Yuvavahini

ಸಮಾಜ ಸೇವೆ

ಯುವವಾಹಿನಿ (ರಿ) ಕೂಳೂರು ಘಟಕದ ಸ್ವಚ್ಛತಾ ಅಭಿಯಾನ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ಸ್ವಚ್ಛತಾ ಅಭಿಯಾನದ 10ನೇ ಕಾರ್ಯಕ್ರಮವು ದಿನಾಂಕ 12.05.2019 ರಂದು ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಪಂಜಿಮೊಗರಿನಿಂದ ಉರುಂದಾಡಿ ಸಂಪರ್ಕಿಸುವ ರಸ್ತೆಯಿಂದ ಪ್ರಾರಂಭಗೊಂಡು ಗೋಪಾಲಕೃಷ್ಣ ಭಜನಾ ಮಂದಿರದ ವರೆಗೆ ನಡೆಯಿತು. ಘಟಕದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಅಭಿಯಾನದಲ್ಲಿ ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ಉಪಾಧ್ಯಕ್ಷರಾದ ಪವಿತ್ರ ಯು. ಅಮೀನ್, ನಿಕಟ ಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿ ನಿಶಿತ್ ಹಾಗೂ ಘಟಕದ […]

Read More

ಯುವವಾಹಿನಿ (ರಿ) ವೇಣೂರು ಘಟಕದಿಂದ ಸಾಂತ್ವನ ನಿಧಿ

ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ ಅಂಡಿಂಜೆ ಗ್ರಾಮಸಂಚಾಲನ ಸಮಿತಿಯ ವತಿಯಿಂದ ಮರಕಡಿಯುವ ಮೆಷಿನ್ ತಾಗಿ ಗಾಯಗೊಂಡು ‍ಆರ್ಥಿಕ ಸಂಕಷ್ಟದಲ್ಲಿರುವ ಅಂಡಿಂಜೆ ಗ್ರಾಮದ ಕಾನ ಮನೆಯ ಪ್ರವೀಣ್ ಪೂಜಾರಿಯವರಿಗೆ 10,000/ ರೂಪಾಯಿ ಸಾಂತ್ವನ ನಿಧಿಯನ್ನು ಹಸ್ತಾಂತರ ಮಾಡಲಾಯಿತು ,ಈ ಸಂದರ್ಭದಲ್ಲಿ ಸಂಚಾಲನ ಸಮಿತಿಯ ಅಧ್ಯಕ್ಷರಾದ ರಾಕೇಶ್ ಪೂಜಾರಿ ,ಕಾರ್ಯದರ್ಶಿ ರಕ್ಷಿತ್ ಹಲಕ್ಕಿ,ಅಂಡಿಂಜೆ ಗ್ರಾಮ ಪಂಚಾಯತ್ ಸದಸ್ಯರಾದ ನಿತೀನ್ ಮುಂಡೇವು, ಯುವವಾಹಿನಿ ವೇಣೂರು ಘಟಕದ ನಿರ್ದೇಶಕರಾದ ಪ್ರಶಾಂತ್ ನವಜ್ಯೋತಿ ,ಉಮೇಶ್ಚಂದ್ರ ಅಂಬಲ,ಸತೀಶ್ ಪಿ ಎನ್,ಶುಭಕರ ರಾಗಿಮೇರು , […]

