10-08-2014, 11:34 AM
ಆಡು ಮುಟ್ಟದ ಸೊಪ್ಪಿಲ್ಲ ಎನ್ನುವ ಮಾತೊಂದು ಕನ್ನಡದಲ್ಲಿ ಚಾಲ್ತಿಯಲ್ಲಿದೆ, ಆಡಿಗೆ ಎಲ್ಲಾ ರೀತಯ ಸೊಪ್ಪೂ ರುಚಿಸುತ್ತದೆ ಮಾತ್ರವಲ್ಲದೆ ಅಂತಹ ವಿಶೇಷ ಗುಣವನ್ನೂ ಅದು ಹೊಂದಿದೆ.ಬಹುಷ ಸಾಹಿತ್ಯ ಸಾಂಸ್ಕøತಿಕ, ಶೈಕ್ಷಣಿಕ, ಕ್ರೀಡೆ ಮತ್ತು ತರಬೇತಿ ಹೀಗೆ ಕ್ರೀಯಾಶೀಲತೆಯ ಬಹುಮುಖಗಳನ್ನು ತನ್ನೊಬ್ಬನೊಳಗೆ ಹುದುಗಿಸಿಕೊಂಡು ಒತ್ತಡದ ಜೀವನದ ನಡುವೆಯೂ ಪಾದರಸದಂತೆ ಕೆಲಸ ಮಾಡುತ್ತಿರುವ ವ್ಯಕ್ತಿ ನರೇಂದ್ರ ಕುಮಾರ್ ಕೋಟ. ತಾನು ನಿರ್ವಹಿಸುತ್ತಿರುವ ಶಿಕ್ಷಕ ವೃತ್ತಿಯನ್ನು ವೃತ್ತಿ ಎಂದು ಕೊಂಡು ದುಡಿಯದೆ ಅದು ನನ್ನ ಜೀವನದಲ್ಲಿ ದೇವರು ನೀಡಿದ ಕರ್ತವ್ಯ ಎನ್ನುವ ರೀತಿಯಲ್ಲಿ […]
Read More
10-08-2014, 11:33 AM
ಸೀಳು ತುಟಿ ಸಮಸ್ಯೆಯವರ ಆಶಾಕಿರಣ ಡಾ. ಅಶಿತ್ ಎಂ.ವಿ. ಉಪ್ಪಿನಂಗಡಿಯ ರಾಜ್ಮಹಲ್ ಎಂ. ವರದ ರಾಜ್ ಮತ್ತು ವಿಮಲಾ ವರದರಾಜ್ ಇವರ ಪುತ್ರರಾಗಿರುವ ಡಾ. ಅಶಿತ್ ಎಂ.ವಿ. ಇವರು ಶಿಕ್ಷಣ ರಂಗದ ಅದ್ವಿತೀಯ ಸಾಧಕ, ತನ್ನ ಪ್ರಾಥಮಿಕ ಹಂತದ ಶಿಕ್ಷಣದ ಸಮಯದಲ್ಲೇ ಸಾಧನೆಯನ್ನು ತೋರಿರುವ ಶ್ರೀಯುತರು ಪ್ರಸ್ತುತ ದಂತ ವೈದ್ಯಕೀಯ ವಿಭಾಗದಲ್ಲಿ ಎಂಡಿಎಸ್ ಪದವಿಯನ್ನು ಪಡೆದಿದ್ದಾರೆ, ವೈದ್ಯಕೀಯ ರಂಗದಲ್ಲಿ ಹೊಸತನಗಳ ಪ್ರಯೋಗಕ್ಕೆ ಸದಾ ತುಡಿಯುತ್ತಾ ಈ ಮೂಲಕದ ಪ್ರಯತ್ನವನ್ನೂ ನಡೆಸುತ್ತಿರುವ ಅಶಿತ್ ಅವರು ಸೀಳು ತುಟಿ ಸಮಸ್ಯೆಯಿಂದ […]
Read More
10-08-2014, 11:02 AM
ಸದಾ ಹಸನ್ಮುಖಿ, ಕ್ರಿಯಾ ಶೀಲ ನಡಿಗೆ, ಮೆಲು ಮಾತು, ಹಿತವಾದ ನುಡಿ, ಬಿಳಿ ಪಂಚೆ, ಬಿಳಿ ಅಂಗಿ ಇವಷ್ಟೇ ಅವರ ಆಸ್ತಿ. ಆದರೆ ಸಾಹಿತ್ಯದಲ್ಲಿ ಅವರದ್ದು ದೈತ್ಯ ಪ್ರತಿಭೆ. ತಿಮ್ಮಪ್ಪ ಪೂಜಾರಿಯವರು ಮೂಲತಃ ಜೆಪ್ಪಿನಮೊಗರು ನಿವಾಸಿ. ಈ ನಾಡು ಕಂಡ ಅಪರೂಪದ ಸಾಹಿತಿ, ತುಳು ಭಾಷೆಯಲ್ಲಿ ಎರಡು ಕೃತಿಗಳನ್ನು ಪ್ರಕಟಿಸಿದ್ದು ಇನ್ನೆರಡು ಕೃತಿಗಳನ್ನು ಪ್ರಕಟಣೆಗೆ ಸಿದ್ಧ ಪಡಿಸಿರುವ ತಿಮ್ಮಪ್ಪ ಪೂಜಾರಿಯವರು ತುಳು ಭಾಷೆಯಲ್ಲಿ ಸಾಕಷ್ಟು ಹಿಡಿತವನ್ನು ಹೊಂದಿದ್ದಾರೆ. ಗ್ರಾಮ್ಯವಾದ ಮತ್ತು ಅಷ್ಟೇ ಸರಳವಾದ ಭಾಷಾ ಪ್ರಯೋಗದ ಮೂಲಕ […]
