Yuvavahini

ಮಾಹಿತಿ

ಕೌಟುಂಬಿಕ ವಲಯದಲ್ಲಿ ಹೆಣ್ಣಿನ ಪಾತ್ರ ಅದ್ಭುತ , ವರ್ಣನಾತೀತ : ಶಹನಾಜ್

ಮಂಗಳೂರು : ಕೌಟುಂಬಿಕ ವಲಯದಲ್ಲಿರುವ ವ್ಯಕ್ತಿಗಳಿಗೆ ಹೆಣ್ಣು ಆಸಕ್ತಿಯ, ಆತ್ಮ ಸಂಗಾತದ ವಿಷಯ. ತಾಯಿಯಾಗಿ, ತಂಗಿಯಾಗಿ, ಅಕ್ಕನಾಗಿ, ಹೆಂಡತಿಯಾಗಿ, ನಾದಿನಿಯಾಗಿ, ಅತ್ತಿಗೆಯಾಗಿ, ಅತ್ತೆಯಾಗಿ, ಗೆಳತಿಯಾಗಿ, ಪ್ರೇಮಿಯಾಗಿ ಆಕೆ ನಿರ್ವಹಿಸುವ ಪಾತ್ರಗಳು ಅದ್ಬುತ, ವರ್ಣನಾತೀತ. ಏಕೆಂದರೆ ಸ್ತ್ರೀ ಒಂದು ಸಮುದಾಯವನ್ನು ಸಮರ್ಥವಾಗಿ ಪ್ರತಿನಿಧಿಸುವ ಸಾಮರ್ಥ್ಯ ಹೊಂದಿರುವಂತಹವಳು. ಕೌಟುಂಬಿಕ ವಲಯದ ಸ್ತ್ರೀ ಕುಟುಂಬದ ಕಟ್ಟುಪಾಡುಗಳಿಗೆ ಒಳಗಾಗಿ ಜೀವನ ನಡೆಸುತ್ತಿದ್ದಾಳೆ ಹಾಗೂ ಆಕೆ ತನ್ನ ಕುಟುಂಕ್ಕಾಗಿ ಎಲ್ಲಾ ತ್ಯಾಗಕ್ಕೂ ಸಿದ್ದಳಾಗಿರುತ್ತಾಳೆ ಎಂದು ಅನುಪಮಾ ಮಹಿಳಾ ಮಾಸಿಕ ಪತ್ರಿಕೆಯ ಸಂಪಾದಕರು, ಹಾಗೂ ಸಾಹಿತಿ […]

Read More

ಜಿ.ಎಸ್.ಟಿ ಮಾಹಿತಿ ಕಾರ್ಯಾಗಾರ

ಯುವವಾಹಿನಿ (ರಿ) ಸುರತ್ಕಲ್ ಹಾಗೂ ಪಣಂಬೂರು ಘಟಕದ ಆಶ್ರಯದಲ್ಲಿ ದಿನಾಂಕ 30.04.2018 ರಂದು ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಜಿ.ಎಸ್.ಟಿ.ತರಿಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಸೋಪ್ಟ್ ಲಿಂಕ್ ಸಂಸ್ಥೆಯ ಮೆನೇಜರ್ ಬಾಲಕೃಷ್ಣ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ‌ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್, ಯುವವಾಹಿನಿ ಪಣಂಬೂರು ಘಟಕದ ಅಧ್ಯಕ್ಷರಾದ ಉದಯ ಕುಮಾರ್ ಯುವವಾಹಿನಿ ಸುರತ್ಕಲ್ ಘಟಕದ ಸಲಹೆಗಾರರಾದ ಸಾಧು ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಸುರತ್ಕಲ್ […]

