Yuvavahini

ಸಮಾಜ ಸೇವೆ

ಅಗ್ನಿ ಅವಘಡ : ಯುವವಾಹಿನಿಯಿಂದ ಸಹಾಯಹಸ್ತ

ಸಸಿಹಿತ್ಲು: ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ನಾಮನಿರ್ದೇಶಿತ ಸದಸ್ಯರಾದ ಚಂದ್ರಶೇಖರ್ ಸಸಿಹಿತ್ಲು ಇವರ ಮನೆ ಆಕಸ್ಮಿಕ ಅಗ್ನಿ ಅವಘಡಕ್ಕಿಡಾಗಿ, ಚಂದ್ರಶೇಖರ್ ಕುಟುಂಬ ತೀವ್ರ ಸಂಕಷ್ಟಕ್ಕೆ ಒಳಗಾಗಿತ್ತು. ಸಂಕಷ್ಟಕ್ಕೆ ಒಳಗಾದ ಚಂದ್ರಶೇಖರ ಕುಟುಂಬಕ್ಕೆ ಯುವವಾಹಿನಿ ಕೇಂದ್ರ ಸಮಿತಿಯ ಸದಸ್ಯರಿಂದ ಸಂಗ್ರಹವಾದ ರೂ 50,000/- ಆರ್ಥಿಕ ಸಹಾಯ ಮಾಡಲಾಗಿದೆ. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಇವರು ₹50,000/ ಮೊತ್ತದ ಚೆಕ್‌ನ್ನು ಚಂದ್ರಶೇಖರ್ ಅವರ ಸಹೋದರಿ ಶ್ಯಾಮಲ ಅವರಿಗೆ ಹಸ್ತಾಂತರ ಮಾಡಿ, ಆರ್ಥಿಕ ಕ್ರೋಡೀಕರಣಕ್ಕಾಗಿ […]

Read More

ಸ್ವಚ್ಚತಾ ಕಾರ್ಯಕ್ರಮ

ಪಣಂಬೂರು ಕುಳಾಯಿ :- ಯುವವಾಹಿನಿ (ರಿ.) ಪಣಂಬೂರು – ಕುಳಾಯಿ ಘಟಕ ಹಾಗು ನಾಗರಿಕ ಸಲಹಾ ಸಮಿತಿ ಸುರತ್ಕಲ್ ಇವರ ಜಂಟಿ ಆಶ್ರಯದಲ್ಲಿ ಎಂ ಆರ್ ಪಿ ಎಲ್ ಪ್ರಾಯೋಜಕತ್ವದಲ್ಲಿ ಕುಳಾಯಿ ಪರಿಸರದಲ್ಲಿ, ಇತ್ತೀಚಿಗೆ ನಮ್ಮನ್ನಗಲಿದ ಘಟಕದ ಗೌರವ ಸದಸ್ಯರಾದ ದಿl ಮಹಾಬಲ ಟಿ. ಸಾಲ್ಯಾನ್ ರವರ ಸ್ಮರಣಾರ್ಥವಾಗಿ ದಿನಾಂಕ 04 ಡಿಸೆಂಬರ್ 2022 ರಂದುಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಘಟಕದ ಸಮಾಜ ಸೇವಾ ನಿರ್ದೇಶಕರಾದ ಸುಧೀರ್ ರವರ ನಾಯಕತ್ವದಲ್ಲಿ, ಆರಂಭವಾದ ಸ್ವಚ್ಛತಾ ಕಾರ್ಯದಲ್ಲಿ ಅಧ್ಯಕ್ಷರಾದ ರಂಜನ್ ಕೆ.ಕೋಟ್ಯಾನ್, […]

Read More

ಜನ ಮನ ಗೆದ್ದ ಉಚಿತ ಶರಬತ್ತು ವಿತರಣೆ

ಮಂಗಳೂರು :- ವಿಶ್ವ ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವದ ಶಾರದಾ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರಿಗೆ ಯುವವಾಹಿನಿ (ರಿ.) ಮಂಗಳೂರು ಘಟಕವು ಉಚಿತ ಶರಬತ್ತು ಸೇವೆಯನ್ನು ನೀಡುವುದರೊಂದಿಗೆ ಜನಮನ ಗೆದ್ದಿತು. ಮಂಗಳೂರು ದಸರಾ ಮಹೋತ್ಸವದ ಶೋಭಾ ಯಾತ್ರೆಯ ದಿನವಾದ 05 ಅಕ್ಟೋಬರ್ 2022ರ ಬೆಳಿಗ್ಗೆಯಿಂದಲೇ ಶರಬತ್ತು ಸೇವೆಗೆ ಪೂರ್ವ ತಯಾರಿ ಕಾರ್ಯಕ್ರಮಗಳು ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿಯಿರುವ ಎಸ್. ಎಲ್. ಡೈಮಂಡ್ ಮಳಿಗೆಯ ಅಂಗಣದಲ್ಲಿ ಘಟಕದ ಅಜೀವ ಸದಸ್ಯರಾದ ಬಾಲಕೃಷ್ಣ […]