Read More
10-08-2014, 10:41 AM
ಇವರ ವ್ಯಕ್ತತ್ವವೇ ವಿಶೇಷ, ತಾನೇನು?, ತನ್ನ ಪ್ರತಿಭೆ ಎಂತಹುದು ಎನ್ನುವ ಯಾವ ಸುಳಿವನ್ನೂ ನೀಡದೆ, ರಾಜ್ಯ ಮತ್ತು ರಾಷ್ಟ್ರ ಮನ್ನಣೆಯೊಂದಿಗೆ ಬೆಳ್ಳಿ ಪದಕವನ್ನು ತನ್ನ ನಿಷ್ಕಾಮ ಸೇವೆಯ ಗೃಹರಕ್ಷಕ ದಳದ ಪ್ರಥಮ ಚಿಕಿತ್ಸೆ ತರಬೇತಿಗಾಗಿ ಪಡೆದವರು. ಅಲ್ಲದೆ ತನ್ನ ನಾಯಕತ್ವದ ತಂಡವು ಇಲಾಖೆಯ ವಿವಿಧ ಚಟುವಟಿಕೆಗಳ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದ ಕಂಚಿನ ಪದಕವನ್ನು ಪಡೆದಿರುತ್ತದೆ. ಯುವವಾಹಿನಿಯ ಜೊತೆಗೆ ಹದಿನೈದಕ್ಕೂ ಅಧಿಕ ವರುಷದ ಸೇವೆಯನ್ನು ಯಾವುದೇ ಕುಂದು ಇರದ ರೀತಿಯಲ್ಲಿ ನೀಡುತ್ತಾ ಬಂದರೂ, ತಾನು ಪಡೆದ ಪುರಸ್ಕಾರಗಳ ಬಗ್ಗೆ ಪ್ರಚಾರವನ್ನೇ […]
Read More
10-08-2014, 10:30 AM
ಶೈಕ್ಷಣಿಕ ಸಾಧಕಿಯಾಗಿ, ಉಪನ್ಯಾಸಕಿಯಾಗಿ, ಸಂಪನ್ಮೂಲ ವ್ಯಕ್ತಿಯಾಗಿ ತನ್ನ ಚಾತುರ್ಯವನ್ನು ಮರೆದಿರುವ ಮತ್ತು ಪ್ರಸ್ತುತ ಸಂಶೋಧನಾ ವಿಭಾಗದಲ್ಲಿ PhD(ಡಾಕ್ಟರೇಟ್) ಪದವಿಯನ್ನು ಪಡೆದಿರುವ ಡಾ| ಮಮತಾ ಬಾಲಚಂದ್ರ ಇವರ ಶೈಕ್ಷಣಿಕ ಸಾಧನೆ ಅಪೂರ್ವವಾದುದು. ಕಂಪ್ಯೂಟರ್ ವಿಜ್ಞಾನಕ್ಕೆ ಸಂಬಂಧಿಸಿ ಮಣಿಪಾಲ್ ಇನ್ಸಿಟ್ಯೂಟ್ ಆಫ್ ಟೆಕ್ನೋಲಜಿ ಸಂಸ್ಥೆಯಲ್ಲಿ ಕಳೆದ ಹದಿನಾಲ್ಕು ವರುಷದಿಂದ ದುಡಿಯುತ್ತಿರುವ ಮಮತಾ ಬಾಲಚಂದ್ರ ಅವರು ಅನುಭವದ ಗನಿ ಎಂದರೂ ತಪ್ಪಾಗಲಾರದು. ಪ್ರಸ್ತುತ ಇಲ್ಲಿ (MIT) ಅಸೋಸಿಯೇಟ್ ಪ್ರೊಫೆಸರ್ ಆಗಿ ಸೇವೆ ಸಲ್ಲ್ಲಿಸುತ್ತಿರುವ ಇವರು ಉಪ್ಪೂರು ನಿವಾಸಿ ಶ್ರೀ ಆನಂದ […]
Read More
08-08-2014, 10:41 AM