Read More

ಕೆಸರುಗದ್ದೆಯಲ್ಲಿ ಆಟವನ್ನು ಆಡಿದರು ಕೃಷಿಯನ್ನು ಮಾಡಿದರು

ಮಾಣಿ : ಅದು ಬಂಟ್ವಾಳ ತಾಲೂಕು ಅನಂತಾಡಿ ಗ್ರಾಮದ ಬಾಕಿಲಗುತ್ತು ಮನೆತನದ ಕಂಬಳಗದ್ದೆ . ಯುವವಾಹಿನಿಯ ಇತಿಹಾಸದಲ್ಲಿ ಅಚ್ಚಳಿಯದೆ ಉಳಿಯಬಲ್ಲ ಒಂದು ಯಶಸ್ಸಿನ ಚಟುವಟಿಕೆಯ ಸಾಕ್ಷಾತ್ಕಾರಕ್ಕೆ ಆ ಕಂಬಳ ಗದ್ದೆ ಸಾಕ್ಷಿಯಾಗಿತ್ತು. 2018 ರ ಡಿಸೆಂಬರ್ ತಿಂಗಳ 23 ರಂದು ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಕೇಂದ್ರ ಸಮಿತಿ ಹಾಗೂ ಮಾಣಿ ಘಟಕದ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಗುರು ಸೇವಾ ಸಂಘ(ರಿ) ಮಾಣಿ ಇದರ ಸಹಕಾರದೊಂದಿಗೆ ಅಂತರ್ ಘಟಕ ಒಡಗೂಡುವಿಕೆಯ ಕೋಟಿ ಚೆನ್ನಯ ಕೆಸರುಗದ್ದೆ […]

Read More

ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಆರೋಗ್ಯ ನಿಧಿ

ಕೂಳೂರು : ದಿನಾಂಕ 22/04/2019 ಸೋಮವಾರ ಯುವವಾಹಿನಿ(ರಿ)ಕೂಳೂರು ಘಟಕದ ವತಿಯಿಂದ ಯುವವಾಹಿನಿ(ರಿ) ಮೂಡಬಿದ್ರಿ ಘಟಕದ ಸದಸ್ಯರಾದ ಅಶ್ವಿನಿ ಇವರ ಪತಿ ರಾಜೇಶ್ ಪೂಜಾರಿ ಇವರ 2 ಕಿಡ್ನಿಗಳು ವಿಫಲವಾಗಿ ಚಿಕಿತ್ಸೆಗಾಗಿ ನೆರವು ಕೋರಿದ್ದ ಸಲುವಾಗಿ ಯುವವಾಹಿನಿ(ರಿ) ಕೂಳೂರು ಘಟಕದ ಸದಸ್ಯರು ವೈಯಕ್ತಿವಾಗಿ 15 ಸಾವಿರ ರೂಪಾಯಿ ಮೊತ್ತ ಹಾಗೂ ಕೂಳೂರು ನಾರಾಯಣ ಗುರು ಮoದಿರದ ಸದಸ್ಯರೆಲ್ಲರು ಸೇರಿ ಒಟ್ಟಾಗಿ 40 ಸಾವಿರ ರೂಪಾಯಿಯನ್ನು ಅವರ ತಾಯಿ ಉಮಾವತಿ ಇವರಿಗೆ ಹಸ್ತಾಂತರಿಸಲಾಯಿತು . ಈ ಸಂದರ್ಭದಲ್ಲಿ ಕೂಳೂರು ಘಟಕದ […]

Read More

ಉಪ್ಪಿನಂಗಡಿ ಯುವವಾಹಿನಿ ಘಟಕದಿಂದ ಆರ್ಥಿಕ ನೆರವು

ಉಪ್ಪಿನಂಗಡಿ : ಉಪ್ಪಿನಂಗಡಿ ಯುವವಾಹಿನಿ ಘಟಕ ಆರಂಭವಾದ ದಿನಗಳಲ್ಲಿ ಘಟಕದ ಬೆಳವಣಿಗೆಗೆ ಶ್ರಮಿಸಿದ ನೆಲ್ಯಾಡಿಯ ರಾಘವ ಪೂಜಾರಿ ಇವರ ಆರೋಗ್ಯ ಚಿಂತಾಜನಕವಾಗಿದ್ದು ತಿಂಗಳಿಗೆ ಸುಮಾರು 75000 ಗಳಷ್ಟು ಖರ್ಚು ಆಗುವುದರಿಂದ ಆರ್ಥಿಕವಾಗಿ ನಿಭಾಯಿಸುವುದು ಕಷ್ಟಕರವಾಗಿರುತ್ತದೆ.ಆದುದರಿಂದ ದಿನಾಂಕ ೧೬. ೦೪. ೨೦೧೯ ರಂದು ಯುವವಾಹಿನಿ ಉಪ್ಪಿನಂಗಡಿ ಘಟಕದಿಂದ 12000 ರೂಪಾಯಿ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು. .ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಡಾ.ರಾಜಾರಾಮ ಕೆ.ಬಿ, ಸಲಹೆಗಾರರಾದ ಡಾ.ಸದಾನಂದ ಕುಂದರ್,ಮಾಜಿ ಅಧ್ಯಕ್ಷರಾದ ಶೇಖರ ಗೌಂಡತ್ತಿಗೆ , ಅಧ್ಯಕ್ಷರಾದ ಅಜಿತ್ […]

