ಕೇಂದ್ರ ಸಮಿತಿ

ಶಿವಗಿರಿ ಕ್ಷೇತ್ರ ದರ್ಶನ

ಮಂಗಳೂರು: ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಸಂಪೂರ್ಣ ಜೀವನಾಮೃತ ಸಾರವನ್ನು ಯಾತ್ರಾರ್ಥಿಗಳಿಗೆ ಉಣಬಡಿಸಿದ ಯುವವಾಹಿನಿ(ರಿ.) ಮಂಗಳೂರು ಘಟಕದ ಮಾಜಿ ಉಪಾಧ್ಯಕ್ಷರಾದ ಶ್ರೀ ರಾಮಚಂದ್ರ ಪೂಜಾರಿಯವರ ಅನುಭವದ ಮೂಸೆಯಿಂದ ಸುಜಲ ಧಾರೆಯಂತೆ ಹರಿದ ಸುಲಲಿತ ವಿಚಾರಧಾರೆ. ಮರುತ್ವ ಮಲೆಯನ್ನು ಹತ್ತಿ ಇಳಿದು ಅವರ್ಣನೀಯ ಆನಂದವನ್ನು ಪಡೆದ ಯುವವಾಹಿನಿ ಬಂಧುಗಳು. ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ಸಾರ್ವಕಾಲಿಕ ಸತ್ಯವನ್ನು ಈ ಜಗತ್ತಿಗೆ ಸಾರಿದ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳು ಜನಿಸಿದ ಪರಮ ಪವಿತ್ರವಾದ ಕರ್ಮಭೂಮಿ ಶಿವಗಿರಿ ಕ್ಷೇತ್ರಕ್ಕೆ ತೀರ್ಥಯಾತ್ರೆಯನ್ನು […]

Read More

ಸಮಾಜ ಕಟ್ಟುವಲ್ಲಿ ಯುವವಾಹಿನಿಯ ಪಾತ್ರ ಮಹತ್ತರ : ಡಾ|ಯೋಗೀಶ್ ಕೈರೊಡಿ

ಮಂಗಳೂರು: ಸಮಾಜಮುಖಿ ಚಿಂತನೆಗಳೊಂದಿಗೆ ಸಮಾಜದ ಕಟ್ಟಕಡೆಯ ಕುಟುಂಬಗಳ ನಿರಂತರ ಭೇಟಿ, ಭವಿಷ್ಯದ ಸವಾಲುಗಳು ಹಾಗೂ ಅವರ ಮೂಲಭೂತ ಸಮಸ್ಯೆಗಳನ್ನು ಅರ್ಥೈಸಿಕೊಂಡು ಅವರಿಗೆ ಸ್ಪೂರ್ತಿಯಾಗಿ ಆರೋಗ್ಯ ಪೂರ್ಣ ಸಮಾಜ ಕಟ್ಟುವಲ್ಲಿ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳಿಂದ ಅವಿರತವಾಗಿ ಶ್ರಮಿಸುತ್ತಿದ್ದು ಈ ನಿಟ್ಟಿನಲ್ಲಿ ಯುವವಾಹಿನಿಯ ಪಾತ್ರ ಮಹತ್ತರವಾದುದು ಎಂದು ಅಳ್ವಾಸ್ ಪದವಿ ಕಾಲೇಜಿನ ಉಪನ್ಯಾಸಕರಾದ ಡಾ|ಯೋಗೀಶ್ ಕೈರೊಡಿ ತಿಳಿಸಿದರು. ಅವರು ದಿನಾಂಕ 24 ಮಾರ್ಚ್ 2024ರ ಭಾನುವಾರ ಯುವವಾಹಿನಿ ಸಭಾಂಗಣ ಉರ್ವಾಸ್ಟೋರ್ ಇಲ್ಲಿ ಜರಗಿದ ವಿವಿಧ ಘಟಕಗಳ ನೂತನ ಪದಾಧಿಕಾರಿಗಳ […]