ಬಂಟ್ವಾಳ ತಾಲೂಕು ಕಳ್ಳಿಗೆÀ ಗ್ರಾಮದ ಮುಂಡಾಜೆ ನಿವಾಸಿಯಾಗಿರುವ ಚೇತನ್ ಮುಂಡಾಜೆ ಇವರು ವೃತ್ತಿಯಲ್ಲಿ ಶಿಕ್ಷಕರಾದರೂ ಪ್ರವೃತ್ತಿಯಲ್ಲಿ ಉದಯೋನ್ಮಖ ಸಾಹಿತಿಯೂ ಹೌದು, ಕಲಿಕೆ, ಅಧ್ಯಯನ, ಭಾಗವಹಿಸುವಿಕೆ ಇವು ಇವರ ಆಸಕ್ತಿಯ ಕ್ಷೇತ್ರವೂ ಹೌದು. 2009ರಲ್ಲಿ ‘ಪಿಂಗಾರ’ ಎಂಬ ಕವನ ಸಂಕಲನವನ್ನು ಪ್ರಕಟಿಸಿರುವ ಶ್ರೀಯುತರು 2008-09ರಲ್ಲಿ ‘ಮಂಗಳಗಂಗೆ’ ಎಂಬ ಸಂಪಾದಿತ ಕೃತಿಯನ್ನು ಅನಾವರಣಗೊಳಿಸಿದ್ದಾರೆ. ಆಧುನಿಕ ಕನ್ನಡ ಕಾವ್ಯದಲ್ಲಿ ಬೆಂದ್ರೆಯವರ ಅನನ್ಯತೆ, ಮಂಗಳೂರ ಕ್ರಾಂತಿ ಕೆಲವು ಟಿಪ್ಪಣಿಗಳು, ಬೂತಾರಾಧನೆಯಲ್ಲಿ ನುಡಿಗಟ್ಟು, ಕೆ.ಪಿ ಪೂರ್ಣಚಂದ್ರ ತೇಜಸ್ವಿಯವರ ಸೀರೆಯಂಗಡಿಯಲ್ಲಿ ಮಾದರಿಗೆ ಪ್ರತಿಮೆ ಕವನ ವಿಶ್ಲೇಷಣೆ, […]
Read More
10-07-2014, 11:12 AM
ಶ್ರೀಮತಿ ಎಂ. ಜಾನಕಿ ಬ್ರಹ್ಮಾವರ ಕನ್ನಡ ಮತ್ತು ತುಳು ಭಾಷೆಯಲ್ಲಿ ತಮ್ಮ ಚಾತುರ್ಯವನ್ನು ಮೆರೆಸಿದ ಮೇರು ಸಾಹಿತಿಗಳಲ್ಲಿ ಶ್ರೀಮತಿ ಜಾನಕಿ ಬ್ರಹ್ಮಾವರ ಅವರೂ ಒಬ್ಬರು. ಭಾಷೆ, ಬರಹ ಮತ್ತು ಕಥಾ ಅಭಿವಕ್ತಿಯಲ್ಲಿ ಆಳಕ್ಕೆ ಇಳಿದು ಓದುಗನ ಮನಸ್ಸನ್ನು ಮುಟ್ಟುವಂತೆ, ತಟ್ಟುವಂತೆ ಮಾಡಿ ತನ್ನ ಬರಹದ ಮೂಲಕವೇ ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಿರುವ ಶ್ರೀಮತಿ ಎಂ. ಜಾನಕಿ ಬ್ರಹ್ಮಾವರ ಅವರು ಈ ನಾಡುಕಂಡ ಅಪೂರ್ವ ಸಾಹಿತಿಗಳಲ್ಲಿ ಅಗ್ರ ಪಂಕ್ತಿಯಲ್ಲಿ ಬರುವವರು. ಎಂ.ಎ., ಬಿ.ಎಡ್. ಪದವೀಧರರಾಗಿದ್ದು ಬ್ರಹ್ಮಾವರದ ಎಸ್.ಎಮ್.ಎಸ್. ಪದವಿಪೂರ್ವ […]
Read More
04-08-2013, 11:52 AM
ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಉಪಸಮಿತಿ “ವಿದ್ಯಾನಿಧಿ” ಸಮಿತಿಯು ಮೂಲಧ್ಯೇಯಕ್ಕೆ ಅನುಗುಣವಾಗಿ, ನಮ್ಮ ಸಮಾಜದಲ್ಲಿ ಆರ್ಥಿಕವಾಗಿ ಬಡತನದ ಕಾರಣದಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲಾಗದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಆರ್ಥಿಕ ಸಹಾಯವನ್ನು ನೀಡುವುದರ ಜೊತೆಗೆ ಅವರ ವ್ಯಕ್ತಿತ್ವ ವಿಕಸನ, ಶೈಕ್ಷಣಿಕ ಮಾಹಿತಿಗೆ ಪೂರಕವಾದ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಇದಲ್ಲದೆ ಈ ವಿದ್ಯಾರ್ಥಿಗಳ ಪೋಷಕರಿಗೂ ಉಪಯುಕ್ತವಾದ ಮಾಹಿತಿ ಶಿಬಿರಗಳನ್ನು ನಡೆಸುತ್ತಾ ಬಂದಿದೆ. ಈ ಹಿನ್ನೆಲೆಯೊಂದಿಗೆ ಯುವವಾಹಿನಿ (ರಿ) ವಿದ್ಯಾನಿಧಿ ಉಪಸಮಿತಿಯ 2012-13ನೇ ಸಾಲಿನ ಕಾರ್ಯಕ್ರಮಗಳ ಸಂಕ್ಷಿಪ್ತ ವಿವರ ಈ […]
Read More
04-11-2012, 6:41 AM
ಪ್ರಥಮ ವಾರ್ಷಿಕ ಸಮಾವೇಶ (24-01-1988) ಉದ್ಘಾಟಕರು : ಶ್ರೀ ನಾರಾಯಣ ಕೊಂಚಾಡಿ, ಡಿವಿಜನಲ್ ಮ್ಯಾನೇಜರ್, ವಿಜಯಾ ಬ್ಯಾಂಕ್, ಮಂಗಳೂರು. ವಿಚಾರ ಸಂಕಿರಣ : ಶ್ರೀ ಅಡ್ವೆ ರವೀಂದ್ರ ಪೂಜಾರಿ (ಸಾಮಾಜಿಕ ಬದಲಾವಣೆಯಲ್ಲಿ ಯುವಜನರ ಪಾತ್ರ) : ಡಾ| ಶಿವರಾಜನ್ (ನಾರಾಯಣ ಗುರು ತತ್ವಗಳು ಇಂದಿಗೆ ಪ್ರಸ್ತುತ ಎಷ್ಟು?) : ಶ್ರೀ ಮೋಹನ್ ಕೋಟ್ಯಾನ್ (ಹಿಂದುಳಿದ ವರ್ಗದವರ ಸಂಘಟನೆಯ ಅಗತ್ಯ) : ಶ್ರೀ ಬಿ. ತಮ್ಮಯ್ಯ (ಗ್ರಾಮೀಣ ಪ್ರದೇಶದಲ್ಲಿ ನಾವೇಕೆ ಹಿಂದುಳಿದಿದ್ದೇವೆ- ಪರಿಹಾರ) : ಡಾ| ಎನ್.ಟಿ. ಅಂಚನ್, […]
Read More
04-11-2012, 6:08 AM
ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕತೆಗಾರರಾಗಿ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ನಿರ್ದೇಶಕರಾಗಿ, ಅಂಕಣ ಬರಹಗಾರರಾಗಿ, ಕನ್ನಡ, ತುಳು ಚಿತ್ರಗಳ ನಿರ್ದೇಶಕರಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದು ಹೋದ ನಮ್ಮ ನಾಡಿನ, ಬಿಲ್ಲವರ ಹೆಮ್ಮೆಯ ಕಣ್ಮಣಿ, ಧೀಮಂತ ಸಾಹಿತಿ ದಿ| ವಿಶುಕುಮಾರ್ರವರ ಸ್ಮರಣಾರ್ಥ ಯುವವಾಹಿನಿ (ರಿ) ಕೇಂದ್ರ ಸಮಿತಿಯು ‘ವಿಶುಕುಮಾರ್ ಪ್ರಶಸ್ತಿ’ ಯನ್ನು ಹುಟ್ಟುಹಾಕಿ ಕಳೆದ ಹತ್ತು ವರ್ಷಗಳಿಂದ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ. ನಮ್ಮ ಸಾಹಿತಿ ಮಿತ್ರರುಗಳ ಒತ್ತಾಸೆ, ಸಲಹೆಗಾರರ ಮಾರ್ಗದರ್ಶನದಲ್ಲಿ ’ವಿಶುಕುಮಾರ್ ದತ್ತಿನಿಧಿ’ಯನ್ನು ಸ್ಥಾಪಿಸಿ […]
Read More