾರಾಯಣ ಗುರು, ಬಸವಣ್ಣ, ಪೆರಿಯಾರ್, ಕಾರ್ಲ್ ಮಾರ್ಕ್ಸ್ ಮುಂತಾದವರು ನಮಗೆಲ್ಲ ಆದರ್ಶ ಎಂದರು. […]

Read More

ಅಗ್ನಿ ಸುರಕ್ಷತೆ ಮತ್ತು ಮುಂಜಾಗ್ರತೆ ಬಗ್ಗೆ ಮಾಹಿತಿ ಮತ್ತೆ ಪ್ರಾತ್ಯಕ್ಷಿಕೆ

ಯಡ್ತಾಡಿ : ಯುವವಾಹಿನಿ (ರಿ) ಯಡ್ತಾಡಿ ಘಟಕದ ಬೇಸಿಗೆ ಶಿಬಿರ, ‘ವಿಕಸನ-2019’ ರ ಅಂಗವಾಗಿ ನಾಲ್ಕನೇ ದಿನ ಮಕ್ಕಳಿಗೆ ‘ಅಗ್ನಿ ಸುರಕ್ಷತೆಯ’ ಬಗ್ಗೆ ಅರಿವು ಮೂಡಿಸಲಾಯಿತು. ಅಂಕಿ ಅಂಶಗಳ ಪ್ರಕಾರ ಹಲವಾರು ಬೆಂಕಿ ಅವಘಢಗಳು ಅರಿವಿನ ಕೊರತೆಯಿಂದ ಉಂಟಾಗುವಂತಹದು. ಬಿಸಿಲಿನ ಬೇಗೆಯ ಈ ದಿನಗಳಲ್ಲಿ ಅಗ್ನಿ ಅನಾಹುತಗಳ ಸಾಧ್ಯತೆ ಇನ್ನೂ ಹೆಚ್ಚು. ‘ಅರಿವಿನ ತಂಗಾಳಿ’ ಹೆಸರಿನಲ್ಲಿ ನಡೆಯುತ್ತಿರುವ ಈ ಶಿಬಿರದಲ್ಲಿ ಅಗ್ನಿ ಅನಾಹುತಗಳನ್ನು ಸರಿಯಾದ ಮಾಹಿತಿಯ ಮೂಲಕ ಆದಷ್ಟು ಕಡಿಮೆ ಮಾಡುವ ಮೂಲಕ ಉದ್ದೇಶದಿಂದ ‘ಅಗ್ನಿ ಸುರಕ್ಷತೆ […]

Read More

ಸ್ವ ಉದ್ಯೋಗ ತರಬೇತಿ ಶಿಬಿರ

ಉಡುಪಿ : ಉಡುಪಿ ಯುವವಾಹಿನಿ ಘಟಕದಲ್ಲಿ ದಿನಾಂಕ 31/03/2019 ರಂದು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಭಾರತೀಯ ವಿಕಾಸ ಟ್ರಸ್ಟ್ ವತಿಯಿಂದ ಸ್ವ ಉದ್ಯೋಗ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಶಿಬಿರದಲ್ಲಿ ಮಹಿಳೆಯರಿಗೆ – ಸಾಂಬಾರು ಪುಡಿ, ಸಾರಿನ ಪುಡಿ, ಪುಳಿಯೋಗರೆ ಮಿಕ್ಸ್, ಪೇಪರ್ ಬ್ಯಾಗ್ ತಯಾರಿಸುವ ವಿಧಾನ, ಮ್ಯಾಟ್ ತಯಾರಿಸುವ ಬಗ್ಗೆ ತರಬೇತಿ ನೀಡಿದರು. ಸುಮಾರು 20 ಮಹಿಳೆಯರು ತರಬೇತಿಯಲ್ಲಿ ಪಾಲ್ಗೊಂಡುರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಮತಿ ಲಕ್ಷ್ಮೀಬಾಯಿ ಹಾಗೂ ಶ್ರೀಮತಿ ಸುಮಂಗಲಾ ರವರು ಭಾಗವಹಿಸಿದ್ದರು.ಶಕುಂತಳ ಎಸ್ […]

