02-10-2022, 9:01 AM
ಮಾಣಿ :- ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಕೊಡ ಮಾಡುವ 2022ನೇ ಸಾಲಿನ ವಿಶುಕುಮಾರ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 02 ಅಕ್ಟೋಬರ್ 2022 ರ ಆದಿತ್ಯವಾರದಂದು ಯುವವಾಹಿನಿ (ರಿ.)ಮಾಣಿ ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಮಾಣಿ ಇಲ್ಲಿ ನೆರವೇರಿತು. ಸಾಹಿತಿ ಹಾಗೂ ವಿಮರ್ಶಕರಾದ ಡಾ.ಬಿ.ಜನಾರ್ದನ ಭಟ್ ಇವರಿಗೆ ಈ ಬಾರಿಯ ವಿಶುಕುಮಾರ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಲೇಖಕ […]
Read More
17-02-2019, 2:29 PM
ನಟ, ನಿರ್ದೇಶಕ, ಪತ್ರಕರ್ತ, ಸಾಹಿತಿ ದಿ.ವಿಶುಕುಮಾರ್ ಅವರ ನೆನಪಿನಲ್ಲಿ ಯುವವಾಹಿನಿ ಸಂಸ್ಥೆಯು, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಮೂಲಕ ಕೊಡಮಾಡುವ 2018 ನೇ ಸಾಲಿನ ವಿಶುಕುಮಾರ್ ಪ್ರಶಸ್ತಿಗೆ ಹಿರಿಯ ರಂಗನಟ, ನಿರ್ದೇಶಕ, ಸಾಹಿತಿ ವಸಂತ ವಿ.ಅಮೀನ್ ಅಯ್ಕೆಯಾಗಿದ್ದಾರೆ. ಯುವವಾಹಿನಿ ಸಂಸ್ಥೆಯು ಕಳೆದ 16 ವರುಷದಿಂದ ಈ ಪ್ರಸಸ್ತಿಯನ್ನು ನೀಡುತ್ತಾ ಬಂದಿದ್ದು ವಿಶುಕುಮಾರ್ ಅವರು ಸೇವೆ ಸಲ್ಲಿಸಿರುವ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯರನ್ನು ಆಯ್ಕೆ ಮಾಡಿ ಈ ಪ್ರಶಸ್ತಿ ನೀಡುತ್ತಿದೆ. 2018 ನೇ ಸಾಲಿಗೆ ರಂಗಭೂಮಿ ಕ್ಷೇತ್ರವನ್ನು ಆಯ್ಕೆ […]
Read More
17-02-2019, 2:06 PM
ಮಂಗಳೂರು : ನಮ್ಮಿಂದ ಮರೆಯಾದ ವ್ಯಕ್ತಿ ಎಲ್ಲಿಯವರೆಗೆ ಜನರ ಮನಸಲ್ಲಿ ಜೀವಂತವಾಗಿರುತ್ತಾರೋ ಅಲ್ಲಿಯವರೆಗೆ ಅವರು ಬದುಕಿರುವ ಚೇತನ, ಅಂತಹ ಮಹಾನ್ ವ್ಯಕ್ತಿ, ತನ್ನ ಸಾವಿನ 33 ವರುಷದ ಬಳಿಕವೂ ಜೀವಂತವಾಗಿರುವವರು. ವಿಶುಕುಮಾರ್ ಅವರ ಸಾಧನೆ ಅವರನ್ನು ಜೀವಂತವಾಗಿರಿಸಿದೆ ಎಂದು ಹಂಪಿ ಕನ್ನಡ ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಬಿ.ಎ ವಿವೇಕ್ ರೈ ತಿಳಿಸಿದರು. ಅವರು ದಿನಾಂಕ 17.02.2019 ರಂದು ಮಂಗಳೂರು ಪುರಭವನದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಆತಿಥ್ಯದಲ್ಲಿ ವಿಶುಕುಮಾರ್ […]