Read More

ಅಂತರಂಗದಲ್ಲಿ ತಣ್ಣಗೆ ಹರಿದಾಡಿ ಮುದಗೊಳಿಸಿದ ಸಖೀ ಸಂವಾದ : ಪೂರ್ಣಿಮಾ ಸುರೇಶ್

ಸಖ್ಯ ಸುಖಕೆ ಪರಿಧಿ ಇದೆಯೇ? ಅಂತರಂಗದಲಿ ತಣ್ಣಗೆ ಹರಿದಾಡಿ ಮುದಗೊಳಿಸಿ,ಹಿತಾನುಭವ ಜೊತೆಜೊತೆಗೆ ಭದ್ರತೆಯ ಭಾವ ಉಣಿಸಿ ಸಮೃದ್ಧಗೊಳಿಸುವುದು.ಅಂತೇ ಸಖಿ- ಸಖ ಪದಗಳು ಪಂಚೇಂದ್ರಿಯಗಳ ಮುಟ್ಟಿದರೆ ಉಲ್ಲಾಸ. ತಂಗಾಳಿ ಸ್ಪರ್ಶಿಸಿದಂತೆ. ಈ ಭಾವ ನೆನಕೆಗೆ ದಿನಾಂಕ‌08.04.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್ ನಲ್ಲಿ ವಿಶ್ವ ಮಹಿಳಾ ದಿನಾಚರಣೆಯ ನೆನಪಿನಲ್ಲಿ ” ಸಖೀ ಸಂವಾದ” ಅರಳಿಸುವ ಜವಾಬ್ದಾರಿಯನ್ನ ನಿಭಾಯಿಸಿತ್ತು. ಹೆಸರಿನಲ್ಲೇ ಹೂವಿನಲಿ ಅಡಗಿಹ ಗಂಧದ ಸೆಳೆತ […]

Read More

ಉದ್ಯಮ ಶೀಲತಾ ಕೌಶಲ್ಯ ಜಾಗೃತಿ ಶಿಬಿರ

 ಅಡ್ವೆ : ಸ್ವ-ಉದ್ಯೋಗದ ಮೂಲಕ ತಾನು ಬೆಳೆಯುವುದರೊಂದಿಗೆ ಇತರರ ಬೆಳವಣಿಗೆಗೆ ಸಹಕಾರಿಯಾಗಿದೆ.ಸ್ವ ಉದ್ಯೋಗದಿಂದ ಸಮಾಜದ ಹಿತ ಅಡಗಿದೆ ಸಾವಿರಾರು ಉದ್ಯೋಗದ ಸ್ರಷ್ಟಿಯಾಗಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಯುವವಾಹಿನಿ(ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಜಯಂತ ನಡುಬೈಲು ತಿಳಿಸಿದರು ಅವರು ದಿನಾಂಕ 01.04.2018 ರಂದು ಯುವವಾಹಿನಿ(ರಿ) ಅಡ್ವೆ ಘಟಕದ ಆಶ್ರಯದಲ್ಲಿ ಅಡ್ವೆಆನಂದಿ ಸಭಾಭವನದಲ್ಲಿ ಜರುಗಿದ ಉದ್ಯಮ ಶೀಲತಾ ಕೌಶಲ್ಯ ಜಾಗೃತಿ ಶಿಬಿರ”ವನ್ನು ಉದ್ಘಾಟಿಸಿ ಮಾತನಾಡಿದರು . ಯುವವಾಹಿನಿ ಸದಸ್ಯರು ಸ್ವಾವಲಂಬಿಯಾಗಿ ಬದುಕಲು ಕಲಿಯಿರಿ, ಅದಕ್ಕೆ ಬೇಕಾದ […]

Read More

ಕಾನೂನು ಮಾಹಿತಿ ಶಿಬಿರ

ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ವಕೀಲರ ಸಂಘ ಬೆಳ್ತಂಗಡಿ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಬೆಳ್ತಂಗಡಿ,ಯುವವಾಹಿನಿ ಸಂಚಾಲನ ಸಮಿತಿ ವೇಣೂರು ಇದರ ಸಹಯೋಗದೊಂದಿಗೆ ದಿನಾಂಕ 30.08.2017 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕೊಕ್ರಾಡಿಯಲ್ಲಿ ನಡೆದ ಕಾನೂನು ಮಾಹಿತಿ ಶಿಬಿರವನ್ನು ಬೆಳ್ತಂಗಡಿ JMFC ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರಾದ ಸತೀಶ್ ಉದ್ಘಾಟಿಸಿದರು. ಕಾರ್ಯಾಗಾರದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಗುರುನಾರಾಯಣ ಸ್ವಾಮೀ ಸೇವಾ ಸಂಘದ ಮಾಜಿ ನಿರ್ದೇಶಕ, ಕೊಕ್ರಾಡಿ SDMC ಅಧ್ಯಕ್ಷ ಸೂರ್ಯನಾರಾಯಣ ಡಿ.ಕೆ.ವಹಿಸಿ ಸತತ ಮೂರು ವರ್ಷಗಳಿಂದ ಕಾನೂನು […]

