Yuvavahini

ಮೂಡಬಿದ್ರಿ

ಆಟಿದ ಕೂಟ – 2024

ಮೂಡುಬಿದ್ರಿ :ಯುವವಾಹಿನಿ (ರಿ) ಮೂಡುಬಿದ್ರಿ ಘಟಕದ ವತಿಯಿಂದ ಆಟಿದ ಕೂಟ – 2024 28-07.2024 ನೇ ಆದಿತ್ಯವಾರ ಸೃಷ್ಟಿ ಮಲ್ಟಿಪರ್ಪಸ್ ಸಭಾಂಗಣ ಕಡಲಕೆರೆ ಒಂಟಿಕಟ್ಟೆ ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕ ಅಧ್ಯಕ್ಷರು ಶಂಕರ್ ಎ.ಕೋಟ್ಯಾನ್ ವಹಿಸಿದ್ದರು. ತೆಂಗಿನ ಮರದ ಕೊಂಬಿಗೆ ಹಾಲೆರೆಯುವ ಮುಖಾಂತರ ಬಿಲ್ಲವ ಸಂಘದ ಮಾಜಿ ಅಧ್ಯಕ್ಷರು ಪದ್ಮಯ್ಯ ಬಿ. ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು. ಆಟಿದ ಮದಿಪು ನೀಡಲು ಆಗಮಿಸಿದ ಹಿರಿಯ ಯಕ್ಷಗಾನ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಸೀತಾರಾಮ್ ಕಟೀಲ್ […]

Read More

ಕಂಪ್ಯೂಟರ್ ಟೇಬಲ್ ವಿತರಣೆ

ಮೂಡುಬಿದ್ರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಮೂಡುಬಿದ್ರೆ ಘಟಕದ ವತಿಯಿಂದ ದಿ 18-07-2024ರಂದು ಮೂಡಬಿದ್ರೆಯ ಸರಕಾರಿ ಮೈನ್ ಶಾಲೆಗೆ ಅಗತ್ಯವಿರುವ ಕಂಪ್ಯೂಟರ್ ಟೇಬಲನ್ನು ಸದಸ್ಯರಾದ ಉಮೇಶ್ ಕೋಟ್ಯಾನ್ ಇವರ ಆರ್ಥಿಕ ನೆರವಿನ ಮುಖಾಂತರ ಅಧ್ಯಕ್ಷರಾದ ಶಂಕರ್ ಎ. ಕೋಟ್ಯಾನ್ ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ, ಮಾಜಿ ಅಧ್ಯಕ್ಷರಾದ ಸುಶಾಂತ್ ಕರ್ಕೇರ, ಕಾರ್ಯದರ್ಶಿ ಗಿರೀಶ್ ಕೋಟ್ಯಾನ್, ಸದಸ್ಯರಾದ ಉಮೇಶ್ ಕೋಟ್ಯಾನ್, ಹಾಗೂ ಬಿಲ್ಲವ ಸಂಘ ಮೂಡಬಿದ್ರೆಯ ಆಡಳಿತ ಕಮಿಟಿ […]

Read More

ಸಮವಸ್ತ್ರ ವಿತರಣೆ

ಮೂಡುಬಿದ್ರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಮೂಡುಬಿದಿರೆ ಘಟಕದ ವತಿಯಿಂದ ಮೂಡುಮಾರ್ನಾಡು ಅಂಗನವಾಡಿ ಶಾಲೆಯ 15 ಪುಟಾಣಿಗಳಿಗೆ ಉಚಿತ ಸಮವಸ್ತ್ರ ವಿತರಣೆಯ ಕಾರ್ಯಕ್ರಮವನ್ನು ಸದಸ್ಯರಾದ ಉಮೇಶ್ ಕೋಟ್ಯಾನ್ ಇವರ ಆರ್ಥಿಕ ನೆರವಿನ ಮುಖಾಂತರ ಅಧ್ಯಕ್ಷರಾದ ಶಂಕರ್ ಎ. ಕೋಟ್ಯಾನ್ ಇವರು ವಿತರಿಸಿ ಪುಟಾಣಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಗಿರೀಶ್ ಕೋಟ್ಯಾನ್, ಸದಸ್ಯರಾದ ಉಮೇಶ್ ಕೋಟ್ಯಾನ್ ಹಾಗೂ ಅಂಗನವಾಡಿಯ ಶಿಕ್ಷಕರು, ಮತ್ತು ಮಕ್ಕಳ ಪೋಷಕರು ಹಾಜರಿದ್ದರು.