Read More

ನಮ್ಮ ಮಾತುಗಳು ಕೇಳುಗರ ಹೃದಯವನ್ನು ತಲುಪಬೇಕು : ಅಭಿಜಿತ್ ಕರ್ಕೇರ

ಬಂಟ್ವಾಳ : ದಿನನಿತ್ಯದ ವೈಯಕ್ತಿಕ ಮತ್ತು ವೃತ್ತಿ ಬದುಕಿನಲ್ಲಿ ವ್ಯವಹರಿಸುವಾಗ ಇತರರನ್ನು ಪ್ರೇರೇಪಿಸುವ ಮನವೊಪ್ಪಿಸುವ ಅಥವಾ ಒತ್ತಾಯಿಸುವ ಸಂದರ್ಭಗಳು ಸಹಜ, ಇಂತಹ ಸಂದರ್ಭಗಳಲ್ಲಿ ಸಂವಹನ ಅತ್ಯಂತ ಪರಿಣಾಮಕಾರಿಯಾಗಿದ್ದು , ಉದ್ದೇಶವನ್ನು ಸಾಧಿಸುವಂತೆ ಇರಬೇಕು. ಆದರೆ ಈ ಕೌಶಲ ಎಲ್ಲರಲ್ಲೂ ಒಂದೇ ಮಟ್ಟದಲ್ಲಿ ಇರುವುದಿಲ್ಲ ಉದಾಹರಣೆಗೆ ಜೀವನದಲ್ಲಿ ಯಾವ ಕೊರತೆ ಇಲ್ಲದಿದ್ದರೂ ಚೈತನ್ಯ ರಹಿತವಾದ ನಿರಾಶವಾದಿಗಳನ್ನು ನೋಡುತ್ತಿರುತ್ತೇವೆ. ಕೆಲವರು ಮಾತನಾಡುವ ಶೈಲಿಯಿಂದ ನಕಾರಾತ್ಮಕ ಅನಿಸಿಕೆ, ಅನುಭವಗಳು ಆಗುತ್ತವೆ. ನಾವು ಅಭಿಪ್ರಾಯವನ್ನು, ಭಾವನೆಗಳನ್ನು ವ್ಯಕ್ತಪಡಿಸುವ ರೀತಿಯಿಂದ ಇತರರಿಗೆ ಬೇಸರ ಕಿರಿಕಿರಿ […]

Read More

ಪಾಠ ಹೇಳುವ ಆಟಗಳ ನಡುವೆ ಪ್ರಥಮ ಚಿಕಿತ್ಸೆಯ ಪ್ರಾಯೋಗಿಕ ಮಾಹಿತಿ : ನಮ್ಮ ನಡೆ ಕಂಬಳಕಟ್ಟು ಕಡೆ

ಯಡ್ತಾಡಿ : ಸಂಘಟನೆಯನ್ನು ಬಲಪಡಿಸುವ ಸಲುವಾಗಿ ಒಂದಿಷ್ಟು ಮನರಂಜನೆಗೆ, ಒಂದಿಷ್ಟು ಸಂಘಟನೆಗೆ ಎಂಬ ಉದ್ದೇಶವನ್ನು ಮುಂದಿರಿಸಿಕೊಂಡು ಯುವವಾಹಿನಿ (ರಿ) ಯಡ್ತಾಡಿ ಘಟಕ ಆರಂಭಿಸಿದ ನಮ್ಮ ನಡೆಯ ಎರಡನೇ ಕಾರ್ಯಕ್ರಮ ನಮ್ಮ ನಡೆ, ಕಂಬಳಕಟ್ಟು ಕಡೆ, ಅಧ್ಯಕ್ಷರಾದ ಸತೀಶ ಪೂಜಾರಿಯವರ ಮನೆಯಲ್ಲಿ ದಿನಾಂಕ 21-10-2018 ರಂದು ನಡೆಸಲಾಯಿತು. ಸ್ವಯಂ ಪ್ರೇರಣೆಯಿಂದ ಸದಸ್ಯರು ಭಾಗವಹಿಸದೇ ಇದ್ದರೆ ಯಾವುದೇ ಸಂಘಟನೆಯನ್ನು ಮುನ್ನಡೆಸುವುದು ಕಷ್ಟ ಸಾಧ್ಯ. ಅದೂ ಅಲ್ಲದೆ ಅದು ವ್ಯರ್ಥ ಕೂಡ. ಈ ನಿಟ್ಟಿನಲ್ಲಿ ಹೊಸ ಚಿಂತನೆಯೊಂದಿಗೆ ಯುವವಾಹಿನಿ ಪ್ರಾರಂಭಿಸಿದ ಕಾರ್ಯಕ್ರಮ […]

