Yuvavahini

ಸಮಾಜ ಸೇವೆ

ಸ್ವಚ್ಚತಾ ಅಭಿಯಾನದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕದ ಸದಸ್ಯರು.

ಬಜ್ಪೆ : ಕೇಂದ್ರ ಸರಕಾರದ ಸಲಹೆಯ ಪ್ರಕಾರ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ಕೈಗೊಂಡಿರುವ “ಸ್ವಚ್ಚತಾ ಸೇವಾ” ಕಾರ್ಯಕ್ರಮದನ್ವಯ MRPL, ರೋಟರಿ ಕ್ಲಬ್ ಬಜ್ಪೆ ಮತ್ತು ಯುವವಾಹಿನಿ(ರಿ.) ಬಜ್ಪೆ ಘಟಕದ ಆಶ್ರಯದಲ್ಲಿ ದಿನಾಂಕ 23/09/2018ರಂದು ಬಜ್ಪೆ ಪೇಟೆಯ ಪರಿಸರದಲ್ಲಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸ್ಥಳೀಯ ಸಂಘ ಸಂಸ್ಥೆಗಳೊಂದಿಗೆ ಸೇರಿ ನಡೆಸಿದ ಈ ಕಾರ್ಯಕ್ರಮದಲ್ಲಿ 350 ಹೆಚ್ಚು ಜನರು ಸಕ್ರೀಯವಾಗಿ ಭಾಗವಹಿಸಿದರು. MRPL ಸಂಸ್ಥೆ ಭಾಗವಹಿಸಿದ ಎಲ್ಲರಿಗೂ ಟೀ-ಶರ್ಟ್ ಹಾಗೂ ಉಪಹಾರದ […]

Read More

ಯುವವಾಹಿನಿ (ರಿ) ಬೆಳುವಾಯಿ ಘಟಕದ ವತಿಯಿಂದ ರಸ್ತೆ ದುರಸ್ತಿ

ಬೆಳುವಾಯಿ : ಬೆಳುವಾಯಿ ಪೇಟೆಯಲ್ಲಿ ಮಳೆಗಾಲದಲ್ಲಿ ನೀರು ರಸ್ತೆಗೆ ಹರಿದು ರಸ್ತೆಯ ಬದಿಯಲ್ಲಿ ಕೆಲವು ಕಡೆ ಎರಡು ಅಡಿಯಷ್ಟು ದೊಡ್ಡ ಹೊಂಡ ಸೃಷ್ಟಿಯಾಗಿತ್ತು. ಇದರಿಂದ ಸಾರ್ವಜನಿಕರು., ವಾಹನ ಚಾಲಕರು ತೀರಾ ತೊಂದರೆ ಅನುಭವಿಸುತ್ತಿದ್ದರು. ಯುವವಾಹಿನಿ (ರಿ) ಬೆಳುವಾಯಿ ಘಟಕದ ವತಿಯಿಂದ ಜೆಸಿಬಿ ಮೂಲಕ ಈ ಹೊಂಡಗಳನ್ನು ಮುಚ್ಚಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಬೆಳುವಾಯಿ ಘಟಕದ ಈ ಸಮಾಜಮುಖಿ ಕಾಳಜಿಗೆ ಸಾರ್ವಜನಿಕರಿಂದ ಮುಕ್ತ ಕಂಠದ ಶ್ಲಾಘನೆ ವ್ಯಕ್ತವಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಬೆಳುವಾಯಿ ಘಟಕದ […]