Read More
03-06-2018, 8:42 AM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ದಿನಾಂಕ 03.06.2018 ರಂದು ಮಂಗಳೂರು ಯುವವಾಹಿನಿ ಸಭಾಂಗಣದಲ್ಲಿ ಜರುಗಿದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ಸಾಹಿತಿ ವಿಮರ್ಶಕಿ ಬಿ.ಎಮ್.ರೋಹಿಣಿ ಅವರಿಗೆ 2017 ರ ವಿಶುಕುಮಾರ್ ಪ್ರಶಸ್ತಿ ಪ್ರದಾನಿಸಲಾಯಿತು. ಪ್ರಶಸ್ತಿ ಪ್ರದಾನಿಸಿದ ಹಿರಿಯ ಸಂಘಟಕಿ ಕೆ.ಎ.ರೋಹಿಣಿಯವರು ಮಾತನಾಡಿ ಬಿ.ಎಮ್.ರೋಹಿಣಿಯವರ ಸಾಧನೆಗೆ ಅರ್ಹವಾಗಿ ವಿಶುಕುಮಾರ್ ಪ್ರಶಸ್ತಿ ದೊರೆತಿದೆ ಎಂದರು. ಛಲವಾದಿಯಾಗಿರುವ ಅವರು ಸಾಹಿತ್ಯ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡವರು. 74 […]
Read More
31-07-2016, 11:09 AM
ಕನ್ನಡ ಮತ್ತು ತುಳು ಭಾಷೆಗಳೆರಡರಲ್ಲೂ ಕೃತಿಗಳನ್ನು ರಚಿಸಿ ಸಾಹಿತ್ಯಾಭಿಮಾನಿಗಳಿಂದ ಮತ್ತು ವಿಮರ್ಶಕರಿಂದ ಸೈ ಎನಿಸಿಕೊಂಡು ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಛಾಪನ್ನು ಮೂಡಿಸಿದವರು ಎಂ. ಜಾನಕಿ ಬ್ರಹ್ಮಾವರರವರು. ಹುಟ್ಟೂರು ಉಡುಪಿ ತಾಲೂಕಿನ ಮೂಡುತೋನ್ಸೆ ಗ್ರಾಮದ ಕಲ್ಯಾಣಪುರ ಬಳಿಯ ಮೂಡುಕುದುರು. ೧೯೫೦ರ ಜೂನ್ ೨೦ರಂದು ಜನಿಸಿದ ಇವರ ತಂದೆ ಗುಂಡಿಬೈಲ್ ದಾರ ಪಾಲನ್, ತಾಯಿ ಮುತ್ತಕ್ಕ ಮೂಡುಕುದುರು. ತಮ್ಮ ಪ್ರೌಢ ಶಾಲಾ ಶಿಕ್ಷಣವನ್ನು ಮಿಲಾಗ್ರಿಸ್ ಹೈಸ್ಕೂಲು, ಕಲ್ಯಾಣಪುರದಲ್ಲಿ ಮುಗಿಸಿ ಪದವಿ ಶಿಕ್ಷಣವನ್ನು ಮಿಲಾಗ್ರಿಸ್ ಕಾಲೇಜು, ಕಲ್ಯಾಣಪುರದಲ್ಲಿ (ಪ್ರಥಮ ಬ್ಯಾಚಿನ ವಿದ್ಯಾರ್ಥಿನಿ) […]
Read More
31-07-2016, 7:27 AM
ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕತೆಗಾರ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ಬರಹಗಾರರಾಗಿ, ಕನ್ನಡ, ತುಳು ಚಲನಚಿತ್ರಗಳ ನಿರ್ದೇಶಕರಾಗಿ, ರಾಜಕಾರಣಿಯಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದುಹೋದ ನಮ್ಮ ನಾಡಿನ ನಡೆ ನುಡಿಯ ಧೀಮಂತ ಸಾಹಿತಿ ದಿ| ವಿಶುಕುಮಾರ್ರವರ ಸ್ಮರಣಾರ್ಥ ಯುವವಾಹಿನಿಯ ವಿಶುಕುಮಾರ್ ದತ್ತಿನಿಧಿ ಸಂಚಾಲನಾ ಸಮಿತಿಯು ಕಳೆದ 14 ವರ್ಷಗಳಿಂದ ಸಾಹಿತ್ಯದ ವಿವಿಧ ಕ್ಷೇತ್ರಗಳಲ್ಲಿ ದುಡಿದ, ಗಣನೀಯ ಸಾಧನೆ ಮಾಡಿದ ಮಹನೀಯರನ್ನು ಗುರುತಿಸಿ ವಿಶುಕುಮಾರ್ ಪ್ರಶಸ್ತಿ ನೀಡುತ್ತಾ ಬಂದಿರುತ್ತದೆ. 2016ರ ಸಾಲಿನ ವಿಶುಕುಮಾರ್ ಪ್ರಶಸ್ತಿಯು ದ್ವಿಭಾಷಾ ಕವಿ, […]
Read More
31-07-2016, 5:49 AM
ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕಥೆಗಾರ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ಬರಹಗಾರರಾಗಿ, ಕನ್ನಡ, ತುಳು ಚಿತ್ರಗಳ ನಿರ್ದೇಶಕರಾಗಿ, ರಾಜಕಾರಣಿಯಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದುಹೋದ ನಮ್ಮ ನಾಡಿನ ನೇರ ನಡೆನುಡಿಯ ಧೀಮಂತ ಸಾಹಿತಿ ದಿ| ವಿಶುಕುಮಾರ್ರವರ ಸ್ಮರಣಾರ್ಥ ಯುವವಾಹಿನಿ (ರಿ) ಕೇಂದ್ರ ಸಮಿತಿಯು ವಿಶುಕುಮಾರ್ ದತ್ತಿನಿಧಿಯನ್ನು ಸ್ಥಾಪಿಸಿ ಅದರ ಮೂಲಕ ಕಳೆದ ಹದಿನಾಲ್ಕು ವರ್ಷಗಳಿಂದ ವಿಶುಕುಮಾರ್ ಪ್ರಶಸ್ತಿಯನ್ನು ನೀಡುತ್ತಾ ಬಂದಿರುತ್ತದೆ. 2015-16 ನೇ ಸಾಲಿನ ವಿಶುಕುಮಾರ್ ದತ್ತಿನಿಧಿ ಸಂಚಲನಾ ಸಮಿತಿಯ ಅಧ್ಯಕ್ಷರಾಗಿ ಶ್ರೀ ಸಂತೋಷ್ […]
Read More
10-08-2014, 11:12 AM
1968 ರಲ್ಲಿ ತನ್ನ ಪ್ರಥಮ ಕಥೆ ಮತ್ತು ಕವನವನ್ನು ಪ್ರಕಟಿಸಿದ್ದ ಬಹುಭಾಷಾ ಕಥೆಗಾರ, ಕವಿ, ಗಾಯಕ, ನಟ, ನಿರ್ದೇಶಕ ಜಾನಪದ ಇತಿಹಾಸಕಾರ, ಅಧ್ಯಯನಕಾರ, ವಿಮರ್ಶಕ ಮುದ್ದು ಮೂಡುಬೆಳ್ಳೆ ಕಳೆದ 45 ವರುಷದಿಂದ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃತಿ ರಚನೆಯನ್ನು ಮಾಡುತ್ತಾ ಬರುತ್ತಿದ್ದಾರೆ. ನಾಡು ನುಡಿಯಿದೊಂದು ಬಗೆ, ಕಾಂತಬಾರೆ-ಬುಧಬಾರೆ, ತುಳುನಾಡಿನ ಜಾನಪದ ವಾದ್ಯಗಳು, ತುಳು ರಂಗಭೂಮಿ ಮುಂತಾದವುಗಳು ಮುದ್ದು ಮೂಡುಬೆಳ್ಳೆ ಅವರ ಪ್ರಮುಖ ಅಧ್ಯಯನ ಕೃತಿಗಳು. ಕನ್ನಡ ಮಾತ್ರವಲ್ಲದೆ ತುಳು, ಕೊಂಕಣಿ ಮತ್ತು ಇಂಗ್ಲೀಷ್ ಭಾಷೆಯಲ್ಲೂ ಕೃತಿ ರಚನೆಯನ್ನು […]