Read More

ಅಗ್ನಿ ಅವಘಡ : ಯುವವಾಹಿನಿಯಿಂದ ಸಹಾಯಹಸ್ತ

ಸಸಿಹಿತ್ಲು: ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ನಾಮನಿರ್ದೇಶಿತ ಸದಸ್ಯರಾದ ಚಂದ್ರಶೇಖರ್ ಸಸಿಹಿತ್ಲು ಇವರ ಮನೆ ಆಕಸ್ಮಿಕ ಅಗ್ನಿ ಅವಘಡಕ್ಕಿಡಾಗಿ, ಚಂದ್ರಶೇಖರ್ ಕುಟುಂಬ ತೀವ್ರ ಸಂಕಷ್ಟಕ್ಕೆ ಒಳಗಾಗಿತ್ತು. ಸಂಕಷ್ಟಕ್ಕೆ ಒಳಗಾದ ಚಂದ್ರಶೇಖರ ಕುಟುಂಬಕ್ಕೆ ಯುವವಾಹಿನಿ ಕೇಂದ್ರ ಸಮಿತಿಯ ಸದಸ್ಯರಿಂದ ಸಂಗ್ರಹವಾದ ರೂ 50,000/- ಆರ್ಥಿಕ ಸಹಾಯ ಮಾಡಲಾಗಿದೆ. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಇವರು ₹50,000/ ಮೊತ್ತದ ಚೆಕ್‌ನ್ನು ಚಂದ್ರಶೇಖರ್ ಅವರ ಸಹೋದರಿ ಶ್ಯಾಮಲ ಅವರಿಗೆ ಹಸ್ತಾಂತರ ಮಾಡಿ, ಆರ್ಥಿಕ ಕ್ರೋಡೀಕರಣಕ್ಕಾಗಿ […]

Read More

ಯುವವಾಹಿನಿಯ ಸಮಾಜಮುಖಿ ಕಾರ್ಯಗಳ ಪ್ರಚಾರದಲ್ಲಿ ಯುವಸಿಂಚನ ಹಾಗೂ ಯುವವಾಹಿನಿ ಸಾಮಾಜಿಕ ಜಾಲತಾಣದ ಪಾತ್ರ ಶ್ಲಾಘನೀಯ : ಹರೀಶ್ ಕೆ. ಪೂಜಾರಿ

ಮಂಗಳೂರು : ಯುವವಾಹಿನಿಯ ಸಮಾಜಮುಖಿ ಕಾರ್ಯಗಳ ಪ್ರಚಾರದಲ್ಲಿ ಯುವಸಿಂಚನ ಹಾಗೂ ಯುವವಾಹಿನಿಯ ಸಾಮಾಜಿಕ ಜಾಲತಾಣವು ಮಹತ್ತರ ಪಾತ್ರ ವಹಿಸಿದೆ ಎಂದು ಯುವಸಿಂಚನ ಹಾಗೂ ಯುವವಾಹಿನಿ ಸಾಮಾಜಿಕ‌ ಜಾಲತಾಣದ ಗೌರವ ಸಂಪಾದಕರಾದ ಹರೀಶ್ ಕೆ. ಪೂಜಾರಿ ತಿಳಿಸಿದರು ಅವರು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ದಿನಾಂಕ 08.01.2024 ರಂದು ಜರುಗಿದ ಯುವಸಿಂಚನ ಹಾಗೂ ಸಾಮಾಜಿಕ ಜಾಲತಾಣ ಸಂಪಾದಕೀಯ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸಂಪಾದಕೀಯ ಮಂಡಳಿಯ ಪಾತ್ರ ಹಾಗೂ ಜವಾಬ್ದಾರಿ ಬಗ್ಗೆ ಮಾಜಿ ಸಂಪಾದಕರಾದ ರಾಜೇಶ್ ಸುವರ್ಣ ಸಭೆಗೆ […]

Read More

ಯುವವಾಹಿನಿ ಯುವಸಾಧನಾ ಪುರಸ್ಕಾರ ಪ್ರದಾನ

ಬಂಟ್ವಾಳ : ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದಲ್ಲಿ ಸಂಘಟನಾ ಕ್ಷೇತ್ರದ ಸಾಧಕ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಧಾರ್ಮಿಕ ಕ್ಷೇತ್ರದ ಸಾಧಕ ಮನೋಜ್ ಕಟ್ಟೆಮಾರ್, ಸಾಂಸ್ಕೃತಿಕ ಕ್ಷೇತ್ರದ ಸಾಧಕಿ ಅಕ್ಷತಾ ಇವರಿಗೆ ಯುವವಾಹಿನಿ ಯುವಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಂಘಟನಾ ಕ್ಷೇತ್ರದ ಸಾಧಕರು  ಶ್ರೀನಿವಾಸ ಪೂಜಾರಿ ಮೆಲ್ಕಾರ್ ಗುರುಜ್ಯೋತಿ ಶಾಮಿಯಾನ ಸಂಸ್ಥೆಯನ್ನು ಹುಟ್ಟಿ ಹಾಕಿ ಸತತ 25 ವರ್ಷಗಳಿಂದ ಮುನ್ನಡೆಸಿಕೊಂಡು ಬರುವುದರ ಜೊತೆಗೆ ಬಂಟ್ವಾಳ ಯುವಸಂಗಮದ ಸ್ಥಾಪಕ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ವಿವಿಧ ಹುದ್ದೆ ಅಲಂಕರಿಸಿ ಸರ್ಕಾರಿ ಶಾಲಾಮಕ್ಕಳಿಗೆ […]