Read More

ಯುವದರ್ಪಣ : ಮಾಹಿತಿ ಕಾರ್ಯಾಗಾರ

ಉಪ್ಪಿನಂಗಡಿ : ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಆಶ್ರಯದಲ್ಲಿ‌ ಘಟಕದ ಸದಸ್ಯರಿಗೆ ಯುವದರ್ಪಣ ಮಾಹಿತಿ ಕಾರ್ಯಾಗಾರವು ರೋಟರಿ ಭವನ ರಾಮನಗರ ಉಪ್ಪಿನಂಗಡಿ ಇಲ್ಲಿ ದಿನಾಂಕ :30/09/18 ರಂದು ಆದಿತ್ಯವಾರ ನಡೆಯಿತು.ಯುವದರ್ಪಣ ಕಾರ್ಯಕ್ರಮದ ಮೂಲಕ ಹೊಸ ಮುಖಗಳನ್ನು ಪರಿಚಯಿಸುವ ಈ ಪ್ರಯತ್ನ ಶ್ಲಾಘನೀಯ ಎಂದು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲ್ ತಿಳಿಸಿದರು. ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಅದ್ಯಕ್ಷ ಅಜಿತ್ ಕುಮಾರ್ ಪಾಲೇರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ […]

Read More

ಯುವವಾಹಿನಿಯ ಮಾರ್ಗದರ್ಶಿ ಬಿಡುಗಡೆ

ಮಂಗಳೂರು : ಯುವವಾಹಿನಿಯ ಉಪನಿಬಂಧನೆಗ ಹಾಗೂ ಉಪನಿಯಮಗಳನ್ನು ಒಳಗೊಂಡ ಮಾರ್ಗದರ್ಶಿ ಪುಸ್ತಕವನ್ನು ಯುವವಾಹಿನಿಯ ಸಲಹೆಗಾರರಾದ ಬಿ.ತಮ್ಮಯ ಬಿಡುಗಡೆಗೊಳಿಸಿದರು. ದಿನಾಂಕ‌ 29.07.2018 ರಂದು ನಡೆದ ಯುವವಾಹಿನಿ ಕೇಂದ್ರ ಸಮಿತಿಯ ಮಾಸಿಕ‌ ಸಭೆಯಲ್ಲಿ ಈ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ, ನಿಯೋಜಿತ ಅಧ್ಯಕ್ಷ ಜಯಂತ ನಡುಬೈಲು, ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ, ಉಪಾಧ್ಯಕ್ಷ ನರೆಶ್ ಕುಮಾರ್ ಸಸಿಹಿತ್ಲು, ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಮರೋಳಿ, ಮಾಜಿ ಅಧ್ಯಕ್ಷರಾದ ಅಶೋಕ್ ಕುಮಾರ್, ವಿಶ್ವನಾಥ್ ಕೆ. ಮತ್ತಿತರರು […]

Read More

ಪ್ರಕೃತಿ ಸಂರಕ್ಷಣೆ ಮತ್ತು ಮಾದಕ ವ್ಯಸನ ವಿಚಾರ ಸಂಕಿರಣ

ಪಣಂಬೂರು : ಯುವವಾಹಿನಿ (ರಿ) ಪಣಂಬೂರು ಘಟಕದ ದಿನಾಂಕ 02-07-2018ನೇ ಸೋಮವಾರದಂದು ಪ್ರಕೃತಿ ಸಂರಕ್ಷಣೆ ಮತ್ತು ಮಾದಕ ವ್ಯಸನ” ಎನ್ನುವ ವಿಚಾರ ಸಂಕಿರಣ ಕಾರ್ಯಕ್ರಮ ಜರುಗಿತು . “ಪ್ರಕೃತಿ ಸಂರಕ್ಷಣೆ ಮತ್ತು ಮಾದಕ ವ್ಯಸನ” ಎನ್ನುವ ವಿಚಾರದ ವಿಚಾರ ಸಂಕಿರಣ ಜರಗಿತು. ಶ್ರೀ ಯೋಗೀಶ್ ಮಲ್ಲಿಗೆಮಾಡು, ರೋಶನಿ ನಿಲಯ, ಮಂಗಳೂರು ಇವರು ಅತ್ಯುತ್ತಮವಾದ ವಿಚಾರಗಳನ್ನು ಮಂಡಿಸಿದರು. ಈ ಪ್ರಕೃತಿ ಅದರ ವೈಶಿಷ್ಟ್ಯ, ನಾವು ಹೇಗೆ ಪ್ರಕೃತಿಯಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಪಡೆಯುತ್ತಿದ್ದೇವೆ, ಯಾವ ರೀತಿಯಾಗಿ ನಾವು ಪ್ರಕೃತಿಯ ಕೊಡುಗೆಯನ್ನು […]

