Yuvavahini

ವಿದ್ಯೆ

ಯುವವಾಹಿನಿ ವಿದ್ಯಾ ಸ್ಫೂರ್ತಿ- 2022

ಕಡಬ :- ದಿನಾಂಕ 12.03.2022 ರಂದು ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ SSLC ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಭೇತಿ ಕಾರ್ಯಗಾರ “ವಿದ್ಯಾ ಸ್ಪೂರ್ತಿ” ಕಾರ್ಯಕ್ರಮವು ಕಡಬ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ “ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ SSLC ಯ ಅಂಕಗಳು ಮಾನ ದಂಡವಾಗುತ್ತದೆ ಹಾಗೆಯೇ ಈ ಅದ್ಭುತ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು, ಮುಂದಿನ ಪರೀಕ್ಷೆಯಲ್ಲಿ ಉತ್ತಮ ಅಂಕ […]

Read More

ಶೈಕ್ಷಣಿಕ ಮಾರ್ಗದರ್ಶನ ಶಿಬಿರ

ಮುಲ್ಕಿ :- ದಿನಾಂಕ 08.03.2022 ರಂದು ಯುವವಾಹಿನಿ (ರಿ.) ಮುಲ್ಕಿ ಘಟಕದ ವತಿಯಿಂದ ಮುಲ್ಕಿಯ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯ ಎಸ್.ಎಸ್.ಎಲ್.ಸಿ ವಿಧ್ಯಾರ್ಥಿಗಳಿಗೆ ಶಾಲೆಯ ಸಭಾಂಗಣದಲ್ಲಿ ಜೇಸಿ ರಾಷ್ಟ್ರೀಯ ತರಬೇತುದಾರರಾದ ರಾಜೇಂದ್ರ ಭಟ್ ರವರಿಂದ ಶೈಕ್ಷಣಿಕ ಮಾರ್ಗದರ್ಶನ ಶಿಬಿರವು ನಡೆಯಿತು. ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತಾನಾಡಿದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ರಾದ ಉದಯ ಅಮೀನ್ ಮಟ್ಟು”ನನ್ನ ಮಾತೃ ಸಂಸ್ಥೆ ಯಾಗಿರುವ ಮುಲ್ಕಿ ಘಟಕವು ನಮ್ಮ ಸಂಸ್ಥೆಯ ಧೇಯೋದ್ದೇಶದಂತೆ ವಿದ್ಯೆಗೆ ಹೆಚ್ಚಿನ ಪ್ರಾಧಾನ್ಯತೆಯನ್ನು ನೀಡುತ್ತಾ […]

Read More

ಸಿದ್ಧತೆ ಮತ್ತು ಬದ್ಧತೆಯಿಂದ ಯಶಸ್ಸು ಸಾಧ್ಯ : ಸುಧಾಕರ ಕಾರ್ಕಳ

ಅಳಿಯೂರು : ಸಿದ್ದತೆ ಮತ್ತು ಬದ್ಧತೆಯಿಂದ ಯಶಸ್ಸು ಸಾಧ್ಯ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಪ್ರಚಾರ ನಿರ್ದೇಶಕರು ಹಾಗೂ ಜೇಸೀ ರಾಷ್ಟ್ರೀಯ ತರಬೇತುದಾರರಾದ ಸುಧಾಕರ ಕಾರ್ಕಳ ಅಭಿಪ್ರಾಯ ಪಟ್ಟರು. ಅವರು ದಿನಾಂಕ 18.02.2022 ರಂದು ಯುವವಾಹಿನಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ ಅಳಿಯೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಜರುಗಿದ ಪರೀಕ್ಷಾಪೂರ್ವ ತರಬೇತಿ ಕಾರ್ಯಾಗಾರ ನಡೆಸಿಕೊಟ್ಟು ಮಾತನಾಡಿದರು ಶಿಕ್ಷಣ ಸಂಯೋಜಕರಾದ ಸ್ಮಿತಾ ಮಿರಾಂದ ದೀಪ ಬೆಳಗುವುದರ ಮೂಲಕ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರದ ಸರಣಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಲೆಯ […]

