ಘಟಕಗಳು

ಕಿರು ಪ್ರವಾಸ

ವಿಟ್ಲ : ಯುವವಾಹಿನಿ(ರಿ.) ವಿಟ್ಲ ಘಟಕದ ವತಿಯಿಂದ ದಿನಾಂಕ 8-05-2024 ರಂದು ಒಂದು ದಿನದ ಕಿರು ಪ್ರವಾಸವನ್ನು ಕುಂದಾಪುರದ TINTON ರೆಸಾರ್ಟ್ ಗೆ ಹಮ್ಮಿಕೊಂಡಿದ್ದರು. ಜೀವನದ ಜಂಜಾಟಗಳ ನಡುವೆ ಬಸವಳಿದ ದೇಹಗಳ ಆಯಾಸವನ್ನು ತಣಿಸಲು ಸ್ವಲ್ಪ ರೋಮಾಂಚಕಾರಿಯಾಗಿ ಕಳೆಯಲು ಮುಂಜಾನೆ 5.30ಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪೂಜೆಯನ್ನು ಸಲ್ಲಿಸಿ ಪ್ರವಾಸವನ್ನು ಪ್ರಾರಂಭಿಸಿದರು. ಬಸ್ಸಿನಲ್ಲಿ ಮೊದಲಿಗೆ ಎಲ್ಲರೂ ಅವರವರ ಪರಿಚಯವನ್ನು ಮಾಡಿಕೊಂಡು ಬಸ್ಸು ಹೊರಟಿತು ಬಡಗಣ ಉಡುಪಿಯತ್ತ ಬೆಳಿಗ್ಗೆ 9.30ಕ್ಕೆ TINTON ತಲುಪಿದರು. ಬೆಳಗ್ಗಿನ ಉಪಹಾರವನ್ನು ಮಾಡಿ ನಂತರ ಈಜು ಕೊಳದಲ್ಲಿ […]

Read More

ಕಥೆ ಎಡ್ಡೆ ಉಂಡು – ನಾಟಕ ಪ್ರದರ್ಶನ

ಮೂಡುಬಿದಿರೆ: ವಿವಿಧ ಸಾಮಾಜಿಕ ಸೇವಾ ಚಟುವಟಿಕೆಗಳ ಸಹಾಯಾರ್ಥವಾಗಿ ಶಾರದಾ ಆರ್ಟ್ಸ್ ಕಲಾವಿದರು (ರಿ.) ಮಂಜೇಶ್ವರ ಇವರು ಅಭಿನಯಿಸಿರುವ ವಿನೂತನ ಶೈಲಿಯ ಹಾಸ್ಯಮಯ ತುಳು ನಾಟಕ ಕಥೆ ಎಡ್ಡೆ ಉಂಡು ನಾಟಕ ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 07-05-2024 ರಂದು ಸಂಜೆ 7 ಗಂಟೆಗೆ ಸರಿಯಾಗಿ ಮೂಡುಬಿದಿರೆಯ ಕನ್ನಡ ಭವನದಲ್ಲಿ ನಡೆಯಿತು. ಘಟಕದ ಅಧ್ಯಕ್ಷ ರಾದ ಶಂಕರ್ ಎ. ಕೋಟ್ಯಾನ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಆಗಮಿಸಿದ ಎಲ್ಲಾ ಅತಿಥಿಗಳನ್ನು ಮಾಜಿ ಅಧ್ಯಕ್ಷ ಜಗದೀಶಚಂದ್ರ ಡಿ.ಕೆ. ಇವರು ಸ್ವಾಗತಿಸಿದರು. ಶಂಕರ್ ಎ. ಕೋಟ್ಯಾನ್ ಪುಷ್ಪ […]