Read More

ಯುವಸಿಂಚನ ವಾರ್ಷಿಕ ವಿಶೇಷಾಂಕದ ಅನಾವರಣ

ಬಂಟ್ವಾಳ: ಬಂಟ್ವಾಳದ ಬೆಂಜನಪದವು ಶುಭಲಕ್ಷೀ ಅಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದಲ್ಲಿ ನಾರ್ದನ್ ಸ್ಕೈ ಪ್ರಾಪಟೀಸ್ ನಿರ್ದೇಶಕಿ ಕೃತಿನ್ ಅಮೀನ್ ಇವರು ಯುವಸಿಂಚನ ವಾರ್ಷಿಕ ವಿಶೇಷಾಂಕದ ಅನಾವರಣ ಮಾಡಿದರು. ಸಮಾವೇಶದ ಜನಸ್ತೋಮದ ನಡುವಣ ಬಂಟ್ವಾಳ ಅತಿಥ್ಯ ಘಟಕದ ಸಹಯೋಗದ ಸದಸ್ಯರ ಭವ್ಯ ಸ್ವಾಗತದೊಂದಿಗೆ ವಾದ್ಯ ಕೊಂಬುಗಳ ಅಬ್ಬರದ ನಿನಾದಗಳು, ಜ್ಯೋತಿ ರೂಪಕವಾಗಿ ಬೆಳಗುತ್ತಿದ್ದ ಜೋಡಿ ದೀಪಗಳು, ಪೂರ್ಣ ಕಳಸ ಹಾಗೇ ವಿವಿಧ ಹೂಗಳಿಂದ ತುಂಬಿದ್ದ ಬೃಹತ್ ಹರಿವಾಣದೊಳಗೆ ಸಜ್ಜಾಗಿದ್ದ ವರ್ಣಮಯ ಯುವಸಿಂಚನ ಹೊತ್ತಗೆಯನ್ನು ಸಮವಸ್ತ್ರಧಾರಿ ನಾರಿಮಣಿಗಳ […]

Read More

ಸಜಿಪ ಮುನ್ನೂರು ಮೂರ್ತೆದಾರ ಸೇವಾ ಸಹಕಾರಿ ಸಂಘಕ್ಕೆ ಒಲಿದ ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ

ಬಂಟ್ವಾಳ : ದಿನಾಂಕ 24 ಡಿಸೆಂಬರ್ 2023 ರಂದು ಬೆಂಜನಪದವು ಶುಭಲಕ್ಷ್ಮೀ ಅಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಸುಸಂದರ್ಭದಲ್ಲಿ ಸಜಿಪ ಮುನ್ನೂರು ಮೂರ್ತೆದಾರ ಸೇವಾ ಸಹಕಾರಿ ಸಂಘಕ್ಕೆ ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ 2023 ಮಡಿಲೇರಿಸುವ ಶುಭ ಘಳಿಗೆ ಓದಗಿಬಂತು. ಹಿಂದುಳಿದ ವರ್ಗಗಳ ಹಾಗೂ ಮೂರ್ತೆದಾರರ ಆರ್ಥಿಕ ಬೆಳವಣಿಗೆ, ಮಹಿಳಾ ಸಬಲೀಕರಣ ಹಾಗೂ ಸಮಾಜದ ಅಶಕ್ತ ಕುಟುಂಬಗಳನ್ನು ಗುರುತಿಸಿ, ಅನಾರೋಗ್ಯ ಪೀಡಿತರಿಗೆ ಆರ್ಥಿಕ ನೆರವು, ವಿದ್ಯಾ ನಿಧಿ ದತ್ತುಸ್ವೀಕಾರ, ಹೀಗೆ ಹತ್ತು ಹಲವು ಮಜಲುಗಳ […]