Read More

ಸ್ವಚ್ಚತಾ ಅಭಿಯಾನ ಕಾರ್ಯಕ್ರಮ

ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ 25ನೇ ಸ್ವಚ್ಛತಾ ಅಭಿಯಾನವು ಗಾಂಧಿ ಜಯಂತಿ ಪ್ರಯುಕ್ತ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಪರಪಾದೆ ಆಕಾಶಭವನ ಇಲ್ಲಿ ದಿನಾಂಕ 02 ಅಕ್ಟೋಬರ್ 2022 ಭಾನುವಾರದಂದು ನಡೆಯಿತು. ಸದಸ್ಯರಾದ ಜಯ ಬಂಗೇರರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ , ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಭಾಸ್ಕರ್ ಕೋಟ್ಯಾನ್, ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಸಂಘಟನಾ ಕಾರ್ಯದರ್ಶಿ ಸಚಿನ್ ಪೂಜಾರಿ , ಮಹಿಮೂನಾ S.D.M.C.ಅಧ್ಯಕ್ಷರು, […]

Read More

ಉಚಿತ ಹುಚ್ಚು ನಾಯಿ ನಿಯಂತ್ರಣಾ ಲಸಿಕಾ ಶಿಬಿರ

ಕೊಲ್ಯ :- ಯುವವಾಹಿನಿ(ರಿ.) ಕೊಲ್ಯ ಘಟಕ ಮತ್ತು ರೋಟರಿ ಕ್ಲಬ್ ಮಂಗಳೂರು ಪೂರ್ವ, ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರ ,ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಕೊಲ್ಯ ಆಶ್ರಯದಲ್ಲಿ ಮತ್ತು ಎನಿಮಲ್ ಕೇರ್ ಟ್ರಸ್ಟ್ ಮಂಗಳೂರು ಇದರ ಸಹಕಾರದಲ್ಲಿ ಉಚಿತ ಹುಚ್ಚು ನಾಯಿ ನಿಯಂತ್ರಣಾ ಲಸಿಕಾ ಶಿಬಿರ ಮತ್ತು ದೇಸೀ ಬೆಕ್ಕು ಮತ್ತು ನಾಯಿ ಮರಿಗಳ ದತ್ತು ಕೊಡುವ ಕಾರ್ಯಕ್ರಮವು ದಿನಾಂಕ 25 ಸೆಪ್ಟೆಂಬರ್ 2022ರಂದು ಶ್ರೀ ಶಾರದಾ ಮಹೋತ್ಸವ ಸಮಿತಿ ಕೊಲ್ಯ ಇದರ ವಠಾರದಲ್ಲಿ […]

Read More

ಸ್ಪಂದನ ಯೋಜನೆ

ಮಾಣಿ :- ಘಟಕದ ಸ್ಪಂದನ ಯೋಜನೆಯಡಿ ಬರಿಮಾರು ಗ್ರಾಮದ ಕೇವ ಎಂಬಲ್ಲಿಯ ಭವಾನಿ ಮಾಧವ ರವರ ಮನೆಯ ದುರಸ್ತಿಯ ಮೊದಲನೇ ಹಂತದ ಶ್ರಮದಾನ ದಿನಾಂಕ 11 ಸೆಪ್ಟೆಂಬರ್ 2022 ರಂದು ನಡೆಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಜಯಂತ್ ಬರಿಮಾರು , ಉಪಾಧ್ಯಕ್ಷರಾದ ರವಿಚಂದ್ರ ಬಾಬನಕಟ್ಟೆ ,ಮಾಜಿ ಅಧ್ಯಕ್ಷರರಾದ ರಾಜೇಶ್ ಬಾಬಾನಕಟ್ಟೆ, ಹರೀಶ್ ಬಾಕಿಲ , ಗೌರವ ಸಲಹೆಗಾರರಾದ ಯಶೋಧರ ಮಾಣಿ, ಮಾಜಿ ಗೌರವ ಸಲಹೆಗಾರರಾದ ಬಾಲಕೃಷ್ಣ ದೇಲಬೆಟ್ಟು , ಕೋಶಾಧಿಕಾರಿ ರಾಜೇಶ್ ಬಲ್ಯ, ಸಮಾಜ ಸೇವಾ […]

Read More

ಅಂಗನವಾಡಿ ಕೇಂದ್ರಕ್ಕೆ ಚಯರ್ ಕೊಡುಗೆ

ವೇಣೂರು:- 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ಯುವವಾಹಿನಿ (ರಿ.) ವೇಣೂರು ಘಟಕದ ವತಿಯಿಂದ ದಿನಾಂಕ 13 ಆಗಸ್ಟ್ 2022 ಶನಿವಾರದಂದು ಎರಡು ಅಂಗನವಾಡಿ ಶಾಲೆಗಳಿಗೆ ಪುಟಾಣಿ ಮಕ್ಕಳ ಚೇರ್ ಗಳನ್ನು ಘಟಕದ ಅಧ್ಯಕ್ಷರಾದ ಯೋಗೀಶ್ ಬಿಕ್ರೋಟ್ಟು. ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಕ್ರೀಡಾ ಮತ್ತು ಅರೋಗ್ಯ ನಿರ್ದೇಶಕರಾದ ನವೀನ್ ಪಚ್ಚೇರಿಯವರ ನೇತೃತ್ವದಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಕಾರ್ಯದರ್ಶಿಯವರಾದ ಪ್ರಶಾಂತ್ ಕುಕ್ಕೇಡಿ, ಕೋಶಾಧಿಕಾರಿ ರಕ್ಷಿತ್ ಬಜಿರೆ , ಸಂಘಟನಾ ಕಾರ್ಯದರ್ಶಿ ಸುಕೇಶ್ ಊರಬೆ […]