Read More

ಸೇವಾಶ್ರಮದಲ್ಲೊಂದು ದಿನ

ಬಂಟ್ವಾಳ: ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರು ಹಾಗೂ ಕನಪ್ಪಾಡಿ ಕೋಟ್ಯಾನ್ ಕುಟುಂಬಸ್ಥರು ದಿನಾಂಕ ‌03-05-2024 ಶುಕ್ರವಾರ ಬೆಳ್ತಂಗಡಿ ತಾಲೂಕಿನ ಗುಂಡೂರಿಯಲ್ಲಿರುವ ಗುರುಚೈತನ್ಯ ಸೇವಾಶ್ರಮಕ್ಕೆ ಬೇಟಿ, ಆಶ್ರಮವಾಸಿಗಳ ಯೋಗಕ್ಷೇಮ ವಿಚಾರಿಸಿದರು. ಆನಾರೋಗ್ಯ ಪೀಡಿತರು ಅನಾಥರನ್ನು ತಮ್ಮ ಮನೆ ಮಕ್ಕಳಂತೆ ಆರೈಕೆ ಮಾಡಿ, ಸರ್ವಸ್ವವನ್ನೂ ಆಶ್ರಮವಾಸಿಗಳಿಗೆ ತ್ಯಾಗ ಮಾಡಿದ ಆಶ್ರಮದ ಮುಖ್ಯಸ್ಥರಾದ ಹೊನ್ನಯ್ಯ ಕುಲಾಲ್ ಇವರನ್ನು ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ವತಿಯಿಂದ ಅಭಿನಂದಿಸಲಾಯಿತು. ತಾವು ದುಡಿದ ಒಂದು ಪಾಲನ್ನು ಸಮಾಜಕ್ಜೆ ಅರ್ಪಿಸುವ ಉದ್ದೇಶದಿಂದ ಇಂದು ನಡೆದ ಆಶ್ರಮ […]

Read More

ಮನೆ‌ ಮನೆ ಭಜನೆ

ಮಂಗಳೂರು: ಭಜನೆ ಎಂಬ ಪದಕ್ಕೆ ವಿಶೇಷ ಅರ್ಥವಿದೆ. ‘ಭ’ ಎಂದರೆ ಭಗವಂತ, ‘ಜ’ ಎಂದರೆ ಜನ್ಮಾಂತರ, ‘ನೆ’ ಎಂದರೆ ನೆನೆಯುವುದು. ಜನ್ಮಜನ್ಮಾಂತರಗಳಿಂದ ಮಾಡಿದ ಪಾಪವನ್ನು ಕಳೆಯಲು ಹಾಗೂ ದೇವರನ್ನು ಒಲಿಸಿಕೊಳ್ಳಲು ಭಗವಂತನನ್ನು ಪೂಜಿಸುವುದೇ ಭಜನೆ. ಯುವವಾಹಿನಿ(ರಿ.) ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ವಿಮಲಾ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನೆ ಕಾರ್ಯಕ್ರಮದ 47 ನೇ ಭಜನಾ ಕಾರ್ಯಕ್ರಮವು ಘಟಕದ ಸದಸ್ಯರಾದ […]

Read More

ವೃತ್ತಿ ಮಾರ್ಗದರ್ಶನದ ಉಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು: ಲೋಕೇಶ್ ಕೋಟ್ಯಾನ್

ಮಂಗಳೂರು: ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಅತ್ಯಂತ ಉಪಯುಕ್ತ ಕಾರ್ಯಕ್ರಮವಾಗಿದ್ದು ಇದರ ಉಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ಯುವವಾಹಿನಿ(ರಿ.) ಕೂಳೂರು ಘಟಕ ಹಾಗೂ ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷರಾದ ಶ್ರೀ ಲೋಕೇಶ್ ಕೋಟ್ಯಾನ್ ರವರು ಯುವವಾಹಿನಿ(ರಿ.) ಕೂಳೂರು ಘಟಕ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಫಲ್ಗುಣಿ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜು ಗಾಂಧಿನಗರ ಇವರ ಸಹಯೋಗದೊಂದಿಗೆ ದಿನಾಂಕ 17-04-2024ರ ಬೆಳಿಗ್ಗೆ 11.30ಕ್ಕೆ ಸರ್ಕಾರಿ ಪದವಿಪೂರ್ವ ಕಾಲೇಜು ಗಾಂಧಿನಗರ ಇಲ್ಲಿ ನಡೆದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ […]