Read More

ಹೊಲಿಗೆ ತರಬೇತಿ ಸಮಾರೋಪ

ಯುವವಾಹಿನಿ ಕಂಕನಾಡಿ ಘಟಕದ ವತಿಯಿಂದ ಆಯೋಜಿಸಲ್ಪಟ್ಟ 6ತಿಂಗಳ ಉಚಿತ ಹೊಲಿಗೆ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ದಿನಂಕ 19-08-2017ರಂದು ಉಜ್ಜೋಡಿ ಗೋರಿಗುಡ್ಡೆಯಲ್ಲಿ ನಡೆಯಿತು. ಸಮಾರಂಭದ ಅದ್ಯಕ್ಷತೆಯನ್ನು ಯುವವಾಹಿನಿ ಕಂಕನಾಡಿ ಘಟಕದ ಅಧ್ಯಕ್ಷರಾದ ಗೋಪಾಲ.ಎಂ  ಪೂಜಾರಿ ವಹಿಸಿದ್ದರು. ಕೆ.ಪಿ.ಟಿಯ Co-ordinator ಆದ ಗೀತಾಜೈನ್ ರವರು ಹಾಗೂ ಹೊಲಿಗೆ ತರಬೇತಿ ನೀಡಿದ ಶಿಕ್ಷಕಿಯಾದ ಶ್ರೀಮತಿ ಕಾಂತಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು ತರಬೇತಿ ಪಡೆದ ಮಹಿಳಾ ಸದಸ್ಯರು ಹಾಗೂ ಘಟಕದ ಮಾಜಿ ಅಧ್ಯಕ್ಷರು, ನಿಕಟಪೂರ್ವ ಅಧ್ಯಕರು, ಉಪಾಧ್ಯಕ್ಷರು ಹಾಗೂ ಸದಸ್ಯರು ಭಾಗವಾಹಿಸಿದರು. ಹೊಲಿಗೆ ತರಬೇತಿ ನಡೆನಲು, 6 […]

Read More

ಸೊಳ್ಳೆಗಳಿಂದ ಹರಡುವ ರೋಗಗಳ ಮಾಹಿತಿ ಕರಪತ್ರ ಬಿಡುಗಡೆ

ಯುವವಾಹಿನಿ(ರಿ) ಸುಳ್ಯ ಘಟಕ ವತಿಯಿಂದ ಸೊಳ್ಳೆ ಗಳಿಂದ ಹರಡುವ ರೋಗಗಳ ಮಾಹಿತಿ ಮತ್ತು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕರಪತ್ರಗಳ ಬಿಡುಗಡೆ ಕಾರ್ಯಕ್ರಮ ಸುಳ್ಯದ ಕಲ್ಕುಡ ದೈವಸ್ಥಾನದ ವಠಾರದಲ್ಲಿ ದಿನಾಂಕ 18-8-2017ರ ಶುಕ್ರವಾರ ನಡೆಯಿತು. ಸುಳ್ಯ ನಗರ ಪಂಚಾಯತ್ ನ ಆರೋಗ್ಯ ನಿರೀಕ್ಷಕರಾದ ರವಿ ಕೃಷ್ಣ .ಡಿ ರವರು ಕರ ಪತ್ರ ಬಿಡುಗಡೆಗೊಳಿಸಿದರು. ಯುವವಾಹಿನಿ(ರಿ) ಸುಳ್ಯ ಘಟಕದ ಅಧ್ಯಕ್ಷರಾದ ಶಿವಪ್ರಸಾದ್. ಕೆ.ವಿ ಸ್ವಾಗತಿಸಿದರು, ರವಿಕುಮಾರ್. ಎಚ್, ರವಿಕಿರಣ್ , ರಂಜಿತ್ ಪೂಜಾರಿ , ಭರತ್ ಶಾಂತಿನಗರ , ಸುಂದರ […]

Read More

ಅರಣ್ಯ ಸಂಪತ್ತಿನ ಮಹತ್ವ ತಿಳಿಯೋಣ : ಶ್ರೀಧರ್

ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದಿಂದ ವನಮಹೋತ್ಸವ ಕಾರ್ಯಕ್ರಮವು ದಿನಾಂಕ 12.08.2017 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪರಪಾದೆಯಲ್ಲಿ ನಡೆಯಿತು ಮುಖ್ಯ ಅತಿಥಿಯಾಗಿ ಆಗಮಿಸಿದ ವಲಯ ಆರಣ್ಯಧಿಕಾರಿ ಶ್ರೀ ಪಿ ಶ್ರೀಧರ್ ಮಾತನಾಡಿ ಅರಣ್ಯ ಸಂಪತ್ತಿನ ಮಹತ್ವ ಅರಿತು ಬಾಳೋಣ, ನೀರಿಗಾಗಿ ಆರಣ್ಯ ಎಂಬ ಘೋಷಣೆಯ ಮೂಲಕ ವನಮಹೋತ್ಸವ ಆಚರಣೆ ಅರ್ಥಪೂರ್ಣವಾಗಿದೆ ಹಾಗೂ ಜಾಗವನ್ನು ಒದಗಿಸಿಕೊಟ್ಟಲ್ಲಿ 50 ಗಿಡಗಳನ್ನು ನೆಟ್ಟು ಸುತ್ತ ಬೇಲಿ ಹಾಕಿ ಕೊಡುವ ಸರಕಾರದ ಉಚಿತ ಯೋಜನೆಯ ಸದುಪಯೋಗ ಪಡೆಯುವಂತೆ ವಿನಂತಿಸಿದರು.. ಕಾರ್ಯಕ್ರಮದಲ್ಲಿ ಕೇOದ್ರ […]