Read More

ಯುವವಾಹಿನಿ (ರಿ) ಕಂಕನಾಡಿ ಘಟಕದಿಂದ ವೈದ್ಯಕೀಯ ನೆರವು

ಕಂಕನಾಡಿ : ಇತ್ತೀಚೆಗೆ ಮಂಗಳಾದೇವಿ ದೇವಸ್ಥಾನದಲ್ಲಿ ಮರ ಬಿದ್ದು ಗಾಯಗೊಂಡ ಸುರೇಖಾ ಕೋಟ್ಯಾನ್ ಆರೋಗ್ಯವನ್ನು ವಿಚಾರಿಸಿ ₹.10000/- ವೈದ್ಯಕೀಯ ನೆರವು ನೀಡಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕಂಕನಾಡಿ ಘಟಕದ ಅಧ್ಯಕ್ಷ ಭವಿತ್ ರಾಜ್ ಕಾರ್ಯದರ್ಶಿ ಸುಮಾ ವಸಂತ್ , ಮಾಜಿ ಅಧ್ಯಕ್ಷ ಹರೀಶ್. ಕೆ. ಸನಿಲ್ ಮತ್ತಿತರರು ಉಪಸ್ಥಿತರಿದ್ದರು.

Read More

ಯುವವಾಹಿನಿ (ರಿ) ಕುಪ್ಪೆಪದವು ಘಟಕದಿಂದ ವೈದ್ಯಕೀಯ ನೆರವು

ಕುಪ್ಪೆಪದವು :ಯುವವಾಹಿನಿ (ರಿ) ಕುಪ್ಪೆಪದವು ಘಟಕದಿಂದ ಇಲ್ಲಿನ ಸ್ಥಳೀಯ ನಿವಾಸಿ ಬಡ ಕುಟುಂಬದ ಶೇಖರ್ ಪೂಜಾರಿ ದುರ್ಗಕೊಡಿ ಇವರ ಮಗುವಿನ ಅನಾರೋಗ್ಯದ ನಿಮಿತ್ತ ದಿನಾಂಕ 13/09/2018 ರಂದು ವೈದ್ಯಕೀಯ ನೆರವು ನೀಡಲಾಯಿತು . ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ,ಉಪಾಧ್ಯಕ್ಷರಾದ ಅಜಯ್ ಅಮೀನ್.ಕಾರ್ಯದರ್ಶಿ ರಿತೇಶ್ ನೆಲ್ಲಚಿಲ್ ಹಾಗೂ ಘಟಕದ ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು

Read More

ಶ್ರೀ ಗುರು ಪ್ರಸಾದಾಲಯ ಲೋಕಾರ್ಪಣೆ

ಹಳೆಯಂಗಡಿ : ಯುವವಾಹಿನಿ (ರಿ.) ಹಳೆಯಂಗಡಿ ಘಟಕವು ಕಳೆದ 2 ದಶಕಗಳಿಂದ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಹಳೆಯಂಗಡಿಯ ಪ್ರಗತಿಯೊಂದಿಗೆ ಹಾಗು ಶೈಕ್ಷಣಿಕ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಸಾಮಾಜಮುಖಿ ಚಿಂತನೆಯೊಂದಿಗೆ ನಾಯಕತ್ವವನ್ನು ರೂಪಿಸಿ ಬೆಳೆಸುವ ಯುವ ಸಂಘಟನೆಯಾಗಿ ಬೆಳೆಯುತ್ತಿದೆ. ಕಳೆದ 20 ವರ್ಷಗಳಿಂದ ಸಂಘದ ಜೊತೆ-ಜೊತೆಯಾಗಿ ಹತ್ತು ಹಲವಾರು ಕಾರ್ಯಕ್ರಮಗಳ ಯಶಸ್ಸಿನ ರೂವಾರಿಯಾಗಿ ಈಗಾಗಲೇ ಸಂಘದ ನೂತನ ಕಟ್ಟಡ ನಿಧಿಗೆ ರೂಪಾಯಿ 7.5 ಲಕ್ಷ ಧನಸಹಾಯದ ಭರವಸೆಯನ್ನು ನೀಡಿದೆ. ಮಾತ್ರವಲ್ಲದೆ […]