Read More

ಕೆ.ಚಿತ್ತರಂಜನ್ ಗರೋಡಿ ಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ

ಬಂಟ್ವಾಳ : ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದ ಅನನ್ಯ ಸೇವೆ ಹಾಗೂ ಕಂಕನಾಡಿ ಗರಡಿ ಕ್ಷೇತ್ರ ಅಧ್ಯಕ್ಷರಾಗಿ ನಿಸ್ವಾರ್ಥವಾಗಿ ಸಲ್ಲಿಸಿದ ಸೇವೆಯು ಗರಡಿಯ ಮೂಲ ಬೆಳವಣಿಗೆಗೆ ಕಾರಿಣಿಕರ್ತರೆಂದು ಗುರುತಿಸಿ ಬಂಟ್ವಾಳದ ಬೆಂಜನಪದವು ಶುಭಲಕ್ಷೀ ಅಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದಲ್ಲಿ 2023 ನೇ ಸಾಲಿನ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಾರಂಭದ ಉದ್ಘಾಟಕರಾದ ಪದ್ಮರಾಜ್.ಆರ್, ಕೇಂದ್ರ ಸಮಿತಿ ಅಧ್ಯಕ್ಷರು ರಾಜೇಶ್.ಬಿ, ನಾರ್ದನ್ ಸ್ಲೈ ನಿರ್ದೇಶಕರಾದ ಕೃತೀನ್ ಅಮೀನ್, ರಾಣಿ ಅಬ್ಬಕ್ಕ […]

Read More

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ. ಪೂಜಾರಿ

ಮಂಗಳೂರು :- ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾಗಿ ಹರೀಶ್ ಕೆ ಪೂಜಾರಿ ಆಯ್ಕೆಯಾಗಿದ್ದಾರೆ. ಒಂದನೇ ಉಪಾಧ್ಯಕ್ಷರಾಗಿ ಲೋಕೇಶ್ ಕೋಟ್ಯಾನ್ ಕುಳೂರು, ಎರಡನೇ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು, ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಚಂದ್ರ ಡಿ.ಕೆ, ಕೋಶಾಧಿಕಾರಿಯಾಗಿ ಹರೀಶ್.ವಿ ಪಚ್ಚನಾಡಿ ಜೊತೆ ಕಾರ್ಯದರ್ಶಿಯಾಗಿ ರೇಖಾ ಗೋಪಾಲ, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ ನಯನಾ ರಮೇಶ್, ಸಾಂಸ್ಕೃತಿಕ ನಿರ್ದೇಶಕರಾಗಿ ಹರೀಶ್ ಸುವರ್ಣ ಬೆಳ್ತಂಗಡಿ, ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರಾಗಿ ಮೋಹನ್ ಮಾಡೂರು, ಮಹಿಳಾ ಸಂಘಟನಾ ನಿರ್ದೇಶಕರಾಗಿ […]

Read More

ಯುವವಾಹಿನಿಯ ಧ್ಯೇಯವನ್ನು ವಿಭಿನ್ನವಾಗಿ ಬಿಂಬಿಸಿದ ದೃಶ್ಯ

ಮೂರು ಸ್ತಂಭಗಳಂತೆ ಯುವವಾಹಿನಿಯ ಮೂಲ ಪರಿಕಲ್ಪನೆಯ ವಿದ್ಯೆ, ಉದ್ಯೋಗ, ಸಂಪರ್ಕದ ನೆಲೆಯಲ್ಲಿ ಸದೃಢಗೊಂಡ ಆತ್ಮವಿಶ್ವಾಸದ ಭರವಸೆಯ ಬೆಳಕಿನ ಮೂರು ಹಸ್ತಕೃತಿಗಳು ಪರಿಭ್ರಮಿಸುವ ವಿಶ್ವದ ಭೂಪಟದಲ್ಲಿ ಜಗದ ಅಂಧಕಾರ ತಮವನ್ನು ಕಳೆದು ಸುಜ್ಞಾನದ ದೀವಿಗೆ ಬೆಳಗಿ ಪಸರಿಸಿದ ವಿಶ್ವಗುರು ಪರಮಪೂಜ್ಯ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಅಳವಡಿಸಿಕೊಂಡು ಸರ್ವರು ಏಕತಾಭಾವದಿ ಒಗ್ಗಟ್ಟಾಗಿ ಸಮಾಜ ಶ್ರೇಯೋನ್ನಾತಿಗೆ ಶ್ರಮಿಸೋಣ ಎನ್ನುವ ತವಕದ ಹೆಬ್ಬಯಕೆಯ ಒಂದು ವಿಭಿನ್ನ ಕಲ್ಪನಾತೀತ ಫಲಶ್ರುತಿಗೆ. ನೈಜತೆಯ ದರ್ಶನ … ಯುವವಾಹಿನಿ ಪ್ರತಿರೂಪದ ಕೈಕನ್ನಡಿಯಂತಿರುವ ಧ್ಯೇಯವನ್ನು ಶಕ್ತಿಯುತವಾಗಿ ಕಟ್ಟಬೇಕೆಂದು […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!