Read More

ಅನಾಥ ಮಗುವಿಗೆ ಆಸರೆಯಾದ ಯುವವಾಹಿನಿ ಕೂಳೂರು ಘಟಕ

ಕೂಳೂರು : ಅನಾಥಾಶ್ರಮದಲ್ಲಿ ಬೆಳೆಯುತ್ತಿದ್ದ ಲಕ್ಷ್ಮಿ ಎಂಬ ವಿದ್ಯಾರ್ಥಿನಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯ ಮೊತ್ತವನ್ನು ನೀಡಲು ಅಸಾಧ್ಯವಾಗಿರುವುದರಿಂದ ಯುವವಾಹಿನಿ ಕೂಳೂರು ಘಟಕದ ವತಿಯಿಂದ ವಿದ್ಯಾರ್ಥಿನಿಗೆ ಆಸ್ಪತ್ರೆ ಶುಲ್ಕ ಭರಿಸಲು 20,000 /- ರೂಪಾಯಿ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್

Read More

ಯುವವಾಹಿನಿ ಸೇವಾ ಸಂಜೀವಿನಿ ಲೋಕಾರ್ಪಣೆ

ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ ಆಶ್ರಯದಲ್ಲಿ ದಿನಾಂಕ 03-03-2019 ಆದಿತ್ಯವಾರ ಗಾಯತ್ರಿ ಮಿನಿ ಹಾಲ್ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಅತ್ಯಮೂಲ್ಯವಾದ ಯೋಜನೆ ಯುವವಾಹಿನಿ ಸೇವಾ ಸಂಜೀವಿನಿ ಯ ಲೋಕಾರ್ಪಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಸುಧೀರ್ ಎಸ್ ಪೂಜಾರಿ ಅವರು ವಹಿಸಿದ್ದರು. ಪ್ರೀತಿ ಎಂಬ ಎಣ್ಣೆಯನ್ನು ಸುರಿದು,ನಂಬಿಕೆ ಎನ್ನುವ ಬತ್ತಿಯನ್ನು ಇಟ್ಟು,ಆತ್ಮವಿಶ್ವಾಸ ಎನ್ನುವ ದೀಪದಡಿಯಲ್ಲಿ ಅಶಕ್ತರ ಪಾಲಿಗೆ ಬೆಳಕಾಗಾಗಬೇಕೆಂಬ ಅಭಿಲಾಷೆಯೊಂದಿಗೆ, ಯುವವಾಹಿನಿ ಸೇವಾ ಸಂಜೀವಿನಿ’ ಯುವವಾಹಿನಿ ಬೆಂಗಳೂರು ಘಟಕದ ಬಹುದಿನಗಳ ಕನಸಿನ ಯೋಜನೆಯನ್ನು ಬೆಂಗಳೂರು […]

Read More

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಯುವವಾಹಿನಿಯ ವಿವಿಧ ಘಟಕಗಳ ಹೊರೆಕಾಣಿಕೆ ಸೇವೆ