Read More

ವಿಶೇಷ ಚೇತನ ಮಕ್ಕಳ ಜತೆ ಗುರುಜಯಂತಿ ಆಚರಣೆ

ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕ ಇದರ ವತಿಯಿಂದ 27/08/2018 ರಂದು ಪ್ರಜ್ಞಾ ಸಲಹಾ ಆಶ್ರಮ ಬನ್ನೂರು ಪುತ್ತೂರು ಇಲ್ಲಿ ಬ್ರಹ್ಮಶ್ರಿ ನಾರಾಯಣ ಗುರುಗಳ 164ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ವಿಶೇಷ ಚೇತನ ಮಕ್ಕಳ ಆಶ್ರಮಕ್ಕೆ ಘಟಕದ ವತಿಯಿಂದ ಎರಡು ಟೇಬಲ್ ಮತ್ತು 25 kg ಅಕ್ಕಿಯನ್ನು ಘಟಕದ ಅಧ್ಯಕ್ಷರಾದ ಹರೀಶ ಶಾಂತಿ ಪುತ್ತೂರು ಇವರ ನೇತ್ರತ್ವದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲು ವಿತರಿಸಿದರು. ಕಾರ್ಯಕ್ರಮ ನೆರವೇರಿಸಿ ಜಯಂತ ನಡುಬೈಲು ಮಾತನಾಡಿ ಅಸ್ಪ್ರಶ್ಯತೆ ಶೋಷಣೆಯ […]

Read More

ವೃದ್ಧಾಶ್ರಮದಲ್ಲಿ ಒಂದು ದಿನ

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 27/08/2018 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯ ಪ್ರಯುಕ್ತ 32 ಸದಸ್ಯರನ್ನೊಳಗೊಂಡ ತಂಡವು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಮಂಗಳೂರು ನಗರ ಪ್ರದೇಶದಲ್ಲಿರುವ ‘ವಾತ್ಸಲ್ಯಧಾಮ’ ವೃದ್ಧಾಶ್ರಮಕ್ಕೆ ಭೇಟಿ ನೀಡಲಾಯಿತು. ಆಶ್ರಮದಲ್ಲಿದ್ದ ೩೫ ವೃದ್ದರ ಜತೆ ಸೇರಿ ಯುವವಾಹಿನಿ ಕೂಳೂರು ಘಟಕದ ಸದಸ್ಯರು ಹಾಡು, ಆಟೋಟ, ಮನರಂಜನಾ ಕಾರ್ಯಕ್ರಮಗಳ ಮೂಲಕ ಆಶ್ರಮವಾಸಿಗಳಿಗೆ ಸ್ಪೂರ್ತಿ ತುಂಬಿದರು. ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜನ್ಮದಿನದಂದು ಅವರ ಮುಖ್ಯ ತತ್ತ್ವವಾದ ‘ಒಂದೇ ಜಾತಿ ಒಂದೇ […]

Read More

ಎಂಡೋ ಪಾಲನಾ ಕೇಂದ್ರಕ್ಕೆ ಕೊಡುಗೆ

ಪುತ್ತೂರು : ಯುವವಾಹಿನಿ(ರಿ.) ಪುತ್ತೂರು ಘಟಕ ಇದರ ಆಶ್ರಯದಲ್ಲಿ ಯುವವಾಹಿನಿ ಸಂಚಲನ ಸಮಿತಿ ನರಿಮೊಗರು ಮತ್ತು ಬಿಲ್ಲವ ಗ್ರಾಮ ಸಮಿತಿ ನರಿಮೊಗರು ಇದರ ವತಿಯಿಂದ ದಿನಾಂಕ 25/8/2018 ಶನಿವಾರದಂದು ನಡೆದ ಕಾರ್ಯಕ್ರಮದಲ್ಲಿ ಎಂಡೋ ಪೀಡಿತರ ಪಾಲನ ಕೇಂದ್ರ ಕ್ಯೊಲ, ಇಲ್ಲಿನ ಎಂಡೊ ಪೀಡಿತ ಮಕ್ಕಳಿಗೆ ಬಟ್ಟೆಬರೆ ಕೊಡುಗೆಯಾಗಿ ನೀಡಲಾಯಿತು. . ಘಟಕದ ಅಧ್ಯಕ್ಷರಾದ ಹರೀಶ ಶಾಂತಿ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ SSLCಯಲ್ಲಿ 77% ಅಂಕ ಪಡೆದು ವಿಶಿಷ್ಟ ಸಾದನೆ ಮಾಡಿದ ನಮ್ಮ ಸಮುದಾಯದ ಎಂಡೋ ಪೀಡಿತ […]