Read More

ಕಂಪ್ಯೂಟರ್ ಟೇಬಲ್ ಹಸ್ತಾಂತರ

ಮೂಡುಬಿದ್ರೆ : ವಿದ್ಯೆ ಉದ್ಯೋಗ ಸಂಪರ್ಕ ಎಂಬ ಧ್ಯೇಯ ಉದ್ದೇಶವನ್ನು ಮುಂದಿಟ್ಟುಕೊಂಡು ಸಮಾಜಮುಖಿ ಸೇವಾಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ ದಿ 10-07-2024 ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಜ್ಯೋತಿನಗರ, ಮೂಡುಬಿದಿರೆ ಇಲ್ಲಿಗೆ ಕಲಿಕೆಗೆ ಅಗತ್ಯವಾಗಿರುವ ಎರಡು ಕಂಪ್ಯೂಟರ್ ಟೇಬಲ್ ನ್ನು ಹಸ್ತಾಂತರಿಸುವ ಕಾರ್ಯಕ್ರಮವು ನಡೆಯಿತು. ಶಾಲಾ ಮುಖ್ಯೋಪಾಧ್ಯಾಯನಿ ಅಪೋಲಿನ್ ಮೊನಿಶ್ ಇವರು ಘಟಕದ ಅಧ್ಯಕ್ಷರಾದ ಶಂಕರ್ ಎ. ಕೋಟ್ಯಾನ್, ಉಪಾಧ್ಯಕ್ಷರಾದ ಮುರಳೀಧರ್ ಕೋಟ್ಯಾನ್ ಹಾಗೂ ಪ್ರಭಾಕರ್ ಚಾಮುಂಡಿಬೆಟ್ಟ, ಕೋಶಾಧಿಕಾರಿ ಪ್ರತಿಭಾ ಸುರೇಶ್, ಕಾರ್ಯದರ್ಶಿ […]

Read More

ಉಚಿತ ವೈದ್ಯಕೀಯ ಶಿಬಿರವು ಹಳ್ಳಿಯ ಜನರ ಅತ್ಯುತ್ತಮ ಸಮಾಜ ಸೇವೆ : ಸುಚರಿತ ಶೆಟ್ಟಿ

ಮೂಡಬಿದ್ರೆ: ಹಳ್ಳಿ ಪ್ರದೇಶದಲ್ಲಿ ಬಡಜನರಿಗೆ ಆರೋಗ್ಯ ತಪಾಸಣಾ ಶಿಬಿರದಿಂದ ಬಹಳಷ್ಟು ಪ್ರಯೋಜನ ಸಿಗಲಿದ್ದು, ಯುವವಾಹಿನಿ ಹಾಗೂ ಇತರ ಸಂಸ್ಥೆಗಳು ಸೇರಿಕೊಂಡು ನಡೆಸುವ ಈ ಶಿಬಿರವು ಅತ್ಯುತ್ತಮ ಸಮಾಜಸೇವೆಯ ಭಾಗವಾಗಿದ್ದು, ಪ್ರತಿಯೊಬ್ಬರು ಇದರ ಪ್ರಯೋಜನ ಪಡೆಯಂತಾಗಲಿ ಎಂದು ಯುವವಾಹಿನಿ(ರಿ.) ಮೂಡಬಿದ್ರೆ ಘಟಕದ ವತಿಯಿಂದ ಹಾಗೂ ಶ್ರೀಶಾ ಸೌಹಾರ್ದ ಸಹಕಾರಿ ಸೊಸೈಟಿ ಮಂಗಳೂರು, ಜೆಸಿಐ ಭಾರ್ಗವ ಮುಂಡ್ಕೂರು, ಬಿಲ್ಲವ ಸಂಘ ಕಡಂದಲೆ – ಪಾಲಡ್ಕ, ಶ್ರೀ ನಾರಾಯಣ ಗುರು ಭಜನಾ ಮಂಡಳಿ ಕಡಂದಲೆ – ಪಾಲಡ್ಕ, ಶ್ರೀ ಸತ್ಯಸಾಯಿ ಬಾಲ ವಿಕಾಸ ಕೇಂದ್ರ […]