Read More

ಯುವವಾಹಿನಿ ಶಿಕ್ಷಣ ಸ್ಪೂರ್ತಿ-2022

ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕದ ನೇತ್ರತ್ವದಲ್ಲಿ ಪುತ್ತೂರಿನ ಆಯ್ದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ “ಯುವವಾಹಿನಿ ಶಿಕ್ಷಣ ಸ್ಪೂರ್ತಿ-2022′ ದಿನಾಂಕ 06.02.2022 ಕಾರ್ಯಕ್ರಮ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಎಸ್. ಎಸ್. ಎಲ್. ಸಿ. ಬಹಳ ಮುಖ್ಯವಾದ ಘಟ್ಟ. ಪರೀಕ್ಷೆಯ ಭಯವನ್ನು ಹೋಗಲಾಡಿಸಲು ಪುತ್ತೂರು ಯುವವಾಹಿನಿ ಘಟಕ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಅತ್ಯುತ್ತಮವಾದುದು. […]

Read More

IAS KAS ಮಾಹಿತಿ ಶಿಬಿರ

  ದಿನಾಂಕ 20/11/2019ರಂದು ಶ್ರೀ ಗೋಕರ್ಣ ನಾಥ ಪಿ ಯು ಕಾಲೇಜಿನಲ್ಲಿ ಮಕ್ಕಳಿಗೆ IAS, KA S ಮಾಹಿತಿ ಶಿಬಿರವನ್ನು ಸರ್ವಜ್ಞ IAS KAS ಅಕಾಡಮಿಯ ನಿರ್ದೇಶಕರಾದ ಸುರೇಶ್ ಇವರು ನಡೆಸಿಕೊಟ್ಟರು.

Read More

ಪುಟಾಣಿ ಮಕ್ಕಳಿಗಾಗಿ “ಮಕ್ಕಳ ಹಬ್ಬ-2019”

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮ ಪುಟಾಣಿ ಮಕ್ಕಳಿಗಾಗಿ “ಮಕ್ಕಳ ಹಬ್ಬ” ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂಚಿನಡ್ಕ ಇಲ್ಲಿ ದಿನಾಂಕ 17/11/2019 ರ ಭಾನುವಾರ ಮುಂಜಾನೆ ಉದ್ಘಾಟನೆಯೊಂದಿಗೆ ಆರಂಭಗೊಂಡು ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳ ನಂತರ ಅಪರಾಹ್ನ ಸಮಾರೋಪ ಕಾರ್ಯಕ್ರಮದೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಮುಂಜಾನೆಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಇವರು ವಹಿಸಿಕೊಂಡಿದ್ದರು, ಸಮಾರಂಭದ ಉದ್ಘಾಟಕರಾಗಿ ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಸಾದಿಯ ಬಾನು, […]

Read More

ಮಕ್ಕಳ ದಿನಾಚರಣೆ

ಯುವವಾಹಿನಿ ಮಾಣಿ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಸಂಭ್ರಮ ನವೆಂಬರ್ 14… ಈ ದಿನ ಪ್ರತಿಯೊಬ್ಬರ ಬದುಕಿನಲ್ಲೂ ಅಮೂಲ್ಯವಾಗಿದ್ದು. ಯಾಕೆಂದರೆ, ಇದು ಬರೀ ದಿನ ಅಲ್ಲ. ಇದು ನೆನಪಿನ ಮೆರವಣಿಗೆ… ಮಕ್ಕಳ ದಿನಾಚರಣೆ ಎಂದರೇನೇ ಹಾಗೆ… ಚಿಣ್ಣರಿಗಂತೂ ಇದು ಅಕ್ಷರಶಃ ಹಬ್ಬ. ದೊಡ್ಡವರಿಗೆ ಬಾಲ್ಯದ ದಿನಗಳನ್ನು ಮತ್ತೆ ಮೆಲುಕು ಹಾಕುವ ಕ್ಷಣ… ಇದೇ ಕಾರಣಕ್ಕೆ ಯುವವಾಹಿನಿ ಮಾಣಿ ಘಟಕದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅನಂತಾಡಿ ಹಾಗೂ ಬಾಬಣಕಟ್ಟೆ ಆಂಗನವಾಡಿ ಕೇಂದ್ರಕ್ಕೆ ತೆರಳಿ ಮಕ್ಕಳಿಗೆ ಸಿಹಿಹಂಚಿ, ಪಠ್ಯ […]

Read More

ಶೈಕ್ಷಣಿಕ ದತ್ತು ಸ್ವೀಕಾರ – ಪ್ರತಿಭಾ ಪುರಸ್ಕಾರ ‘ಪ್ರೇರಣಾ -2019’

    ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್‌ನಿಂದ ಶೈಕ್ಷಣಿಕ ದತ್ತು ಸ್ವೀಕಾರ – ಪ್ರತಿಭಾ ಪುರಸ್ಕಾರ ‘ಪ್ರೇರಣಾ -2019’ ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯದ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶೈಕ್ಷಣಿಕ ದತ್ತು ಸ್ವೀಕಾರ ವಿದ್ಯಾರ್ಥಿ ವೇತನ ವಿತರಣೆ ಅಕ್ಷರ ಪುರಸ್ಕಾರ ಮತ್ತು ಪ್ರತಿಭಾ ಪುರಸ್ಕಾರ – ಪ್ರೇರಣಾ -2019 ಕಾರ್ಯಕ್ರಮವು ನ.11 ರಂದು ನಡೆಯಿತು. ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಸಲಹೆಗಾರರಾದ  ಲೋಕಯ್ಯ ಪೂಜಾರಿಯವರು ಕಾರ್‍ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ವಿದ್ಯಾನಿದಿ ಟ್ರಸ್ಟ್ […]

Read More

ವ್ಯಕ್ತಿತ್ವ ವಿಕಸನ ಮಾಹಿತಿ ಶಿಬಿರ

  ದಿನಾಂಕ 2/11/2019 ರಂದು ಶ್ರೀ ಗೋಕರ್ಣನಾಥ ಬಿ ಎಡ್ ಕಾಲೇಜು ಗಾಂಧಿನಗರ ಇಲ್ಲಿ ಬಿ ಎಡ್ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಮಾಹಿತಿ ಶಿಬಿರ ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ದೀಪ್ತಿ ನಾಯಕ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷರಾದ ಉಮಾಶ್ರೀಕಾಂತ್ ಸ್ವಾಗತಿಸಿದರು. ನಂತರ ಸಂಪನ್ಮೂಲ ವ್ಯಕ್ತಿಯಾದ ಅಲೋಸಿಯಸ್ ಕಾಲೇಜಿನ assistant professor, ಎಂ ಸಿ ಎ department ಹಾಗೂ ಮಾಜಿ ಅಧ್ಯಕ್ಷರು ಮಂಗಳೂರು ಘಟಕದ ರಾಕೇಶ್ ಕುಮಾರ್ ಇವರು ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ವಿವಿಧ ಕಥೆಗಳನ್ನು , ಚಟುವಟಿಕೆಗಳನ್ನು ನೀಡುತ್ತಾ […]

Read More

ಉಚಿತ ಐಡಿ ಕಾರ್ಡ್ ವಿತರಣೆ

ಕಡಬ : ವಿದ್ಯೆ,ಉದ್ಯೋಗ ಸಂಪರ್ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ(ರಿ) ಕಡಬ ಘಟಕದ ವತಿಯಿಂದ ನ.೧ರಂದು ಕೋಡಿಂಬಾಳ ಸ.ಮಾ.ಹಿ.ಪ್ರಾ.ಶಾಲಾ ಮಕ್ಕಳಿಗೆ ಉಚಿತ ಐಡಿ ಕಾರ್ಡ್ ವಿತರಿಸಲಾಯಿತು. ಆರ್ಯಭಟ ಪುರಸ್ಕೃತ ರವಿ ಕಕ್ಕೆಪದವು ಅವರು ಶಾಲಾ ಮಕ್ಕಳಿಗೆ ಐಡಿಕಾರ್ಡನ್ನು ವಿತರಿಸಿ ಸಂಘಟನಾತ್ಮಕವಾಗಿ ಬೆಳೆಯುತ್ತಿರುವ ಯುವವಾಹಿನಿ ಸಂಘಟನೆಯು ಸಮಾಜಮುಖಿಯಾಗಿ ಅವಿರತ ಶ್ರಮಿಸುತ್ತಿದ್ದು ವಿವಿಧ ಜನಪರ ಕಾರ್ಯಗಳನ್ನು ಮಾಡುವ ಮೂಲಕ ಜನಸೇವೆಯೆ ಜನಾರ್ದನ ಸೇವೆ ಎಂದು ಎಲ್ಲರ ಶ್ರೇಯೋಬಿವೃದ್ಧಿಯಲ್ಲಿ ತೊಡಗಿಕೊಂಡಿದ್ದು ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡುವ ನಮ್ಮ ಸಂಘಟನೆ ಇಂದು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!