Read More

ಹೆಣ್ಣಿಗೆ ಆತ್ಮ ಸ್ಥೈರ್ಯ ತುಂಬುವ ಕಾರ್ಯ ನಡೆಯಬೇಕು : ಲಕ್ಷ್ಮೀ ಪೈ

ಹೆಣ್ಣು ಎಂದಿಗೂ ಅಶಕ್ತಳಲ್ಲ ಅವಳ ರಕ್ಷಣೆಯನ್ನು ಮಾಡುವ ಸಾಮರ್ಥ್ಯ ಆಕೆಗೆ ಇದೆ.ಆದರೆ ಈ ಬಗ್ಗೆ ಹೆಣ್ಣಿಗೆ ಆತ್ಮ ಸ್ಥೈರ್ಯ ತುಂಬುವ ಕಾರ್ಯ ನಡೆಯಬೇಕು. ಸ್ರೀ ದುರ್ಗಾ ಶಕ್ತಿಯ ಪ್ರತಿರೂಪ ಪ್ರತಿ ಮಹಿಳೆಯರಲ್ಲಿಯೂ ದುರ್ಗೆಯ ಶಕ್ತಿ ಅಡಕವಾಗಿದೆ,ಅದನ್ನು ಜಾಗೃಗೊಳಿಸುವ ಕಾರ್ಯ ನಡೆಯಬೇಕಾಗಿದೆ ಎಂದು ರಣರಾಗಿಣಿ ಮಹಿಳಾ ಶಾಖೆಯ ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಕಾರರಾದ ಶ್ರೀಮತಿ ಲಕ್ಷ್ಮೀ ಪೈ ತಿಳಿಸಿದರು. ಅವರು ದಿನಾಂಕ 05.08.2017 ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಮಂಗಳೂರು ಯುವವಾಹಿನಿ ಸಭಾಂಗಣದಲ್ಲಿ ಜರುಗಿದ […]

Read More

ಹೃದಯ ರೋಗ ತಪಾಸಣಾ ಶಿಬಿರ

ಯುವವಾಹಿನಿ (ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ದಿನಾಂಕ 30.07.2017 ರಂದು ಸುರತ್ಕಲ್ ಮಹಿಳಾ ಕೇಂದ್ರದ ಸಭಾಂಗಣದಲ್ಲಿ ಉಚಿತ ಹೃದಯ ರೋಗ ,ಮಧುಮೇಹ ತಪಾಸಣೆ, ಹಾಗೂ ಮಾಹಿತಿ ಶಿಬಿರ ಜರಗಿತು. ಒಮೇಗಾ ಆಸ್ಪತ್ರೆ ಮಂಗಳೂರು, ಹಾರ್ಟ್ ಸ್ಕ್ಯಾನ್ ಫೌಂಡೇಶನ್ ಮಂಗಳೂರು, ಅಪದ್ಬಾಂದವ ಸಮಾಜ ಸೇವಾ ಸಂಘ ಸುರತ್ಕಲ್, ಮಹಿಳಾ ಕೇಂದ್ರ ಸುರತ್ಕಲ್ ಸಂಸ್ಥೆಗಳ ಸಹಯೋಗದೊಂದಿಗೆ ಈ ಶಿಬಿರ ಯಶಸ್ವಿಯಾಗಿ ಜರುಗಿತು. ಈ ಶಿಬಿರದಲ್ಲಿ ಇಸಿಜಿ, ರಕ್ತದೊತ್ತಡ, ಮಧುಮೇಹ ಪರೀಕ್ಷೆ, ಹೃದಯದ ಸ್ಕ್ಯಾನಿಂಗ್, ಹೃದಯ ತಜ್ಞರಿಂದ ಪರೀಕ್ಷೆ ಹಾಗೂ ಸಲಹೆ, ಡಯಾಬಿಟಿಸ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!