Read More

ಯೋಗ ವಿಶ್ವದಲ್ಲಿ ಮಹತ್ತರ ಪಾತ್ರ ವಹಿಸಿದೆ : ರವೀಶ್ ಕುಮಾರ್

 ಕೂಳೂರು : ಹಿಂದಿನ ಕಾಲದಲ್ಲಿ ನಮ್ಮ ಪೂರ್ವಜರ ದಿನ ನಿತ್ಯದ ಕೆಲಸವೇ ಒಂದು ಯೋಗ ಆಗಿತ್ತು.ಬೆಳಿಗ್ಗೆ ಬೇಗ ಏಳುವುದು ಯೋಗ.ಶ್ರೀ ಕೃಷ್ಣ ಪರಮಾತ್ಮನು ಭಗವದ್ಗೀತೆಯಲ್ಲಿ ಈ ರೀತಿ ಹೇಳಿದ್ದಾರೆ – ನಮ್ಮ ಪಂಚೇಂದ್ರಿಯಗಳು 5 ಕುದುರೆಗಳು ಇದ್ದಂತೆ ಅವುಗಳನ್ನು ಕಡಿವಾಣ ಹಾಕಿ ಹತೋಟಿಯಲ್ಲಿ ಇಟ್ಟು ಕೊಳ್ಳುವುದೇ ಯೋಗ ,ಮುಖ್ಯವಾಗಿ ನಾವು ತಿನ್ನುವ ಆಹಾರದಲ್ಲಿ ಸಮತೋಲನ ಇರಬೇಕು. ಆಗ ಆರೋಗ್ಯವಂತರಾಗಿ ಇರುತ್ತೇವೆ ಎಂದರು . ಮನಸ್ಸನ್ನು ಹತೋಟಿಯಲ್ಲಿ ಇಟ್ಟು ಕೊಳ್ಳುವುದು ಮುಖ್ಯ .ಯೋಗವೇ ಆರೋಗ್ಯ ಆದ್ದರಿಂದ ಎಲ್ಲರೂ ಯೋಗ ಮಾಡಿ […]

Read More

ಸಂಸ್ಕೃತಿ ಉಳಿದರೆ ಪರಿಸರ ಉಳಿಯುತ್ತದೆ : ಯೋಗೀಶ್

ಕಂಕನಾಡಿ : ಸಂಸ್ಕೃತಿ ಉಳಿದರೆ ಪರಿಸರ ಉಳಿಯುತ್ತದೆ. ದೇಶದ ಅಭಿವೃದ್ಧಿ ಯಾಗಬೇಕಾದರೆ ಮಾನವರ ಅಭಿವೃದ್ಧಿಯಾಗಬೇಕು. ಸುಸ್ಥಿರ ಅಭಿವೃದ್ಧಿ ಗುರಿಗಳಿದ್ದರೆ ಮಾತ್ರ ಮಾನವರ ಅಭಿವೃದ್ಧಿ ಸಾಧ್ಯ ಎಂದು ರೋಶನಿ ನಿಲಯದ ಚೈಲ್ಡ್ ಲೈನ್ ನಗರ ಸಂಚಾಲಕರಾದ ಯೋಗಿಶ್ ಮಲ್ಲಿಗೆ ಮಾಡು ತಿಳಿಸಿದರು. ಅವರು ದಿನಾಂಕ 07-06-2018ರಂದು ಯುವವಾಹಿನಿ (ರಿ) ಕಂಕನಾಡಿ ಘಟಕದ ವಾರದ ಸಭೆಯಲ್ಲಿ “ತಂಬಾಕು ರಹಿತ ದಿನ” ಮತ್ತು “ವಿಶ್ವ ಪರಿಸರ ದಿನಾಚರಣೆ”ಯ ಪ್ರಯುಕ್ತ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಮಾದಕ ವ್ಯಸನಗಳಲ್ಲಿ ತಂಬಾಕು ಕೂಡ ಒಂದು. […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!