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಜರಗಿದ ಬೃಹತ್ ಹೊರೆಕಾಣಿಕೆ ಮೆರವಣಿಗೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯು ತನ್ನ ವಿವಿಧ ಘಟಕಗಳನ್ನು ಸಂಘಟಿಸಿ ಒಟ್ಟು 23 ಘಟಕಗಳ ಹೊರೆಕಾಣಿಕೆ ಸೇವೆಯ ಜೊತೆ ಆಕರ್ಷಕ ನಾರಾಯಣ ಗುರುಗಳ ಟ್ಯಾಬ್ಲೋ ಮೂಲಕ ಮೆರವಣಿಗೆಯಲ್ಲಿ ಭಾಗವಹಿಸಿತು. ಮೆರವಣಿಗೆಯು ಶಿಸ್ತುಬದ್ಧವಾಗಿ ಯಶಸ್ವಿಯಾಗಿ ಮೂಡಿ ಬರಲು ಯುವವಾಹಿನಿಯ ನೂರಾರು ಕಾರ್ಯಕರ್ತರು ಸಮಾಜ ಭಾಂಧವರ ಜೊತೆ ಸೇರಿಕೊಂಡು ಐತಿಹಾಸಿಕ ಮೆರವಣಿಗೆಯ ಯಶಸ್ವಿ ಗೆ ಕಾರಣಕರ್ತರಾದರು. ಈ ಸಂದರ್ಭದಲ್ಲಿ ಯುವವಾಹಿನಿಯ ಸದಸ್ಯರಲ್ಲಿ ಶ್ರೀ […]

Read More

ಯುವವಾಹಿನಿ(ರಿ.) ಬಜ್ಪೆ ಘಟಕದ ವತಿಯಿಂದ ಫಲಾನುಭವಿಗಳಿಗೆ ಶ್ರವಣ ಸಾಧನ ವಿತರಣೆ

ಬಜ್ಪೆ: ಯುವವಾಹಿನಿ(ರಿ.) ಬಜ್ಪೆ ಘಟಕದ 5ನೇ ವರ್ಷದ ಸಮಾಜಮುಖಿ ಕಾರ್ಯಕ್ರಮಗಳ ಅಂಗವಾಗಿ, ಸ್ವಾಮಿ ಕೊರಗಜ್ಜ ಸೇವಾ ಸಮಿತಿ,‌ ಅಂಬಿಕಾರೋಡ್ ತೊಕೊಟ್ಟು ಇವರ ಸಹಕಾರದಲ್ಲಿ ದಿನಾಂಕ 23/02/2019ರಂದು ಶನಿವಾರ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನ, ಬಜ್ಪೆ ಇಲ್ಲಿ ಶ್ರವಣ ಸಮಸ್ಯೆಯಿಂದ ಬಳಲುತ್ತಿರುವ ಅಶಕ್ತರಿಗೆ ಶ್ರವಣ ಸಾಧನ ವಿತರಣೆಯು ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ ಬಜ್ಪೆ ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀ ವಿನೋಧರ ಪೂಜಾರಿ, ನೋಟರಿ ಮತ್ತು ವಕೀಲರು ನೆರವೇರಿಸಿ, ತನ್ನ ಉದ್ಘಾಟನಾ ಭಾಷಣದಲ್ಲಿ ಯುವವಾಹಿನಿ ಬಜ್ಪೆ ಘಟಕದ […]

Read More

ವೀರ ಸ್ವರ್ಗ ಸೇರಿದ ಸೈನಿಕರಿಗೆ ಶ್ರದ್ಧಾಂಜಲಿ

ಕೆಂಜಾರು ಕರಂಬಾರು : ಪುಲ್ವಾಮ ದ ಘಟನೆಯಲ್ಲಿ ವೀರ ಸ್ವರ್ಗ ಸೇರಿದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸುವ ಸಲುವಾಗಿ ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಆಶ್ರಯದಲ್ಲಿ ದಿನಾಂಕ . 16.02.2019 ರಂದು ಕೆಂಜಾರು ಕರಂಬಾರು ಶ್ರೀದೇವಿ ಭಜನಾ ‌ಮಂದಿರದಲ್ಲಿ ಕ್ಯಾಂಡಲ್ ಬೆಳಕಿನ ಮೂಲಕ ಪುಲ್ವಾಮ ಘಟನೆಯಲ್ಲಿ ವೀರ ಮರ ಹೊಂದಿದ ವೀರ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ದೇಶಕ್ಕಾಗಿ ವೀರ ಸ್ವರ್ಗ ಸೇರಿದ ಸೈನಿಕರ ಬಗ್ಗೆ ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಗಣೇಶ್ ಸಂಧರ್ಬೋಚಿತವಾಗಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!