Read More

ಮದುವೆ ಸಮಾರಂಭದಲ್ಲಿ ಹೀಗೊಂದು ಸಹಾಯಹಸ್ತ

ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕದ ಸದಸ್ಯರಾದ ಮಹೇಶ್ ಕನೀರುತೋಟ ಇವರ ಸಹೋದರಿಯ ಶುಭವಿವಾಹವು ದಿನಾಂಕ 19.08.2018 ರಂದು ಅಡ್ಕ ಶ್ರೀ ಭಗವತಿ ಸಭಾಭವನದಲ್ಲಿ ಜರಗಿತು. ಈ ಶುಭವಿವಾಹದ ಶುಭಸಮಾರಂಭದಲ್ಲಿ ವಧೂ-ವರರ ಕುಟುಂಬಸ್ಥರ ಹಾಗೂ ಯುವವಾಹಿನಿ (ರಿ) ಕೊಲ್ಯ ಘಟಕದ ಸರ್ವ ಸದಸ್ಯರ ಸಹಕಾರದಲ್ಲಿ ಪ್ರಕೃತಿ ವಿಕೋಪದಿಂದ ಸಂಭವಿಸಿದ ನೆರೆ ಸಂತ್ರಸ್ತರಿಗಾಗಿ ದೇಣಿಗೆ ಸಂಗ್ರಹ ಕಾರ್ಯಕ್ರಮವನ್ನು ಶುಭವಿವಾಹದ ಸಭಾಂಗಣದಲ್ಲಿ ಆಯೋಜಿಸಿದ್ದು ,ನೂತನ ವಧು ವರರಿಗೆ ಶುಭಹಾರೈಸಲು ಬಂದಂತಹ ನೆಂಟರಿಷ್ಟರೆಲ್ಲರೂ ಈ ನಿಧಿಸಂಗ್ರಹಣಾ ಕಾರ್ಯಕ್ರಮಕ್ಕೆ ಸ್ಪಂದಿಸಿ ತಮ್ಮ […]

Read More

ಯುವವಾಹಿನಿ(ರಿ) ಬೆಳ್ತಂಗಡಿ ಘಟಕದಿಂದ ರಸ್ತೆ ದುರಸ್ತಿ

ಬೆಳ್ತಂಗಡಿ : ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಓಡಿಲ್ನಾಳದ ಸಂಚಾಲನ ಸಮಿತಿ ಸದಸ್ಯರಿಂದ ದಿನಾಂಕ 19.08.2018 ರಂದು ಮಳೆಯಿಂದ. ಸಂಪೂರ್ಣವಾಗಿ ಹದಗೆಟ್ಟ ಪಣೆಜಾಲು ಅದೇಲು ಸಂಪರ್ಕ ರಸ್ತೆಯನ್ನು ಗ್ರಾಮ ಪಂಚಾಯತ್ ಕುವೆಟ್ಟು ಇವರ ಸಹಕಾರದೊಂದಿಗೆ ದುರಸ್ತಿಗೋಳಿಸಿದರು.ಈ ಸಂದರ್ಭದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಸಂಘಟನಾ ಕಾರ್ಯದರ್ಶಿ ಶಶಿದರ್ ಅದೇಲು ಸಲಹೆಗಾರದ ರವಿ ಪೂಜಾರಿ ಅದೇಲು ಸಮಿತಿಯ ಕಾರ್ಯದರ್ಶಿ ನಾಗೇಶ್ ಪೂಜಾರಿ ಅದೇಲು ಸದಸ್ಯರಾದ ಬಾಬು ಪೂಜಾರಿ ಅದೇಲು ನವೀನ್ ಅದೇಲು ರಮೇಶ್ ಅದೇಲು ನೀತೇಶ್ ಅದೇಲು ರಕ್ಷಿತ್ ಅದೇಲು ವಿಶ್ವನಾಥ್ ಪೂಜಾರಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!