Read More

ಬಿಸು ಪರ್ಬ

ಬಜಪೆ: ಬಿಸು ಪರ್ಬ ಆಚರಣೆಯನ್ನು ದಿನಾಂಕ 14-04-2024 ರಂದು ನಾರಾಯಣ ಗುರು ಸಮುದಾಯ ಭವನ ಬಜಪೆಯಲ್ಲಿ ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಬ್ರಹ್ಮ ಶ್ರೀ ಗುರುವರ್ಯರಿಗೆ ಮೊದಲು ಪೂಜೆ ಸಲ್ಲಿಸಿ ತದನಂತರ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮವನ್ನು ಶಿವರಾಮ್ ಕೋಟ್ಯಾನ್ ಪೆರ್ಮುದೆ ಇವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ರೇಣುಕಾ ಕಣಿಯೂರು ಇವರು ಮಾತನಾಡಿ ನಮ್ಮ ಹಿಂದೂ ಸಂಪ್ರದಾಯದಲ್ಲಿ ಹೊಸ ವರುಷ ಆಚರಿಸುವ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿ ಮುಂದಿನ […]

Read More

ಯೋಗೀಶ್ವರ ಮಠದಲ್ಲಿ ಶ್ರಮದಾನ

ವಿಟ್ಲ: ದೇವರಿಗೆ ಸರ್ವ ಸೇವೆಯೂ ಶ್ರೇಷ್ಠ , ಸರ್ವವನ್ನು ಸ್ವೀಕರಿಸುವವರು ದೇವರು. ಎಲ್ಲಕ್ಕಿಂತಲೂ ಮಿಗಿಲೂ ದೇವಾಲಯದ ಸೇವಾ ಕಾರ್ಯ ದೇವರಿಗೆ ಪ್ರೀಯವೂ ಹೌದು. ಜೀರ್ಣೋದ್ಧಾರದಲ್ಲಿ ಒಂದು ಅಳಿಲು ಸೇವೆ ಎನ್ನುವಂತೆ ಶ್ರಮದಾನದ ಮುಖೇನ ಸಾರ್ಥಕ ತೃಪ್ತಿ ಪಟ್ಟುಕೊಂಡದ್ದು ನಮ್ಮ ಸಂಸ್ಥೆ. ಯುವವಾಹಿನಿ(ರಿ.) ವಿಟ್ಲ ಘಟಕ ಇದರ ನೇತೃತ್ವದಲ್ಲಿ ಯೋಗೀಶ್ವರ ಮಠ ಜೋಗಿ ಬೆಟ್ಟು ವಿಟ್ಲ ಇದರ ಜೀರ್ಣೋದ್ಧಾರದ ಪ್ರಯುಕ್ತ ದಿನಾಂಕ 14-04-2024 ಆದಿತ್ಯವಾರದಂದು ವಿಟ್ಲ ಘಟಕದ ಸದಸ್ಯರಿಂದ ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಯುವವಾಹಿನಿ ವಿಟ್ಲ ಘಟಕದ […]