Read More

ಹಿಂದೂ ರುದ್ರ ಭೂಮಿ ಸ್ವಚ್ಚತಾ ಕಾರ್ಯಕ್ರಮ

ಯಡ್ತಾಡಿ :- 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ನಮ್ಮ ಘಟಕದಿಂದ ದಿನಾಂಕ 15 ಆಗಸ್ಟ್ 2022ರ ಸೋಮವಾರದಂದು ಯಡ್ತಾಡಿ ಹಿಂದೂ ರುದ್ರಭೂಮಿಯ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಘಟಕದ ಅಧ್ಯಕ್ಷರಾದ ಶ್ರೀ ಸೋಮಪ್ಪ ಪೂಜಾರಿಯವರು ಹಾಗೂ ಸದಸ್ಯರನ್ನೊಳಗೊಂಡ ತಂಡ ಸ್ಮಶಾನದ ಕಟ್ಟಡದ ಮೇಲ್ಛಾವಣಿ, ಸಲಕರಣೆ ಹಾಗೂ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಿದರು. ಘಟಕದ ದ್ವಿತೀಯ ಉಪಾಧ್ಯಕ್ಷರಾದ ಶ್ರೀ ಮಂಜುನಾಥ್ ಪೂಜಾರಿಯವರು ಹಿಂದೆ ಈ ಹಿಂದೂ ರುದ್ರಭೂಮಿಯನ್ನು ಮಾಡುವಾಗ ಪಟ್ಟ ಶ್ರಮವನ್ನು ನೆನೆದರು. ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು ಮತ್ತು […]

Read More

ಯುವವಾಹಿನಿಯಿಂದ ಕಡಲತಡಿಯ ಸ್ವಚ್ಛತಾ ಅಭಿಯಾನ

ಮಂಗಳೂರು :- ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ, ಯುವವಾಹಿನಿಯ ವಿವಿಧ ಘಟಕಗಳ ಸಹಕಾರದಲ್ಲಿ, “ಕಡಲತಡಿಯ ಸ್ವಚ್ಛತಾ ಅಭಿಯಾನ” ವು 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದಿನಾಂಕ 12 ಆಗಸ್ಟ್ 2022ರ ಶುಕ್ರವಾರದಂದು ಪಣಂಬೂರು ಬೀಚ್ ನಲ್ಲಿ MPEDA – NETFISH ಸಂಸ್ಥೆಯು Coastal clean – up Programme ಕಾರ್ಯಕ್ರಮವನ್ನು ಆಯೋಜಿಸಿತ್ತು. ಯುವವಾಹಿನಿ (ರಿ.) ಮಂಗಳೂರು ಘಟಕವು ಈ ಕಾರ್ಯಕ್ರಮವನ್ನು ಸಂಘಟಿಸಿದ್ದು, ಕೇಂದ್ರ ಸಮಿತಿಯ ಕಡಲತಡಿಯ ವಿವಿಧ ಘಟಕಗಳು ಇದರಲ್ಲಿ ಭಾಗವಹಿಸಿದ್ದವು. ಈ […]

Read More

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಯುವವಾಹಿನಿ ಸಂಸ್ಥೆಯಿಂದ ಸಾಂತ್ವನ ಹಾಗೂ ಧನ ಸಹಾಯ ಹಸ್ತಾಂತರ

ಮಂಗಳೂರು :- ದಿನಾಂಕ 26 ಜುಲೈ 2022 ರಂದು ದುಷ್ಕರ್ಮಿಗಳ ದಾಳಿಗೆ ಒಳಗಾಗಿ ನಮ್ಮನ್ನಗಲಿದ ಯುವವಾಹಿನಿ (ರಿ.) ಸುಳ್ಯ ಘಟಕದ ಮಾಜಿ ಅಧ್ಯಕ್ಷರು ಹಾಗೂ ಪ್ರಸ್ತುತ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿದ್ದ ಪ್ರವೀಣ್ ನೆಟ್ಟಾರು ಇವರ ಮನೆಗೆ ಈ ದಿನ ಯುವವಾಹಿನಿ ಕೇಂದ್ರ ಸಮಿತಿಯ ತಂಡವು ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಇವರ ನೇತ್ರತ್ವದಲ್ಲಿ ದಿನಾಂಕ 04 ಆಗಸ್ಟ್ 2022 ರಂದು ಪ್ರವೀಣ್ ಇವರ ಪತ್ನಿ ನೂತನ ಹಾಗೂ ಪ್ರವೀಣ್ ಇವರ ತಂದೆ ತಾಯಿಯನ್ನು ಅವರ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!