Read More

ಪರಿಶ್ರಮ ಹಾಗೂ ಶಿಸ್ತುಬದ್ಧ ಜೀವನದಿಂದ ಸಾಧನೆ ಸಾಧ್ಯ: ತಾರಾನಾಥ ಪೂಜಾರಿ

ಮೂಡಬಿದ್ರೆ: ಗುರುಗಳ ಹಿಂಬಾಲಕರಾಗಿ ಬದುಕಿದರೆ ಸಾಲದು, ಅದರೊಂದಿಗೆ ಗುರುಗಳ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಎಷ್ಟರಮಟ್ಟಿಗೆ ಅಳವಡಿಸಿಕೊಂಡಿದ್ದೇವೆ ಎಂಬುವುದನ್ನು ಅರಿವುದು ಮುಖ್ಯ ಎಂದು ರಾಜ್ಯ ಹೈಕೋರ್ಟಿನ ನಿರ್ದೇಶಿತ ಹಿರಿಯ ನ್ಯಾಯವಾದಿ ಇರುವೈಲು ತಾರನಾಥ ಪೂಜಾರಿ ರವರು ಹೇಳಿದ್ದಾರೆ. ಅರಿವು – 2024, ಸನ್ಮಾನ, ಯುವಸಿರಿ ಪ್ರಶಸ್ತಿ ಪುರಸ್ಕಾರ ಪ್ರಧಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ತಮ್ಮ ಅನಿಸಿಕೆಯನ್ನು ನೀಡಿದರು. ವಿದ್ಯೆಯ ಮೇಲೆ ಹಿಡಿದ ಸಾಧಿಸಲು ಎಷ್ಟು ಬುದ್ಧಿವಂತರಾದರೂ ಪ್ರಯೋಜನವಿಲ್ಲ. ಅದಕ್ಕಿಂತ ಮುಖ್ಯವಾಗಿ ಪರಿಶ್ರಮ, ಶಿಸ್ತು , ಪ್ರಯತ್ನ ಅಗತ್ಯ […]

Read More

ಕುಟುಂಬ ಸಮ್ಮಿಲನ

ಮೂಡುಬಿದಿರೆ: ಯುವವಾಹಿನಿಯ ತತ್ವ, ಉದ್ದೇಶಗಳನ್ನು ಸರಿಯಾಗಿ ಅರಿತು ನಮ್ಮ ಘಟಕದಿಂದ ಶಿಕ್ಷಣ ಆರೋಗ್ಯ, ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ. ಕಳೆದ ಜನವರಿಯಿಂದ ಸುಮಾರು 4 ಲಕ್ಷ ರೂ. ವೆಚ್ಚದಲ್ಲಿ 13 ಕಾರ್ಯಕ್ರಮಗಳನ್ನು ಮಾಡಿದ್ದೇವೆ. ಪ್ರಸಕ್ತ ಸಾಲಿನಲ್ಲಿ 83 ಹೊಸ ಸದಸ್ಯರು ಯುವವಾಹಿನಿಗೆ ಸೇರ್ಪಡೆಯಾಗಿದ್ಧಾರೆ ಎಂದು ಯುವವಾಹಿನಿ(ರಿ.) ಮೂಡುಬಿದಿರೆ ಘಟಕದ ಅಧ್ಯಕ್ಷ ಶಂಕರ್ ಎ. ಕೋಟ್ಯಾನ್ ಹೇಳಿದರು. ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿಯ ಮೂಡುಬಿದಿರೆ ಘಟಕದ ವತಿಯಿಂದ ಹಂಡೇಲು ದೇವಸ ಮನೆಯಲ್ಲಿ ತುಳುನಾಡ ಸಂಸ್ಕೃತಿಯ ಪುನಾರವಲೋಕನ ಧ್ಯೇಯದೊಂದಿಗೆ […]