Read More

ಸ್ವಚ್ಚತಾ ಕಾರ್ಯಕ್ರಮ

ಪುತ್ತೂರು: ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವನ್ನು ದಿನಾಂಕ 14/04/2024ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಘಟಕದ ಅಧ್ಯಕ್ಷರಾದ ಜಯರಾಮ್ ಬಿ ಏನ್ ವಹಿಸಿದರು. ಉದ್ಘಾಟನೆಯನ್ನು ನಿವೃತ್ತ ಯೋಧರಾದ ವಸಂತ ಸಾರಕೆರೆರವರು ತೆಂಗಿನ ಕಾಯಿ ಹೊಡೆಯುವ ಮೂಲಕ ಚಾಲನೆ ನೀಡಿದರು. ಸ್ವಚ್ಛತಾ ಕಾರ್ಯಕ್ರಮವು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನಕ್ಕೆ ತೆರಳುವ ಮಾರ್ಗ ನೆರಿಮೊಗೆರು ರಸ್ತೆಯಿಂದ ಮುಕ್ವೆಯವರೆಗೆ ಸ್ವಚ್ಚತೆಯನ್ನು ಮಾಡಿ ಯಶಸ್ವಿಗೊಳಿಸಲಾಯಿತು. ಈ ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ನಿರ್ದೇಶಕರು, ಸದಸ್ಯರು […]

Read More

ಬಿಸು ಪರ್ಬದ ಪೊಸ ಕಣಿ

ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದ ಸಭಾಂಗಣದಲ್ಲಿ ದಿನಾಂಕ 14-04-2024ರ ಭಾನುವಾರ ಸಂಜೆ 3.30ಕ್ಕೆ ಯುಗಾದಿ ಹಬ್ಬದ ಆಚರಣೆ, ಬಿಸು ಕಣಿ ಬಗ್ಗೆ ಮಾಹಿತಿ, ಮಹಿಳೆಯರಿಗಾಗಿ ಕಾರ್ಯಕ್ರಮ, ತುಳಿಲಿಪಿ ಪರೀಕ್ಷೆ ಬರೆದವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಪ್ರಮಾಣ ಪತ್ರ, ಗುರುವಂದನೆ ಇತ್ಯಾದಿ ಕಾರ್ಯಕ್ರಮಗಳು ನಡೆದವು. ನಾರಾಯಣ ಗುರುವರ್ಯರ ಭಾವಚಿತ್ರದ ಮುಂದೆ ಬಿಸು ಕಣಿಯನಿಟ್ಟು ದೀಪ ಹಚ್ಚಿ ಕೈಮುಗಿದು ಕಾರ್ಯಕ್ರಮ ಆರಂಭವಾಯಿತು. ಬಂದ ಸದಸ್ಯರಿಗೆಲ್ಲ ವಿವಿಧ ಆಟಗಳನ್ನು ಆಡಿಸಲಾಯಿತು. ಆಟೋಟ ಸ್ಪರ್ಧೆಗಳನ್ನು ನಡೆಸಿಕೊಟ್ಟವರು ಘಟಕದ ಮಾಜಿ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್ […]

Read More

ಮನೆ ಮನೆ ಭಜನೆ

ಮಂಗಳೂರು: ಪಣಂಬೂರು-ಕುಳಾಯಿ ಘಟಕದ ಸದಸ್ಯರೊಳಗೆ ಆರೋಗ್ಯಕರ ಬಾಂಧವ್ಯ ವೃದ್ಧಿಸಲು ಹಾಗೂ ಘಟಕದ ಸದಸ್ಯರ ಕುಟುಂಬದೊಂದಿಗೆ ಬೆರೆಯಲು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಮನೆ ಮನೆ ಭಜನೆ ಕಾರ್ಯಕ್ರಮವೂ ಒಂದು. ದಿನಾಂಕ 12-04-2024 ಶುಕ್ರವಾರ ಸಂಜೆ ಘಟಕದ ಹಾಗೂ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರಾಜೀವ್ ಪೂಜಾರಿರವರು ದೇರೆಬೈಲ್ ನಲ್ಲಿ ನೂತನವಾಗಿ ನಿರ್ಮಿಸಿದ ಮನೆಯ ಗೃಹಪ್ರವೇಶ ದಂದು ಭಜನಾ ಸಂಕೀರ್ತನೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಜನಾ ತಂಡದೊಂದಿಗೆ, ಅಧ್ಯಕ್ಷರಾದ ಮನಿಷಾ ರೋಪೇಶ್, ಮಾಜಿ ಅಧ್ಯಕ್ಷರುಗಳು, ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಸದಾನಂದ ಪೂಜಾರಿಯವರು […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!