Read More
04-08-2013, 12:06 PM
ಲೋಹಿಯಾ, ಜಯಪ್ರಕಾಶ ನಾರಾಯಣ್ ರಂತಹ ಪ್ರಬಲ ಸಮಾಜವಾದಿಗಳ ಚಿಂತನೆಯನ್ನು ದಟ್ಟವಾಗಿ ಮೈಗೂಡಿಸಿಕೊಂಡ – ಗಾಂಧಿ ಯುಗದ ಧೀಮಂತ ಪತ್ರಿಕೋದ್ಯಮಿ ‘ಸಂಗಾತಿ’ಯ ನವೀನ್ಚಂದ್ರಪಾಲ್ ತನ್ನ 86ರ ಹರೆಯದ – ಇಂದಿನ ದಿನಗಳ ಪರ್ಯಂತ ತನ್ನ ಸ್ವತಂತ್ರ ನಿಲುವನ್ನು ಅಚಲವಾಗಿ ಕಾಯ್ದುಕೊಂಡಿರುವ ಅಪರೂಪದ ವ್ಯಕ್ತಿತ್ವದವರು. ಮಹಾರಾಷ್ಟ್ರ, ಗುಜರಾತ್ ಮುಂತಾದೆಡೆ ರಾಷ್ಟ್ರಮಟ್ಟದ ಹಲವು ಆಂಗ್ಲ ಪತ್ರಿಕೆಗಳಲ್ಲಿ ದುಡಿದರೂ ‘ಸಂಗಾತಿ’ ಕನ್ನಡ ವಾರಪತ್ರಿಕೆಯನ್ನು ಅಪೂರ್ವ ರೀತಿಯಲ್ಲಿ ಸ್ವಾತಂತ್ರ್ಯೋತ್ತರ ದಿನಗಳಿಂದ ಎರಡು ದಶಕಗಳಿಗೂ ಹೆಚ್ಚು ಕಾಲ ಹೊರಡಿಸಿ ಜನತಂತ್ರವನ್ನು ಎತ್ತಿ ಹಿಡಿದ ಸಾಹಸಿಗರು. ಸಿರಿ […]
Read More
04-11-2012, 6:08 AM
ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕತೆಗಾರರಾಗಿ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ನಿರ್ದೇಶಕರಾಗಿ, ಅಂಕಣ ಬರಹಗಾರರಾಗಿ, ಕನ್ನಡ, ತುಳು ಚಿತ್ರಗಳ ನಿರ್ದೇಶಕರಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದು ಹೋದ ನಮ್ಮ ನಾಡಿನ, ಬಿಲ್ಲವರ ಹೆಮ್ಮೆಯ ಕಣ್ಮಣಿ, ಧೀಮಂತ ಸಾಹಿತಿ ದಿ| ವಿಶುಕುಮಾರ್ರವರ ಸ್ಮರಣಾರ್ಥ ಯುವವಾಹಿನಿ (ರಿ) ಕೇಂದ್ರ ಸಮಿತಿಯು ‘ವಿಶುಕುಮಾರ್ ಪ್ರಶಸ್ತಿ’ ಯನ್ನು ಹುಟ್ಟುಹಾಕಿ ಕಳೆದ ಹತ್ತು ವರ್ಷಗಳಿಂದ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ. ನಮ್ಮ ಸಾಹಿತಿ ಮಿತ್ರರುಗಳ ಒತ್ತಾಸೆ, ಸಲಹೆಗಾರರ ಮಾರ್ಗದರ್ಶನದಲ್ಲಿ ’ವಿಶುಕುಮಾರ್ ದತ್ತಿನಿಧಿ’ಯನ್ನು ಸ್ಥಾಪಿಸಿ […]
Read More