Read More

ಕಥೆ ಎಡ್ಡೆ ಉಂಡು – ನಾಟಕ ಪ್ರದರ್ಶನ

ಮೂಡುಬಿದಿರೆ: ವಿವಿಧ ಸಾಮಾಜಿಕ ಸೇವಾ ಚಟುವಟಿಕೆಗಳ ಸಹಾಯಾರ್ಥವಾಗಿ ಶಾರದಾ ಆರ್ಟ್ಸ್ ಕಲಾವಿದರು (ರಿ.) ಮಂಜೇಶ್ವರ ಇವರು ಅಭಿನಯಿಸಿರುವ ವಿನೂತನ ಶೈಲಿಯ ಹಾಸ್ಯಮಯ ತುಳು ನಾಟಕ ಕಥೆ ಎಡ್ಡೆ ಉಂಡು ನಾಟಕ ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 07-05-2024 ರಂದು ಸಂಜೆ 7 ಗಂಟೆಗೆ ಸರಿಯಾಗಿ ಮೂಡುಬಿದಿರೆಯ ಕನ್ನಡ ಭವನದಲ್ಲಿ ನಡೆಯಿತು. ಘಟಕದ ಅಧ್ಯಕ್ಷ ರಾದ ಶಂಕರ್ ಎ. ಕೋಟ್ಯಾನ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಆಗಮಿಸಿದ ಎಲ್ಲಾ ಅತಿಥಿಗಳನ್ನು ಮಾಜಿ ಅಧ್ಯಕ್ಷ ಜಗದೀಶಚಂದ್ರ ಡಿ.ಕೆ. ಇವರು ಸ್ವಾಗತಿಸಿದರು. ಶಂಕರ್ ಎ. ಕೋಟ್ಯಾನ್ ಪುಷ್ಪ […]

Read More

ಯುವವಾಹಿನಿ ಸ್ವಚ್ಛ ಪರಿಕಲ್ಪನೆ

ಮೂಡಬಿದರೆ: ಯುವವಾಹಿನಿ(ರಿ.) ಮೂಡುಬಿದಿರೆ ಘಟಕದ ಆಶ್ರಯದಲ್ಲಿ ಹಾಗೂ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಮಿಜಾರು ಮೂಡಬಿದ್ರೆ ಸಹಯೋಗದಲ್ಲಿ ಯುವವಾಹಿನಿ ಸ್ವಚ್ಛ ಪರಿಕಲ್ಪನೆ – 2024 ಎರಡನೇ ಹಂತದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದ ಆರಂಭವು 07/04/2024 ನೇ ಆದಿತ್ಯವಾರ ಲಕ್ಷ್ಮಿ ಛಾಯಾ ನಿವಾಸ, ಬೆಟ್ಕೇರಿ ಮೂಡಬಿದ್ರೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಲಕ್ಷ್ಮಿಛಾಯಾ ನಿವಾಸದ ಮುಂಭಾಗದಲ್ಲಿ ಸಾಂಕೇತಿಕವಾಗಿ ಶ್ರೀಧರ್ ಆಚಾರ್ಯ ಹಿರಿಯ ಸ್ವರ್ಣ ಉದ್ಯಮಿ ಮೂಡುಬಿದ್ರೆ ಇವರು ಗಿಡ ನೆಡುವ ಮೂಲಕ ಉದ್ಘಾಟನೆಗೈದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. […]

Read More

ಕಣ್ಣಿನ ಆರೋಗ್ಯದ ಬಗ್ಗೆ ಹೆಚ್ಚಿನ‌ ಕಾಳಜಿ ಅಗತ್ಯ: ಡಾ.ಮೋಹನ್ ಆಳ್ವ

ಮೂಡುಬಿದಿರೆ: ಕಣ್ಣುಗಳು ನಾವು ಹೊಂದಿರುವ ಅತ್ಯಂತ ಸೂಕ್ಷ್ಮ ಅಂಗಗಳಲ್ಲಿ ಒಂದಾಗಿದೆ. ಹೆಚ್ಚಿದ ಪರದೆಯ ಸಮಯ, ಮಾಲಿನ್ಯ ಮತ್ತು ಅನಾರೋಗ್ಯಕರ ಜೀವನಶೈಲಿಯಿಂದಾಗಿ, ಕಳಪೆ ಕಣ್ಣಿನ ಆರೋಗ್ಯವು ಸಾಮಾನ್ಯ ಸಮಸ್ಯೆಯಾಗಿದೆ. ದೃಷ್ಟಿಹೀನತೆ ಮೂಲಭೂತ ದೈನಂದಿನ ಕೆಲಸಗಳನ್ನು ಅಡ್ಡಿಪಡಿಸಬಹುದು ಮತ್ತು ಜೀವನದ ಗುಣಮಟ್ಟದ ಮೇಲೆ ಪರಿಣಾಮ ಬೀರಬಹುದು. ಆದ್ದರಿಂದ, ನಮ್ಮ ಕಣ್ಣುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಬಹಳ ಮುಖ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಟಾನ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ತಿಳಿಸಿದರು. ಅವರು ದಿನಾಂಕ 14-03-2024 ನೇ ಗುರುವಾರದಂದು ಮೂಡುಬಿದಿರೆ ಆಳ್ವಾಸ್ ಆಯುರ್ವೇದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!